ನಿನ್ನ ಫ.ಂಗ್ ಸ್ಕ್ರಿಪ್ಟನ್ನು ನಾನು ಓದೊಲ್ಲ.
ಸಿಂಪಲ್ಲಾಗಿ ಹೇಳ್ತಿದೀನಿ. ನಿನ್ನ ಫ..ಂಗ್ ಕತೇನ ನಾ ಓದೊಲ್ಲ. ಅರ್ಥ ಆಗ್ತಾ ಇದೇ ತಾನೇ? ತಪ್ಪು ತಿಳೀಬೇಡ. ಇದನ್ನು ಪರ್ಸನಲ್ ಆಗಿ ತಗೋಬೇಡ.
ಇದು ಅನ್ಯಾಯ ಅಂತ ಅನ್ನಿಸ್ತಾ ಇದೆಯಾ? ನಿನ್ನ ಕತೆ ಓದಿ ನನ್ನ ಅಭಿಪ್ರಾಯಾ ಹೇಳಿದರೆ ಬದಲಿಗೆ ಏನು ಮಾಡ್ತೀಯಾ? ನನ್ನ ಕಾರ್ ಒರೆಸ್ತೀಯಾ? ನನ್ನದೊಂದು ಒಳ್ಳೇ ಫೋಟೋ ತೆಗೀತೀಯಾ, ನನ್ನ ಪರವಾಗಿ ಕೋರ್ಟಲ್ಲಿ ಲಾಯರಾಗಿ ವಾದ ಮಾಡ್ತೀಯಾ ಅಥವಾ ನನ್ನ ಗಾಲ್ಬ್ಲಾಡರ್ ತೆಗೆಯೋ ಡಾಕ್ಟರಾ ನೀನು-ಇಂಥ ಫ..ಂಗ್ ಕೆಲಸಾನೆಲ್ಲ ನಿನ್ನ ಹತ್ರಾನೇ ಇಟ್ಕೋ.
ನೀನೊಬ್ಬ ತುಂಬಾ ಸ್ವೀಟಾದ ಮನುಶ್ಯ. ನಾವಿಬ್ಬರೂ ಒಟ್ಟಿಗೆ ಕೂತು ಸಾಹಿತ್ಯದ ಬಗ್ಗೆ ಹರಟೋದು, ಚರ್ಚಿಸೋದೂ ನನಗೂ ಖುಷಿಯೇ.
ಆದರೆ, ನಿನ್ನ ಈ ಫ..ಂಗ್ ಕತೇನ ಮಾತ್ರ ನಾ ಓದೊಲ್ಲ.
* * *
ಇಷ್ಟು ಹೊತ್ತಿಗೆ ‘ಇವನೊಬ್ಬ ಆ..ಹೋಲ್.’ ಅಂತ ನೀನು ನನ್ನ ರೂಮಿಂದ ಹೊರಗೆ ಹೋಗಿರಬೇಕು. ಆದರೆ, ಒಬ್ಬ ಮನುಷ್ಯನಾಗಿ ಬೆಳೆಯೋಕೆ ನಿನಗೆ ಇಷ್ಟ ಇದ್ದಲ್ಲಿ ಮತ್ತು ನಾನಲ್ಲ ಆ..ಹೋಲ್. ನೀನು’ ಅಂತ ನೀನು ತಿಳಕೋಬೆಕಾದರೆ ಕೆಳಗಿದನ್ನು ಓದು.
ಇತ್ತೀಚೆಗೆ ನನಗೆ ಅಷ್ಟೇನೂ ಪರಿಚಯವಿರದ ಒಬ್ಬಾತ ಎಲ್ಲೋ ತಗಲ್ಹಾಕಿಕೊಂಡ. ಇದಕ್ಕೆ ಮುಂಚೆ ಆತನ ಜತೆ ನಾನು ಅಬ್ಬಬ್ಬಾ ಅಂದರೆ ಒಂದೆರಡು ಸಲ ಮಾತಾಡಿರಬಹುದು. ಆದರೆ, ಆತ ನನಗೆ ಗೊತ್ತಿರೋ ಪೈಕಿ ಯಾವುದೋ ಒಂದು ಹುಡುಗಿಯನ್ನು ಡೇಟ್ ಮಾಡ್ತಾ ಇದಾನೆ. ಒಂತರಾ ರೈಟ್ ಟೈಮ್ ಅಟ್ ದ ರೈಟ್ ಪ್ಲೇಸ್ ಅಂತಾರಲ್ಲ-ಹಂಗೆ ನಾನು ಸಿಗಿಹಾಕಿಕೊಂಡುಬಿಟ್ಟೆ. ಆತ ಕಳೆದ ಒಂದು ವರ್ಷದಿಂದ ಬರೆಯುತ್ತಿದ್ದ ಯಾವುದೋ ಒಂದು ಸ್ಕ್ರಿಪ್ಟಿನ ಎರಡು ಪುಟದ ‘ಸಾರಾಂಶ’ವನ್ನು ಬರಕೊಂಡು ಬಂದಿದ್ದ. ಅದನ್ನು ಆತ ಯಾವುದೋ ಸ್ಪರ್ಧೆಗೋ ಅಥವಾ ಕಾರ್ಯಕ್ರಮಕ್ಕೋ ಕಳಿಸುತ್ತಿದ್ದಾನಂತೆ-ಅದಕ್ಕೆ ಮುಂಚೆ ಅವನಿಗೊಂದು ಪ್ರೊಫೆಶನಲ್ ಅಭಿಪ್ರಾಯ ಬೇಕಿತ್ತು ಅಂತ ಕಾಣಿಸುತ್ತೆ.
ಸಾಮಾನ್ಯವಾಗಿ, ಇಂಥವರಿಗೆಲ್ಲ ನಾನು ಹೇಳೋದು ಒಂದೇ ನೆವ, ಅದು ಸತ್ಯ ಕೂಡ. ನನ್ನ ಆಫೀಸಿನಲ್ಲಿ ಎರಡು ಹೊರೆ ಚಿತ್ರಕತೆಗಳಿದ್ದಾವೆ. ಒಂದು ನನ್ನ ಆತ್ಮೀಯ ಸ್ನೇಹಿತರು ಬರೆದಿರೋ ಕಥೆ, ಚಿತ್ರಕಥೆಗಳು. ಇನ್ನೊಂದು ಹೊರೆ ನಾನು ಮಾಡಬೇಕಾಗಿರೋ ಸಿನೆಮಾಗಳಿಗೆಂದು ನನ್ನ ಏಜೆಂಟುಗಳು ಶಾರ್ಟ್ಲಿಸ್ಟ್ ಮಾಡಿಟ್ಟಿರೋ ಹಸ್ತಪ್ರತಿಗಳು ಮತ್ತು ಪುಸ್ತಕಗಳು. ನನ್ನ ಸ್ನೇಹಿತರು ಬರೆದಿರೋದನ್ನು ಓದೋಕೆ ತಗೊಂಡರೆ, ನನ್ನ ಕೆಲಸವನ್ನು ಉದಾಸೀನ ಮಾಡ್ತಾ ಇದೀನಿ ಅನ್ನಿಸುತ್ತೆ, ಹಾಗೇ ನನ್ನ ಏಜೆಂಟುಗಳ ಸ್ಕ್ರಿಪ್ಟ್ ಓದೋಣ ಅಂತ ತಗೊಂಡರೆ ನನ್ನ ಸ್ನೇಹಿತರನ್ನು ಉದಾಸೀನ ಮಾಡ್ತಾ ಇದೀನಿ ಅನ್ನಿಸುತ್ತೆ. ಇವೆರಡೂ ಬಿಟ್ಟು ನಾನು ನಿನ್ನ ಕತೆಯನ್ನು ಹೇಗೆ ಓದಲಿ, ಹೇಳು?
ಬಹಳ ಜನಕ್ಕೆ ಇದು ಅರ್ಥ ಆಗುತ್ತೆ. ಆದರೆ, ಕೆಲವು ಬಾರಿ ಈ ತರ ಗಿಲ್ಟೋ, ಅಥವಾ ಏನೋ ಒಂದು ಕಕ್ಕುಲಾತಿಗೆ ಬಿದ್ದು ತೀರ ಒರಟಾಗಿರೋಕೆ ಆಗದೇ ಈ ಕೆಲಸ ಮಾಡೋಕೆ ಒಪ್ಪಿಕೊಳ್ಳಬೇಕಾಗುತ್ತೆ. ಸರಿ ಓದೋಕೆ ಪ್ರಯತ್ನ ಮಾಡ್ತೇನೆ. ಇಷ್ಟ ಆಗದೇ ಇದ್ದರೆ ಹತ್ತು ಪುಟ ಓದಿ ಕೆಳಗಿಡ್ತೇನೆ, ಅಂತ ಮೊದಲೇ ಹೇಳಿರುತ್ತೇನೆ. ಇದರಿಂದ ಅವರಿಗೆ ಬಹಳ ಉತ್ಸಾಹ ಕಮ್ಮಿ ಏನೂ ಆಗೊಲ್ಲ. ಯಾಕೆಂದರೆ ಯಾರಿಗೂ ತಾವು ಬರೆದ ಕಥೆ ಕೇವಲ ಹತ್ತುಪುಟ ಓದಿಸಿಕೊಳ್ಳ್ಳುವಷ್ಟರಲ್ಲಿ ಬೋರು ಹೊಡೆಸಿಬಿಡಬಹುದು ಎಂದು ಅನಿಸಿರುವುದಿಲ್ಲ.
ಹಾಳಾಗಿಹೋಗಲಿ, ಇದು ಎರಡು ಪುಟದ್ದಲ್ಲವಾ? ಎಂದು ಓದಲು ಶುರುಮಾಡಿದೆ? ಎರಡು ಪುಟ ಓದಕ್ಕೆ ಎಷ್ಟು ಹೊತ್ತು ಬೇಕಾಯ್ತು ಗೊತ್ತಾ? ...ವಾರಗಟ್ಟಲೆ.
ಅದಕ್ಕೇ ಹೇಳೋದು ನಾನು ನಿನ್ನ ಫ..ಂಗ್ ಸ್ಕ್ರಿಪ್ಟನ್ನು ಓದೊಲ್ಲ ಅಂತ.
ಓದುತ್ತಿರುವುದು ಒಳ್ಳೇ ಬರವಣಿಗೆಯಾ ಅಂತ ಹೇಳೋದಕ್ಕೆ ಒಂದು ಪುಟವಾದರೂ ಓದಬೇಕು. ಕೆಟ್ಟದ್ದು ಅಂತ ಹೇಳೋಕೆ ಒಂದೇ ಸಾಲು ಓದಿದರೂ ಸಾಕು. ( ಬೈ ದ ವೇ, ನೀನು ಬರಹಗಾರ ಹೌದೋ ಅಲ್ಲವೋ ಅಂತ ತಿಳಕೊಳ್ಳೋಕೆ ಇದೊಂದೇ ಸಾಲು ಸಾಕು. ಇದನ್ನು ಒಪ್ಪಿಕೊಳ್ಳದಿದ್ದರೆ ನೀನು ಬರಹಗಾರನೇ ಅಲ್ಲ. ಯಾಕೆಂದರೆ ಎಲ್ಲ ಬರಹಗಾರರೂ ಓದುಗರಾಗಿರುತ್ತಾರೆ, ಅಲ್ಲವಾ)
ಹೋಗಲಿ, ಮೊದಲ ಪ್ರಯತ್ನ ಅಂತ ಕೊಂಚ ಗ್ರೇಸ್ಮಾರ್ಕು ಕೊಡಬಹುದು, ಆದರೆ ಒಂದೇ ಒಂದು ನೇರವಾದ ವಾಕ್ಯರಚನೆಯಿರದ, ಭಾಷೆ ಮತ್ತು ಕಥನದ ಗಂಧವೂ ಇಲ್ಲದ ಈ ಬರವಣಿಗೆಯನ್ನು ಹೇಗೆ ಸಹಿಸಿಕೊಳ್ಳುವುದು. ಈತನಿಗೆ ಕತೆ ಹೇಳುವುದು ಬಹಳ ಮುಖ್ಯ ನಿಜ. ಆದರೆ, ಅಲ್ಲಿ ಕನಿಷ್ಠ ಒಬ್ಬ ಪ್ರಾಮಾಣಿಕ ಓದುಗ ಅಪೇಕ್ಷಿಸುವ ಸ್ಪಷ್ಟತೆ, ಖಚಿತತೆಗಳೂ ಇಲ್ಲ. ನಾನು ಓದಿದ್ದು ಕೆಲವು ಘಟನೆಗಳಷ್ಟೇ. ಎಲ್ಲೋ ಕೆಲವು ಒಂದಕ್ಕೊಂದು ಪೋಣಿಸಿದಂತಿದ್ದವು, ಪಾತ್ರಗಳು ದಿಕ್ಕುದೆಸೆಯಿಲ್ಲದೇ ಸುಮ್ಮನೇ ಓಡಾಡುತ್ತವೆ, ಇದ್ದಕ್ಕಿದ್ದಂತೆ ಮಾಯವಾಗಿಬಿಡುತ್ತವೆ, ಮತ್ತೆ ಪ್ರತ್ಯಕ್ಷವಾಗುತ್ತವೆ, ಬದುಕಿನ ಗತಿಯೇ ಬದಲಾಗುವ ನಿರ್ಣಯಗಳನ್ನು ಏಕ್ದಂ ತೆಗೆದುಕೊಳ್ಳುತ್ತವೆ. ಯಾವುದೋ ತಿನಿಸಿನ ವಾಸನೆ ಮತ್ತು ನವಿರನ್ನು ಇಡೀ ಅರ್ಧ ಪ್ಯಾರಾ ಬರೆದಿದ್ದ, ಆದರೆ ಅಂತ್ಯ ಮಾತ್ರ ಒಂದು ಸಣ್ಣ ವಾಕ್ಯ. ನಾಯಕ ಸಾಯುತ್ತಾನೆಂದು ಎಲ್ಲೂ ಬರೆದುಕೂಡ ಇಲ್ಲ. ಒಂದು ಸೀನಿನಲ್ಲಿ ಆತ ಇದ್ದಾನೆ, ಮುಂದಿನ ವಾಕ್ಯದಲ್ಲಿ ಅವನ ಅಂತ್ಯಕ್ರಿಯೆಯಲ್ಲಿಯ ಜನಗಳ ಬಗ್ಗೆ ಬರೀತಾನೆ. ಅಬ್ಬಬ್ಬಬ್ಬ. ಹಿಂಗೇ ಹೇಳ್ತಾ ಹೋಗಬಹುದು.
ನಮ್ಮ ಸ್ಕ್ರಿಪ್ಟ್ ಬರಿಯೋ ಮಂದಿ ಬಗ್ಗೆ ನೀನು ತಿಳಕೋಬೇಕಾದ ಕಹಿಯಾದ ಸತ್ಯವೊಂದಿದೆ. ಬಹಳ ಜನಕ್ಕೆ ಈ ಸ್ಕ್ರಿಪ್ಟ್ ಬರೆಯೋದು ಬರವಣಿಗೆ ಅಂತ ಅನ್ನಿಸಿಯೇ ಇಲ್ಲ. ಒಂದು ಕೂಲಾಗಿರೋ ಕತೆ ಇದ್ದರೆ ಅಷ್ಟೇ ಕೂಲಾಗಿರೋ ಸಿನೆಮಾ ಆಗುತ್ತೆ ಅಂತ ತಿಳ್ಕೋತಾರೆ. ಚಿತ್ರಕತೆ ಬರೆಯೋದು ಈ ಬಿಸಿನೆಸ್ಸಿಗೆ ಬರೋಕೆ ಅತಿ ಸುಲಭವಾದ ದಾರಿ, ಇದಕ್ಕೆ ಎಂಥ ತರಬೇತಿ, ಅರ್ಹತೆ, ಅಥವಾ ಸಿದ್ಧತೆಗಳೂ ಬೇಡ ಅಂತ ಬಹಳ ಜನ ತಿಳಕೊಂಡಿದಾರೆ. ಯಾರು ಏನು ಬೇಕಾದರೂ ಬರೀಬಹುದಲ್ವಾ? ಅದಕ್ಕೆ ಈಗ ಈ ವೃತ್ತಿಯಲ್ಲಿ ಪಳಗಿರೋರ ಬಗ್ಗೆ ಅವರಿಗೆ ಯಾವ ಮರ್ಯಾದೆಯೂ ಇಲ್ಲ. ಎಂಥದೋ ಒಂದು ಬರೆದು ನಿನ್ನ ಕೈಗಿಡುತ್ತಾರೆ.
ಸರಿ ನಾನು ಬಹಳ ಹಿಂಸೆಯಿಂದ ಓದಿದೆ. ಅದರ ಬಗ್ಗೆ ಏನಾದರೂ ಒಳ್ಳೇದನ್ನು ಹೇಳಬೇಕು ಅಂತ ಬಹಳ ಕಷ್ಟ ಪಟ್ಟೆ, ಆದರೆ ಒಂದು ತಿಳಕೋ ಇಂತ ಬರವಣಿಗೆಗಳ ಬಗ್ಗೆ ಪಾಸಿಟಿವ್ ಆಗಿ ಹೇಳೋದು ಬರೇ ಸುಳ್ಳಷ್ಟೇ ಅಲ್ಲ, ಅತಿ ಪಾಪದ ಕೆಲಸ ಅದು. ಕೆಟ್ಟ ಬರವಣಿಗೆಯನ್ನು ಪ್ರೋತ್ಸಾಹಿಸೋದು ಬಹಳ ಕ್ರೂರವಾದ ಕೆಲಸ, ಇರಲಿ. ಆದರೆ, ಒಬ್ಬ ನಿಜವಾದ ಬರಹಗಾರನಿಗೆ ಬರೆಯಬೇಡ ಎಂದು ಯಾರೂ ತಡೆದು ನಿಲ್ಲಿಸಲಾರರು. ಯಾರೂ ಎಂದೂ ಎದೆಗುಂದಿಸಲಾರರು. ನೀನು ಬರಹಗಾರನಲ್ಲ ಅಂತ ನಾನು ನಿನಗೆ ಕನ್ವಿನ್ಸ್ ಮಾಡಬಲ್ಲನಾದರೆ ನೀನು ನಿಜಕ್ಕೂ ಬರಹಗಾರನೇ ಅಲ್ಲ. ನೀನು ನಿಜಕ್ಕೂ ನನ್ನ ಮಾತಿಂದ ಕನ್ವಿನ್ಸ್ ಆಗಿ ಬರೆಯುವುದನ್ನು ಬಿಟ್ಟುಬಿಟ್ಟರೆ ನಾನು ನಿನಗೆ ಒಂದು ದೊಡ್ಡ ಉಪಕಾರ ಮಾಡಿದ್ದೀನಿ ಅಂತ ತಿಳಕೋ. ಯಾಕೆಂದರೆ, ಬರವಣಿಗೆ ಬಿಟ್ಟು ನಿನ್ನ ಬೇರೆ ಯಾವ ಪ್ರತಿಭೆ ಇದೆಯೋ ಅದನ್ನು ಹುಡುಕಿಕೊಂಡು ಹೋಗ್ತೀಯ. ಎಲ್ಲರಿಗೂ ಏನಾದರೂ ಒಂದು ವಿಶೇಷವಾದ ಪ್ರತಿಭೆ ಇದ್ದೇ ಇರುತ್ತೆ. ಅದೃಷ್ಟವಂತರಿಗೆ ಅದೇನು ಅಂತ ಬಹಳ ಬೇಗ ಗೊತ್ತಾಗುತ್ತೆ. ನತದೃಷ್ಟರು ಇಂಥ ಹೊಲಸನ್ನು ಬರೆದು, ಬರೆದು ನನ್ನಂಥವರಿಗೆ ಓದು ಅಂತ ತಂದು ಕೊಡ್ತಾ ಇರ್ತಾರೆ.
ಹಾಳಾಗಿಹೋಗಲಿ ಅಂತ ಓದಿದರೆ ಈತ ಇದರ ಬಗ್ಗೆ ನಿಮ್ಮ ಪ್ರಾಮಾಣಿಕ ಅಭಿಪ್ರಾಯ ಹೇಳಿ ಅಂತ ಬೇರೆ ಬಲವಂತ ಮಾಡಿದ್ದ. ಅವನ ಸ್ನೇಹಿತರ ಅಭಿಪ್ರಾಯದಿಂದ ಆತನಿಗೆ ಸಮಾಧಾನವಾಗಿರಲಿಲ್ಲ. ಅವರು ಸುಮ್ಮಸುಮ್ಮನೆ ‘ಎಲ್ಲ ಚೆನ್ನಾಗಿದೆ’ ಅಂತ ಹೇಳ್ತಿದಾರೆ ಅಂತ ಅವನಿಗನಿಸಿತ್ತಂತೆ. ಅವನಿಗೆ ಪ್ರಾಮಾಣಿಕ ವಿಮರ್ಶೆ ಬೇಕಿತ್ತಂತೆ. ಯಾರಿಗೂ ಪ್ರಾಮಾಣಿಕ ವಿಮರ್ಶೆ ಬೇಡಪ್ಪ. ಇಂಥವರಿಗೆ ಏನು ಬೇಕು ಅಂದರೆ ‘ಇಲ್ಲಿ ಇನ್ನೊಂದು ಚೂರು ಚೆನ್ನಾಗಿರ್ಬೇಕಾಗಿತ್ತು, ಇದು ನನಗಿಷ್ಯವಾಗಲಿಲ್ಲ’ ಅಂತ ನಯವಾಗಿ ಬಯ್ದಹಾಗೆ ಮಾಡಿ ಆದರೂ ಒಟ್ಟಾರೆ ಚೆನ್ನಾಗಿದೆ ಅಂತ ಬೆನ್ನುತಟ್ಟಿ ಪ್ರಾಮಾಣಿಕತೆಯ ನಾಟಕ ಆಡಬೇಕು. ಇವರಿಗೆ ಯಾವಾಗಲೂ ಏನು ಬೇಕು? ಪ್ರೋತ್ಸಾಹ.
ಇಂಥ ಕೆಟ್ಟ ಬರವಣಿಗೋಸ್ಕರ ನಿನ್ನ ಬದುಕಿನ ಒಂದು ವರ್ಷವನ್ನು ಹಾಳುಮಾಡಿಕೊಂಡೆ ಅಂತ ಯಾರಿಗಾದರೂ ಹೇಳೋದು ಎಷ್ಟು ಕಷ್ಟ ಅಂತ ನಿನಗೆ ಗೊತ್ತಿದೆಯಾ? ಈ ತರ ವಿಮರ್ಶೆ ಬರೆಯೋಕೆ ಅಥವಾ ಹೇಳೋಕೆ ಎಷ್ಟು, ರಕ್ತ ಬೆವರು ಖರ್ಚು ಮಾಡಬೇಕು ಅನ್ನೋ ಐಡಿಯಾ ಆದರೂ ನಿನಗಿದೆಯಾ? ಇಲ್ಲಿ ಸತ್ಯವನ್ನೇ ಹೇಳಬೇಕು. ಆದರೆ ಅದು ಪ್ರಾಮಾಣಿಕವಾಗಿರಬೇಕು, ಕಹಿಯಾಗಿರಬಾರದು. ಅವನಿಗೆ ಬರೆದ ಫ..ಂಗ್ ಇ-ಮೈಲನ್ನು ನಾನು ನನ್ನ ಕಳೆದ ಸಿನೆಮಾದ ಸ್ಕ್ರಿಪ್ಟಿಗಿಂತಾ ಹೆಚ್ಚು ಆಸ್ಥೆಯಿಂದ ತಿದ್ದಿದೆ.
ನನ್ನ ಮೊದಲ ಡ್ರಾಫ್ಟ್ ತೀರ ಹಾಸ್ಯಾಸ್ಪದವಾಗಿತ್ತು. ಪ್ರತಿಯೊಂದಕ್ಕೂ ಸ್ಪಷ್ಟವಾಗಿ ಟಿಪ್ಪಣಿಗಳನ್ನು ಮಾಡಿಕೊಂಡಿದ್ದೆ. ನಂತರ ನೋಡಿದರೆ, ಅವನ ಎರಡು ಪ್ಯಾರಾದ ಬಗ್ಗೆ ನಾನು ಮೂರು ಪುಟ ಬರೆದಿದ್ದೆ. ಅದನ್ನು ಎಸೆದೆ. ಮತ್ತೆ ಮುಗಿಸಿದಾಗ ನೋಡಿದೆ. ಚಿಕ್ಕದಾಗಿ, ಚೊಕ್ಕದಾಗಿ, ಸ್ಪಷ್ಟವಾಗಿ ಬರೆದಿದ್ದೆ ಆದರೆ ನನ್ನ ಉತ್ತರ ನನಗೇ ನಾಚಿಕೆಯಾಗುವಷ್ಟು ಸಪ್ಪೆಯಾಗಿತ್ತು, ಮೆತ್ತಗಿತ್ತು. ನನ್ನ ಪಾಯಿಂಟಿದ್ದಿದ್ದು ಇಷ್ಟೇ. ಎಲ್ಲ ಹೊಸಬರಂತೆ ನಿನಗೂ ನಿನ್ನ ಕತೆ ಹೇಳುವುದೇ, ಬರೆಯುವುದಕ್ಕಿಂತ ಮುಖ್ಯವಾಗಿದೆ. ಇದು ಹೇಗಪ್ಪ ಅಂದರೆ, ಕಾರಿಗೆ ಬೇಕಾದ ಇಂಜಿನ್ನು, ಇತರ ಬಿಡಿಭಾಗಗಳನ್ನು ಕೊಂಡುಕೊಂಡು ಕಾರನ್ನು ನಾನೇ ಜೋಡಿಸಿಬಿಡ್ತೀನಿ ಅಂತ ಹೋಗೋದು. ಮೊದಲು ಕಾರಿನ ಮೆಕ್ಯಾನಿಕ್ಸ್ ಅನ್ನು ಕಲಿಯಬೇಕಲ್ಲವಾ? ಜೋಡಿಸ್ತಾ ಜೋಡಿಸ್ತಾ ಕಲೀತೀನಿ ಅಂತ ಹೋದರೆ ಓಡುವ ಕಾರನ್ನು ಕಟ್ಟೋಕೆ ಆಗುತ್ತಾ.
ನಿನಗೆ ನಿಜವಾಗಿಯೂ ಈ ಕಥೆಯ ಬಗ್ಗೆ ಅಷ್ಟೊಂದು ಆಸಕ್ತಿ ಇದ್ದರೆ ಯಾರಾದರೂ ಒಬ್ಬ ಕಥೆಗಾರರಿಗೆ ಇದನು ಕೊಟ್ಟು ಬರೆಸು. ನೀನು ನಿಜವಾಗಿಯೂ ಬರಹಗಾರನಾಗಬೇಕು ಅಂತ ಆಸೆ ಇದ್ದರೆ, ಯಾವುದಾದರೂ ರೈಟಿಂಗ್ ಕೋರ್ಸುಗಳನ್ನು ತೆಗೆದುಕೋ, ಮತ್ತೆ ಸರಿಯಾಗಿ ಏನು ಬೇಕೋ ಅದನ್ನು ಓದು. ಎಂದು ಹೇಳಿ ಮುಗಿಸಿದೆ.
ಒಟ್ಟು ಏನಾಯಿತು ಕಡೆಗೆ? ಈ ಆಸಾಮಿ ಮತ್ತೆ ಅವನ ಗರ್ಲ್ಫ್ರ್ರೆಂಡ್ಗೆ ನಾನು ನನ್ನನ್ನು ಒಬ್ಬ ತೀರ ನೀಚ, ಆ.. ಹೋಲ್ ಅಂತ ಪ್ರೂವ್ ಮಾಡಿದ್ದಾಯಿತು. ಆತನ ಕಥೆಯನ್ನು ನನ್ನ ಕೈಗೆ ಕೊಟ್ಟಿದ ತಕ್ಷಣ ಅದನ್ನು ಓದದೇ ಸುಮ್ಮನೇ ಹಿಂದಿರುಗಿಸಿಬಿಟ್ಟಿದ್ದರೂ ಅವರು ನನ್ನನ್ನು ಕೊಳಕ, ಜಂಭದ ಕೋಳಿ ಅಂತ್ಲೇ ತಿಳಕೊಳ್ಳುತ್ತಿದ್ದರು. ಒಂದೇ ವ್ಯತ್ಯಾಸವೆಂದರೆ, ಬರೇ ಬೆನ್ನುತಟ್ಟಿಸಿಕೊಳ್ಳುವ ತವಕದಲ್ಲಿ ಮಾತ್ರ ಇರುವ ಒಬ್ಬನಿಗೆ ನನ್ನ ಪ್ರಾಮಾಣಿಕ ಅಭಿಪ್ರಾಯವನ್ನು ಹೇಳಿದ ನಂತರವೂ ಅವರುಗಳ ಹತ್ತಿರ ಅನ್ನಿಸಿಕೊಳ್ಳಬೇಕಾಗುತ್ತಿರಲಿಲ್ಲ. ಮುಖ್ಯವಾಗಿ, ಆ ಕೆಟ್ಟ ಸ್ಕ್ರಿಪ್ಟಿನ ಓದುವ ಭಯಂಕರ ಹಿಂಸೆಯಿಂದ ಮುಕ್ತನಾಗುತ್ತಿದ್ದೆ.
ಒಬ್ಬ ವೃತಿಪರ ಬರಹಗಾರನಿಗೆ ಈ ರೀತಿ ಹಸ್ತಪ್ರತಿಯನ್ನು ಕೊಟ್ಟು ಓದಿಸುವುದಕ್ಕೆ ನಿನಗೆ ಯಾವುದೇ ಹಕ್ಕಿಲ್ಲ. ಇದೇನು ಮಹಾ ಕೆಲಸ, ಎರಡು ಪುಟವಷ್ಟೇ ಅಲ್ಲವಾ ಅಂತ ನೀನಂದಕೊಳ್ಳುವುದು ತಪ್ಪು. ಒಂದು ವಿಷಯ ಸ್ಪಷ್ಟವಾಗಿರಲಿ-ಒಬ್ಬ ಸೀನಿಯರ್ ಬರಹಗಾರನಿಗೆ ನೀನು ನಿನ್ನ ಬರಹವನ್ನು ಓದಿ ಅವರ ಅಭಿಪ್ರಾಯ ಕೇಳುತ್ತಿರುವುದರಿಂದ ಬರೇ ಅವರ ಎರಡು ಗಂಟೆಯನ್ನಷ್ಟು ಮಾತ್ರ ನೀನು ಕೇಳುತ್ತಿಲ್ಲ. ಅವರ ವರ್ಷಗಟ್ತಲೆ ಓದಿದ ಅನುಭವ, ಜ್ಞಾನ ಮತ್ತು ಅವರ ಕಲೆಯನ್ನು ಹಂಚಿಕೋ ಅಂತ ಕೇಳ್ತಾ ಇದೀಯ, ಇದು ನಿನ್ನ ತಲೆಯಲ್ಲಿರಲಿ. ನಿನಗೊಬ್ಬ ಪೇಂಟರ್ ಸ್ನೇಹಿತನಿದ್ದರೆ ಅವನ ಬಿಡುವಿನ ಅವಧಿಯಲ್ಲಿ ಬಂದು ನಿನ್ನ ಮನೆಯ ರೂಮೊಂದನ್ನು ಪೇಯಿಂಟ್ ಮಾಡಿಕೊಡುತ್ತೀಯ ಎಂದು ಕೇಳಿದಹಾಗೆ. ಎರಡಕ್ಕೂ ಹೆಚ್ಚಿನ ವ್ಯತ್ಯಾಸವಿಲ್ಲ.
ಪ್ಯಾಬ್ಲೊ ಪಿಕಾಸೋನ ಬಗ್ಗೆ ಒಂದು ಒಳ್ಳೆಯ ಕತೆ ಇದೆ, ಕೇಳಿದ್ದೀಯಾ? ಯಾರೋ ಬಂದು ಪಿಕಾಸೋಗೆ ತನ್ನ ಕರ್ಚೀಫಿನ ಮೇಲೆ ಒಂದು ಸ್ಕೆಚ್ ಬರೆಯಲು ಕೇಳಿದರಂತೆ. ಪಿಕಾಸೋ ಚಕ್ಕಂತ ಒಂದು ಪೆನ್ನನ್ನು ತೆಗೆದವನೇ ಏನೋ ಬರೆದು ‘ಒಂದು ಮಿಲಿಯ ಡಾಲರುಗಳು’ ಎಂದನಂತೆ.
‘ಒಂದು ಮಿಲಿಯ ಡಾಲರ್ಗಳಾ? ಬರೆಯೋಕೆ ನಿಮಗೆ ಹಿಡಿದದ್ದು ಕೇವಲ ಮೂವತ್ತು ಸೆಕೆಂಡುಗಳು ಮಾತ್ರ’ ಎಂದನಂತೆ ಆ ವ್ಯಕ್ತಿ.
‘ಹೌದು, ಆದರೆ ಮೂವತ್ತು ಸೆಕೆಂಡುಗಳಲ್ಲಿ ಇದನ್ನು ಬರೆಯೋದನ್ನು ಕಲಿಯೋಕ್ಕೆ ನನಗೆ ಐವತ್ತು ವರ್ಷಗಳು ಬೇಕಾದವು’
ಒಬ್ಬ ಪ್ರೊಫೆಶನಲ್ ಬರಹಗಾರನಿಂದ ಪುಕ್ಕಟೆ ಅಭಿಪ್ರಾಯ ಪಡೆದುಕೊಳ್ಳುವ ನನ್ನ ಈ ಗೆಳೆಯನ ಹಾಗೆ ಈ ಮನುಷ್ಯನಿಗೂ ಪಿಕಾಸೊನಂತ ಕಲಾವಿದನಿಂದ ಏನನ್ನು ಕೇಳುತ್ತಿದ್ದೇನೆ ಎನ್ನುವ ಅರಿವೂ ಇರಲಿಲ್ಲ. ಓದೋದಕ್ಕೆ ಬರೇ ಬಿಡುವಿನ ಸಮಯ ಮಾತ್ರ ಬೇಕು ಅನ್ನೋ ಅಭಿಪ್ರಾಯ ನಿನಗಿದ್ದರೆ, ನಿನ್ನ ಈ ‘ಓದೋ’ ಗೆಳೆಯರನ್ನು ಓದೋದಕ್ಕೆ ಕೇಳಿಕೋ. ಯಾರಿಗ್ಗೊತ್ತು, ಇದನ್ನು ಓದಿ ಅವನಿಗೆ ಖುಷಿಯೂ ಆಗಬಹುದು. ನಿನ್ನ ಬಗ್ಗೆ ಆತನಿಗೆ ತೀರಾ ಗೌರವವೂ ಮೂಡಬಹುದು. ಅವರಿಗ್ಯಾರಾದರೂ ಈ ಸಿನೆಮಾರಂಗದಲಿ ಪರಿಚಯವಿದ್ದರೆ ನಿನ್ನ ಕತೆಯನ್ನಿಟ್ಟುಕೊಂಡು ಸಿನೆಮಾ ಕೂಡ ಮಾಡಬಹುದು. ಆದರೆ, ನನಗೆ ಕಾಟ ಕೊಡ್ಬೇಡ.
ನಿನ್ನ ಫ.ಂಗ್ ಸ್ಕ್ರಿಪ್ಟನ್ನು ನಾ ಓದೋದಿಲ್ಲ.
* * *
ಜಾನ್ ಓಲ್ಸನ್ ಎಂಬ ಹಾಲಿವುಡ್ಡಿನ ಚಿತ್ರಕಥೆ ಬರೆಯುವವ ಬರೆದ ಲೇಖನದ ಆಯ್ದ ಭಾಗಗಳಿವು. ಈತ ಬರೆದ ಚಿತ್ರಕಥೆ ‘ದಿ ಹಿಸ್ಟರಿ ಆಫ್ ವಯಲೆನ್ಸ್’ ಎಂಬ ಇತ್ತೀಚಿನ ಚಿತ್ರ ಅನೇಕ ಪ್ರಶಸ್ತಿಗಳನ್ನು ಪಡಕೊಂಡಿದೆ. ಹೊಸಬರಹಗಾರರು ಬರೆದು ಪಾಪವನ್ನೇನೂ ಮಾಡುತ್ತಿಲ್ಲವಲ್ಲ ಎಂದು ಬಹಳಷ್ಟು ಹೊಸಬರವಣಿಗೆಗಳಿಗೆಗಳನ್ನು ಪ್ರೋತ್ಸಾಹಿಸಿದ ಗೌರೀಶ ಕಾಯ್ಕಿಣಿ, ಮತ್ತು ಬರವಣಿಗೆಯನ್ನು ಹಸ್ತಪ್ರತಿಯ ಘಟ್ಟದಲ್ಲಿ ಓದಿ ಮೆಚ್ಚಿಗೆಯಾದಲ್ಲಿ ಕೇಳದೇ ಮುನ್ನುಡಿಯನ್ನೂ ಬರೆದುಕೊಡುತ್ತಿದ್ದ ಕೀರ್ತಿನಾಥ ಕುರ್ತಕೋಟಿಯವರ ಪರಿಚಯವಿರುವ ನಮಗೆ ಇಂಥ ಅಭಿಪ್ರಾಯಗಳು ಹೊಸದು.
ಆದರೆ, ಹಸ್ತಪ್ರತಿಯನ್ನು ಓದುವಾಗ ಇಂಥ ಅಭಿಪ್ರಾಯಗಳು ಬರುವುದಿಲ್ಲ ಎಂದು ಹೇಳುವುದು ಕೊಂಚಮಟ್ಟಿಗಾದರೂ ಅಪ್ರಾಮಾಣಿಕವಲ್ಲವೇ?
Saturday, October 31, 2009
Wednesday, October 21, 2009
ಕೆಂಡಸಂಪಿಗೆಯ ಮರಣ
ಅಂತರ್ಜಾಲದ ಕನ್ನಡದ ತಾಣ ಕೆಂಡಸಂಪಿಗೆ ಅಕಾಲಿಕ ಮರಣವನ್ನಪ್ಪಿದೆ. ಇದ್ದಕ್ಕಿದ್ದಂತೆ ಈ ತಿಂಗಳ ಮೊದಲ ದಿನದಂದು ‘ಇನ್ನುಮುಂದೆ ಕೆಂಡಸಂಪಿಗೆ ಯ ಪ್ರಕಟಣೆಯನ್ನು ನಿಲ್ಲಿಸಿದ್ದೇವೆ, ಇದುವರೆವಿಗೂ ನಮ್ಮೊಂದಿಗೆ ಸಹಕರಿಸಿದ ಎಲ್ಲ ಬರಹಗಾರರಿಗೆ ಮತ್ತು ಓದುಗವರ್ಗಕ್ಕೆ ಧನ್ಯವಾದಗಳು’ ಎಂಬ ಒಂದು ಸಾಲಿನ ಓಬಿಚುಯರಿಯೊಂದಿಗೆ ಕೆಂಡಸಂಪಿಗೆ ತನ್ನ ಅಂತರ್ಜಾಲ ತಾಣವನ್ನು ಶಾಶ್ವತವಾಗಿ ಮುಚ್ಚಿದೆ. ಇನ್ನುಮುಂದೆ ದಿನಂಪ್ರತಿ ಈ ತಾಣವನ್ನು ನೋಡಹೋಗುತ್ತಿದ್ದ ಜಾಲತಾಣಿಗರಿಗೆಲ್ಲ ಏನೋ ಕಳಕೊಂಡ ಇರುಸುಮುರುಸು.
ಕನ್ನಡದ ಅಂತರ್ಜಾಲ ಓದುಗರಲ್ಲಿ ಹೊಸ ಸಂಚಲನವನ್ನು ಉಂಟುಮಾಡಿದ್ದು ಕೆಂಡಸಂಪಿಗೆ. ವಿನ್ಯಾಸ, ವಸ್ತು, ಭಾಷೆ ಹಾಗೂ ಲಯದ ತಾಜಾತನದಿಂದ ಎಲ್ಲರ ಗಮನ ಸೆಳೆದಿತ್ತು. ಅನೇಕ ಹೊಸಬರಹಗಾರರನ್ನು ಹುಟ್ಟುಹಾಕಿದ್ದಷ್ಟೇ ಅಲ್ಲದೇ, ಅಂತರ್ಜಾಲವೆಂದರೆ ಮೂಗುಮುರಿಯುತ್ತಿದ್ದ ಅನೇಕ ಹಳೇಮಂದಿಯ ಕೈಯಲ್ಲಿಯೂ ಕೀಲಿಮಣೆ ಕೊಟ್ಟು ಕೆಲಸ ಮಾಡಿಸಿತು. ಎರಡು ವರ್ಷಗಳ ಕಾಲ ದಿನ ಬೆಳಗಾದರೆ ಕೆಂಡಸಂಪಿಗೆಯನ್ನು ಎದುರು ನೋಡುತ್ತಿದ್ದವರು ಎಷ್ಟೋ ಮಂದಿ. ಆದರೆ, ಈಗ ಏಕಾಏಕಿ ಮುಚ್ಚಿನಿಂತು ತನ್ನನ್ನು ನಂಬಿದ ಓದುಗ ಬಳಗಕ್ಕೆ ಬಹುದೊಡ್ಡ ನಿರಾಶೆಯನ್ನುಂಟುಮಾಡಿ ಹೊರಟುಹೋಗಿದೆ, ಕೆಂಡಸಂಪಿಗೆ.
ಅಂತರ್ಜಾಲದ ಪತ್ರಿಕೆಗಳ ವ್ಯಾಕರಣವನ್ನು ಚೆನ್ನಾಗಿ ಅರ್ಥಮಾಡಿಕೊಂಡೇ ತನ್ನ ಕೆಲಸವನ್ನು ಮಾಡುತ್ತಿತ್ತಂದಿತ್ತು, ಕೆಂಡಸಂಪಿಗೆಯ ಬಳಗ. ಒಂದಿಷ್ಟು ಸುದ್ದಿ, ಒಂದಷ್ಟು ಕತೆ, ಸುಂದರವಾದ ಕವನಗಳು, ಆತ್ಮಚರಿತ್ರೆ, ಪ್ರವಾಸಕಥಾನಕಗಳು, ಧಾರಾವಾಹಿ, ಕೊಂಚ ವಿಚಾರ, ಅಲ್ಲಲ್ಲಿ ಟಾಂಗುಗೊಡಿಸುವ ಬರಹಗಳು, ಬೇಕಿದ್ದಾಗ ಸುದ್ದಿಗೆ ಗುದ್ದುಕೊಡುವ ವಿವಾದಗಳು, ಚರ್ಚೆ, ಎಲ್ಲವೂ ಹದವಾಗಿ ಬೆರೆತಿದ್ದವು. (ಕೆಲವೊಮ್ಮೆ ಚರ್ಚೆ ಅತಿರೇಕವೆನಿಸಿದರೂ ಅಂತರ್ಜಾಲದ ಜಾಲತಾಣದ ಉಳಿಗಾವಿಗೆ ಇಂಥ ಚರ್ಚೆಗಳು ಅನಿವಾರ್ಯವೆಂಬುದನ್ನು ಇದರ ಸಂಪಾದಕವರ್ಗದವರು ಅರಿvದ್ದರೆಂದೇ ಈ ಮಾತನ್ನು ಹೇಳಬೇಕಾಗಿದೆ)
ಆದರೆ, ಈ ಕೆಂಡಸಂಪಿಗೆ ನಿಂತದ್ದೇಕೆ?
ಅಂತರ್ಜಾಲದಲ್ಲಿ ಕನ್ನಡದ ಇತಿಹಾಸ ಬಹಳ ಹಳೆಯದೇನಲ್ಲ. ನನಗೆ ಗೊತ್ತಿದ್ದಹಾಗೆ ಸಮಾಚಾರಪತ್ರಿಕೆಗಳಲ್ಲಿ ‘ಸಂಜೆವಾಣಿ’ ಮೊಟ್ಟಮೊದಲಬಾರಿಗೆ ತನ್ನ ಅಸ್ಮಿತೆಯನ್ನು ಅಂತರ್ಜಾಲದಲ್ಲಿ ಸ್ಥಾಪಿಸಿದ್ದು ಪ್ರಾಯಶಃ ೧೯೯೫-೧೯೯೬ರ ಸುಮಾರಿಗೆ. ಆ ಸಂದರ್ಭದಲ್ಲಿ ಅಲೊಂದು ಇಲ್ಲೊಂದು ಜಿಯೋಸಿಟಿ ಮತ್ತಿತರ ವೆಬ್ಸೈಟುಗಳಿಂದ ಕೊಂಚವೇ ಕೊಂಚ ಎರವಲು ಪಡಕೊಂಡು ನಡೆಸುತ್ತಿದ್ದ ಕೆಲವು ತಾಣಗಳು ತಮ್ಮ ಕೆಲಸವನ್ನು ಕುಂಟಿಕೊಂಡು ನಡೆಸುತ್ತಲೇನೋ ಇದ್ದವು. ನಂತರ ಅನೇಕ ದಿನಪತ್ರಿಕೆಗಳು ತಮ್ಮ ಮುದ್ರಿತ ಪತ್ರಿಕೆಯ ಅಂತರ್ಜಾಲ ಆವೃತ್ತಿಯನ್ನು ಜಾಲದಲ್ಲಿ ಪ್ರಕಟಿಸಿ ತಮ್ಮ ಓದುಗವರ್ಗವನ್ನು ಹಿಗ್ಗಿಸಿಕೊಳ್ಳುತ್ತಿದ್ದವು. ನಂತರ ಬಂದ ಕನ್ನಡಸಾಹಿತ್ಯ.ಕಾಮ್, ವಿಶ್ವಕನ್ನಡ.ಕಾಮ್, ಮುಂತಾದವುಗಳೂ ಆರಂಭದಲ್ಲಿ ವಿಶ್ವಾಸವನ್ನು ಮೂಡಿಸಿದ್ದಾದರೂ ನಂತರ ನೆಲಕಚ್ಚಿದ್ದಾವೆ. ಕನ್ನಡಸಾಹಿತ್ಯ.ಕಾಮ್ ಈಗ ಅಂತರ್ಜಾಲದ ವ್ಯಾಪ್ತಿಯ ಹೊರಗೆ ತನ್ನ ಕೆಲಸವನ್ನು ಮಾಡಿಕೊಂಡು ಬರುತ್ತಿದೆಯಾದರೂ ಅಂತರ್ಜಾಲದಲ್ಲಿ ಕನ್ನಡದ ಬೆಳವಣಿಗೆಗೆ ಲೈಬ್ರರಿಯ ಅಥವಾ ಪ್ರಮುಖ ಲೇಖಕರ ಬರಹಗಳ ಆರ್ಕೈವ್ ಆಗುವುದನ್ನು ಬಿಟ್ಟರೆ ಹೆಚ್ಚಿನ ಕೆಲಸವನ್ನು ಮಾಡಲು ಇಲ್ಲಿ ಸಾಧ್ಯವಾಗಿಲ್ಲ. ನಮ್ಮೆಲ್ಲರನ್ನೂ ಬೆಳೆಸಿದ ದಟ್ಸ್ಕನ್ನಡ.ಕಾಮ್ನ ಆದ್ಯತೆಗಳು ಈಗ ಸಂಪೂರ್ಣವಾಗಿ ಬೇರೆಯಾಗಿದೆ.
ಒಂದು ಪತ್ರಿಕೆ ನೆಲಕಚ್ಚುವುದರ ವಿಷಯದಲ್ಲಿ ಪತ್ರಿಕೆಯ ಆಡಳಿತವರ್ಗಕ್ಕೆ ಒಂದು ಹೊಣೆಗಾರಿಕೆ ಇರಬೇಕಲ್ಲವೇ? ಇಲ್ಲಿ ಹೊಣೆಗಾರಿಕೆಯೆಂದರೆ ಬರೇ ಆರ್ಥಿಕವಾದದ್ದಷ್ಟೇ ಅಲ್ಲ, ಸಾಂಸ್ಕೃತಿಕ ಜವಾಬ್ದಾರಿ ಎಷ್ಟಿರಬೇಕು? ಬರೇ ಬಾಟಮ್ಲೈನ್ ನೋಡುತ್ತಾ ಈ ಪತ್ರಿಕೆಯಿಂದ ನಮಗೆ ಲಾಭವಿಲ್ಲವೆಂದು ಇಡೀ ಪತ್ರಿಕೆಯನ್ನು ನಿಲ್ಲಿಸಿದರೆ ಅದನ್ನು ಓದುವ ವರ್ಗದ ಆಶಯಗಳನ್ನು ಬಲಿಕೊಟ್ಟಂತೆ. ಆದ್ದರಿಂದ ಒಂದು ಪತ್ರಿಕೆಯನ್ನು ಕಟ್ಟಿ ಬೆಳೆಸುತ್ತಿರುವಾಗ ಅದರ ವ್ಯವಸ್ಥಾಪಕ ಮಂಡಳಿ ಅದರ ಸೃಜನಶೀಲ ಸಂಪನ್ಮೂಲಗಳನ್ನು ಬೆಳೆಸುವುದರ ಜತೆಗೆ ಆ ಪತ್ರಿಕೆ ತನ್ನನ್ನು ತಾನು ಪೋಷಿಸಿಕೊಂಡು ಹೇಗೆ ಬೆಳೆಯಬಲ್ಲದೆನ್ನುವುದಕ್ಕೆ ರೂಪುರೇಷೆಗಳನ್ನು ಹಾಕಿಕೊಳ್ಳುವುದು ಬಹಳ ಅವಶ್ಯ. ಇಲ್ಲದಿದ್ದರೆ ಓದುಗವರ್ಗವನ್ನು ಬೆಳೆಸುವುದರ ಖುಷಿಯ ಜತೆಗೆ ಅದನ್ನು ಸಾಯಿಸುವುದರ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ.
ಕೆಂಡಸಂಪಿಗೆಯಂತ ಪತ್ರಿಕೆ ಶುರುವಾಗಿ ಬೆಳೆದಾಗ ಅದೊಂದು ಪತ್ರಿಕೆಯಾಗಿ ಉಳಿಯುವುದಿಲ್ಲ. ಒಂದು ಸಮುದಾಯದ ಆಶಯವಾಗುತ್ತದೆ. ಮುಖವಾಣಿಯಾಗುತ್ತದೆ. ತಾನೇ ಒಂದು ಸಮುದಾಯವಾಗುತ್ತದೆ. ತಾನೂ ಬೆಳೆಯುವುದರ ಜತೆಗೆ ತನ್ನನ್ನು ಬೆಳೆಸುತ್ತಿರುವ ಸಮುದಾಯವನ್ನೂ ಬೆಳೆಸುತ್ತದೆ.
ಹಾಗೆಯೇ ತಾನು ಸಾಯುವುದರ ಜತೆಗೆ ಈ ಸಮುದಾಯವನ್ನೂ ಅದರ ಆಶಯವನ್ನೂ ಸಾಯಿಸುತ್ತದೆ.
ಕನ್ನಡದ ಬಹಳಷ್ಟು ಲಿಟ್ ಮ್ಯಾಗಜೀನುಗಳು ಒಂದು ನಿರ್ದಿಷ್ಟ ಸಮುದಾಯದ ಮುಖವಾಣಿಯೆನ್ನುವುದು ಒಂದು ರೀತಿ ನಿಜ. ಎಲ್ಲವೂ ಸಮಷ್ಟಿಯ ಸಂಸ್ಕೃತಿ, ಸಾಹಿತ್ಯದ ಪೋಷಣೆಯ ಹೆಸರಲ್ಲೇ ಪ್ರಾರಂಭವಾದರೂ ಎಲ್ಲೋ ಒಂದು ಕಡೆ ಅವು ತಮ್ಮದೇ ಆದ ಒಂದು ಓದುಗವರ್ಗವನ್ನು ಸೃಷ್ಟಿಸಿಕೊಳ್ಳುತ್ತವೆ. ಹಾಗೆ ಸೃಷ್ಟಿಮಾಡಿದ ಓದುಗ ವರ್ಗಕ್ಕೆ ತಾನೇ ಬೆಳೆಸಿದ ಸಂವೇದನೆಯಿಂದಲೋ ಅಥವಾ ಅದೇ ಸಂವೇದನೆಯಿರುವ ಓದುಗರು ಮಾತ್ರ ಆ ಪತ್ರಿಕೆಗಳನ್ನು ಓದುತಾರೋ, ಓದುಗರೂ, ಪತ್ರಿಕೆಯೂ ಪರಸ್ಪರರ ಆಶಯಕ್ಕೆ ಧೋರಣೆಗೆ ಪರಸ್ಪರ ಪೂರಕವಾಗಿ ಕೆಲಸ ಮಾಡಿರುತ್ತಾರೆ. ಆ ಆಶಯಗಳು, ನಂಬಿಕೆಗಳು ತನ್ಮೂಲಕ ಒಂದು ಚಳುವಳಿಯೇನಾದರೂ ಸೃಷ್ಟಿಯಾಗಿದ್ದಲ್ಲಿ ಅವುಗಳೆಲ್ಲದರ ನಿರ್ಗಮನದ ಜತೆಗೆ ಆ ಪತ್ರಿಕೆಯ ಆಯಸ್ಸೂ ಮುಗಿದಿರುತ್ತದೆ. ನಂತರ ಪತ್ರಿಕೆ ಇರಬೇಕೆಂದು ಯಾರೂ ಕೇಳುವುದೂ ಇಲ್ಲ. ಮುಚ್ಚಿಹೋಯಿತೆಂದು ಯಾರೂ ದುಃಖಿಸುವುದೂ ಇಲ್ಲ. ಇದೊಂದು ಪತ್ರಿಕೆಯ ಸ್ವಾಭಾವಿಕ ಮರಣ. ಅಂದರೆ ಪ್ರತೀ ಪತ್ರಿಕೆಗೂ ಒಂದು ನಿರ್ದಿಷ್ಟ ಆಶಯವಿದೆ, ಆಯಸ್ಸಿದೆ ಎಂದು ನಂಬಿದ ಸಂಪನ್ಮೂಲ ವ್ಯಕ್ತಿಗಳಿರುವವರೆಗೆ ಅದರ ಸಾವೂ ಕೂಡ ಅರ್ಥಪೂರ್ಣವಾಗುತ್ತದೆ. ಅದರ ಬದುಕು ಮಾತ್ರ ಮುಖ್ಯವಾಗುತ್ತದೆ.
ಹಾಗೆಯೇ ಕೆಂಡಸಂಪಿಗೆಯೂ ಒಂದು ಸಮುದಾಯದ ಮುಖವಾಹಿನಿಯಾಗಿತ್ತೆಂಬುದನ್ನು ನಾವು ಗಮನದಲ್ಲಿದಬೇಕು. ಈ ಸಮುದಾಯ ಬಹುಸಂಖ್ಯಾತವೇನಲ್ಲ. ಬದಲಾದ ಜೀವನ ಶೈಲಿ, ಮೌಲ್ಯಗಳು, ಭೌಗೋಳಿಕ ರೇಖೆಯನ್ನು ಮೀರಿದ ಡಯಾಸ್ಪೊರಕ್ಕೆ ಹಾಗೆಯೇ ಎಲ್ಲದಕ್ಕೂ ಸಾಮಾನ್ಯವಾದ ನಮ್ಮ ಅವಸರ, ಧಾವಂತಕ್ಕೆ ಒಂದು ಅರ್ಥಪೂರ್ಣತೆಯನ್ನು ತಂದಿತ್ತು. ಹಾಗೆ ನೋಡಿದರೆ ಈ ಅಂತರ್ಜಾಲವೆನ್ನುವುದೇ ಒಂದು ಅವಸರದ ಓದಿಗೆ ಪ್ರಶಸ್ತವಾದ ತಾಣ. ಇಲ್ಲಿ ನಾವು ಅಂತರ್ಜಾಲವನ್ನು ಸರ್ಪ್ ಮಾಡುತ್ತೇವೆ, ಬ್ಲಾಗುಗಳನ್ನು ಸ್ಕ್ರೋಲಿಸುತ್ತೇವೆ. ಒಂದು ತಾಣದಿಂದ ಇನ್ನೊಂದು ತಾಣಕ್ಕೆ ಜಿಗಿಯುತ್ತೇವೆ. ನಮ್ಮ ಅಟೆಂಶನ್ ಸ್ಪಾನ್ ಕೇವಲ ಸೆಕೆಂಡುಗಳಲ್ಲಿ ಅಳತೆಮಾಡಲ್ಪಡುವ ಈ ಲೋಕದಲ್ಲಿ ಪ್ರತಿದಿನ ಬೆಳಿಗ್ಗೆ ಹದಿನೈದು ನಿಮಿಷವಾದರೂ ನಮ್ಮನ್ನು ಕೆಂಡಸಂಪಿಗೆ.ಕಾಮ್ ಎಂಬ ತಾಣ ತನ್ನ ಮುಂದೆ ಕೂರಿಸಿಕೊಳ್ಳಲು ಸಫಲವಾಗಿತ್ತು. ಕೆಲವೊಮ್ಮೆ ಸ್ಕ್ರೋಲಿಸುತ್ತಾ, ಮಗದೊಮ್ಮೆ ಓದುತ್ತಾ, ಆಗಾಗ ಕಮೆಂಟಿಸುತ್ತಾ, ಬಹಳಬಾರಿ ಬರೇ ಕಮೆಂಟುಗಳನ್ನು ಮಾತ್ರ ಓದುತ್ತಾ, ಕಮೆಂಟಿಗೊಂದು ಕಮೆಂಟಿಸುತ್ತಾ, ಒಮ್ಮೆ ಓದಲಿಕ್ಕಾಗದನ್ನು ಮತ್ತೆ ಮಧ್ಯಾಹ್ನವೋ, ಸಂಜೆಯೋ ಓದಲಿಕ್ಕೆ ಮತ್ತೆ ಮತ್ತೆ ತನ್ನ ಬಳಿ ಬರುವಂತೆ ಮಾಡಲೂ ಸಫಲವಾಗಿತ್ತು.
ಆದರೆ, ಸೃಜನಶೀಲತೆಯೆನ್ನುವುದು ಬರೇ ಬೌದ್ಧಿಕತೆಯ ಮಟ್ಟದಲ್ಲಿ ನಿಂತುಬಿಟ್ಟರೆ ಆಗುವುದೇ ಹೀಗೆ. ವ್ಯವಹಾರದಲ್ಲಿ ಕ್ರಿಯೇಟಿವ್ ಆಗದಿದ್ದಲ್ಲಿ ಇಂಥ ಅಕಾಲ ಮರಣಗಳು ಬರಬಹುದೇನೋ? ಈ ಅಂತರ್ಜಾಲದ ಜಾಲತಾಣವನ್ನು ನಿರ್ವಹಿಸಿಕೊಂಡು ಹೋಗುವುದರ ಲೊಜಿಸ್ಟಿಕ್ಸ್ ನನಗೆ ಗೊತ್ತಿಲ್ಲ, ಈಗಂತೂ ಕಾಸಿಗೊಂದು ಕೊಸರಿಗೊಂದು ಬ್ಲಾಗುಗಳು ಇರುವ ಈ ಕಾಲದಲ್ಲಿ ಇಂಥ ಒಂದು ಸೈಟು ತನ್ನ ಉಳಿಕೆಯನ್ನು ಸೃಜನಶೀಲವಾಗಿ ಗ್ರಹಿಸಲಿಲ್ಲವಲ್ಲ ಎನ್ನುವ ವ್ಯಥೆಯಿದೆ. ಇದಕ್ಕೆ ಬೇಕಾದ ಜಾಹಿರಾತುಗಳು ಸಿಗಲಿಲ್ಲವೇ? ಹೂಡಿಕೆದಾರರಿಲಿಲ್ಲವೇ? ಎಲ್ಲವೂ ವೇದ್ಯ. ಆದರೆ, ಯಾಕಾಗಲಿಲ್ಲ.
ಅಂತರ್ಜಾಲವೆನ್ನುವುದೇ ಒಂದು ಮಿಥ್ಯಾಪ್ರಪಂಚ. ಇಲ್ಲಿ ಎಲ್ಲವೂ ವರ್ಚುಯಲ್. ಪತ್ರಿಕೆ ಪ್ರಿಂಟಾಗಿದ್ದರೆ ಎಷ್ಟು ಖರ್ಛಾಗಿದೆ ಎನ್ನುವ ಲೆಕ್ಕವಾದರೂ ಸಿಗುತ್ತದೆ. ಆದರೆ, ಬರೇ ಹಿಟ್ಗಳನ್ನು ನಂಬಿಕೊಂಡು ಇದರ ಮೇಲೆ ಬಂಡವಾಳ ಹೂಡುವ ಜಾಹಿರಾತು ಹೂಡುವ ಮಂದಿ ಸಿಗಲಿಲ್ಲವೇ?
ಬಲ್ಲವರು ಯಾರೋ ಹೇಳಿದ್ದರು. ನಾವು ಯಾವುದೇ ವೆಬ್ತಾಣವನ್ನು ಕ್ಲಿಕ್ಕಿಸಿದರೆ ಸಾಕು ಅದನ್ನು ನಾವು ಓದುತ್ತಿದ್ದೇವೆ ಎಂತಲೇ ಅರ್ಥ. ಇದಕ್ಕೆ ಹತ್ತಿರವಾದ ಹೋಲಿಕೆಯೆಂದರೆ ಅಂಗಡಿಯಿಂದ ಒಂದು ಪುಸ್ತಕವನ್ನು ಖರೀದಿಸಿ ತಂದರೆ ಆಯಿತು, ಅದನ್ನು ಓದಿದಂತೆಯೇ. ಪುಸ್ತಕವ್ಯಾಪಾರಿಗೆ ನೀವು ಆ ಪುಸ್ತಕವನ್ನು ಓದುತ್ತೀರೋ ಇಲ್ಲವೋ ಅನ್ನುವುದು ಮುಖ್ಯವಾಗುವುದೇ ಇಲ್ಲ.
ನಾನೂಹಿಸಿಕೊಳ್ಳುವ ಕಾರಣ ಬಹಳ ಸರಳ. ತಪ್ಪಿರಲೂ ಬಹುದು. ಸಂಪನ್ಮೂಲದ ಕೊರತೆಯಿದ್ದರೂ ಇರಬಹುದು. ಕನ್ನಡದ ಬಹಳಷ್ಟು ಈ ತರದ ಸೃಜನಶೀಲ ಚಟುವಟಿಕೆಗಳು ನಡೆಯುವುದು ಲಾಭವನ್ನು ನೆಚ್ಚಿಕೊಂಡು ಅಲ್ಲ ಎನ್ನುವುದು ಪ್ರಾಯಶಃ ನಮಗೆಲ್ಲ ಗೊತ್ತಿರುವ ವಿಷಯ. ಎಲ್ಲಿಯವರೆಗೆ ಲಾಭ, ನಷ್ಟಗಳ ಮೊಬಲಗು ಸರಿಹೋಗುತ್ತದೆಯೋ ಅಲ್ಲಿಯವರೆಗೆ ಇದು ನಡಕೊಂಡು ಹೋಗಬೇಕು. ಆದರೆ ಈ ಲಾಭ ನಷ್ಟಗಳ ಲೆಕ್ಕಚುಕ್ಕಿಗ ಬೇರೆ ವ್ಯಾಪಾರಿಯಾಗಿ, ಈ ಸೃಜನಶೀಲ ಸಂಪನ್ಮೂಲ ಬೇರೆಯಾಗಿದ್ದಲಿ, ಈ ಎರಡೂ ಶಕ್ತಿಗಳು ಸಮಾನಾಂತರವಾಗಿ ಕೆಲಸ ಮಾಡಲು ಶುರುಮಾಡುತ್ತವೆ. ಕ್ರಿಯೇಟಿವ್ ಟೀಮ್ ಹೆಚ್ಚು ಕ್ರಿಯಾಶೀಲವಾದಲ್ಲಿ ತಾಣದ ಬಗ್ಗೆ ಹೆಚ್ಚಿನ ನಂಬಿಕೆಯನ್ನು ಓದುಗವರ್ಗದಲ್ಲಿ ಮೂಡಿಸಲಾಗುತ್ತದೆ. ಆದರೆ, ಯಾವ ಕಾರಣದಿಂದ ಈ ಪತ್ರಿಕೆ ನಿಂತರೂ ಕೆಲವಾದರೂ ಓದುಗರಿಗೆ ‘ಛೆ ಐ ವಾಸ್ ಟೇಕನ್ ಫಾರ್ ಅ ರೈಡ್’ ಎಂಬ ಭಾವನೆ ಬಂದಲ್ಲಿ ಅನುಮಾನವೇನಿಲ್ಲ. ಜಯಂತ ಕಾಯ್ಕಿಣಿಯವರ ಸಂಪಾದಕತ್ವದಲ್ಲಿ ಬರುತ್ತಿದ್ದ ‘ಭಾವನಾ’ ನಿಂತಾಗ ಕೂಡ ಪತ್ರಿಕೆಯ ಓನರ್ಮಂದಿಯ ಬಾಟಮ್ಲೈನಿನ ಲೆಕ್ಕವನ್ನು ನೋಡಿ ಓದುಗರಿಗೆ ಮೈ ಉರಿದುಹೋಗಿತ್ತು.
ಆದರೆ, ಯಾರ ಮೈ ಉರಿದುಹೋಗುತ್ತದೆ ಅನ್ನುವುದೂ ಇಲ್ಲಿ ಮುಖ್ಯ. ಬಹಳಷ್ಟು ಮಂದಿ ಕನ್ನಡದ ಓದುಗರು, ಬರಹಗಾರರು ತಂಪಾಡಿಗೆ ತಾವು ಓದಿ ಖುಷಿಪಡುವವರು. ಪತ್ರಿಕೆ ಇದ್ದರೆ ಓದುತ್ತೇವೆ, ಇಲ್ಲವಾ ಇನ್ನೇನಾದರೂ ಓದುತ್ತೇವೆ ಎನ್ನುವ ಧೋರಣೆ ಯಿರುವವರು, ಮತ್ತು ಒಂದು ಪತ್ರಿಕೆ ಬರೆ ಪತ್ರಿಕೆಯಾಗಿ ಉಳಿದು ನಿಮ್ಮ ಜೀವನಶೈಲಿಯ ಯಾವ ಭಾಗವೂ ಆಗದೇ ಇದ್ದಲ್ಲಿ ಅದರ ಉಳಿವು ಅಸಾಧ್ಯ.
ಇದರ ಪರಿಣಾಮವೆಂದರೆ, ಇನ್ನಾರಾದಾರೂ ಕನ್ನಡದಲ್ಲಿ ಒಂದು ವೆಬ್ ಪತ್ರಿಕೆಯನ್ನು ಶುರುಮಾಡುತ್ತೀವೆಂದರೆ ಅದನ್ನು ಹೇಗೆ ನಂಬುವುದು ಎನ್ನುವ ಪರಿಸ್ಥಿತಿ ಬಂದು ಹೋಗಿದೆ. ಅಸಂಖ್ಯಾತ ಬ್ಲಾಗುಗಳು ಮತ್ತು ಮುದ್ರಣದಲ್ಲಿ ಲಭ್ಯವಿರುವ ಪತ್ರಿಕೆಗಳ ಅಂತರ್ಜಾಲ ಆವೃತ್ತಿಗಳನ್ನು ಬಿಟ್ಟರೆ ಅಂತರ್ಜಾಲ ಕ್ಕೇ ಎಕ್ಸ್ಕ್ಲ್ಯೂಸಿವ್ ಆದ ಒಂದು ಸದಭಿರುಚಿಯ ಪತ್ರಿಕೆ ಕನ್ನಡದಲ್ಲಿ ಬರುತ್ತದೆ ಎಂದರೆ ಅದರ ಬಗ್ಗೆ ನಂಬುವುದೇ ಅಸಾಧ್ಯವೇನೋ ಎಂಬ ಪರಿಸ್ಥಿತಿ ಬಂದು ಕೂತಿದೆ.
ಇದಕ್ಕೆ ಬರೇ ಕೆಂಡಸಂಪಿಗೆಯ ವ್ಯವಸ್ಠಾಪಕರನ್ನು ದೂರಿದಲ್ಲಿ ತಪ್ಪಾಗುತ್ತದೆ. ಇದರಲ್ಲಿ ನಮ್ಮ ಪಾಲೂ ಇದೆ ಎಂದು ನಂಬಿದಲ್ಲಿ ಮಾತ್ರ ಏನಾದರೂ ಅರ್ಥಪೂರ್ಣವಾಗಿ ಮಾಡಬಹುದು.
ಕನ್ನಡದ ಅಂತರ್ಜಾಲ ಓದುಗರಲ್ಲಿ ಹೊಸ ಸಂಚಲನವನ್ನು ಉಂಟುಮಾಡಿದ್ದು ಕೆಂಡಸಂಪಿಗೆ. ವಿನ್ಯಾಸ, ವಸ್ತು, ಭಾಷೆ ಹಾಗೂ ಲಯದ ತಾಜಾತನದಿಂದ ಎಲ್ಲರ ಗಮನ ಸೆಳೆದಿತ್ತು. ಅನೇಕ ಹೊಸಬರಹಗಾರರನ್ನು ಹುಟ್ಟುಹಾಕಿದ್ದಷ್ಟೇ ಅಲ್ಲದೇ, ಅಂತರ್ಜಾಲವೆಂದರೆ ಮೂಗುಮುರಿಯುತ್ತಿದ್ದ ಅನೇಕ ಹಳೇಮಂದಿಯ ಕೈಯಲ್ಲಿಯೂ ಕೀಲಿಮಣೆ ಕೊಟ್ಟು ಕೆಲಸ ಮಾಡಿಸಿತು. ಎರಡು ವರ್ಷಗಳ ಕಾಲ ದಿನ ಬೆಳಗಾದರೆ ಕೆಂಡಸಂಪಿಗೆಯನ್ನು ಎದುರು ನೋಡುತ್ತಿದ್ದವರು ಎಷ್ಟೋ ಮಂದಿ. ಆದರೆ, ಈಗ ಏಕಾಏಕಿ ಮುಚ್ಚಿನಿಂತು ತನ್ನನ್ನು ನಂಬಿದ ಓದುಗ ಬಳಗಕ್ಕೆ ಬಹುದೊಡ್ಡ ನಿರಾಶೆಯನ್ನುಂಟುಮಾಡಿ ಹೊರಟುಹೋಗಿದೆ, ಕೆಂಡಸಂಪಿಗೆ.
ಅಂತರ್ಜಾಲದ ಪತ್ರಿಕೆಗಳ ವ್ಯಾಕರಣವನ್ನು ಚೆನ್ನಾಗಿ ಅರ್ಥಮಾಡಿಕೊಂಡೇ ತನ್ನ ಕೆಲಸವನ್ನು ಮಾಡುತ್ತಿತ್ತಂದಿತ್ತು, ಕೆಂಡಸಂಪಿಗೆಯ ಬಳಗ. ಒಂದಿಷ್ಟು ಸುದ್ದಿ, ಒಂದಷ್ಟು ಕತೆ, ಸುಂದರವಾದ ಕವನಗಳು, ಆತ್ಮಚರಿತ್ರೆ, ಪ್ರವಾಸಕಥಾನಕಗಳು, ಧಾರಾವಾಹಿ, ಕೊಂಚ ವಿಚಾರ, ಅಲ್ಲಲ್ಲಿ ಟಾಂಗುಗೊಡಿಸುವ ಬರಹಗಳು, ಬೇಕಿದ್ದಾಗ ಸುದ್ದಿಗೆ ಗುದ್ದುಕೊಡುವ ವಿವಾದಗಳು, ಚರ್ಚೆ, ಎಲ್ಲವೂ ಹದವಾಗಿ ಬೆರೆತಿದ್ದವು. (ಕೆಲವೊಮ್ಮೆ ಚರ್ಚೆ ಅತಿರೇಕವೆನಿಸಿದರೂ ಅಂತರ್ಜಾಲದ ಜಾಲತಾಣದ ಉಳಿಗಾವಿಗೆ ಇಂಥ ಚರ್ಚೆಗಳು ಅನಿವಾರ್ಯವೆಂಬುದನ್ನು ಇದರ ಸಂಪಾದಕವರ್ಗದವರು ಅರಿvದ್ದರೆಂದೇ ಈ ಮಾತನ್ನು ಹೇಳಬೇಕಾಗಿದೆ)
ಆದರೆ, ಈ ಕೆಂಡಸಂಪಿಗೆ ನಿಂತದ್ದೇಕೆ?
ಅಂತರ್ಜಾಲದಲ್ಲಿ ಕನ್ನಡದ ಇತಿಹಾಸ ಬಹಳ ಹಳೆಯದೇನಲ್ಲ. ನನಗೆ ಗೊತ್ತಿದ್ದಹಾಗೆ ಸಮಾಚಾರಪತ್ರಿಕೆಗಳಲ್ಲಿ ‘ಸಂಜೆವಾಣಿ’ ಮೊಟ್ಟಮೊದಲಬಾರಿಗೆ ತನ್ನ ಅಸ್ಮಿತೆಯನ್ನು ಅಂತರ್ಜಾಲದಲ್ಲಿ ಸ್ಥಾಪಿಸಿದ್ದು ಪ್ರಾಯಶಃ ೧೯೯೫-೧೯೯೬ರ ಸುಮಾರಿಗೆ. ಆ ಸಂದರ್ಭದಲ್ಲಿ ಅಲೊಂದು ಇಲ್ಲೊಂದು ಜಿಯೋಸಿಟಿ ಮತ್ತಿತರ ವೆಬ್ಸೈಟುಗಳಿಂದ ಕೊಂಚವೇ ಕೊಂಚ ಎರವಲು ಪಡಕೊಂಡು ನಡೆಸುತ್ತಿದ್ದ ಕೆಲವು ತಾಣಗಳು ತಮ್ಮ ಕೆಲಸವನ್ನು ಕುಂಟಿಕೊಂಡು ನಡೆಸುತ್ತಲೇನೋ ಇದ್ದವು. ನಂತರ ಅನೇಕ ದಿನಪತ್ರಿಕೆಗಳು ತಮ್ಮ ಮುದ್ರಿತ ಪತ್ರಿಕೆಯ ಅಂತರ್ಜಾಲ ಆವೃತ್ತಿಯನ್ನು ಜಾಲದಲ್ಲಿ ಪ್ರಕಟಿಸಿ ತಮ್ಮ ಓದುಗವರ್ಗವನ್ನು ಹಿಗ್ಗಿಸಿಕೊಳ್ಳುತ್ತಿದ್ದವು. ನಂತರ ಬಂದ ಕನ್ನಡಸಾಹಿತ್ಯ.ಕಾಮ್, ವಿಶ್ವಕನ್ನಡ.ಕಾಮ್, ಮುಂತಾದವುಗಳೂ ಆರಂಭದಲ್ಲಿ ವಿಶ್ವಾಸವನ್ನು ಮೂಡಿಸಿದ್ದಾದರೂ ನಂತರ ನೆಲಕಚ್ಚಿದ್ದಾವೆ. ಕನ್ನಡಸಾಹಿತ್ಯ.ಕಾಮ್ ಈಗ ಅಂತರ್ಜಾಲದ ವ್ಯಾಪ್ತಿಯ ಹೊರಗೆ ತನ್ನ ಕೆಲಸವನ್ನು ಮಾಡಿಕೊಂಡು ಬರುತ್ತಿದೆಯಾದರೂ ಅಂತರ್ಜಾಲದಲ್ಲಿ ಕನ್ನಡದ ಬೆಳವಣಿಗೆಗೆ ಲೈಬ್ರರಿಯ ಅಥವಾ ಪ್ರಮುಖ ಲೇಖಕರ ಬರಹಗಳ ಆರ್ಕೈವ್ ಆಗುವುದನ್ನು ಬಿಟ್ಟರೆ ಹೆಚ್ಚಿನ ಕೆಲಸವನ್ನು ಮಾಡಲು ಇಲ್ಲಿ ಸಾಧ್ಯವಾಗಿಲ್ಲ. ನಮ್ಮೆಲ್ಲರನ್ನೂ ಬೆಳೆಸಿದ ದಟ್ಸ್ಕನ್ನಡ.ಕಾಮ್ನ ಆದ್ಯತೆಗಳು ಈಗ ಸಂಪೂರ್ಣವಾಗಿ ಬೇರೆಯಾಗಿದೆ.
ಒಂದು ಪತ್ರಿಕೆ ನೆಲಕಚ್ಚುವುದರ ವಿಷಯದಲ್ಲಿ ಪತ್ರಿಕೆಯ ಆಡಳಿತವರ್ಗಕ್ಕೆ ಒಂದು ಹೊಣೆಗಾರಿಕೆ ಇರಬೇಕಲ್ಲವೇ? ಇಲ್ಲಿ ಹೊಣೆಗಾರಿಕೆಯೆಂದರೆ ಬರೇ ಆರ್ಥಿಕವಾದದ್ದಷ್ಟೇ ಅಲ್ಲ, ಸಾಂಸ್ಕೃತಿಕ ಜವಾಬ್ದಾರಿ ಎಷ್ಟಿರಬೇಕು? ಬರೇ ಬಾಟಮ್ಲೈನ್ ನೋಡುತ್ತಾ ಈ ಪತ್ರಿಕೆಯಿಂದ ನಮಗೆ ಲಾಭವಿಲ್ಲವೆಂದು ಇಡೀ ಪತ್ರಿಕೆಯನ್ನು ನಿಲ್ಲಿಸಿದರೆ ಅದನ್ನು ಓದುವ ವರ್ಗದ ಆಶಯಗಳನ್ನು ಬಲಿಕೊಟ್ಟಂತೆ. ಆದ್ದರಿಂದ ಒಂದು ಪತ್ರಿಕೆಯನ್ನು ಕಟ್ಟಿ ಬೆಳೆಸುತ್ತಿರುವಾಗ ಅದರ ವ್ಯವಸ್ಥಾಪಕ ಮಂಡಳಿ ಅದರ ಸೃಜನಶೀಲ ಸಂಪನ್ಮೂಲಗಳನ್ನು ಬೆಳೆಸುವುದರ ಜತೆಗೆ ಆ ಪತ್ರಿಕೆ ತನ್ನನ್ನು ತಾನು ಪೋಷಿಸಿಕೊಂಡು ಹೇಗೆ ಬೆಳೆಯಬಲ್ಲದೆನ್ನುವುದಕ್ಕೆ ರೂಪುರೇಷೆಗಳನ್ನು ಹಾಕಿಕೊಳ್ಳುವುದು ಬಹಳ ಅವಶ್ಯ. ಇಲ್ಲದಿದ್ದರೆ ಓದುಗವರ್ಗವನ್ನು ಬೆಳೆಸುವುದರ ಖುಷಿಯ ಜತೆಗೆ ಅದನ್ನು ಸಾಯಿಸುವುದರ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ.
ಕೆಂಡಸಂಪಿಗೆಯಂತ ಪತ್ರಿಕೆ ಶುರುವಾಗಿ ಬೆಳೆದಾಗ ಅದೊಂದು ಪತ್ರಿಕೆಯಾಗಿ ಉಳಿಯುವುದಿಲ್ಲ. ಒಂದು ಸಮುದಾಯದ ಆಶಯವಾಗುತ್ತದೆ. ಮುಖವಾಣಿಯಾಗುತ್ತದೆ. ತಾನೇ ಒಂದು ಸಮುದಾಯವಾಗುತ್ತದೆ. ತಾನೂ ಬೆಳೆಯುವುದರ ಜತೆಗೆ ತನ್ನನ್ನು ಬೆಳೆಸುತ್ತಿರುವ ಸಮುದಾಯವನ್ನೂ ಬೆಳೆಸುತ್ತದೆ.
ಹಾಗೆಯೇ ತಾನು ಸಾಯುವುದರ ಜತೆಗೆ ಈ ಸಮುದಾಯವನ್ನೂ ಅದರ ಆಶಯವನ್ನೂ ಸಾಯಿಸುತ್ತದೆ.
ಕನ್ನಡದ ಬಹಳಷ್ಟು ಲಿಟ್ ಮ್ಯಾಗಜೀನುಗಳು ಒಂದು ನಿರ್ದಿಷ್ಟ ಸಮುದಾಯದ ಮುಖವಾಣಿಯೆನ್ನುವುದು ಒಂದು ರೀತಿ ನಿಜ. ಎಲ್ಲವೂ ಸಮಷ್ಟಿಯ ಸಂಸ್ಕೃತಿ, ಸಾಹಿತ್ಯದ ಪೋಷಣೆಯ ಹೆಸರಲ್ಲೇ ಪ್ರಾರಂಭವಾದರೂ ಎಲ್ಲೋ ಒಂದು ಕಡೆ ಅವು ತಮ್ಮದೇ ಆದ ಒಂದು ಓದುಗವರ್ಗವನ್ನು ಸೃಷ್ಟಿಸಿಕೊಳ್ಳುತ್ತವೆ. ಹಾಗೆ ಸೃಷ್ಟಿಮಾಡಿದ ಓದುಗ ವರ್ಗಕ್ಕೆ ತಾನೇ ಬೆಳೆಸಿದ ಸಂವೇದನೆಯಿಂದಲೋ ಅಥವಾ ಅದೇ ಸಂವೇದನೆಯಿರುವ ಓದುಗರು ಮಾತ್ರ ಆ ಪತ್ರಿಕೆಗಳನ್ನು ಓದುತಾರೋ, ಓದುಗರೂ, ಪತ್ರಿಕೆಯೂ ಪರಸ್ಪರರ ಆಶಯಕ್ಕೆ ಧೋರಣೆಗೆ ಪರಸ್ಪರ ಪೂರಕವಾಗಿ ಕೆಲಸ ಮಾಡಿರುತ್ತಾರೆ. ಆ ಆಶಯಗಳು, ನಂಬಿಕೆಗಳು ತನ್ಮೂಲಕ ಒಂದು ಚಳುವಳಿಯೇನಾದರೂ ಸೃಷ್ಟಿಯಾಗಿದ್ದಲ್ಲಿ ಅವುಗಳೆಲ್ಲದರ ನಿರ್ಗಮನದ ಜತೆಗೆ ಆ ಪತ್ರಿಕೆಯ ಆಯಸ್ಸೂ ಮುಗಿದಿರುತ್ತದೆ. ನಂತರ ಪತ್ರಿಕೆ ಇರಬೇಕೆಂದು ಯಾರೂ ಕೇಳುವುದೂ ಇಲ್ಲ. ಮುಚ್ಚಿಹೋಯಿತೆಂದು ಯಾರೂ ದುಃಖಿಸುವುದೂ ಇಲ್ಲ. ಇದೊಂದು ಪತ್ರಿಕೆಯ ಸ್ವಾಭಾವಿಕ ಮರಣ. ಅಂದರೆ ಪ್ರತೀ ಪತ್ರಿಕೆಗೂ ಒಂದು ನಿರ್ದಿಷ್ಟ ಆಶಯವಿದೆ, ಆಯಸ್ಸಿದೆ ಎಂದು ನಂಬಿದ ಸಂಪನ್ಮೂಲ ವ್ಯಕ್ತಿಗಳಿರುವವರೆಗೆ ಅದರ ಸಾವೂ ಕೂಡ ಅರ್ಥಪೂರ್ಣವಾಗುತ್ತದೆ. ಅದರ ಬದುಕು ಮಾತ್ರ ಮುಖ್ಯವಾಗುತ್ತದೆ.
ಹಾಗೆಯೇ ಕೆಂಡಸಂಪಿಗೆಯೂ ಒಂದು ಸಮುದಾಯದ ಮುಖವಾಹಿನಿಯಾಗಿತ್ತೆಂಬುದನ್ನು ನಾವು ಗಮನದಲ್ಲಿದಬೇಕು. ಈ ಸಮುದಾಯ ಬಹುಸಂಖ್ಯಾತವೇನಲ್ಲ. ಬದಲಾದ ಜೀವನ ಶೈಲಿ, ಮೌಲ್ಯಗಳು, ಭೌಗೋಳಿಕ ರೇಖೆಯನ್ನು ಮೀರಿದ ಡಯಾಸ್ಪೊರಕ್ಕೆ ಹಾಗೆಯೇ ಎಲ್ಲದಕ್ಕೂ ಸಾಮಾನ್ಯವಾದ ನಮ್ಮ ಅವಸರ, ಧಾವಂತಕ್ಕೆ ಒಂದು ಅರ್ಥಪೂರ್ಣತೆಯನ್ನು ತಂದಿತ್ತು. ಹಾಗೆ ನೋಡಿದರೆ ಈ ಅಂತರ್ಜಾಲವೆನ್ನುವುದೇ ಒಂದು ಅವಸರದ ಓದಿಗೆ ಪ್ರಶಸ್ತವಾದ ತಾಣ. ಇಲ್ಲಿ ನಾವು ಅಂತರ್ಜಾಲವನ್ನು ಸರ್ಪ್ ಮಾಡುತ್ತೇವೆ, ಬ್ಲಾಗುಗಳನ್ನು ಸ್ಕ್ರೋಲಿಸುತ್ತೇವೆ. ಒಂದು ತಾಣದಿಂದ ಇನ್ನೊಂದು ತಾಣಕ್ಕೆ ಜಿಗಿಯುತ್ತೇವೆ. ನಮ್ಮ ಅಟೆಂಶನ್ ಸ್ಪಾನ್ ಕೇವಲ ಸೆಕೆಂಡುಗಳಲ್ಲಿ ಅಳತೆಮಾಡಲ್ಪಡುವ ಈ ಲೋಕದಲ್ಲಿ ಪ್ರತಿದಿನ ಬೆಳಿಗ್ಗೆ ಹದಿನೈದು ನಿಮಿಷವಾದರೂ ನಮ್ಮನ್ನು ಕೆಂಡಸಂಪಿಗೆ.ಕಾಮ್ ಎಂಬ ತಾಣ ತನ್ನ ಮುಂದೆ ಕೂರಿಸಿಕೊಳ್ಳಲು ಸಫಲವಾಗಿತ್ತು. ಕೆಲವೊಮ್ಮೆ ಸ್ಕ್ರೋಲಿಸುತ್ತಾ, ಮಗದೊಮ್ಮೆ ಓದುತ್ತಾ, ಆಗಾಗ ಕಮೆಂಟಿಸುತ್ತಾ, ಬಹಳಬಾರಿ ಬರೇ ಕಮೆಂಟುಗಳನ್ನು ಮಾತ್ರ ಓದುತ್ತಾ, ಕಮೆಂಟಿಗೊಂದು ಕಮೆಂಟಿಸುತ್ತಾ, ಒಮ್ಮೆ ಓದಲಿಕ್ಕಾಗದನ್ನು ಮತ್ತೆ ಮಧ್ಯಾಹ್ನವೋ, ಸಂಜೆಯೋ ಓದಲಿಕ್ಕೆ ಮತ್ತೆ ಮತ್ತೆ ತನ್ನ ಬಳಿ ಬರುವಂತೆ ಮಾಡಲೂ ಸಫಲವಾಗಿತ್ತು.
ಆದರೆ, ಸೃಜನಶೀಲತೆಯೆನ್ನುವುದು ಬರೇ ಬೌದ್ಧಿಕತೆಯ ಮಟ್ಟದಲ್ಲಿ ನಿಂತುಬಿಟ್ಟರೆ ಆಗುವುದೇ ಹೀಗೆ. ವ್ಯವಹಾರದಲ್ಲಿ ಕ್ರಿಯೇಟಿವ್ ಆಗದಿದ್ದಲ್ಲಿ ಇಂಥ ಅಕಾಲ ಮರಣಗಳು ಬರಬಹುದೇನೋ? ಈ ಅಂತರ್ಜಾಲದ ಜಾಲತಾಣವನ್ನು ನಿರ್ವಹಿಸಿಕೊಂಡು ಹೋಗುವುದರ ಲೊಜಿಸ್ಟಿಕ್ಸ್ ನನಗೆ ಗೊತ್ತಿಲ್ಲ, ಈಗಂತೂ ಕಾಸಿಗೊಂದು ಕೊಸರಿಗೊಂದು ಬ್ಲಾಗುಗಳು ಇರುವ ಈ ಕಾಲದಲ್ಲಿ ಇಂಥ ಒಂದು ಸೈಟು ತನ್ನ ಉಳಿಕೆಯನ್ನು ಸೃಜನಶೀಲವಾಗಿ ಗ್ರಹಿಸಲಿಲ್ಲವಲ್ಲ ಎನ್ನುವ ವ್ಯಥೆಯಿದೆ. ಇದಕ್ಕೆ ಬೇಕಾದ ಜಾಹಿರಾತುಗಳು ಸಿಗಲಿಲ್ಲವೇ? ಹೂಡಿಕೆದಾರರಿಲಿಲ್ಲವೇ? ಎಲ್ಲವೂ ವೇದ್ಯ. ಆದರೆ, ಯಾಕಾಗಲಿಲ್ಲ.
ಅಂತರ್ಜಾಲವೆನ್ನುವುದೇ ಒಂದು ಮಿಥ್ಯಾಪ್ರಪಂಚ. ಇಲ್ಲಿ ಎಲ್ಲವೂ ವರ್ಚುಯಲ್. ಪತ್ರಿಕೆ ಪ್ರಿಂಟಾಗಿದ್ದರೆ ಎಷ್ಟು ಖರ್ಛಾಗಿದೆ ಎನ್ನುವ ಲೆಕ್ಕವಾದರೂ ಸಿಗುತ್ತದೆ. ಆದರೆ, ಬರೇ ಹಿಟ್ಗಳನ್ನು ನಂಬಿಕೊಂಡು ಇದರ ಮೇಲೆ ಬಂಡವಾಳ ಹೂಡುವ ಜಾಹಿರಾತು ಹೂಡುವ ಮಂದಿ ಸಿಗಲಿಲ್ಲವೇ?
ಬಲ್ಲವರು ಯಾರೋ ಹೇಳಿದ್ದರು. ನಾವು ಯಾವುದೇ ವೆಬ್ತಾಣವನ್ನು ಕ್ಲಿಕ್ಕಿಸಿದರೆ ಸಾಕು ಅದನ್ನು ನಾವು ಓದುತ್ತಿದ್ದೇವೆ ಎಂತಲೇ ಅರ್ಥ. ಇದಕ್ಕೆ ಹತ್ತಿರವಾದ ಹೋಲಿಕೆಯೆಂದರೆ ಅಂಗಡಿಯಿಂದ ಒಂದು ಪುಸ್ತಕವನ್ನು ಖರೀದಿಸಿ ತಂದರೆ ಆಯಿತು, ಅದನ್ನು ಓದಿದಂತೆಯೇ. ಪುಸ್ತಕವ್ಯಾಪಾರಿಗೆ ನೀವು ಆ ಪುಸ್ತಕವನ್ನು ಓದುತ್ತೀರೋ ಇಲ್ಲವೋ ಅನ್ನುವುದು ಮುಖ್ಯವಾಗುವುದೇ ಇಲ್ಲ.
ನಾನೂಹಿಸಿಕೊಳ್ಳುವ ಕಾರಣ ಬಹಳ ಸರಳ. ತಪ್ಪಿರಲೂ ಬಹುದು. ಸಂಪನ್ಮೂಲದ ಕೊರತೆಯಿದ್ದರೂ ಇರಬಹುದು. ಕನ್ನಡದ ಬಹಳಷ್ಟು ಈ ತರದ ಸೃಜನಶೀಲ ಚಟುವಟಿಕೆಗಳು ನಡೆಯುವುದು ಲಾಭವನ್ನು ನೆಚ್ಚಿಕೊಂಡು ಅಲ್ಲ ಎನ್ನುವುದು ಪ್ರಾಯಶಃ ನಮಗೆಲ್ಲ ಗೊತ್ತಿರುವ ವಿಷಯ. ಎಲ್ಲಿಯವರೆಗೆ ಲಾಭ, ನಷ್ಟಗಳ ಮೊಬಲಗು ಸರಿಹೋಗುತ್ತದೆಯೋ ಅಲ್ಲಿಯವರೆಗೆ ಇದು ನಡಕೊಂಡು ಹೋಗಬೇಕು. ಆದರೆ ಈ ಲಾಭ ನಷ್ಟಗಳ ಲೆಕ್ಕಚುಕ್ಕಿಗ ಬೇರೆ ವ್ಯಾಪಾರಿಯಾಗಿ, ಈ ಸೃಜನಶೀಲ ಸಂಪನ್ಮೂಲ ಬೇರೆಯಾಗಿದ್ದಲಿ, ಈ ಎರಡೂ ಶಕ್ತಿಗಳು ಸಮಾನಾಂತರವಾಗಿ ಕೆಲಸ ಮಾಡಲು ಶುರುಮಾಡುತ್ತವೆ. ಕ್ರಿಯೇಟಿವ್ ಟೀಮ್ ಹೆಚ್ಚು ಕ್ರಿಯಾಶೀಲವಾದಲ್ಲಿ ತಾಣದ ಬಗ್ಗೆ ಹೆಚ್ಚಿನ ನಂಬಿಕೆಯನ್ನು ಓದುಗವರ್ಗದಲ್ಲಿ ಮೂಡಿಸಲಾಗುತ್ತದೆ. ಆದರೆ, ಯಾವ ಕಾರಣದಿಂದ ಈ ಪತ್ರಿಕೆ ನಿಂತರೂ ಕೆಲವಾದರೂ ಓದುಗರಿಗೆ ‘ಛೆ ಐ ವಾಸ್ ಟೇಕನ್ ಫಾರ್ ಅ ರೈಡ್’ ಎಂಬ ಭಾವನೆ ಬಂದಲ್ಲಿ ಅನುಮಾನವೇನಿಲ್ಲ. ಜಯಂತ ಕಾಯ್ಕಿಣಿಯವರ ಸಂಪಾದಕತ್ವದಲ್ಲಿ ಬರುತ್ತಿದ್ದ ‘ಭಾವನಾ’ ನಿಂತಾಗ ಕೂಡ ಪತ್ರಿಕೆಯ ಓನರ್ಮಂದಿಯ ಬಾಟಮ್ಲೈನಿನ ಲೆಕ್ಕವನ್ನು ನೋಡಿ ಓದುಗರಿಗೆ ಮೈ ಉರಿದುಹೋಗಿತ್ತು.
ಆದರೆ, ಯಾರ ಮೈ ಉರಿದುಹೋಗುತ್ತದೆ ಅನ್ನುವುದೂ ಇಲ್ಲಿ ಮುಖ್ಯ. ಬಹಳಷ್ಟು ಮಂದಿ ಕನ್ನಡದ ಓದುಗರು, ಬರಹಗಾರರು ತಂಪಾಡಿಗೆ ತಾವು ಓದಿ ಖುಷಿಪಡುವವರು. ಪತ್ರಿಕೆ ಇದ್ದರೆ ಓದುತ್ತೇವೆ, ಇಲ್ಲವಾ ಇನ್ನೇನಾದರೂ ಓದುತ್ತೇವೆ ಎನ್ನುವ ಧೋರಣೆ ಯಿರುವವರು, ಮತ್ತು ಒಂದು ಪತ್ರಿಕೆ ಬರೆ ಪತ್ರಿಕೆಯಾಗಿ ಉಳಿದು ನಿಮ್ಮ ಜೀವನಶೈಲಿಯ ಯಾವ ಭಾಗವೂ ಆಗದೇ ಇದ್ದಲ್ಲಿ ಅದರ ಉಳಿವು ಅಸಾಧ್ಯ.
ಇದರ ಪರಿಣಾಮವೆಂದರೆ, ಇನ್ನಾರಾದಾರೂ ಕನ್ನಡದಲ್ಲಿ ಒಂದು ವೆಬ್ ಪತ್ರಿಕೆಯನ್ನು ಶುರುಮಾಡುತ್ತೀವೆಂದರೆ ಅದನ್ನು ಹೇಗೆ ನಂಬುವುದು ಎನ್ನುವ ಪರಿಸ್ಥಿತಿ ಬಂದು ಹೋಗಿದೆ. ಅಸಂಖ್ಯಾತ ಬ್ಲಾಗುಗಳು ಮತ್ತು ಮುದ್ರಣದಲ್ಲಿ ಲಭ್ಯವಿರುವ ಪತ್ರಿಕೆಗಳ ಅಂತರ್ಜಾಲ ಆವೃತ್ತಿಗಳನ್ನು ಬಿಟ್ಟರೆ ಅಂತರ್ಜಾಲ ಕ್ಕೇ ಎಕ್ಸ್ಕ್ಲ್ಯೂಸಿವ್ ಆದ ಒಂದು ಸದಭಿರುಚಿಯ ಪತ್ರಿಕೆ ಕನ್ನಡದಲ್ಲಿ ಬರುತ್ತದೆ ಎಂದರೆ ಅದರ ಬಗ್ಗೆ ನಂಬುವುದೇ ಅಸಾಧ್ಯವೇನೋ ಎಂಬ ಪರಿಸ್ಥಿತಿ ಬಂದು ಕೂತಿದೆ.
ಇದಕ್ಕೆ ಬರೇ ಕೆಂಡಸಂಪಿಗೆಯ ವ್ಯವಸ್ಠಾಪಕರನ್ನು ದೂರಿದಲ್ಲಿ ತಪ್ಪಾಗುತ್ತದೆ. ಇದರಲ್ಲಿ ನಮ್ಮ ಪಾಲೂ ಇದೆ ಎಂದು ನಂಬಿದಲ್ಲಿ ಮಾತ್ರ ಏನಾದರೂ ಅರ್ಥಪೂರ್ಣವಾಗಿ ಮಾಡಬಹುದು.
Wednesday, October 14, 2009
ಅಧಿಕಾರ- ಅಂತರ ಮಾಪಕ
೧೯೯೦ ರ ಜನವರಿ ತಿಂಗಳಲ್ಲಿ ಕೆರಿಬಿಯನ್ನ ‘ಏವಿಯಂಕ ಏರ್ಲೈನ್’ನ ವಿಮಾನವೊಂದು ನ್ಯೂಯಾರ್ಕಿನ ಲಾಂಗ್ ಐಲ್ಯಾಂಡಿನ ಬಳಿ ಒಂದು ಎಸ್ಟೇಟಿನ ಬಳಿ ಅಪಘಾತಕ್ಕೀಡಾಗಿತ್ತು. ಕಾರಣ ಬಹಳ ಸರಳವಾಗಿತ್ತು-ವಿಮಾನದಲ್ಲಿ ಇಂಧನ ಮುಗಿದುಹೋಗಿತ್ತಂತೆ. ಅಂದು ನ್ಯೂಯಾರ್ಕಿನ ಜಾನ್ ಎಫ್ ಕೆನಡಿ ವಿಮಾನನಿಲ್ದಾಣದಲ್ಲಿ ಕೆಟ್ಟ ಹವೆ, ವಿಪರೀತ ವಿಮಾನಜಂಗುಳಿ ಮತ್ತು ರನ್ವೇ ಅಭಾವದಿಂದ ಬಹಳಷ್ಟು ವಿಮಾನಗಳನ್ನು ಸರಿಯಾದ ಸಮಯದಲ್ಲಿ ಇಳಿಸಲಾಗಲಿಲ್ಲ. ಬಹಳಷ್ಟು ವಿಮಾನಗಳು ಗಾಳಿಯಲ್ಲಿ ಹಾರಾಡುತ್ತಾ ತಮ್ಮ ಸರದಿಗಾಗಿ ಕಾಯುತ್ತಿದ್ದವು. ಆ ಸಮಯದಲ್ಲಿ ಹಾಗೇ ಹಾರಾಡುತ್ತಿದ್ದ ಏವಿಯಂಕ ವಿಮಾನವು ತನ್ನಲ್ಲಿ ಉಳಿದಿದ್ದ ಇಂಧನವನ್ನೆಲ್ಲ ಉರಿಸಿ ಖಾಲಿಯಾಯಿತು. ಪೈಲಟ್ ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದ್ದರೆ ಇದೇ ಇಂಧನವನ್ನು ಉಪಯೋಗಿಸಿಕೊಂಡು ಈ ವಿಮಾನ ಹತ್ತಿರವಿದ್ದ ಬಾಸ್ಟನ್ ಅಥವಾ ಫಿಲಡೆಲ್ಫಿಯಾದಲ್ಲಿ ಬಹಳ ಸುಲಭವಾಗಿ ಲ್ಯಾಂಡ್ ಆಗಬಹುದಾಗಿತ್ತು. ಆದರೆ, ಹಾಗೆ ಆಗಲಿಲ್ಲ.
ವಿಮಾನದ ಪೈಲಟ್ ನ್ಯೂಯಾರ್ಕಿನ ಏರ್ ಟ್ರಾಫಿಕ್ ಕಂಟ್ರೋಲರ್ಗಳಿಗೆ ತನ್ನ ವಿಮಾನದಲ್ಲಿ ಇಂಧನದ ಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿದೆ ಎಂಬ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥಮಾಡಿಸುವುದರಲ್ಲಿ ಎಡವಿದ್ದ. ಏರ್ ಟ್ರಾಫಿಕ್ ಕಂಟ್ರೋಲರ್ಗಳ ಭಾಶೆಯಲ್ಲಿ ಈ ಪೈಲಟ್ ಹೇಳಿದ ‘We are running out of gas’ ಅಂಥಾ ದೊಡ್ದ ವಿಷಯವೇ ಅಲ್ಲ. ಯಾಕೆಂದರೆ, ಎಲ್ಲ ವಿಮಾನಗಳಲ್ಲಿಯೂ ಲ್ಯಾಂಡ್ ಆಗುವ ಮುನ್ನ ಸಾಮಾನ್ಯವಾಗಿ ಇಂಧನ ಮುಗಿಯುವ ಮಟ್ಟಕ್ಕೆ ಬಂದಿರುತ್ತದೆ. ‘ತಾನು ಈಗ ಲ್ಯಾಂಡ್ ಆಗದಿದ್ದರೆ ವಿಮಾನಕ್ಕೆ ತೊಂದರೆಯಾಗುವ ಸಂಭವವಿದೆ. ಈಗ ಕೆಳಗಿಳಿಯಲೇ ಬೇಕು’ ಎಂದು ಅಧಿಕಾರಯುತವಾಗಿ ಆ ಪೈಲಟ್ ಹೇಳಿರಲಿಲ್ಲ. ನಂತರ ಈ ವಿಮಾನಕ್ಕೆ ರನ್ವೇ ಸಿಕ್ಕಿ ಅದು ನೆಲಕ್ಕೆ ಮುಟ್ಟುವ ಮುನ್ನ ವಿಮಾನದ ನಾಲ್ಕೂ ಇಂಜಿನ್ಗಳೂ ಸ್ಥಗಿತಗೊಂಡಿದ್ದವು. ವಿಮಾನ ನಿಲ್ದಾಣದ ಪಕ್ಕದಲ್ಲಿದ್ದ ಯಾವುದೋ ಒಂದು ಎಸ್ಟೇಟಿನಲ್ಲಿ ಅಪಘಾತಕ್ಕೊಳಗಾಯಿತು. ಎಪ್ಪತ್ಮೂರು ಜನ ಸ್ಥಳದಲ್ಲಿಯೇ ಸತ್ತರು.
ಮಾಲ್ಕಮ್ ಗ್ಲಾಡ್ವೆಲ್ ಎಂಬ ಬೆಸ್ಟ್ಸೆಲ್ಲರ್ ಸಾಹಿತಿಯೊಬ್ಬ ಬರೆದಿರುವ ‘The Outliers’ ಎನ್ನುವ ಪುಸ್ತಕದಲ್ಲಿ ಇಂಥ ಅಪಘಾತಗಳಿಗೆ ಕಾರಣಗಳನ್ನು ಹುಡುಕುತ್ತಾ ಹೋಗುತ್ತಾನೆ. ‘ಮೇಲಣ ಅಧಿಕಾರಿಗಳ ನಿರ್ಣಯವನ್ನು ಕೊಂಚವೂ ಪ್ರಶ್ನಿಸಬಾರದೆಂಬ ಸಂಸ್ಕೃತಿಯಲ್ಲಿ ಬೆಳೆದುಬಂದ ಈ ಕೊಲಂಬಿಯನ್ ಪೈಲಟ್ಟುಗಳು ನ್ಯೂಯಾರ್ಕಿನ ಏರ್ ಟ್ರಾಫಿಕ್ ಕಂಟ್ರೋಲರ್ಗಳ ನಿರ್ಣಯವನ್ನು ಪ್ರಶ್ನಿಸಲಾಗದೇ ಅಥವಾ ತಮ್ಮ ತುರ್ತನ್ನೂ ಅವರಿಗೆ ಸ್ಪಷ್ಟವಾದ ಪದಗಳಲ್ಲಿ ಸಂವಹಿಸಲಾಗದೇ ಇದ್ದುದೇ ಈ ಅಪಘಾತಕ್ಕೆ ಮೂಲ ಕಾರಣ’ ಎಂದು ನಿರ್ಧರಿಸುತ್ತಾನೆ.
ಇದೇ ನಿಟ್ಟಿನಲ್ಲಿ ಇಂಥ ವಿಮಾನಾಪಘಾತದ ಸಂಸ್ಕೃತಿಯನ್ನು ವಿಶ್ಲೇಷಿಸುತ್ತಾ “ ಕೆಲವೊಂದು ವಿಮಾನಗಳಲ್ಲಿ ಪೈಲಟ್ಟು-ಕೋಪೈಲಟ್ಟುಗಳ ಸಂಬಂಧ ಬಹಳ ಬೇರೆಯಾಗಿರುತ್ತದೆ. ಕೋ ಪೈಲಟ್ಟುಗಳು ಬಹಳಷ್ಟು ಬಾರಿ ಪೈಲಟ್ಟುಗಳಿಗೆ ಊಟ ಬಡಿಸುತ್ತಾರೆ, ಒಂದೇ ಹೋಟೆಲಿನಲ್ಲಿ ಉಳಿದುಕೊಳ್ಳುವುದಿಲ್ಲ. ಕೆಲವೊಮ್ಮೆ ಆತನಿಗೆ ವಿಸ್ಕಿ ಬೇಕಿದ್ದರೆ ಅದನ್ನು ತಂದುಕೊಟ್ಟು ಪೂರೈಸುತ್ತಾನೆ. ತನಗೆ ಕುಡಿಯಬೇಕೆನ್ನಿಸಿದರೆ ಮರೆಯಲ್ಲಿ ಹೋಗಿ ಕೈಮುಚ್ಚಿ ಕುಡಿಯುತ್ತಾನೆ. ಇದು ಧಣಿ-ಆಳಿನ ಸಂಬಂಧ’ ಎನ್ನುತ್ತಾನೆ.
ಏವಿಯಂಕ ವಿಮಾನದ ಕಾಕ್ಪಿಟ್ನಲ್ಲಿ ಆಡಿರಬಹುದಾದ ಸಂಭಾಷಣೆಯನ್ನು ಆಧರಿಸಿ ಗ್ಲಾಡ್ವೆಲ್ ಈ ತೀರ್ಮಾನಕ್ಕೆ ಬರಬಹುದು. ಕಾಕ್ಪಿಟ್ನಲ್ಲಿರುವ ಕೊ ಪೈಲಟ್ ಮತ್ತು ಫ್ಲೈಟ್ ಇಂಜಿನಿಯರ್ ಇಬ್ಬರಿಗೂ ತಮ್ಮ ವಿಮಾನ ಅಪಾಯಕಾರಿಯಾಗಿ ಹಾರಾಡುತ್ತಿದೆ ಎಂದು ಗೊತ್ತಿದ್ದರೂ ಪೈಲಟ್ಟಿನ ನಿರ್ಣಯವನ್ನು ಪ್ರಶ್ನಿಸುವ ಹಕ್ಕಿಲ್ಲ, ಎಂದು ತಿಳಿದಿದ್ದರೇ? ಹಾಗೆಯೇ, ಆ ಪೈಲಟ್ಟೂ ಕೂಡ ಅಷ್ಟೇ. ತನಗಿಂತ ಮೇಲಣ ಆಫೀಸರ್ ಎಂದು ಭಾವಿಸಿರುವ ನ್ಯೂಯಾರ್ಕಿನ ಏರ್ಟ್ರಾಫಿಕ್ ಕಂಟ್ರೋಲರುಗಳ ನಿರ್ಣಯವನ್ನು ಪ್ರಶ್ನಿಸುವುದಿರಲಿ, ತನ್ನ ತುರ್ತನ್ನೂ ಅವರಿಗೆ ತಲುಪಿಸಲಾಗಲಿಲ್ಲ. ಒಂದು ಘಟ್ಟದಲ್ಲಿ ‘ನನಗೆ ಸ್ಪಾನಿಶ್ ದುಭಾಷಿ ಬೇಕು’ ಎಂದು ಕೇಳಿದ್ದನಂತೆ.
ಆ ಕಾಕ್ಪಿಟ್ಟಿನ ಸ್ಥಿತಿಯನ್ನು ಒಮ್ಮೆ ಊಹಿಸಿಕೊಳ್ಳೋಣ. ಸ್ಪಾನಿಶ್ ಭಾಶೆಯನ್ನು ಮಾತಾಡುತ್ತಿರುವ ಇಬ್ಬರು ಪೈಲಟ್ಟುಗಳು, ವಿಮಾನದಲ್ಲಿ ಇಂಧನ ಮುಗಿದಿದೆ ಎಂದು ಎಲ್ಲರಿಗೂ ಗೊತ್ತಿದೆ. ತನ್ನ ವಿಮಾನ ಅಪಾಯದಲ್ಲಿದೆ ಎಂದು ಗೊತ್ತಿದ್ದ ಕ್ಯಾಪ್ಟನ್ ಇದನ್ನು ತನ್ನ ಮೇಲಧಿಕಾರಿಗಳಿಗೆ ಹೇಳಲಾಗದೇ ಇದ್ದುದಕ್ಕೆ ಕಾರಣವೇನಿರಬಹುದು. ಒಂದು, ಪರಿಣಾಮಕಾರಿಯಾಗಿ ಇಂಗ್ಲಿಶ್ ಭಾಷೆಯನ್ನು ಬಳಸುವುದು ಆತನಿಗೆ ಸಾಧ್ಯವಾಗಿಲ್ಲ. ಎರಡನೆಯದು ಅಧಿಕಾರಯುತವಾದ ಅಮೆರಿಕನ್ ಉಚ್ಚಾರದಲ್ಲಿ ‘I am asking you a direct question. Do you consider your situation as emergency or priority? ಎಂದು ಕೇಳಿದಾಗ ತನ್ನ ಜತೆಗಿರುವ ಕೈಕೆಳಗಿನ ಅಧಿಕಾರಿಗಳ ಮುಂದೆ ತನ್ನ ಮ್ಯಾಚಿಸ್ಮೋವನ್ನು ಬಿಡಲಾಗದೆ ‘ಪ್ರಯಾರಿಟಿ’ಎಂದು ಹೇಳಿದ್ದಾನೆ. ಇಡೀ ವಿಮಾನದಲ್ಲಿರುವ ಜೀವಗಳ ಜವಾಬ್ದಾರಿ ತನ್ನದು ಎಂದು ಗೊತ್ತಿದ್ದಾಗಲೂ ತಾನು ಕೊಲಂಬಿಯನ್, ಕಂದು ಬಣ್ಣದವ, ಬಿಳೀ ಬಣ್ಣದ ಇಂಗ್ಲಿಶ್ ಮಾತಾಡುವ ಜಗತ್ತಿನ ಅತಿದೊಡ್ಡ ವಿಮಾನನಿಲ್ದಾಣದ ಏರ್ಟ್ರಾಫಿಕ್ ಕಂಟ್ರೊಲರ್ ಜತೆ ಮಾತಾಡುತ್ತಿದ್ದೇನೆ ಎನ್ನುವ ಅಂಶ ಅವನ ಬಾಯನ್ನು ಕಟ್ಟಿಹಾಕಿದೆ. ತನ್ನ ತುರ್ತನ್ನೂ ಸಂವಹಿಸಲಾಗದೇ ಹೋಗಿದ್ದಾನೆ.
* * *
ಇದನ್ನು ಮಾಲ್ಕಮ್ ಗ್ಲಾಡ್ವೆಲ್ ‘ಅಧಿಕಾರ-ಅಂತರ- ಮಾಪಕ’ ಎಂದು ಕರೆಯುತ್ತಾನೆ. (Power distance index). ಶ್ರೇಣೀಕೃತ ಸಂಸ್ಕೃತಿಯಲ್ಲಿ ಮೇಲಧಿಕಾರಿಯ ಜತೆ ಕೆಳಗಿನ ಅಧಿಕಾರಿ ಅಥವಾ ಒಂದು ಸಂಸಾರದ ಮುಖ್ಯಸ್ಥನ ಜತೆ ಸಂಸಾರದ ಇನ್ನಿತರರು ಹೇಗೆ ವ್ಯವಹರಿಸುತ್ತಾರೆ ಎನ್ನುವುದನ್ನು ಕೆಳಗಿನಿಂದ ನೋಡುವ ಮಾಪಕ ಇದು. ಈ ಸೂಚಿ ಹೆಚ್ಚಿದ್ದಷ್ಟೂ ಅಧಿಕಾರಗಳ ನಡುವಿನ ಅಂತರವೂ ಹೆಚ್ಚಿರುತ್ತದೆ. ಜರ್ಮನಿಯಲ್ಲಿ ಈ ಮಾಪಕ ೩೫ರಷ್ಟಿದ್ದರೆ, ಕೆಲವೊಂದು ಅರಬ್ ರಾಷ್ಟ್ರಗಳಲ್ಲಿ ಇದು ೮೦ರಷ್ಟು ಇದೆ. ಅಮೆರಿಕಾದಲ್ಲಿ ಇದು ೪೦ರ ಸಮೀಪದಲ್ಲಿದೆ. ಭಾರತ, ಪಾಕಿಸ್ತಾನ, ಕೊರಿಯಾ, ಚೀನಾ ಮುಂತಾದ ಏಷಿಯಾದ ದೇಶಗಳಲ್ಲಿ ಇದು ಹೆಚ್ಚಾಗಿದ್ದರೆ, ಜಪಾನ್, ಸಿಂಗಪೂರ್, ಜರ್ಮನಿ, ಅಮೆರಿಕ, ಇಂಗ್ಲೆಂಡುಗಳಲ್ಲಿ ಇದು ಕಡಿಮೆ ಇದೆ.
ಇದನ್ನು ನಾವು ದಿನನಿತ್ಯದ ವ್ಯವಹಾರದಲ್ಲಿಯೂ ಮತ್ತು ನಾವು ಉಪಯೋಗಿಸುವ ಭಾಷೆಯಲ್ಲಿಯೂ ಕಾಣಬಹುದು. ಇಂಗ್ಲಿಷಿನಲ್ಲಿ ಮರ್ಯಾದಾಸೂಚಕ ಬಹುವಚನವಿಲ್ಲ. ಅಂದರೆ, ಕನ್ನಡದಲ್ಲಿದ್ದಂತೆ ನೀನು, ನೀವು, ತಾವುಗಳ ಅಂತರ ಇಂಗ್ಲಿಶ್ ಭಾಶೆಯಲ್ಲಿಲ್ಲ. ಇಲ್ಲಿ ಮೇಲಧಿಕಾರಿಗಳು ಮತ್ತು ಕೆಳಗಿನ ಅಧಿಕಾರಿಗಳು ಇಬ್ಬರೂ ಒಂದೇ ಪ್ರತ್ಯಯವನ್ನು ಉಪಯೋಗಿಸಿ ಮಾತಡುತ್ತಾರೆ. ಹೆಚ್ಚೆಂದರೆ, ಮಿಸ್ಟರ್, ಡಾಕ್ಟರ್ ಎಂಬ ನಾಮಪೂರ್ವ ವಿಶೇಷಣಗಳನ್ನು ಉಪಯೋಗಿಸಿದರೆ ಅಥವಾ ಕೊನೆಯ ಹೆಸರನ್ನು ಉಪಯೋಗಿಸಿದಾಗ ಅದು ಮರ್ಯಾದೆಯನ್ನು ಸೂಚಿಸುವಂತಾಗುತ್ತದೆ. (ಎ ಕೆ ರಾಮಾನುಜನ್ ರವರ ಸಂಸ್ಕಾರದ ಇಂಗ್ಲಿಶ್ ತರ್ಜುಮೆಯಲ್ಲಿ ‘You have to respect me . Call me in Pleural. (ಮರ್ಯಾದೆ ಕೊಟ್ಟು ಮಾತನಾಡು,ಬಹುವಚನದಲ್ಲಿ ಕರೆ) ಎಂಬ ಉಪಯೋಗ ಅನೇಕ ಇಂಗ್ಲಿಶ್ ಓದುಗರಿಗೆ ಗೊಂದಲವನ್ನುಂಟುಮಾಡಿತ್ತಂತೆ.
ಅಂದರೆ, ಭಾಷೆಯ ಉಪಯೋಗ ಕೂಡ ಈ ಶ್ರೇಣೀಕೃತ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಏ. ಏನೋ, ಏನ್ರೀ, ಏನಪ್ಪಾ, ಏನ್ಸಾರ್ ಹೀಗೆ ಒಬ್ಬ ವ್ಯಕ್ತಿ ತನ್ನ ಅಂತಸ್ತಿಗನುಗುಣವಾಗಿ ಜನರನ್ನು ಸಂಭೋದಿಸುವುದು ಈ ಅಂತರ ಮಾಪಕ ಹೆಚ್ಚಾಗಿರುವ ದೇಶಗಳಲ್ಲಿ ನಾವು ಕಾಣಬಹುದು. ಕನ್ನಡ ಕೂಡ ಇದಕ್ಕೆ ಹೊರತಲ್ಲ.
ಕಾಕ್ಪಿಟ್ಟಿನಲ್ಲಿದ್ದ ಇಬ್ಬರೂ ಅಮೆರಿಕನ್ನರಾಗಿದರೆ ಕೊಪೈಲಟ್ ‘Hey.. listen here, buddy. We need to land this flight.. like right now’ ಎಂದು ಹೇಳುತ್ತಿದ್ದನೇ.
ಬಹುಶಃ ಹೌದು
* * *
ನಾನು ಕೆಲಸ ಮಾಡುತ್ತಿರುವ ಕಡೆ ಅನೇಕ ಬೇರೆಬೇರೆ ದೇಶಗಳಿಂದ ಅಮೆರಿಕಾಕ್ಕೆ ವಲಸೆಬಂದಿರುವ ಕುಟುಂಬಗಳಿವೆ. ಮಿನೆಸೊಟಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೊಮಾಲಿಯಾದಿಂದ ರಾಜಕೀಯ ಸಂತ್ರಸ್ತರ ಕೋಟಾದಡಿಯಲ್ಲಿ ಜನ ವಲಸೆ ಬಂದಿದ್ದಾರೆ. ಅವರಿಗೆ ಒಂದಕ್ಷರವೂ ಇಂಗ್ಲಿಶ್ ಬರುವುದಿಲ್ಲ. ಆದರೆ ಮಿನೆಸೊಟದಲ್ಲಿ ಇವರ ಹಕ್ಕುಗಳನ್ನು ಸರಿಯಾಗಿ ಅವರಿಗೆ ತಿಳಿಯಪಡಿಸುವ ಅನೇಕ ರಾಜಕೀಯ ಅಥವಾ ಎನ್ಜೀಓ ತರದ ಸಂಸ್ಥೆಗಳಿದ್ದಾವೆ. ಯಾವುದೇ ಆರೋಗ್ಯವಿಮೆ ಇವರಿಗಿಲ್ಲವಾದರಿಂದ ಇವರ ಸಣ್ಣಪುಟ್ಟ ಕಾಯಿಲೆಗಳಿಗೂ ಇವರು ಅತಿ ದುಬಾರಿಯಾದ ಎಮೆರ್ಜೆನ್ಸಿ ಡಿಪಾರ್ಟ್ಮೆಂಟನ್ನೇ ಅವಲಂಬಿಸಿರುತ್ತಾರೆ. (ಇವರಿಗೆ ಎಲ್ಲ ಆಸ್ಪತ್ರೆಗಳಲ್ಲಿಯೂ ಸೇವೆ ಪುಕ್ಕಟೆ ಎನ್ನುವುದು ಒಂದು ಅಂಶ) ಅಷ್ಟೇ ಅಲ್ಲ, ಮಗುವಿಗೆ ಸಣ್ಣಗೆ ನೂರು ಡಿಗ್ರಿ ಜ್ಚರ ಬಂದರೂ ಇವರು ಆಂಬುಲೆನ್ಸನ್ನು ಕರೆಯುತ್ತಾರೆ. (ಆಸ್ಪತ್ರೆಗೆ ಬರಲು ಇವರ ಬಳಿ ಕಾರಿಲ್ಲದೇ ಇರುವುದೂ ಇದಕ್ಕೆ ಕಾರಣವಾಗಿರಬಹುದು)
ಬರೇ ಬಿಳೀವರ್ಣದ ಪ್ಯಾರಮೆಡಿಕ್ಗಳು, ನರ್ಸುಗಳು ತುಂಬಿರುವ ಆಸ್ಪತ್ರೆಗೆ ಮಗುವನ್ನೂ ಅಮ್ಮನನ್ನೂ ಆಂಬುಲೆನ್ಸಿನಲ್ಲಿ ಕರಕೊಂಡು ಬರಲಾಗುತ್ತದೆ. ಆಸ್ಪತ್ರೆಗಾಗಲೀ, ಆಂಬುಲೆನ್ಸಿಗಾಗಲೀ ಇವರು ನಯಾಪೈಸೆ ಕೊಡಲಾರರು ಎಂಬುದು ಎಲ್ಲರಿಗೂ ಗೊತ್ತು. ಮತ್ತು ಇವರೆಲ್ಲರ ಈ ಅವಶ್ಯಕತೆಗಳನ್ನು ಪೂರೈಸುತ್ತಿರುವುದು ತಮ್ಮ ತೆರಿಗೆಯ ಹಣದಿಂದ ಎಂಬ ಅಂಶ ಬಿಳಿಯ ಪ್ಯಾರಮೆಡಿಕ್ ಮತ್ತು ನರ್ಸುಗಳನ್ನೂ ಆಗಾಗ್ಗೆ ರೊಚ್ಚಿಗೇಳಿಸುತ್ತದೆ. ‘bloddy, my tax dollars are at works, here’ ಎಂದು ಕೆಲವೊಮ್ಮೆ ಖುಲ್ಲಂಖುಲ್ಲ ಮಾತಾಡುತ್ತಾರೆ. ಆದರೆ, ನನ್ನನ್ನು ನೋಡಿದಾಕ್ಷಣ ಅವರಿಗೆ ಒಮ್ಮೊಮ್ಮೆ ತಬ್ಬಿಬ್ಬಾಗುತ್ತದೆ. ಕೆಲವರಿಗೆ ನನ್ನ ರಾಷ್ಟ್ರೀಯತೆಯೂ ಗೊತ್ತಿಲ್ಲ. ಆದರೂ, ನಾನು ಅವರಿಗಿಂತ ಹೆಚ್ಚು ಸೊಮಲಿಯಾಕ್ಕೆ ಹತ್ತಿರವೆಂದು ತಿಳಿದು ಕೆಲವೊಮ್ಮೆ ಕ್ಷಮೆ ಕೋರಿದ್ದಾರೆ.
ಇಲ್ಲಿ ಬರೇ ಅಧಿಕಾರ-ಅಂತರ ಮಾತ್ರ ಬರುವುದಿಲ್ಲ. ಈ ಅಧಿಕಾರ-ಅಂತರ ಸೂಚಿ ಹೆಚ್ಚಿರುವ ಭಾರತ ಮೂಲದವನಾದ ನಾನು ಮೇಲಿನ ಅಧಿಕಾರಿಗಳಿಗೆ ಮರ್ಯಾದೆಯನ್ನು ಕೊಡುವುದನ್ನೇನೋ ಕಲಿತಿದ್ದೇನೆ. ಆದರೆ, ನನ್ನ ಕೈಕೆಳಗಿರುವ ಕೆಲಸಗಾರರಿಂದ ಅದೇ ಮರ್ಯಾದೆಯನ್ನು ಪಡೆಯುವುದನ್ನು ನನ್ನ ಸಂಸ್ಕೃತಿ, ಪರಂಪರೆ ನನಗೆ ಕಲಿಸಿರಬೇಕು, ಅಲ್ಲವೇ? ಯಾಕೆಂದರೆ, ಆಸ್ಪತ್ರೆಯ ನಮ್ಮ ಡಿಪಾರ್ಟ್ಮೆಂಟಿನ ಬಾಸ್ ನಾನು. ಏನಿಲ್ಲದಿದ್ದರೂ ಈ ಪ್ಯಾರಮೆಡಿಕ್ ವೃತ್ತಿಪರವಾಗಿ ನಡಕೊಂಡಿಲ್ಲವೆಂದು ಅವನನ್ನು ಎಚ್ಚರಿಸುವುದು ನನ್ನ ಕರ್ತವ್ಯ ಮತ್ತು ಹೊಣೆಗಾರಿಕೆ ಕೂಡ.
ಆದರೆ, ಈ ಅಧಿಕಾರವೆನ್ನುವುದು ಬರೇ ಓದು ಅಥವಾ ಕೆಲಸದ ಅನುಭವದಿಂದ ಬರುವುದಿಲ್ಲ. ಅದೊಂದು ಮನಸ್ಥಿತಿ. ನನ್ನ ಕಂದು ಬಣ್ಣ, ಇಂಗ್ಲಿಷ್ ಉಚ್ಚಾರ ಮನಸ್ಸಿನ ಯಾವುದೋ ಮೂಲೆಯಲ್ಲಿ ಒಂದು ಕೀಳರಿಮೆಯನ್ನು ನನ್ನಲ್ಲಿ ಮೂಡಿಸಿಟ್ಟಿದೆಯಾ ಎಂದು ಅನುಮಾನವಾಗುತ್ತದೆ. ಅದು ನಾನಾಗೇ ಮೂಡಿಸಿಕೊಂಡಿದ್ದಲ್ಲ. ನಿಜ ಹೇಳಬೇಕೆಂದರೆ ನಾನು ಆ ಪ್ಯಾರಮೆಡಿಕ್ಗೆ ‘ನಿನ್ನ ವರ್ತನೆ ಉಚಿತವಾದದ್ದಲ್ಲ’ ಎಂದು ಹೇಳಿದ್ದರೆ ಆತ ಗ್ಯಾರಂಟಿ ‘ಸಾರಿ’ ಕೇಳುತ್ತಿದ್ದ. ಆದರೆ, ಸುತ್ತ ಕೆಲಸಮಾಡುತ್ತಿರುವ ಬಿಳೀ ಮಧ್ಯಮವರ್ಗ ಮತ್ತು ನಾನು ಉತ್ತಮ ಜೀವನ ಶೈಲಿಯನ್ನು ಹುಡಕೊಂಡು ಅಮೆರಿಕೆಗೆ ಬಂದಿದ್ದೇನೆ ಎಂದು ನನ್ನೊಳಗೆ ಇರುವ ಸುಪ್ತವಾದ ಒಂದು ಭಾವನೆ, ಕೀಳರಿಮೆ ನನ್ನ ಅಧಿಕಾರವಾಣಿಯನ್ನು ಕಿತ್ತುಕೊಂಡಿದೆ.
* * *
ಕೆಲವು ದಿನಗಳ ಹಿಂದೆ ಹೀಗೇ ಆಯಿತು. ಮೂರುವರ್ಷದ ಸೊಮಾಲಿ ಮಗುವೊಂದು ವಾಂತಿ ಮಾಡುತ್ತಿದೆಯೆಂದು ಅದರಮ್ಮ ಆಸ್ಪತ್ರೆಗೆ ಕರಕೊಂಡು ಬಂದಿದ್ದಳು. ಪರೀಕ್ಷೆ ಮಾಡಿದ ತಕ್ಷಣ ಮಗುವಿಗೆ ಏನೂ ತೊಂದರೆಯಿಲ್ಲವೆಂದು ನನ್ನ ವೈದ್ಯಬುದ್ಧಿ ಹೇಳಿತು. ನಾನು ಹೋಗಿ ಆಕೆಗೆ ‘ನಿನ್ನ ಮಗುವಿಗೆ ಏನೂ ತೊಂದರೆಯಿಲ್ಲ. ಅರಾಮಾಗಿ ಮನೆಗೆ ಕರಕೊಂಡು ಹೋಗು’ ಎಂದು ಹೇಳಿದೆ. ಆಕೆ, ದುಭಾಶಿಯೊಬ್ಬಳ ಮೂಲಕ ‘ಮಗುವಿಗೆ ನಾನು ಎಕ್ಸ್ ರೇ ಯಾಕೆ ಮಾಡುತ್ತಿಲ್ಲ? ಐವಿ ಯಾಕೆ ಹಾಕುತ್ತಿಲ್ಲ? ರಕ್ತಪರೀಕ್ಷೆ ಯಾಕೆ ಮಾಡುತ್ತಿಲ್ಲ?’ ಹೀಗೇ ಅನೇಕ ಪ್ರಶ್ನೆಗಳನ್ನು ಕೇಳಿದಳು. ನಾನು ರೋಸಿಹೋಗಿ ‘ಮಗುವಿಗೆ ಏನೂ ತೊಂದರೆಯಿಲ್ಲ. ನೀನು ಸುಮ್ಮನೆ ಹೀಗೆ ಸಣ್ಣ್ನಸಣ್ಣದಕ್ಕೆಲ್ಲಾ ಆಸ್ಪತ್ರೆಗೆ ಕರಕೊಂಡು ಬರುವುದನ್ನು ನಿಲ್ಲಿಸು’ ಎಂದು ಕೊಂಚ ಗದರಿದಹಾಗೇ ಹೇಳಿ ಆಕೆಯನ್ನು ಮನೆಗೆ ಕಳಿಸಿದೆ.
ಮನೆಗೆ ಬರುತ್ತಾ ನನಗೆ ನಾನೇ ಪ್ರಶ್ನಿಸಿಕೊಳ್ಳುತ್ತಿದ್ದೆ. ಇದೇ ಒಂದು ಬಿಳಿಯ ಮಗು ಇದೇ ಪರಿಸ್ಥಿತಿಯಲ್ಲಿ ಬಂದಿದ್ದರೆ ನಾನು ಇದೇ ರೀತಿ ಮಾಡುತ್ತಿದ್ದೆನಾ ಎಂದು. ಪ್ರಾಯಶಃ ಮಗುವಿನ ಅಮ್ಮ ಏನು ಕೇಳುತ್ತಾಳೋ ಎಲ್ಲವನ್ನೂ ಮಾಡಿ ಕಳಿಸುತ್ತಿದ್ದನೇನೋ? ಸೊಮಾಲಿ ಮಗುವಿನ ಅಮ್ಮನಿಗೆ ಭಾಷೆ ಬರದಿರುವುದು ಮತ್ತು ನಾನು ಮತ್ತು ಆಕೆ ಇಬ್ಬರೂ ಹೊರಗಿನಿಂದ ಅಮೆರಿಕಾಕ್ಕೆ ಬಂದಿರುವುದರಿಂದ ನಾನು ನನ್ನ ಸಹಜ ಅಧಿಕಾರಯುತವಾದ ಭಾಷೆಯಲ್ಲಿ ನನ್ನ ಕೆಲಸವನ್ನು ಮಾಡಿದ್ದೆ. ಬಹುಷಃ ಆಕೆ ಸೊಮಾಲಿ ಎಂದು ನಾನು ನನ್ನ ಅಧಿಕಾರವನ್ನು ಹೆಚ್ಚಾಗಿಯೇ ಉಪಯೋಗಿಸಿದ್ದನೇನೋ.
ಆದರೆ, ಆಕೆಯೂ ನನ್ನ ಹಾಗೆ ಅಮೆರಿಕಾಕ್ಕೆ ಬಂದು ಇಲ್ಲಿಯೇ ನೆಲಸುವ ಪ್ರಯತ್ನದಲ್ಲಿರುವವಳಲ್ಲವೇ? ಆಕೆ ಬಿಡಲಿಲ್ಲ. ಮತ್ತೆ ಮಗುವನ್ನು ಕರಕೊಂಡು ಬಂದಳು. ಬಂದವಳೇ ‘ಮಗು ಒಂದು ತೊಟ್ಟೂ ನೀರು ಕುಡಿಯುತ್ತಿಲ್ಲ. ನೀನು ಐವಿ ಹಾಕಲೇಬೇಕು’ ಎಂದು ಗಲಾಟೆ ಮಾಡಹತ್ತಿದಳು. ಮತ್ತೆ ಮಗುವನ್ನು ಕೂಲಂಕಶವಾಗಿ ಪರೀಕ್ಷೆಮಾಡಿ, ಮಗುವಿಗೆ ಏನೂ ತೊಂದರೆಯಿಲ್ಲದಿದ್ದರೂ- ಒಂದು ಐವಿಹಾಕಿ ಒಂದು ಲೀಟರ್ ಸಲೈನ್ ಕೊಟ್ಟರೆ ನನ್ನ ಗಂಟೇನೂ ಹೋಗುವುದಿಲ್ಲ, ಎಂದು ನಿರ್ಧರಿಸಿ ಮಗುವನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡುವಾ ಎಂದು ಆಸ್ಪತ್ರೆಯಲ್ಲಿ ಈ ಮಗುವನ್ನು ನೋಡಿಕೊಳ್ಳುವ ಡಾಕ್ಟರಿಗೆ ಫ಼ೋನಾಯಿಸಿದೆ.
ಆದರೆ, ಏನು ಮಾಡಿದರೂ ಮೈಕೈ ತುಂಬಿಕೊಂಡು ಗುಂಡುಗುಂಡಾಗಿದ್ದ ಆ ಮಗುವಿಗೆ ಐವಿ ಹಾಕಲು ಆಸ್ಪತ್ರೆಯ ಯಾವ ನರ್ಸಿಂದಲೂ ಸಾಧ್ಯವಾಗಲಿಲ್ಲ. ಮಗುವನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಿ ಆ ಆಸ್ಪತ್ರೆಯ ಡಾಕ್ಟರುಗಳಿಗೆ ಫೋನು ಮಾಡಿ ಎಲ್ಲವನ್ನೂ ಸಜ್ಜುಗೊಳಿಸಿ ಅಮ್ಮನ ಜತೆ ಮಾತಾಡಲು ಹೋದೆ.
ಅಷ್ಟರಲ್ಲಿ ಆ ಮಗುವಿನ ಅಪ್ಪ ಬಂದಿದ್ದ. ಆತನಿಗೆ ಕೊಂಚ ಇಂಗ್ಲಿಶ್ ಬರುತ್ತಿತ್ತು. ‘ನಾಳೆ ಬೆಳಗಾದರೆ ನನ್ನದು ಮತ್ತು ನನ್ನ ಹೆಂಡತಿಯದು ಸಿಟಿಜನ್ಶಿಪ್ ಸಂದರ್ಶನ ಇದೆ. ಮಗುವನ್ನು ಆಸ್ಪತ್ರೆಗೆ ಯಾಕೆ ಅಡ್ಮಿಟ್ ಮಾಡಬೇಕು? ಮಗು ಆರಾಮಾಗೇ ಇದೆಯಲ್ಲ’ ಎಂದು ಕೇಳಿದಾಗ ನಾನು ಹೆಚ್ಚು ಮಾತಾಡದೇ ಮಗುವಿನ ತಾಯಿಯ ಮುಖನೋಡಿದೆ. ‘ನನ್ನ ಪ್ರಕಾರ ಮಗುವಿಗೆ ವಾಂತಿ ನಿಲ್ಲಲು ಒಂದೆರಡು ಮಾತ್ರೆಕೊಟ್ಟು ಮನೆಗೆ ಕರಕೊಂಡು ಹೋದರೆ ಸಾಕು. ಆದರೆ, ನಿನ್ನ ಹೆಂಡತಿ ನನ್ನ ಮಾತು ಕೇಳಬೇಕಲ್ಲ. ಆಸ್ಪತ್ರೆಗೆ ಅಡ್ಮಿಟ್ ಮಾಡಬೇಕಂತೆ. ಇಲ್ಲಿ ಈ ಆಸ್ಪತ್ರೆಯಲ್ಲಿರುವವರೆಲ್ಲ ನಿನ್ನ ಮಗುವಿಗೆ ಐವಿ ಹಾಕಲು ಪ್ರಯತ್ನಪಟ್ಟು ಸೋತಿದ್ದೇವೆ. ನಿನ್ನ ಮಗುವನ್ನು ಇನ್ನೊಂದು ಆಸ್ಪತ್ರೆಗೆ ಕರಕೊಂಡು ಹೋಗಬೇಕು. ನಾನು ಎಲ್ಲ ಸಜ್ಜುಗೊಳಿಸಿದ್ದೇನೆ’ ಎಂದು ಹೇಳಿದೆ.
ಗಂಡಹೆಂಡತಿ ಸುಮಾರು ಹೊತ್ತು ಮಾತಾಡಿಕೊಂಡು ನಂತರ ಮಗುವನ್ನು ಆ ಆಸ್ಪತ್ರೆಗೆ ಕರಕೊಂಡು ಹೋಗುತ್ತೇನೆಂದು ಹೇಳಿ ಕರಕೊಂಡು ಹೋದರು.
ಮಾರನೆಯ ದಿನ ನಾನು ಆಸ್ಪತ್ರೆಗೆ ಬಂದಾಗ ನನ್ನ ಮೈಲ್ಬಾಕ್ಸಿನಲ್ಲೊಂದು ಸಣ್ನ ನೋಟಿತ್ತು’ ನೀನು ಕಳಿಸಿದ ಆ ಮಗು ನಮ್ಮ ಆಸ್ಪತ್ರೆಗೆ ಬರಲಿಲ್ಲ.’
ಆಕೆಯ ಮನೆಗೆ ಫೋನುಮಾಡಿದಾಗ ಮಗುವಿನ ಅಮ್ಮ ಫೋನು ತೆಗೆದುಕೊಂಡಳು. ಹಿಂದೆ ಮಗು ಜೋರಾಗಿ ಕೂಗುತ್ತಾ ಆಟವಾಡುತ್ತಿರುವುದು ಕೇಳಿಸುತ್ತಿತ್ತು. ನನ್ನ ಧ್ವನಿಯನ್ನು ಕೇಳಿದ ಕೂಡಲೇ ಫೋನು ಡಿಸ್ಕನೆಕ್ಟ್ ಆಯಿತು.
ಇಲ್ಲಿ ಯಾರ ಯಾರ power distance index ಗಳು ಹೇಗೆ ಕೆಲಸ ಮಾಡಿವೆ ನೋಡೋಣ. ಇಂಗ್ಲೀಷು ಮಾತಾಡಬಲ್ಲ ಗಂಡು ಡಾಕ್ಟರಾದ, ನಾನು ಇಂಗ್ಲಿಷು ಮಾತಾಡಲಾರದ ಸೊಮಾಲಿ ಹೆಣ್ಣು ಮಗಳ ಮೇಲೆ ನನ್ನ ಅಧಿಕಾರವನ್ನು ಉಪಯೋಗಿಸಿದ್ದೇನೆ. ಮಗುವಿನ ಆರೋಗ್ಯ ಇಲ್ಲಿ ಇಶ್ಯೂ ಅಲ್ಲವೇ ಅಲ್ಲ ಅನ್ನುವುದನ್ನು ನಾವೆಲ್ಲರೂ ಗಮನಿಸಬಹುದು. ಮಗು ಆರಾಮಾಗಿಯೇ ಇದೆ. ನಾನು ಮೊದಲು ಅಡ್ಮಿಟ್ ಮಾಡೊಲ್ಲ ಎಂದೆ. ನಂತರ ಮನೆಗೆ ಹೋದ ಆ ಸೊಮಾಲಿ ಹೆಂಗಸು ‘ನಾನೇನು ಬೇರೆಯವರಿಗಿಂತ ಕಡಿಮೆ.’ ಎಂದು ನಿರ್ಧರಿಸಿ ಮತ್ತೆ ಬಂದಳು. ನಾನು ಕೊಂಚ್ವ ಮಣಿದು ಅಡ್ಮಿಟ್ ಮಾಡಲು ನಿರ್ಧರಿಸಿದರೆ ಆ ಮಗುವಿಗೆ ಐವಿ ಹಾಕುವವರು ಯಾರೂ ಇಲ್ಲ, ನಮ್ಮ ಆಸ್ಪತ್ರೆಯಲ್ಲಿ. ಬೇರೆ ಕಡೆ ಹೋಗಬೇಕೆಂದು ನಿರ್ಧರಿಸಿದ್ದನ್ನು ಬಂದು ಪೂರಕ್ಕೆ ಪೂರ ನಿಲ್ಲಿಸಿದ್ದು ಮನೆಯ ಯಜಮಾನ ಮಗುವಿನ ಅಪ್ಪ. ಕೊನೆಗೂ ಗೆದ್ದದ್ದು ಮಗುವಿನ ಕುಟುಂಬದ ಶ್ರೇಣೀಕೃತ ವ್ಯವಸ್ಥೆಯೇ? ಮಗುವಿಗೆ ಐವಿ ಬೇಕಾ ಬೇಡವಾ ಎಂಬುದು ಡಾಕ್ಟರಲ್ಲದ ಆ ಆಪ್ಪನಿಗೆ ಗೊತ್ತಿಲ್ಲ. ಆದರೂ ಆತ ನಿರ್ಧರಿಸಿದ್ದ, ಮಗುವಿಗೆ ಹೀಗೇ ಮಾಡಬೇಕೆಂದು.
ಇದೇ ಒಂದು ಮಧ್ಯಮವರ್ಗದ ಬಿಳಿಯ ಅಮ್ಮ ಬಂದಿದ್ದರೆ ಏನಾಗುತ್ತಿತ್ತು. ಹೊಂಗೂದಲುಗಳ, ಚ್ಯೂಯಿಂಗ್ಗಮ್ ಅಗಿದುಕೊಂಡು ಮಾತಾಡುವ ಅಮ್ಮ ಮಗುವನ್ನು ಕರಕೊಂಡು ಬರುತ್ತಿದ್ದಳು. ‘The baby is obviously dehydrated. She hasn’t eaten or drunk in the last two days.’ ಎಂದು ಮೊದಲ ಬಾರಿಗೇ ನನ್ನನ್ನು ಚಿತ್ತುಮಾಡುಬಿಡುತ್ತಿದ್ದಳು. ನಂತರ ನಾನು ಮಾತಾಡುವ ಹೊತಿಗೆ ಆಕೆಯ ಸೆಲ್ಫೋನಿಗೆ ಎರಡು ಕಾಲ್ಗಳು ಬರುತ್ತಿದ್ದವು. ‘ನಾನು ಡಾಕ್ಟರ ಹತ್ತಿರ ಈಗ ಮಾತಾಡುತ್ತಾ ಇದೀನಿ. ಇಲ್ಲ. ಇಲ್ಲ. ಮಗು ಮನೆಗೆ ಬರುವ ಪರಿಸ್ಥಿತಿಯಲ್ಲಿಲ್ಲ. ಇಲ್ಲೇ ಇರ್ತೇವೆ. ಇವತ್ತು’ ಎಂದು ಅಕೆ ಗಂಡನ ಜತೆ ಮಾತಾಡುತ್ತಾಳೆ. ನಮಗ್ಯಾರಿಗೂ ಐವಿ ಹಾಕಲಾಗದಿದ್ದರೆ, ಆಕೆ ‘ಬೇರೆ ಏನೂ ದಾರಿಯೇ ಇಲ್ಲವಾ, ಆಸ್ಪತ್ರೆ ಯಾಕೆ ನಡೆಸುತ್ತಿದ್ದೀರಿ, ನೀವುಗಳು. ಒಂದು ಮಗುವಿಗೆ ಐವಿ ಹಾಕಲು ಬರದಿದ್ದರೆ’ ಎನ್ನುವ ಅರ್ಥದಲ್ಲಿ ಮಾತಾಡುತ್ತಾಳೆ. ನಾನು ಇನ್ನೂ ಕಷ್ಟಪಟ್ಟೋ ಅಥವಾ ಸರ್ಜನ್ನನ್ನೋ, ಅಥವಾ ಮಕ್ಕಳ ತಜ್ಞರನ್ನೋ ಕಾಡಿಬೇಡಿ ಹೇಗೋ ಮಾಡಿ ಐವಿ ಹಾಕುತ್ತೇವೆ. ಹಾಕಲಾಗದಿದ್ದರೆ ಬೇರೆ ಆಸ್ಪತ್ರೆಗೆ ಆಂಬುಲೆನ್ಸಿನಲ್ಲಿ ಸಾಗಿಸುತ್ತೇವೆ.
ಅಧಿಕಾರ ನಮ್ಮ ನಡುವಣ ಅಂತರವನ್ನು ಉಳಿಸುತ್ತದೆ. ಬಣ್ಣ, ಇಂಗ್ಲಿಷ್ ಭಾಶೆ, ಲಿಂಗ, ವಯಸ್ಸು ಇವೆಲ್ಲ ಯಾರು ಹೆಚ್ಚು ಶಕ್ತಿಶಾಲಿ, ಯಾರಿಗೆ ಏನು ಬೇಕು ಎಂಬುದನ್ನು ನಿರ್ಧರಿಸುತ್ತದೆ.
ಮಗುವಿನ ಆರೋಗ್ಯ ರೋಗಿಗೂ, ಡಾಕ್ಟರಿಗೂ ಮುಖ್ಯವಾಗುವುದೇ ಇಲ್ಲ.
ವಿಮಾನದ ಪೈಲಟ್ ನ್ಯೂಯಾರ್ಕಿನ ಏರ್ ಟ್ರಾಫಿಕ್ ಕಂಟ್ರೋಲರ್ಗಳಿಗೆ ತನ್ನ ವಿಮಾನದಲ್ಲಿ ಇಂಧನದ ಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿದೆ ಎಂಬ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥಮಾಡಿಸುವುದರಲ್ಲಿ ಎಡವಿದ್ದ. ಏರ್ ಟ್ರಾಫಿಕ್ ಕಂಟ್ರೋಲರ್ಗಳ ಭಾಶೆಯಲ್ಲಿ ಈ ಪೈಲಟ್ ಹೇಳಿದ ‘We are running out of gas’ ಅಂಥಾ ದೊಡ್ದ ವಿಷಯವೇ ಅಲ್ಲ. ಯಾಕೆಂದರೆ, ಎಲ್ಲ ವಿಮಾನಗಳಲ್ಲಿಯೂ ಲ್ಯಾಂಡ್ ಆಗುವ ಮುನ್ನ ಸಾಮಾನ್ಯವಾಗಿ ಇಂಧನ ಮುಗಿಯುವ ಮಟ್ಟಕ್ಕೆ ಬಂದಿರುತ್ತದೆ. ‘ತಾನು ಈಗ ಲ್ಯಾಂಡ್ ಆಗದಿದ್ದರೆ ವಿಮಾನಕ್ಕೆ ತೊಂದರೆಯಾಗುವ ಸಂಭವವಿದೆ. ಈಗ ಕೆಳಗಿಳಿಯಲೇ ಬೇಕು’ ಎಂದು ಅಧಿಕಾರಯುತವಾಗಿ ಆ ಪೈಲಟ್ ಹೇಳಿರಲಿಲ್ಲ. ನಂತರ ಈ ವಿಮಾನಕ್ಕೆ ರನ್ವೇ ಸಿಕ್ಕಿ ಅದು ನೆಲಕ್ಕೆ ಮುಟ್ಟುವ ಮುನ್ನ ವಿಮಾನದ ನಾಲ್ಕೂ ಇಂಜಿನ್ಗಳೂ ಸ್ಥಗಿತಗೊಂಡಿದ್ದವು. ವಿಮಾನ ನಿಲ್ದಾಣದ ಪಕ್ಕದಲ್ಲಿದ್ದ ಯಾವುದೋ ಒಂದು ಎಸ್ಟೇಟಿನಲ್ಲಿ ಅಪಘಾತಕ್ಕೊಳಗಾಯಿತು. ಎಪ್ಪತ್ಮೂರು ಜನ ಸ್ಥಳದಲ್ಲಿಯೇ ಸತ್ತರು.
ಮಾಲ್ಕಮ್ ಗ್ಲಾಡ್ವೆಲ್ ಎಂಬ ಬೆಸ್ಟ್ಸೆಲ್ಲರ್ ಸಾಹಿತಿಯೊಬ್ಬ ಬರೆದಿರುವ ‘The Outliers’ ಎನ್ನುವ ಪುಸ್ತಕದಲ್ಲಿ ಇಂಥ ಅಪಘಾತಗಳಿಗೆ ಕಾರಣಗಳನ್ನು ಹುಡುಕುತ್ತಾ ಹೋಗುತ್ತಾನೆ. ‘ಮೇಲಣ ಅಧಿಕಾರಿಗಳ ನಿರ್ಣಯವನ್ನು ಕೊಂಚವೂ ಪ್ರಶ್ನಿಸಬಾರದೆಂಬ ಸಂಸ್ಕೃತಿಯಲ್ಲಿ ಬೆಳೆದುಬಂದ ಈ ಕೊಲಂಬಿಯನ್ ಪೈಲಟ್ಟುಗಳು ನ್ಯೂಯಾರ್ಕಿನ ಏರ್ ಟ್ರಾಫಿಕ್ ಕಂಟ್ರೋಲರ್ಗಳ ನಿರ್ಣಯವನ್ನು ಪ್ರಶ್ನಿಸಲಾಗದೇ ಅಥವಾ ತಮ್ಮ ತುರ್ತನ್ನೂ ಅವರಿಗೆ ಸ್ಪಷ್ಟವಾದ ಪದಗಳಲ್ಲಿ ಸಂವಹಿಸಲಾಗದೇ ಇದ್ದುದೇ ಈ ಅಪಘಾತಕ್ಕೆ ಮೂಲ ಕಾರಣ’ ಎಂದು ನಿರ್ಧರಿಸುತ್ತಾನೆ.
ಇದೇ ನಿಟ್ಟಿನಲ್ಲಿ ಇಂಥ ವಿಮಾನಾಪಘಾತದ ಸಂಸ್ಕೃತಿಯನ್ನು ವಿಶ್ಲೇಷಿಸುತ್ತಾ “ ಕೆಲವೊಂದು ವಿಮಾನಗಳಲ್ಲಿ ಪೈಲಟ್ಟು-ಕೋಪೈಲಟ್ಟುಗಳ ಸಂಬಂಧ ಬಹಳ ಬೇರೆಯಾಗಿರುತ್ತದೆ. ಕೋ ಪೈಲಟ್ಟುಗಳು ಬಹಳಷ್ಟು ಬಾರಿ ಪೈಲಟ್ಟುಗಳಿಗೆ ಊಟ ಬಡಿಸುತ್ತಾರೆ, ಒಂದೇ ಹೋಟೆಲಿನಲ್ಲಿ ಉಳಿದುಕೊಳ್ಳುವುದಿಲ್ಲ. ಕೆಲವೊಮ್ಮೆ ಆತನಿಗೆ ವಿಸ್ಕಿ ಬೇಕಿದ್ದರೆ ಅದನ್ನು ತಂದುಕೊಟ್ಟು ಪೂರೈಸುತ್ತಾನೆ. ತನಗೆ ಕುಡಿಯಬೇಕೆನ್ನಿಸಿದರೆ ಮರೆಯಲ್ಲಿ ಹೋಗಿ ಕೈಮುಚ್ಚಿ ಕುಡಿಯುತ್ತಾನೆ. ಇದು ಧಣಿ-ಆಳಿನ ಸಂಬಂಧ’ ಎನ್ನುತ್ತಾನೆ.
ಏವಿಯಂಕ ವಿಮಾನದ ಕಾಕ್ಪಿಟ್ನಲ್ಲಿ ಆಡಿರಬಹುದಾದ ಸಂಭಾಷಣೆಯನ್ನು ಆಧರಿಸಿ ಗ್ಲಾಡ್ವೆಲ್ ಈ ತೀರ್ಮಾನಕ್ಕೆ ಬರಬಹುದು. ಕಾಕ್ಪಿಟ್ನಲ್ಲಿರುವ ಕೊ ಪೈಲಟ್ ಮತ್ತು ಫ್ಲೈಟ್ ಇಂಜಿನಿಯರ್ ಇಬ್ಬರಿಗೂ ತಮ್ಮ ವಿಮಾನ ಅಪಾಯಕಾರಿಯಾಗಿ ಹಾರಾಡುತ್ತಿದೆ ಎಂದು ಗೊತ್ತಿದ್ದರೂ ಪೈಲಟ್ಟಿನ ನಿರ್ಣಯವನ್ನು ಪ್ರಶ್ನಿಸುವ ಹಕ್ಕಿಲ್ಲ, ಎಂದು ತಿಳಿದಿದ್ದರೇ? ಹಾಗೆಯೇ, ಆ ಪೈಲಟ್ಟೂ ಕೂಡ ಅಷ್ಟೇ. ತನಗಿಂತ ಮೇಲಣ ಆಫೀಸರ್ ಎಂದು ಭಾವಿಸಿರುವ ನ್ಯೂಯಾರ್ಕಿನ ಏರ್ಟ್ರಾಫಿಕ್ ಕಂಟ್ರೋಲರುಗಳ ನಿರ್ಣಯವನ್ನು ಪ್ರಶ್ನಿಸುವುದಿರಲಿ, ತನ್ನ ತುರ್ತನ್ನೂ ಅವರಿಗೆ ತಲುಪಿಸಲಾಗಲಿಲ್ಲ. ಒಂದು ಘಟ್ಟದಲ್ಲಿ ‘ನನಗೆ ಸ್ಪಾನಿಶ್ ದುಭಾಷಿ ಬೇಕು’ ಎಂದು ಕೇಳಿದ್ದನಂತೆ.
ಆ ಕಾಕ್ಪಿಟ್ಟಿನ ಸ್ಥಿತಿಯನ್ನು ಒಮ್ಮೆ ಊಹಿಸಿಕೊಳ್ಳೋಣ. ಸ್ಪಾನಿಶ್ ಭಾಶೆಯನ್ನು ಮಾತಾಡುತ್ತಿರುವ ಇಬ್ಬರು ಪೈಲಟ್ಟುಗಳು, ವಿಮಾನದಲ್ಲಿ ಇಂಧನ ಮುಗಿದಿದೆ ಎಂದು ಎಲ್ಲರಿಗೂ ಗೊತ್ತಿದೆ. ತನ್ನ ವಿಮಾನ ಅಪಾಯದಲ್ಲಿದೆ ಎಂದು ಗೊತ್ತಿದ್ದ ಕ್ಯಾಪ್ಟನ್ ಇದನ್ನು ತನ್ನ ಮೇಲಧಿಕಾರಿಗಳಿಗೆ ಹೇಳಲಾಗದೇ ಇದ್ದುದಕ್ಕೆ ಕಾರಣವೇನಿರಬಹುದು. ಒಂದು, ಪರಿಣಾಮಕಾರಿಯಾಗಿ ಇಂಗ್ಲಿಶ್ ಭಾಷೆಯನ್ನು ಬಳಸುವುದು ಆತನಿಗೆ ಸಾಧ್ಯವಾಗಿಲ್ಲ. ಎರಡನೆಯದು ಅಧಿಕಾರಯುತವಾದ ಅಮೆರಿಕನ್ ಉಚ್ಚಾರದಲ್ಲಿ ‘I am asking you a direct question. Do you consider your situation as emergency or priority? ಎಂದು ಕೇಳಿದಾಗ ತನ್ನ ಜತೆಗಿರುವ ಕೈಕೆಳಗಿನ ಅಧಿಕಾರಿಗಳ ಮುಂದೆ ತನ್ನ ಮ್ಯಾಚಿಸ್ಮೋವನ್ನು ಬಿಡಲಾಗದೆ ‘ಪ್ರಯಾರಿಟಿ’ಎಂದು ಹೇಳಿದ್ದಾನೆ. ಇಡೀ ವಿಮಾನದಲ್ಲಿರುವ ಜೀವಗಳ ಜವಾಬ್ದಾರಿ ತನ್ನದು ಎಂದು ಗೊತ್ತಿದ್ದಾಗಲೂ ತಾನು ಕೊಲಂಬಿಯನ್, ಕಂದು ಬಣ್ಣದವ, ಬಿಳೀ ಬಣ್ಣದ ಇಂಗ್ಲಿಶ್ ಮಾತಾಡುವ ಜಗತ್ತಿನ ಅತಿದೊಡ್ಡ ವಿಮಾನನಿಲ್ದಾಣದ ಏರ್ಟ್ರಾಫಿಕ್ ಕಂಟ್ರೊಲರ್ ಜತೆ ಮಾತಾಡುತ್ತಿದ್ದೇನೆ ಎನ್ನುವ ಅಂಶ ಅವನ ಬಾಯನ್ನು ಕಟ್ಟಿಹಾಕಿದೆ. ತನ್ನ ತುರ್ತನ್ನೂ ಸಂವಹಿಸಲಾಗದೇ ಹೋಗಿದ್ದಾನೆ.
* * *
ಇದನ್ನು ಮಾಲ್ಕಮ್ ಗ್ಲಾಡ್ವೆಲ್ ‘ಅಧಿಕಾರ-ಅಂತರ- ಮಾಪಕ’ ಎಂದು ಕರೆಯುತ್ತಾನೆ. (Power distance index). ಶ್ರೇಣೀಕೃತ ಸಂಸ್ಕೃತಿಯಲ್ಲಿ ಮೇಲಧಿಕಾರಿಯ ಜತೆ ಕೆಳಗಿನ ಅಧಿಕಾರಿ ಅಥವಾ ಒಂದು ಸಂಸಾರದ ಮುಖ್ಯಸ್ಥನ ಜತೆ ಸಂಸಾರದ ಇನ್ನಿತರರು ಹೇಗೆ ವ್ಯವಹರಿಸುತ್ತಾರೆ ಎನ್ನುವುದನ್ನು ಕೆಳಗಿನಿಂದ ನೋಡುವ ಮಾಪಕ ಇದು. ಈ ಸೂಚಿ ಹೆಚ್ಚಿದ್ದಷ್ಟೂ ಅಧಿಕಾರಗಳ ನಡುವಿನ ಅಂತರವೂ ಹೆಚ್ಚಿರುತ್ತದೆ. ಜರ್ಮನಿಯಲ್ಲಿ ಈ ಮಾಪಕ ೩೫ರಷ್ಟಿದ್ದರೆ, ಕೆಲವೊಂದು ಅರಬ್ ರಾಷ್ಟ್ರಗಳಲ್ಲಿ ಇದು ೮೦ರಷ್ಟು ಇದೆ. ಅಮೆರಿಕಾದಲ್ಲಿ ಇದು ೪೦ರ ಸಮೀಪದಲ್ಲಿದೆ. ಭಾರತ, ಪಾಕಿಸ್ತಾನ, ಕೊರಿಯಾ, ಚೀನಾ ಮುಂತಾದ ಏಷಿಯಾದ ದೇಶಗಳಲ್ಲಿ ಇದು ಹೆಚ್ಚಾಗಿದ್ದರೆ, ಜಪಾನ್, ಸಿಂಗಪೂರ್, ಜರ್ಮನಿ, ಅಮೆರಿಕ, ಇಂಗ್ಲೆಂಡುಗಳಲ್ಲಿ ಇದು ಕಡಿಮೆ ಇದೆ.
ಇದನ್ನು ನಾವು ದಿನನಿತ್ಯದ ವ್ಯವಹಾರದಲ್ಲಿಯೂ ಮತ್ತು ನಾವು ಉಪಯೋಗಿಸುವ ಭಾಷೆಯಲ್ಲಿಯೂ ಕಾಣಬಹುದು. ಇಂಗ್ಲಿಷಿನಲ್ಲಿ ಮರ್ಯಾದಾಸೂಚಕ ಬಹುವಚನವಿಲ್ಲ. ಅಂದರೆ, ಕನ್ನಡದಲ್ಲಿದ್ದಂತೆ ನೀನು, ನೀವು, ತಾವುಗಳ ಅಂತರ ಇಂಗ್ಲಿಶ್ ಭಾಶೆಯಲ್ಲಿಲ್ಲ. ಇಲ್ಲಿ ಮೇಲಧಿಕಾರಿಗಳು ಮತ್ತು ಕೆಳಗಿನ ಅಧಿಕಾರಿಗಳು ಇಬ್ಬರೂ ಒಂದೇ ಪ್ರತ್ಯಯವನ್ನು ಉಪಯೋಗಿಸಿ ಮಾತಡುತ್ತಾರೆ. ಹೆಚ್ಚೆಂದರೆ, ಮಿಸ್ಟರ್, ಡಾಕ್ಟರ್ ಎಂಬ ನಾಮಪೂರ್ವ ವಿಶೇಷಣಗಳನ್ನು ಉಪಯೋಗಿಸಿದರೆ ಅಥವಾ ಕೊನೆಯ ಹೆಸರನ್ನು ಉಪಯೋಗಿಸಿದಾಗ ಅದು ಮರ್ಯಾದೆಯನ್ನು ಸೂಚಿಸುವಂತಾಗುತ್ತದೆ. (ಎ ಕೆ ರಾಮಾನುಜನ್ ರವರ ಸಂಸ್ಕಾರದ ಇಂಗ್ಲಿಶ್ ತರ್ಜುಮೆಯಲ್ಲಿ ‘You have to respect me . Call me in Pleural. (ಮರ್ಯಾದೆ ಕೊಟ್ಟು ಮಾತನಾಡು,ಬಹುವಚನದಲ್ಲಿ ಕರೆ) ಎಂಬ ಉಪಯೋಗ ಅನೇಕ ಇಂಗ್ಲಿಶ್ ಓದುಗರಿಗೆ ಗೊಂದಲವನ್ನುಂಟುಮಾಡಿತ್ತಂತೆ.
ಅಂದರೆ, ಭಾಷೆಯ ಉಪಯೋಗ ಕೂಡ ಈ ಶ್ರೇಣೀಕೃತ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಏ. ಏನೋ, ಏನ್ರೀ, ಏನಪ್ಪಾ, ಏನ್ಸಾರ್ ಹೀಗೆ ಒಬ್ಬ ವ್ಯಕ್ತಿ ತನ್ನ ಅಂತಸ್ತಿಗನುಗುಣವಾಗಿ ಜನರನ್ನು ಸಂಭೋದಿಸುವುದು ಈ ಅಂತರ ಮಾಪಕ ಹೆಚ್ಚಾಗಿರುವ ದೇಶಗಳಲ್ಲಿ ನಾವು ಕಾಣಬಹುದು. ಕನ್ನಡ ಕೂಡ ಇದಕ್ಕೆ ಹೊರತಲ್ಲ.
ಕಾಕ್ಪಿಟ್ಟಿನಲ್ಲಿದ್ದ ಇಬ್ಬರೂ ಅಮೆರಿಕನ್ನರಾಗಿದರೆ ಕೊಪೈಲಟ್ ‘Hey.. listen here, buddy. We need to land this flight.. like right now’ ಎಂದು ಹೇಳುತ್ತಿದ್ದನೇ.
ಬಹುಶಃ ಹೌದು
* * *
ನಾನು ಕೆಲಸ ಮಾಡುತ್ತಿರುವ ಕಡೆ ಅನೇಕ ಬೇರೆಬೇರೆ ದೇಶಗಳಿಂದ ಅಮೆರಿಕಾಕ್ಕೆ ವಲಸೆಬಂದಿರುವ ಕುಟುಂಬಗಳಿವೆ. ಮಿನೆಸೊಟಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೊಮಾಲಿಯಾದಿಂದ ರಾಜಕೀಯ ಸಂತ್ರಸ್ತರ ಕೋಟಾದಡಿಯಲ್ಲಿ ಜನ ವಲಸೆ ಬಂದಿದ್ದಾರೆ. ಅವರಿಗೆ ಒಂದಕ್ಷರವೂ ಇಂಗ್ಲಿಶ್ ಬರುವುದಿಲ್ಲ. ಆದರೆ ಮಿನೆಸೊಟದಲ್ಲಿ ಇವರ ಹಕ್ಕುಗಳನ್ನು ಸರಿಯಾಗಿ ಅವರಿಗೆ ತಿಳಿಯಪಡಿಸುವ ಅನೇಕ ರಾಜಕೀಯ ಅಥವಾ ಎನ್ಜೀಓ ತರದ ಸಂಸ್ಥೆಗಳಿದ್ದಾವೆ. ಯಾವುದೇ ಆರೋಗ್ಯವಿಮೆ ಇವರಿಗಿಲ್ಲವಾದರಿಂದ ಇವರ ಸಣ್ಣಪುಟ್ಟ ಕಾಯಿಲೆಗಳಿಗೂ ಇವರು ಅತಿ ದುಬಾರಿಯಾದ ಎಮೆರ್ಜೆನ್ಸಿ ಡಿಪಾರ್ಟ್ಮೆಂಟನ್ನೇ ಅವಲಂಬಿಸಿರುತ್ತಾರೆ. (ಇವರಿಗೆ ಎಲ್ಲ ಆಸ್ಪತ್ರೆಗಳಲ್ಲಿಯೂ ಸೇವೆ ಪುಕ್ಕಟೆ ಎನ್ನುವುದು ಒಂದು ಅಂಶ) ಅಷ್ಟೇ ಅಲ್ಲ, ಮಗುವಿಗೆ ಸಣ್ಣಗೆ ನೂರು ಡಿಗ್ರಿ ಜ್ಚರ ಬಂದರೂ ಇವರು ಆಂಬುಲೆನ್ಸನ್ನು ಕರೆಯುತ್ತಾರೆ. (ಆಸ್ಪತ್ರೆಗೆ ಬರಲು ಇವರ ಬಳಿ ಕಾರಿಲ್ಲದೇ ಇರುವುದೂ ಇದಕ್ಕೆ ಕಾರಣವಾಗಿರಬಹುದು)
ಬರೇ ಬಿಳೀವರ್ಣದ ಪ್ಯಾರಮೆಡಿಕ್ಗಳು, ನರ್ಸುಗಳು ತುಂಬಿರುವ ಆಸ್ಪತ್ರೆಗೆ ಮಗುವನ್ನೂ ಅಮ್ಮನನ್ನೂ ಆಂಬುಲೆನ್ಸಿನಲ್ಲಿ ಕರಕೊಂಡು ಬರಲಾಗುತ್ತದೆ. ಆಸ್ಪತ್ರೆಗಾಗಲೀ, ಆಂಬುಲೆನ್ಸಿಗಾಗಲೀ ಇವರು ನಯಾಪೈಸೆ ಕೊಡಲಾರರು ಎಂಬುದು ಎಲ್ಲರಿಗೂ ಗೊತ್ತು. ಮತ್ತು ಇವರೆಲ್ಲರ ಈ ಅವಶ್ಯಕತೆಗಳನ್ನು ಪೂರೈಸುತ್ತಿರುವುದು ತಮ್ಮ ತೆರಿಗೆಯ ಹಣದಿಂದ ಎಂಬ ಅಂಶ ಬಿಳಿಯ ಪ್ಯಾರಮೆಡಿಕ್ ಮತ್ತು ನರ್ಸುಗಳನ್ನೂ ಆಗಾಗ್ಗೆ ರೊಚ್ಚಿಗೇಳಿಸುತ್ತದೆ. ‘bloddy, my tax dollars are at works, here’ ಎಂದು ಕೆಲವೊಮ್ಮೆ ಖುಲ್ಲಂಖುಲ್ಲ ಮಾತಾಡುತ್ತಾರೆ. ಆದರೆ, ನನ್ನನ್ನು ನೋಡಿದಾಕ್ಷಣ ಅವರಿಗೆ ಒಮ್ಮೊಮ್ಮೆ ತಬ್ಬಿಬ್ಬಾಗುತ್ತದೆ. ಕೆಲವರಿಗೆ ನನ್ನ ರಾಷ್ಟ್ರೀಯತೆಯೂ ಗೊತ್ತಿಲ್ಲ. ಆದರೂ, ನಾನು ಅವರಿಗಿಂತ ಹೆಚ್ಚು ಸೊಮಲಿಯಾಕ್ಕೆ ಹತ್ತಿರವೆಂದು ತಿಳಿದು ಕೆಲವೊಮ್ಮೆ ಕ್ಷಮೆ ಕೋರಿದ್ದಾರೆ.
ಇಲ್ಲಿ ಬರೇ ಅಧಿಕಾರ-ಅಂತರ ಮಾತ್ರ ಬರುವುದಿಲ್ಲ. ಈ ಅಧಿಕಾರ-ಅಂತರ ಸೂಚಿ ಹೆಚ್ಚಿರುವ ಭಾರತ ಮೂಲದವನಾದ ನಾನು ಮೇಲಿನ ಅಧಿಕಾರಿಗಳಿಗೆ ಮರ್ಯಾದೆಯನ್ನು ಕೊಡುವುದನ್ನೇನೋ ಕಲಿತಿದ್ದೇನೆ. ಆದರೆ, ನನ್ನ ಕೈಕೆಳಗಿರುವ ಕೆಲಸಗಾರರಿಂದ ಅದೇ ಮರ್ಯಾದೆಯನ್ನು ಪಡೆಯುವುದನ್ನು ನನ್ನ ಸಂಸ್ಕೃತಿ, ಪರಂಪರೆ ನನಗೆ ಕಲಿಸಿರಬೇಕು, ಅಲ್ಲವೇ? ಯಾಕೆಂದರೆ, ಆಸ್ಪತ್ರೆಯ ನಮ್ಮ ಡಿಪಾರ್ಟ್ಮೆಂಟಿನ ಬಾಸ್ ನಾನು. ಏನಿಲ್ಲದಿದ್ದರೂ ಈ ಪ್ಯಾರಮೆಡಿಕ್ ವೃತ್ತಿಪರವಾಗಿ ನಡಕೊಂಡಿಲ್ಲವೆಂದು ಅವನನ್ನು ಎಚ್ಚರಿಸುವುದು ನನ್ನ ಕರ್ತವ್ಯ ಮತ್ತು ಹೊಣೆಗಾರಿಕೆ ಕೂಡ.
ಆದರೆ, ಈ ಅಧಿಕಾರವೆನ್ನುವುದು ಬರೇ ಓದು ಅಥವಾ ಕೆಲಸದ ಅನುಭವದಿಂದ ಬರುವುದಿಲ್ಲ. ಅದೊಂದು ಮನಸ್ಥಿತಿ. ನನ್ನ ಕಂದು ಬಣ್ಣ, ಇಂಗ್ಲಿಷ್ ಉಚ್ಚಾರ ಮನಸ್ಸಿನ ಯಾವುದೋ ಮೂಲೆಯಲ್ಲಿ ಒಂದು ಕೀಳರಿಮೆಯನ್ನು ನನ್ನಲ್ಲಿ ಮೂಡಿಸಿಟ್ಟಿದೆಯಾ ಎಂದು ಅನುಮಾನವಾಗುತ್ತದೆ. ಅದು ನಾನಾಗೇ ಮೂಡಿಸಿಕೊಂಡಿದ್ದಲ್ಲ. ನಿಜ ಹೇಳಬೇಕೆಂದರೆ ನಾನು ಆ ಪ್ಯಾರಮೆಡಿಕ್ಗೆ ‘ನಿನ್ನ ವರ್ತನೆ ಉಚಿತವಾದದ್ದಲ್ಲ’ ಎಂದು ಹೇಳಿದ್ದರೆ ಆತ ಗ್ಯಾರಂಟಿ ‘ಸಾರಿ’ ಕೇಳುತ್ತಿದ್ದ. ಆದರೆ, ಸುತ್ತ ಕೆಲಸಮಾಡುತ್ತಿರುವ ಬಿಳೀ ಮಧ್ಯಮವರ್ಗ ಮತ್ತು ನಾನು ಉತ್ತಮ ಜೀವನ ಶೈಲಿಯನ್ನು ಹುಡಕೊಂಡು ಅಮೆರಿಕೆಗೆ ಬಂದಿದ್ದೇನೆ ಎಂದು ನನ್ನೊಳಗೆ ಇರುವ ಸುಪ್ತವಾದ ಒಂದು ಭಾವನೆ, ಕೀಳರಿಮೆ ನನ್ನ ಅಧಿಕಾರವಾಣಿಯನ್ನು ಕಿತ್ತುಕೊಂಡಿದೆ.
* * *
ಕೆಲವು ದಿನಗಳ ಹಿಂದೆ ಹೀಗೇ ಆಯಿತು. ಮೂರುವರ್ಷದ ಸೊಮಾಲಿ ಮಗುವೊಂದು ವಾಂತಿ ಮಾಡುತ್ತಿದೆಯೆಂದು ಅದರಮ್ಮ ಆಸ್ಪತ್ರೆಗೆ ಕರಕೊಂಡು ಬಂದಿದ್ದಳು. ಪರೀಕ್ಷೆ ಮಾಡಿದ ತಕ್ಷಣ ಮಗುವಿಗೆ ಏನೂ ತೊಂದರೆಯಿಲ್ಲವೆಂದು ನನ್ನ ವೈದ್ಯಬುದ್ಧಿ ಹೇಳಿತು. ನಾನು ಹೋಗಿ ಆಕೆಗೆ ‘ನಿನ್ನ ಮಗುವಿಗೆ ಏನೂ ತೊಂದರೆಯಿಲ್ಲ. ಅರಾಮಾಗಿ ಮನೆಗೆ ಕರಕೊಂಡು ಹೋಗು’ ಎಂದು ಹೇಳಿದೆ. ಆಕೆ, ದುಭಾಶಿಯೊಬ್ಬಳ ಮೂಲಕ ‘ಮಗುವಿಗೆ ನಾನು ಎಕ್ಸ್ ರೇ ಯಾಕೆ ಮಾಡುತ್ತಿಲ್ಲ? ಐವಿ ಯಾಕೆ ಹಾಕುತ್ತಿಲ್ಲ? ರಕ್ತಪರೀಕ್ಷೆ ಯಾಕೆ ಮಾಡುತ್ತಿಲ್ಲ?’ ಹೀಗೇ ಅನೇಕ ಪ್ರಶ್ನೆಗಳನ್ನು ಕೇಳಿದಳು. ನಾನು ರೋಸಿಹೋಗಿ ‘ಮಗುವಿಗೆ ಏನೂ ತೊಂದರೆಯಿಲ್ಲ. ನೀನು ಸುಮ್ಮನೆ ಹೀಗೆ ಸಣ್ಣ್ನಸಣ್ಣದಕ್ಕೆಲ್ಲಾ ಆಸ್ಪತ್ರೆಗೆ ಕರಕೊಂಡು ಬರುವುದನ್ನು ನಿಲ್ಲಿಸು’ ಎಂದು ಕೊಂಚ ಗದರಿದಹಾಗೇ ಹೇಳಿ ಆಕೆಯನ್ನು ಮನೆಗೆ ಕಳಿಸಿದೆ.
ಮನೆಗೆ ಬರುತ್ತಾ ನನಗೆ ನಾನೇ ಪ್ರಶ್ನಿಸಿಕೊಳ್ಳುತ್ತಿದ್ದೆ. ಇದೇ ಒಂದು ಬಿಳಿಯ ಮಗು ಇದೇ ಪರಿಸ್ಥಿತಿಯಲ್ಲಿ ಬಂದಿದ್ದರೆ ನಾನು ಇದೇ ರೀತಿ ಮಾಡುತ್ತಿದ್ದೆನಾ ಎಂದು. ಪ್ರಾಯಶಃ ಮಗುವಿನ ಅಮ್ಮ ಏನು ಕೇಳುತ್ತಾಳೋ ಎಲ್ಲವನ್ನೂ ಮಾಡಿ ಕಳಿಸುತ್ತಿದ್ದನೇನೋ? ಸೊಮಾಲಿ ಮಗುವಿನ ಅಮ್ಮನಿಗೆ ಭಾಷೆ ಬರದಿರುವುದು ಮತ್ತು ನಾನು ಮತ್ತು ಆಕೆ ಇಬ್ಬರೂ ಹೊರಗಿನಿಂದ ಅಮೆರಿಕಾಕ್ಕೆ ಬಂದಿರುವುದರಿಂದ ನಾನು ನನ್ನ ಸಹಜ ಅಧಿಕಾರಯುತವಾದ ಭಾಷೆಯಲ್ಲಿ ನನ್ನ ಕೆಲಸವನ್ನು ಮಾಡಿದ್ದೆ. ಬಹುಷಃ ಆಕೆ ಸೊಮಾಲಿ ಎಂದು ನಾನು ನನ್ನ ಅಧಿಕಾರವನ್ನು ಹೆಚ್ಚಾಗಿಯೇ ಉಪಯೋಗಿಸಿದ್ದನೇನೋ.
ಆದರೆ, ಆಕೆಯೂ ನನ್ನ ಹಾಗೆ ಅಮೆರಿಕಾಕ್ಕೆ ಬಂದು ಇಲ್ಲಿಯೇ ನೆಲಸುವ ಪ್ರಯತ್ನದಲ್ಲಿರುವವಳಲ್ಲವೇ? ಆಕೆ ಬಿಡಲಿಲ್ಲ. ಮತ್ತೆ ಮಗುವನ್ನು ಕರಕೊಂಡು ಬಂದಳು. ಬಂದವಳೇ ‘ಮಗು ಒಂದು ತೊಟ್ಟೂ ನೀರು ಕುಡಿಯುತ್ತಿಲ್ಲ. ನೀನು ಐವಿ ಹಾಕಲೇಬೇಕು’ ಎಂದು ಗಲಾಟೆ ಮಾಡಹತ್ತಿದಳು. ಮತ್ತೆ ಮಗುವನ್ನು ಕೂಲಂಕಶವಾಗಿ ಪರೀಕ್ಷೆಮಾಡಿ, ಮಗುವಿಗೆ ಏನೂ ತೊಂದರೆಯಿಲ್ಲದಿದ್ದರೂ- ಒಂದು ಐವಿಹಾಕಿ ಒಂದು ಲೀಟರ್ ಸಲೈನ್ ಕೊಟ್ಟರೆ ನನ್ನ ಗಂಟೇನೂ ಹೋಗುವುದಿಲ್ಲ, ಎಂದು ನಿರ್ಧರಿಸಿ ಮಗುವನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡುವಾ ಎಂದು ಆಸ್ಪತ್ರೆಯಲ್ಲಿ ಈ ಮಗುವನ್ನು ನೋಡಿಕೊಳ್ಳುವ ಡಾಕ್ಟರಿಗೆ ಫ಼ೋನಾಯಿಸಿದೆ.
ಆದರೆ, ಏನು ಮಾಡಿದರೂ ಮೈಕೈ ತುಂಬಿಕೊಂಡು ಗುಂಡುಗುಂಡಾಗಿದ್ದ ಆ ಮಗುವಿಗೆ ಐವಿ ಹಾಕಲು ಆಸ್ಪತ್ರೆಯ ಯಾವ ನರ್ಸಿಂದಲೂ ಸಾಧ್ಯವಾಗಲಿಲ್ಲ. ಮಗುವನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಿ ಆ ಆಸ್ಪತ್ರೆಯ ಡಾಕ್ಟರುಗಳಿಗೆ ಫೋನು ಮಾಡಿ ಎಲ್ಲವನ್ನೂ ಸಜ್ಜುಗೊಳಿಸಿ ಅಮ್ಮನ ಜತೆ ಮಾತಾಡಲು ಹೋದೆ.
ಅಷ್ಟರಲ್ಲಿ ಆ ಮಗುವಿನ ಅಪ್ಪ ಬಂದಿದ್ದ. ಆತನಿಗೆ ಕೊಂಚ ಇಂಗ್ಲಿಶ್ ಬರುತ್ತಿತ್ತು. ‘ನಾಳೆ ಬೆಳಗಾದರೆ ನನ್ನದು ಮತ್ತು ನನ್ನ ಹೆಂಡತಿಯದು ಸಿಟಿಜನ್ಶಿಪ್ ಸಂದರ್ಶನ ಇದೆ. ಮಗುವನ್ನು ಆಸ್ಪತ್ರೆಗೆ ಯಾಕೆ ಅಡ್ಮಿಟ್ ಮಾಡಬೇಕು? ಮಗು ಆರಾಮಾಗೇ ಇದೆಯಲ್ಲ’ ಎಂದು ಕೇಳಿದಾಗ ನಾನು ಹೆಚ್ಚು ಮಾತಾಡದೇ ಮಗುವಿನ ತಾಯಿಯ ಮುಖನೋಡಿದೆ. ‘ನನ್ನ ಪ್ರಕಾರ ಮಗುವಿಗೆ ವಾಂತಿ ನಿಲ್ಲಲು ಒಂದೆರಡು ಮಾತ್ರೆಕೊಟ್ಟು ಮನೆಗೆ ಕರಕೊಂಡು ಹೋದರೆ ಸಾಕು. ಆದರೆ, ನಿನ್ನ ಹೆಂಡತಿ ನನ್ನ ಮಾತು ಕೇಳಬೇಕಲ್ಲ. ಆಸ್ಪತ್ರೆಗೆ ಅಡ್ಮಿಟ್ ಮಾಡಬೇಕಂತೆ. ಇಲ್ಲಿ ಈ ಆಸ್ಪತ್ರೆಯಲ್ಲಿರುವವರೆಲ್ಲ ನಿನ್ನ ಮಗುವಿಗೆ ಐವಿ ಹಾಕಲು ಪ್ರಯತ್ನಪಟ್ಟು ಸೋತಿದ್ದೇವೆ. ನಿನ್ನ ಮಗುವನ್ನು ಇನ್ನೊಂದು ಆಸ್ಪತ್ರೆಗೆ ಕರಕೊಂಡು ಹೋಗಬೇಕು. ನಾನು ಎಲ್ಲ ಸಜ್ಜುಗೊಳಿಸಿದ್ದೇನೆ’ ಎಂದು ಹೇಳಿದೆ.
ಗಂಡಹೆಂಡತಿ ಸುಮಾರು ಹೊತ್ತು ಮಾತಾಡಿಕೊಂಡು ನಂತರ ಮಗುವನ್ನು ಆ ಆಸ್ಪತ್ರೆಗೆ ಕರಕೊಂಡು ಹೋಗುತ್ತೇನೆಂದು ಹೇಳಿ ಕರಕೊಂಡು ಹೋದರು.
ಮಾರನೆಯ ದಿನ ನಾನು ಆಸ್ಪತ್ರೆಗೆ ಬಂದಾಗ ನನ್ನ ಮೈಲ್ಬಾಕ್ಸಿನಲ್ಲೊಂದು ಸಣ್ನ ನೋಟಿತ್ತು’ ನೀನು ಕಳಿಸಿದ ಆ ಮಗು ನಮ್ಮ ಆಸ್ಪತ್ರೆಗೆ ಬರಲಿಲ್ಲ.’
ಆಕೆಯ ಮನೆಗೆ ಫೋನುಮಾಡಿದಾಗ ಮಗುವಿನ ಅಮ್ಮ ಫೋನು ತೆಗೆದುಕೊಂಡಳು. ಹಿಂದೆ ಮಗು ಜೋರಾಗಿ ಕೂಗುತ್ತಾ ಆಟವಾಡುತ್ತಿರುವುದು ಕೇಳಿಸುತ್ತಿತ್ತು. ನನ್ನ ಧ್ವನಿಯನ್ನು ಕೇಳಿದ ಕೂಡಲೇ ಫೋನು ಡಿಸ್ಕನೆಕ್ಟ್ ಆಯಿತು.
ಇಲ್ಲಿ ಯಾರ ಯಾರ power distance index ಗಳು ಹೇಗೆ ಕೆಲಸ ಮಾಡಿವೆ ನೋಡೋಣ. ಇಂಗ್ಲೀಷು ಮಾತಾಡಬಲ್ಲ ಗಂಡು ಡಾಕ್ಟರಾದ, ನಾನು ಇಂಗ್ಲಿಷು ಮಾತಾಡಲಾರದ ಸೊಮಾಲಿ ಹೆಣ್ಣು ಮಗಳ ಮೇಲೆ ನನ್ನ ಅಧಿಕಾರವನ್ನು ಉಪಯೋಗಿಸಿದ್ದೇನೆ. ಮಗುವಿನ ಆರೋಗ್ಯ ಇಲ್ಲಿ ಇಶ್ಯೂ ಅಲ್ಲವೇ ಅಲ್ಲ ಅನ್ನುವುದನ್ನು ನಾವೆಲ್ಲರೂ ಗಮನಿಸಬಹುದು. ಮಗು ಆರಾಮಾಗಿಯೇ ಇದೆ. ನಾನು ಮೊದಲು ಅಡ್ಮಿಟ್ ಮಾಡೊಲ್ಲ ಎಂದೆ. ನಂತರ ಮನೆಗೆ ಹೋದ ಆ ಸೊಮಾಲಿ ಹೆಂಗಸು ‘ನಾನೇನು ಬೇರೆಯವರಿಗಿಂತ ಕಡಿಮೆ.’ ಎಂದು ನಿರ್ಧರಿಸಿ ಮತ್ತೆ ಬಂದಳು. ನಾನು ಕೊಂಚ್ವ ಮಣಿದು ಅಡ್ಮಿಟ್ ಮಾಡಲು ನಿರ್ಧರಿಸಿದರೆ ಆ ಮಗುವಿಗೆ ಐವಿ ಹಾಕುವವರು ಯಾರೂ ಇಲ್ಲ, ನಮ್ಮ ಆಸ್ಪತ್ರೆಯಲ್ಲಿ. ಬೇರೆ ಕಡೆ ಹೋಗಬೇಕೆಂದು ನಿರ್ಧರಿಸಿದ್ದನ್ನು ಬಂದು ಪೂರಕ್ಕೆ ಪೂರ ನಿಲ್ಲಿಸಿದ್ದು ಮನೆಯ ಯಜಮಾನ ಮಗುವಿನ ಅಪ್ಪ. ಕೊನೆಗೂ ಗೆದ್ದದ್ದು ಮಗುವಿನ ಕುಟುಂಬದ ಶ್ರೇಣೀಕೃತ ವ್ಯವಸ್ಥೆಯೇ? ಮಗುವಿಗೆ ಐವಿ ಬೇಕಾ ಬೇಡವಾ ಎಂಬುದು ಡಾಕ್ಟರಲ್ಲದ ಆ ಆಪ್ಪನಿಗೆ ಗೊತ್ತಿಲ್ಲ. ಆದರೂ ಆತ ನಿರ್ಧರಿಸಿದ್ದ, ಮಗುವಿಗೆ ಹೀಗೇ ಮಾಡಬೇಕೆಂದು.
ಇದೇ ಒಂದು ಮಧ್ಯಮವರ್ಗದ ಬಿಳಿಯ ಅಮ್ಮ ಬಂದಿದ್ದರೆ ಏನಾಗುತ್ತಿತ್ತು. ಹೊಂಗೂದಲುಗಳ, ಚ್ಯೂಯಿಂಗ್ಗಮ್ ಅಗಿದುಕೊಂಡು ಮಾತಾಡುವ ಅಮ್ಮ ಮಗುವನ್ನು ಕರಕೊಂಡು ಬರುತ್ತಿದ್ದಳು. ‘The baby is obviously dehydrated. She hasn’t eaten or drunk in the last two days.’ ಎಂದು ಮೊದಲ ಬಾರಿಗೇ ನನ್ನನ್ನು ಚಿತ್ತುಮಾಡುಬಿಡುತ್ತಿದ್ದಳು. ನಂತರ ನಾನು ಮಾತಾಡುವ ಹೊತಿಗೆ ಆಕೆಯ ಸೆಲ್ಫೋನಿಗೆ ಎರಡು ಕಾಲ್ಗಳು ಬರುತ್ತಿದ್ದವು. ‘ನಾನು ಡಾಕ್ಟರ ಹತ್ತಿರ ಈಗ ಮಾತಾಡುತ್ತಾ ಇದೀನಿ. ಇಲ್ಲ. ಇಲ್ಲ. ಮಗು ಮನೆಗೆ ಬರುವ ಪರಿಸ್ಥಿತಿಯಲ್ಲಿಲ್ಲ. ಇಲ್ಲೇ ಇರ್ತೇವೆ. ಇವತ್ತು’ ಎಂದು ಅಕೆ ಗಂಡನ ಜತೆ ಮಾತಾಡುತ್ತಾಳೆ. ನಮಗ್ಯಾರಿಗೂ ಐವಿ ಹಾಕಲಾಗದಿದ್ದರೆ, ಆಕೆ ‘ಬೇರೆ ಏನೂ ದಾರಿಯೇ ಇಲ್ಲವಾ, ಆಸ್ಪತ್ರೆ ಯಾಕೆ ನಡೆಸುತ್ತಿದ್ದೀರಿ, ನೀವುಗಳು. ಒಂದು ಮಗುವಿಗೆ ಐವಿ ಹಾಕಲು ಬರದಿದ್ದರೆ’ ಎನ್ನುವ ಅರ್ಥದಲ್ಲಿ ಮಾತಾಡುತ್ತಾಳೆ. ನಾನು ಇನ್ನೂ ಕಷ್ಟಪಟ್ಟೋ ಅಥವಾ ಸರ್ಜನ್ನನ್ನೋ, ಅಥವಾ ಮಕ್ಕಳ ತಜ್ಞರನ್ನೋ ಕಾಡಿಬೇಡಿ ಹೇಗೋ ಮಾಡಿ ಐವಿ ಹಾಕುತ್ತೇವೆ. ಹಾಕಲಾಗದಿದ್ದರೆ ಬೇರೆ ಆಸ್ಪತ್ರೆಗೆ ಆಂಬುಲೆನ್ಸಿನಲ್ಲಿ ಸಾಗಿಸುತ್ತೇವೆ.
ಅಧಿಕಾರ ನಮ್ಮ ನಡುವಣ ಅಂತರವನ್ನು ಉಳಿಸುತ್ತದೆ. ಬಣ್ಣ, ಇಂಗ್ಲಿಷ್ ಭಾಶೆ, ಲಿಂಗ, ವಯಸ್ಸು ಇವೆಲ್ಲ ಯಾರು ಹೆಚ್ಚು ಶಕ್ತಿಶಾಲಿ, ಯಾರಿಗೆ ಏನು ಬೇಕು ಎಂಬುದನ್ನು ನಿರ್ಧರಿಸುತ್ತದೆ.
ಮಗುವಿನ ಆರೋಗ್ಯ ರೋಗಿಗೂ, ಡಾಕ್ಟರಿಗೂ ಮುಖ್ಯವಾಗುವುದೇ ಇಲ್ಲ.
Sunday, September 20, 2009
ಹಿಂಸೆಯೆಂಬ ಕಂಡಿಶನ್ಡ್ ರಿಫ್ಲೆಕ್ಸೂ, ತೆನಾಲಿರಾಮನ ಬೆಕ್ಕೂ
ಈ ಜಗತ್ತಿನಲ್ಲಿ ಕೆಟ್ಟದು ಅನ್ನುವುದಿಲ್ಲದಿದ್ದರೆ ಒಳ್ಳೆಯದಕ್ಕೆ ಬೆಲೆ ಬರುತ್ತಿತ್ತಾ? ಒಳ್ಳೆಯದು, ಕೆಟ್ಟದ್ದು ಅನ್ನುವ ಬೈನರಿ ನಿಯಮ ಈ ಪ್ರಪಂಚದಲ್ಲಿ ಇರಲೇಬೇಕು. ಆಗಲೇ ಒಳ್ಳೆಯದು ಒಳ್ಳೆಯದಾಗುವುದು. ಒಂದು ಕ್ರಿಯೆ ‘ಕೆಟ್ಟದ್ದು’ ಅನ್ನುವುದು ಗೊತ್ತಿದ್ದರೂ ಕೆಲವರು ಅದನ್ನು ತಮ್ಮ ಪ್ರವೃತ್ತಿಯಾಗಿ ಆಯ್ದುಕೊಳ್ಳುತ್ತಾರಲ್ಲ. ಅದನ್ನು ನಾವು ಒಪ್ಪಿಕೊಳ್ಳುವುದು ಹೇಗೆ?
ಒಳ್ಳೆಯದು ಕೆಟ್ಟದ್ದು ಎನ್ನುವ ನೈತಿಕ ಧ್ರುವಗಳನ್ನು ನಮಗೆ ಹೊರೆಸಬೇಕಾಗಿರುವುದು ಯಾರು? ನಮ್ಮ ಸಮಾಜವೇ? ನಮ್ಮ ಒಳಗಿನ ಧ್ವನಿಯೇ? ಅಥವಾ ಇಂತದ್ದು ಮಾಡಿದರೆ ನಿನಗೆ ಶಿಕ್ಷೆಯಾಗುತ್ತದೆ ಆದ್ದರಿಂದ ಇದನ್ನು ನೀನುಮಾಡಬಾರದು ಎಂದು ಹೇಳುವ ಸರಕಾರವೇ? ಒಂದು ಕ್ರಿಯೆಯ ಹೊಣೆಗಾರಿಕೆಯಿಂದ, ಅದರ ಪರಿಣಾಮದಿಂದ ಮಾತ್ರ ಅದನ್ನು ಒಳ್ಳೆಯದು, ಕೆಟ್ಟದ್ದು ಎಂದು ಕಪ್ಪುಬಿಳಿಯಾಗಿ ವಿಂಗಡಿಸಬಹುದೇ?
ಸರಕಾರ ಅಥವಾ ಇಂಥ ಯಾವುದೇ ಒಂದು ನೈತಿಕ ಪೋಲಿಸ್ ಆಗಿ ಕಾಯುವ ಸಂಸ್ಥೆ ಒಬ್ಬ ಮನುಷ್ಯ ಮಾಡಿದ ಅಪರಾಧಕ್ಕೆ ಶಿಕ್ಷೆ ಕೊಡಬಹುದೇ ಹೊರತು, ಆತ ಈ ಅಪರಾಧವನ್ನು ಮಾಡದೆಯೇ ಇರುವಂತೆ ತಡೆಯುವುದು ಸಾಧ್ಯವೇ? ಹಾಗೆ ಮಾಡುವುದು ಸಾಧ್ಯವಾದ ಪಕ್ಷದಲ್ಲಿ ಅಂತ ಜಗತ್ತಿನಲ್ಲಿ ಅಪರಾಧವೇ ಇರುವುದಿಲ್ಲವೇ? ಬರೇ ‘ಒಳ್ಳೆ’ಯವರಿಂದಲೇ ತುಂಬಿಹೋಗಿರುತ್ತದೆಯೇ? ಅಥವಾ ಅಪರಾಧ, ಹಿಂಸೆ ಕೂಡ ಒಂದು ಆಯ್ಕೆಯೇ?
ಪಾವ್ಲೋವ್ನ ಪ್ರಯೋಗ ಎಲ್ಲರಿಗೂ ಗೊತ್ತೇ ಇದೆ. ಈತ ನಾಯಿಯ ಮಾಂಸತಿನ್ನುವ ಕ್ರಿಯೆಗೆ ಗಂಟಾನಾದವನ್ನು ಜೋಡಿಸಿ ಮಾಂಸವಿಲ್ಲದೇ ಇದ್ದಾಗೂ ಬರೇ ಗಂಟಾನಾದಕ್ಕೆ ನಾಯಿ ಜೊಲ್ಲು ಸುರಿಸುವುದನ್ನು ನಿದರ್ಶಿಸಿ ಕಂಡಿಶನ್ಡ್ ರಿಫ್ಲೆಕ್ಸ್ ಅನ್ನು ವಿವರಿಸಿದ. ನಮ್ಮ ತೆನಾಲಿ ರಾಮನ ದಂತಕತೆಗಳಲ್ಲಿ ಇದನ್ನೇ ಸ್ವಲ್ಪ ಮಾರ್ಪಡಿಸಿ ಬೆಕ್ಕಿಗೆ ಬಿಸಿಹಾಲು ಕುಡಿಸಿ ಬೆಕ್ಕು ಮುಖ ಸುಟ್ಟಿಕೊಂಡಾಗ ಆ ಬೆಕ್ಕು ಹಾಲನ್ನೂ ಕುಡಿಯದ ಹಾಗೆ “ಡಿಕಂಡಿಶನ್’ ಮಾಡಿದ್ದೂ ಈ ಪಾವ್ಲೊವಿನ ಪ್ರಯೋಗದಷ್ಟೇ ಕುತೂಹಲಕಾರಿ.
ಈ ಹಿಂಸೆ ಒಂದು ಮನಸ್ಸಿನ ಈ ರೀತಿಯ ಕಂಡೀಶನ್ಡ್ ರಿಫ್ಲೆಕ್ಸ್ ಆದರೆ ಈ ಹಿಂಸೆಯನ್ನು ತೆನಾಲಿ ರಾಮನ ಬೆಕ್ಕಿಗಾದಂತೆ ‘ಡಿಕಂಡಿಷನ್’ ಮಾಡಲು ಸಾಧ್ಯವೇ? ಅಂದರೆ, ಹಿಂಸೆ ಮಾಡುವವನಿಗೆ ಹಿಂಸಿಸುವ ಕ್ರಿಯೆ ಸಂತೋಷವನ್ನು ಕೊಡುವಂತಿದ್ದರೆ (ಪಾವ್ಲೊವ್ನ ಪ್ರಯೋಗದಲ್ಲಿ ಮಾಂಸಕ್ಕೆ ಮತ್ತು ಮಾಂಸ ತಿನ್ನುವ ಮುಂಚಿನ ಗಂಟಾನಾದಕ್ಕೆ ನಾಯಿ ಜೊಲ್ಲು ಸುರಿಸಿದಂತೆ) ಈ ಸಂತೋಷವನ್ನು ಆತನಿಂದ ಕಿತ್ತುಕೊಂಡರೆ, ಆಗ ಆತ ಈ ಹಿಂಸೆಯನ್ನು ಪೂರ್ಣ ಬಿಟ್ಟುಬಿಡುತ್ತಾನೆಯೇ? ( ನಾಯಿ ಮಾಂಸ ತಿನ್ನುವುದನ್ನು ಬಿಟ್ಟಂತೆ ಅಲ್ಲ, ತೆನಾಲಿ ರಾಮನ ಬೆಕ್ಕುಹಾಲು ಕುಡಿಯುವುದನ್ನು ಬಿಟ್ಟಂತೆ)
* * *
ಆತನ ಹೆಸರು ಅಲೆಕ್ಸ್.
ಆತನಿಗೆ ಹಿಂಸೆಯೆಂಬುದು ಒಂದು ಆಟ, ಚಟ, ಕಲೆ. ಆತ ಹಾಲಿನಲ್ಲಿ ಹ್ಯಾಲಿಸಿನೋಜನ್ನುಗಳನ್ನು ಸೇರಿಸಿಕೊಂಡು ಕುಡಿಯುತ್ತಾನೆ, (ಇಲ್ಲಿನ ವಿಪರ್ಯಾಸವನ್ನು ಗಮನಿಸಿ. ಹಾಲು ಮುಗ್ಧತೆಯನ್ನು ಸಂಕೇತಿಸಿದರೆ, ಅದಕ್ಕೆ ಬೆರಸುವ ಮಾದಕವಸ್ತುಗಳ ಮಿಶ್ರಣ ಕಲುಶಿತ ಮುಗ್ಧತೆಯಾ?) ಲೈಬ್ರರಿಯಿಂದ ತಂಪಾಡಿಗೆ ತಾನು ಬರುತ್ತಿದ್ದ ಒಬ್ಬ ಮುದುಕನನ್ನು ಸ್ನೇಹಿತರ ಜತೆ ಸೇರಿ ಸಾಯಬಡಿಯುತ್ತಾನೆ. ಅಪ್ರಾಪ್ತ ವಯಸ್ಸಿನ ಹುಡುಗಿಯರ ಜತೆ ಸುಖಿಸುತ್ತಾನೆ, ಅಂಗಡಿಗೆ ಹೋಗಿ ಕದಿಯುತ್ತಾನೆ, ಮುದಿದಂಪತಿಗಳೆಂದು ಲವಲೇಶ ಕರುಣೆಯಿಲ್ಲದೆ ಸಾಯಬಡಿಯುತ್ತಾನೆ.
ಇವನಿಗೆ ತನ್ನ ಈ ಹಿಂಸೆಯ ಬಗ್ಗೆ ಸ್ವಲ್ಪವೂ ಪಾಪಪ್ರಜ್ಞೆಯಿಲ್ಲ. ಹಿಂಸಿಸುವುದನ್ನು ತನ್ನ ಧರ್ಮದಂತೆ ಆತ ನಡೆಸಿಕೊಂಡು ಬರುತ್ತಾನೆ. ಇದರಿಂದ ಯಾರು ಸತ್ತರೂ ಅವರನ್ನು ಈತನೇ ಸಾಯುವಂತೆ ಹೊಡೆದರೂ ಆತನಿಗೆ ಏನೂ ಅನ್ನಿಸುವುದೇ ಇಲ್ಲ. ಬದಲಿಗೆ ಒಂದು ವಿಲಕ್ಷಣ ಖುಷಿಯಾಗುತ್ತಿರುತ್ತದೆ.
ಇದಕ್ಕೆ ಕುಮ್ಮಕ್ಕು ಕೊಡುವುದಕ್ಕೆ ಅವನದೇ ಒಂದು ಗ್ಯಾಂಗಿದೆ. ವಿಚಿತ್ರವಾದ ಸ್ಲ್ಯಾಂಗುಗಳಲ್ಲಿ ಮಾತಾಡಿಕೊಂಡು, ಚಿತ್ರವಿಚಿತ್ರವಾದ ಬಟ್ಟೆಗಳನ್ನು ಹಾಕಿಕೊಂಡು, ತಮ್ಮ ಮನಸ್ಸಿಗೆ ನೇರವಾಗಿ ಅನಿಸುವುದನ್ನು ಮಾತ್ರ ಮಾಡುತ್ತಾ ರಾಕ್ಷಸರಂತೆ ತಾವು ಬದುಕುತ್ತಿದ್ದಾರೆ.
ವಿರೋಧಬಾಸವೋ, ಹುಚ್ಚೋ, ಅಥವಾ ಕಥಾನುಕೂಲವೋ ಗೊತ್ತಿಲ್ಲ, ಇಂಥವನಿಗೆ ಶಾಸ್ತ್ರೀಯ ಸಂಗೀತ ಅದರಲ್ಲಿಯೂ ಬೀಥೋವೆನ್ನಿನ ‘ಸೆವೆಂಥ್ ಹೆವೆನ್’ ಎಂದರೆ ಪ್ರಾಣ. ಯಾವಾಗಲೂ ಬೀಥೋವೆನ್ನಿನ ಸಂಗೀತವನ್ನು ಕೇಳುತ್ತಿರುತ್ತಾನೆ,
ಇಂಥ ಅಲೆಕ್ಸ್ ಒಮ್ಮೆ ಯಾವುದೋ ಒಂದು ಅಪರಾಧದಲ್ಲಿ ಸಿಕ್ಕಿಬೀಳುತ್ತಾನೆ, ಅವನನ್ನು ಬಂಧಿಸಿ ಅವನಿಗೆ ಹದಿನಾಲ್ಕು ವರ್ಷ ಶಿಕ್ಷೆ ಕೊಡಲಾಗುತ್ತದೆ. ಜೈಲಿನಲ್ಲಿ ಈ ರೀತಿಯ ಅಪರಾಧಿಗಳನ್ನು ಸುಧಾರಿಸಲೆಂದು ಒಂದು ‘ಲುಡೊವಿಕೊ ವಿಧಾನ’ ವೆಂಬ ಹೊಸದೊಂದು ಹಿಂಸೆಯಿಂದ ಡಿಕಂಡಿಷನ್ ಮಾಡುವ ವಿಧಾನವನ್ನು ಕಂಡುಹಿಡಿಯುವ ಪ್ರಯೋಗಕ್ಕೆ ಈತನನ್ನು ಗಿನಿಪಿಗ್ ಆಗಿ ಮಾಡಲಾಗುತ್ತದೆ. ಇವನಿಗೆ ಬಲವಂತವಾಗಿ ಹಿಂಸಾ ದೃಶ್ಯಗಳು ತುಂಬಿರುವ ಸಿನೆಮಾಗಳನ್ನು. ಚಿತ್ರಗಳನ್ನು ತೋರಿಸಲಾಗುತ್ತದೆ. ಆದರೆ, ನಮ್ಮ ತೆನಾಲಿರಾಮ ತನ್ನ ಬೆಕ್ಕಿಗೆ ಮಾಡಿದಂತೆ ಈತನಿಗೆ ಆ ಸಮಯಕ್ಕೆ ಸರಿಯಾಗಿ ಕಸಿವಿಸಿಯಾಗುವಂತೆ, ಹೊಟ್ಟೆಯಲ್ಲಿ ತೀವ್ರವಾಗಿ ಸಂಕಟವಾಗುವಂತೆ, ತೀವ್ರವಾಗಿ ತಲೆನೋಯುವಂತೆ-ಒಟ್ಟು ಆತ ತೆರೆಯ ಮೇಲೆ ನೋಡುತ್ತಿರುವ ಹಿಂಸೆಯನ್ನು ತಾನೇ ಅನುಭವಿಸುವ ಒಂದು ವಿಕೋಪವನ್ನು ಸೃಷ್ಟಿಸುವ ಔಷಧಗಳನ್ನು ಕೊದಲಾಗುತ್ತದೆ.
ಅಲೆಕ್ಸ್ ತನ್ನ ಈ ಸುಸ್ತು, ಸಂಕಟ, ನೋವುಗಳನ್ನು ತಾನು ನೋಡುತ್ತಿರುವ ಹಿಂಸೆಯ ಜತೆ ಸಮೀಕರಿಸಿಕೊಳ್ಳುತ್ತಾನೆ. ಹಾಗಾಗಿ, ಯಾವುದೇ ಹಿಂಸಾತ್ಮಕ ಕ್ರಿಯೆಯನ್ನು ಮಾಡುವುದಿರಲಿ, ನೋಡುವುದಿರಲಿ, ಯೋಚಿಸುವುದು ಕೂಡ ಆತನಿಗೆ ಅಸಾಧ್ಯವಾಗುತ್ತದೆ. ಹೀಗೆ ಯೋಚಿಸಿದ ತಕ್ಷಣ ಆತನಿಗೆ ತೀವ್ರವಾದ ಸಂಕಟವಾಗುತ್ತದೆ, ತಲೆನೋಯುತ್ತದೆ. ಸಿಕ್ಕಾಪಟ್ಟೆ ಒದ್ದಾಡಲಿಕ್ಕೆ ತೊಡಗುತ್ತಾನೆ.
ಆದರೆ, ಇಂಥಾ ಪರಿಣಾಮ ಪ್ರಯೋಗಕ್ಕೊಂದು ಸಣ್ಣ ಸೈಡ್ ಎಫೆಕ್ಟ್ ಇದೆ, ಹಿಂಸೆಯಷ್ಟೇ ಸುಖಿಸುವ, ಖುಷಿಪಡುವ ಬೀಥೊವೆನ್ನಿನ ಸೆವೆಂಥ್ ಹೆವನ್ ಅನ್ನೂ ಈತ ಅನುಭವಿಸುವುದಕ್ಕಗುವುದಿಲ್ಲ. ಯಾವಾಗ ಈತ ಬೀಥೊವೆನ್ ಕೇಳುತ್ತಾನೋ ಆಗಲೂ ಈತನಿಗೆ ಸುಸ್ತು, ಸಂಕಟ, ತಲೆನೋವುಗಳಾಗಿ ತೀವ್ರ ಹಿಂಸೆಯಾಗುತ್ತದೆ. ಆದರೆ, ಸರಕಾರ ಮತ್ತು ಈ ಪ್ರಯೋಗವನ್ನು ಸಜ್ಜುಗೊಳಿಸಿರುವವರು ಇಂಥ ಸಣ್ಣ ಸೈಡ್ ಎಫೆಕ್ಟಿನ ಹೊರತಾಗಿ ತಮ್ಮ ಪ್ರಯೋಗದ ಯಶಸ್ಸೆಂದೇ ನಿರ್ಧರಿಸಿ ಅಲೆಕ್ಸ್ ನನ್ನು ಜೈಲಿನಿಂದ ಬಿಡುಗಡೆ ಮಾಡುತ್ತಾರೆ.
ಹೊರಗೆ ಬಂದ ಈತನಿಗೆ ಗೊತ್ತಾಗುತ್ತದೆ, ತನಗೆ ಈ ಹಿಂಸೆಯೆನ್ನುವ ಪದ ಎಶ್ಟು ಅಸಹ್ಯವನ್ನು ಹುಟ್ಟಿಸುತ್ತದೆಂದರೆ ತನ್ನ ಆತ್ಮರಕ್ಷಣೆಗೂ ಆತ ಯಾರನ್ನೂ ಹಿಂಸಿಸುವ ಹಾಗಿಲ್ಲ. ಹಾಗೆ ಮಾಡಹೊರಟರೆ ಆತನಿಗೆ ವಿಪರೀತಚಾಗಿ ಸುಸ್ತು, ಸಂಕಟಗಳಾಗಿ ಒದ್ದಾಡುತ್ತಾನೆ. ಇದನ್ನರಿತ ಆತನ ಎದುರಾಳಿಗಳು ಅವನನ್ನು ಸಾಯಬಡಿಯುತ್ತಾರೆ.
ಅಷ್ಟೇ ಅಲ್ಲ, ಈತನ ಒಂದೇ ಸುಖವಾದ ಬೀಥೊವೆನ್ನನ್ನೂ ಈತ ಕೇಳಲಾಗದೇ ಹೋಗುತ್ತಾನೆ.
* * *
ಕಥೆ ಹೀಗೇ ಮುಂದುವರೆಯುತ್ತದೆ.
೧೯೬೨ರಲ್ಲಿ ಆಂಥೊನಿ ಬರ್ಗಸ್ ಬರೆದು ೧೯೭೧ರಲ್ಲಿ ಸ್ಟಾನ್ಲಿ ಕುಬ್ರಿಕ್ ನಿರ್ದೇಶಿಸಿದ ‘ಎ ಕ್ಲಾಕ್ವರ್ಕ್ ಆರೆಂಜ್’ ಎನ್ನುವ ಕಾದಂಬರಿ/ಸಿನೆಮಾದ ಸೊಗಡಿದು.
ಕತೆಯಲ್ಲಿ ಲೇಖಕ ಮೂಲಭೂತ ಇನ್ಸ್ಟಿಂಕ್ಟ್ಗಳಾದ ಒಳ್ಳೆಯದು, ಕೆಟ್ಟದರ ವಿಮರ್ಶೆಯನ್ನು, ವ್ಯಾಖ್ಯೆಯನ್ನು ಬೇರೆ ಬೇರೆ ಸ್ತರಗಳಲಿ ಮಾಡಲು ಪ್ರಯತ್ನಿಸುತ್ತಾನೆ. ಮೊದಲನೆಯದಾಗಿ ಒಳ್ಳೆಯದು ಎಂದರೆ ಏನು? ಸಾಮಾಜಿಕ ಮತ್ತು ನೈತಿಕ ನೆಲೆಗಳಲ್ಲಿ ಹಿಂಸೆ, ಬಲಾತ್ಕಾರ, ಕೊಲೆ ಇಂಥ ಕ್ರಿಯೆಗಳನ್ನು ಮಾಡಬಾರದು ಎಂದು ಹೇಳಿದೆ. ಆದರೆ, ಇಲ್ಲಿ ಆಯ್ಕೆಯ ಸ್ವಾತಂತ್ರ್ಯ ಎಷ್ಟು ಮುಖ್ಯ? ಅಂದರೆ, ಒಬ್ಬ ಮನುಷ್ಯ ತನಗೆ ತಾನು ಮಾಡುತ್ತಿರುವುದು ತಪ್ಪು ಎಂದು ಗೊತ್ತಿದ್ದು, ಅದರ ಪರಿಣಾಮವನ್ನು ಅರಿತಿದ್ದೂ ಆ ತಪ್ಪುಮಾಡಿದಲ್ಲಿ ಅದಕ್ಕೆ ಶಿಕ್ಷೆ ಕೊಡುವುದನ್ನು ಬಿಟ್ಟು ನಾವು ಇನ್ನೇನು ಮಾಡಬಹುದು?
ಹೀಗೆ ಡಿಕಂಡಿಶನಿಂಗ್ ಮೂಲಕವೋ ಅಥವಾ ಇನ್ನು ಹೇಗೋ ಕೆಟ್ಟದೆಂಬುವುದನ್ನು ಮಾಡುವುದನ್ನು ಪೂರಾ ತಡೆದುಬಿಟ್ಟರೆ, ಆಗ ಒಳ್ಳೆಯದಕ್ಕೆ ಅರ್ಥವೇ ಇರುವುದಿಲ್ಲ ಇಷ್ಟಕ್ಕೂ ಒಳ್ಳೆಯದು ಎಂದರೆ ಏನು? ಬೇರೆ ಪ್ಯಾರಾಮೀಟರ್ಗಳಿಂದ ಈಗ ನಾವು ಒಳ್ಳೆಯದು ಅಂದುಕೊಂಡಿರುವುದು ಮುಂದೆ ಕೆಟ್ಟದಾಗಬಹುದು. ಕೊಲೆಗೆ ಗಲ್ಲು ಶಿಕ್ಷೆಯಾಗುವುದೆನ್ನುವ ಭಯದಿಂದ ಕೊಲೆಗಾರರು ಕಮ್ಮಿಯಾಗುವುದಿಲ್ಲ. ಆದರೆ, ಕೊಲೆ ಮಾಡಲು ಹೋದಾಗಲೆಲ್ಲ ಕೈಎತ್ತಲಾರದೇ ಕೊಲೆಯೇ ಆಗದಿದ್ದರೆ ಆತ ಬೇರೆ ಅಪರಾಧವನ್ನು ಮಾಡಬಹುದು. ಅಥವಾ ಬೇರೆ ಕ್ಷುಲ್ಲಕ ಕ್ರಿಯೆಗಳು ಅಪರಾಧವೆನ್ನುವ ಲಗತ್ತು ಹಚ್ಚಿಸಿಕೊಡು ಈ ಅಪರಾಧಗಳಿಗೆ ಮಿತಿಮೀರಿದ ಶಿಕ್ಷೆಗಳಾಗಬಹುದು. ಸಿಗರೇಟು ಸೇದುವುದು ಅಪರಾಧವಾಗಬಹುದು, ಬಾರಿನಲ್ಲಿ ಹೋಗಿ ಕುಡಿದರೆ ಜೈಲಿಗೆ ಹಾಕಬಹುದು. ಎಲ್ಲಿಯತನಕ ನಾವು ಮನುಷ್ಯರನ್ನು ಡಿಕಂಡಿಶನ್ ಮಾಡಲು ಸಾಧ್ಯ.
ಇದನ್ನೇ ಬರ್ಗಸ್ ವಾದಿಸುತ್ತಾನೆ. ಈ ಪ್ರಪಂಚವಿರುವ ತನಕ ಒಳ್ಳೆಯದು, ಕೆಟ್ಟದು (ಯಾರು ಡಿಫೈನ್ ಮಾಡುತ್ತಾರೆ ಎಂಬುದು ಇನ್ನೂ ವಿವಾದಿತವೇ ಆದರೂ) ಇದ್ದೇ ಇರುತ್ತದೆ. ಸಮಾಜದ ಜವಾಬ್ದಾರಿ ಇಂಥದ್ದು ಒಳ್ಲೆಯದು, ಇಂಥದ್ದು ಕೆಟ್ಟದ್ದು ಎಂದು ಹೇಳುವುದು ಅಷ್ಟೇ. ಅದು ಬಿಟ್ಟು ಒಬ್ಬ ಮನುಷ್ಯನನ್ನು ಬರೇ ಒಳ್ಳೆಯದು ಮಾಡುವ ಹಾಗೆ ಮಾಡುತ್ತೇನೆ ಎಂದು ರೂಪಿಸಲಾಗದು. ಆಯ್ಕೆಯ ಸ್ವಾತಂತ್ರ್ಯವನ್ನು ನಾವು ಯಾರಾಗಲೀ ತಡೆಯಲಿಕ್ಕಾಗುವುದಿಲ್ಲ, ತಡೆಯಕೂಡದು- ಆ ಆಯ್ಕೆ ಕೆಟ್ಟದೆಂದು ನಮಗೆ ಗೊತ್ತಿದ್ದರೂ. ಹೀಗೆ ಮಾಡಿದರೆ ಏನಾಗಬಹುದು ಎನ್ನುವ ಪರಿಣಾಮವನ್ನು ನಾವು ಉತ್ಪ್ರೇಕ್ಷಿತವಾಗಿಯೂ ಪರವಾಗಿಲ್ಲ ಹೇಳಬಹುದಷ್ಟೇ.
ಕತೆಯ ಕೊನೆಯಲ್ಲಿ ಅಲೆಕ್ಸ್ ಆತ್ಮಹತ್ಯೆ ಮಾಡಿಕೊಳ್ಳಲೂ ಆಗುವುದಿಲ್ಲ. ಏಕೆಂದರೆ, ಆತ್ಮಹತ್ಯೆಯೂ ಒಂದು ರೀತಿಯ ಹಿಂಸೆಯೇ?
* * *
ನಾನು ರೆಸಿಡೆನ್ಸಿ ಮಾಡುತ್ತಿರುವಾಗ ಒಂದು ಪ್ರಯೋಗವನ್ನು ಮಾಡಿದ್ದೆವು. ಇಂಟೆನ್ಸಿವ್ ಕೇರ್ ಯುನಿಟ್ಟಿನಲ್ಲಿ ಬಂದು ಭರ್ತಿಯಾಗುವ ಕುಡುಕರಿಗೆ ಕೊಡುವ ಚಿಕಿತ್ಸೆಯ ಎಲ್ಲ ವಿವರಗಳನ್ನೂ ವಿಡಿಯೋ ಚಿತ್ರೀಕರಣ ಮಾಡಲಾಗುತಿತ್ತು. ಇವರು ಮಾಮೂಲೀ ಕುಡುಕರಲ್ಲ. ಜೀವಮಾನವಿಡೀ ಕುಡಿದು ಕುಡಿತದ ಕಾರಣದಿಂದ ತಮ್ಮ ಲಿವರ್ ಅನ್ನು, ಹಾಳುಮಾಡಿಕೊಂಡು ಮೈತುಂಬಾ ಹಳದಿಹಳದಿಯಾಗಿ ಬಂದಿರುತ್ತಿದ್ದರು. ಹೆಚ್ಚಿನವರಿಗೆ ಮೈಮೇಲೆ ಜ್ಞಾನವಿರುತ್ತಿರಲಿಲ್ಲ, ಮೈಯಲ್ಲಿನ ಆಲ್ಕೋಹಾಲಿನ ಪ್ರಮಾಣ ಕಮ್ಮಿಯಾದಂತೆ ಎಷ್ಟೋ ಜನಕ್ಕೆ ಕೈ, ಮೈ ನಡುಕ ಬರುತ್ತಿತ್ತು, ಅದುರುತ್ತಿದ್ದರು, ರಕ್ತ ಕಾರುತ್ತಿದ್ದರು, ಉಬ್ಬಿಕೊಂಡ ಕೈನಲ್ಲಿ ರಕ್ತನಾಳಗಳು ಸಿಗದೆ, ಒಂದು ಐವಿ ಹಾಕಲು ನರ್ಸುಗಳು ಇಪ್ಪತ್ತು ಕಡೆ ಚುಚ್ಚಿರುತ್ತಿದ್ದರು, ಫೋಲಿ ಕೆಥೆಟರ್, ಉಸಿರಾಡಲು, ಹೊಟ್ಟೆಯನ್ನು ಕ್ಲೀನ್ ಮಾಡಲು ಹೀಗೆ ಎಲ್ಲ ಕಡೆ ಟ್ಯೂಬುಗಳು. ಅವರ ಹೆಂಡತಿ ಮಕ್ಕಳ ಆಕ್ರಂದನ, ಡಾಕ್ಟರುಗಳ ಬೆಡ್ಸೈಡ್ ಚರ್ಚೆ- ಎಲ್ಲವೂ ಚಿತ್ರೀಕೃತವಾಗುತ್ತಿತ್ತು.
ನಂತರ ಇವರಿಗೆ ಎಚ್ಚರ ಬಂದಮೇಲೆ ಅವರ ರೀಹ್ಯಾಬಿಲಿಟೇಶನ್ನಿಗೋಸ್ಕರ ಈ ವಿಡಿಯೋವನ್ನು ಅವರಿಗೆ ತೋರಿಸಲಾಗುತ್ತಿತ್ತು. ಮೂರು ದಿನ, ನಾಲ್ಕು ದಿನಗಳ ಟೇಪನ್ನು ಆಸ್ಪತ್ರೆಯ ಆಡಿಯೋ ವಿಶುಯಲ್ ವಿಭಾಗದವರು ಸರಿಯಾಗಿ ಸಂಕಲಿಸಿದ ಮೇಲೆ ಅವರಿಗೆ ಕೊಡಲಾಗುತ್ತಿತ್ತು. ಆಲ್ಕೋಹಾಲಿಕ್ ಅವರ್ಶನ್ ಥೆರಪಿ ಎಂಬುದರ ಹೆಸರಿನಲ್ಲಿ ಇದನ್ನು ತೋರಿಸಲೆಂದು ಪ್ಲಾನ್ ಮಾದಲಾಗಿತ್ತು. ಇದರ ಉದ್ದೇಶ ಸ್ಪಷ್ಟ- ತಾನು ಕುಡಿಯುವುದರಿಂದ ಎಂಥ ಪರಿಸ್ಥಿತಿಯಲ್ಲಿ ತನ್ನನ್ನು ತಾನು ಕೆಡವಿಕೊಂಡೆ ಎನ್ನುವುದನ್ನು ಅವರುಗಳಿಗೆ ಚಿತ್ರಕವಾಗಿ ತೋರಿಸಿದಲ್ಲಿ ಕುಡಿತವನ್ನು ಸಂಪೂರ್ಣವಾಗಿ ಬಿಡಬಹುದೇನೋ ಎಂಬ ಸದಾಶಯ.
ಆದರೆ, ಒಂದೆರಡು ಬಾರಿಯ ಪ್ರಯೋಗದ ನಂತರ ಆಸ್ಪತ್ರೆಯ ರಿವ್ಯೂ ಬೋರ್ಡು ಈ ಪ್ರಯೋಗವನ್ನು ಮಾಡಬಾರದೆಂದು ತಡೆಯಿತು. ಕಾರಣ, ಇದು ತುಂಬಾ ಗ್ರಾಫಿಕ್. ಒಬ್ಬ ಮನುಷ್ಯ ಕಾಯಿಲೆಯಾಗಿ, ಮೈಮೇಲೆ ಜ್ಞಾನವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದಾಗ ಅದನ್ನು ವಿಡಿಯೋ ಚಿತ್ರೀಕರಿಸುವುದು ತಪ್ಪು. ಇಶ್ಟಕ್ಕೂ ಕುಡಿತದ ಕೆಡುಕುಗಳ ಬಗ್ಗೆ ಆತನಿಗೆ ಗೊತ್ತಿಲ್ಲದಿರುವುದು ಏನೂ ಇಲ್ಲವಲ್ಲ. ಕುಡಿತ ಆತನ ಆಯ್ಕೆ. ಅದಕ್ಕೆ ಅದರ ಪರಿಣಾಮಕ್ಕೆ ಚಿಕಿತ್ಸೆ ಕೊಡುವುದನ್ನು ಬಿಟ್ಟರೆ ಡಾಕ್ಟರಾದ ನಾವುಗಳು ಇನ್ನೇನೂ ಮಾಡಲಾರೆವು.
ಪೋಲೀಸರು ಕೂಡ ಅಷ್ಟೇ. ಕುಡಿದು ವಾಹನ ನಡೆಸಬೇಡಿ ಎಂದು ಹೇಳಬಹುದಷ್ಟೇ. ಹಾಗೆ ಮಾಡುವವರಿಗೆ ಶಿಕ್ಷಿಸಬಹುದೂ ಕೂಡ. ಆದರೆ, ಆಲ್ಕೋಹಾಲಿನ ಬಗ್ಗೆಯೇ ಈತನಿಗೆ ಅಸಹ್ಯಬರುವ ಹಾಗೆ ಮಾಡಿದರೆ.
ಅದು ಆಯ್ಕೆಯ ಸ್ವಾತಂತ್ರ್ಯವನ್ನೇ ಕಿತ್ತುಕೊಂಡ ಹಾಗೆ.
ಒಳ್ಳೆಯದು ಕೆಟ್ಟದ್ದು ಎನ್ನುವ ನೈತಿಕ ಧ್ರುವಗಳನ್ನು ನಮಗೆ ಹೊರೆಸಬೇಕಾಗಿರುವುದು ಯಾರು? ನಮ್ಮ ಸಮಾಜವೇ? ನಮ್ಮ ಒಳಗಿನ ಧ್ವನಿಯೇ? ಅಥವಾ ಇಂತದ್ದು ಮಾಡಿದರೆ ನಿನಗೆ ಶಿಕ್ಷೆಯಾಗುತ್ತದೆ ಆದ್ದರಿಂದ ಇದನ್ನು ನೀನುಮಾಡಬಾರದು ಎಂದು ಹೇಳುವ ಸರಕಾರವೇ? ಒಂದು ಕ್ರಿಯೆಯ ಹೊಣೆಗಾರಿಕೆಯಿಂದ, ಅದರ ಪರಿಣಾಮದಿಂದ ಮಾತ್ರ ಅದನ್ನು ಒಳ್ಳೆಯದು, ಕೆಟ್ಟದ್ದು ಎಂದು ಕಪ್ಪುಬಿಳಿಯಾಗಿ ವಿಂಗಡಿಸಬಹುದೇ?
ಸರಕಾರ ಅಥವಾ ಇಂಥ ಯಾವುದೇ ಒಂದು ನೈತಿಕ ಪೋಲಿಸ್ ಆಗಿ ಕಾಯುವ ಸಂಸ್ಥೆ ಒಬ್ಬ ಮನುಷ್ಯ ಮಾಡಿದ ಅಪರಾಧಕ್ಕೆ ಶಿಕ್ಷೆ ಕೊಡಬಹುದೇ ಹೊರತು, ಆತ ಈ ಅಪರಾಧವನ್ನು ಮಾಡದೆಯೇ ಇರುವಂತೆ ತಡೆಯುವುದು ಸಾಧ್ಯವೇ? ಹಾಗೆ ಮಾಡುವುದು ಸಾಧ್ಯವಾದ ಪಕ್ಷದಲ್ಲಿ ಅಂತ ಜಗತ್ತಿನಲ್ಲಿ ಅಪರಾಧವೇ ಇರುವುದಿಲ್ಲವೇ? ಬರೇ ‘ಒಳ್ಳೆ’ಯವರಿಂದಲೇ ತುಂಬಿಹೋಗಿರುತ್ತದೆಯೇ? ಅಥವಾ ಅಪರಾಧ, ಹಿಂಸೆ ಕೂಡ ಒಂದು ಆಯ್ಕೆಯೇ?
ಪಾವ್ಲೋವ್ನ ಪ್ರಯೋಗ ಎಲ್ಲರಿಗೂ ಗೊತ್ತೇ ಇದೆ. ಈತ ನಾಯಿಯ ಮಾಂಸತಿನ್ನುವ ಕ್ರಿಯೆಗೆ ಗಂಟಾನಾದವನ್ನು ಜೋಡಿಸಿ ಮಾಂಸವಿಲ್ಲದೇ ಇದ್ದಾಗೂ ಬರೇ ಗಂಟಾನಾದಕ್ಕೆ ನಾಯಿ ಜೊಲ್ಲು ಸುರಿಸುವುದನ್ನು ನಿದರ್ಶಿಸಿ ಕಂಡಿಶನ್ಡ್ ರಿಫ್ಲೆಕ್ಸ್ ಅನ್ನು ವಿವರಿಸಿದ. ನಮ್ಮ ತೆನಾಲಿ ರಾಮನ ದಂತಕತೆಗಳಲ್ಲಿ ಇದನ್ನೇ ಸ್ವಲ್ಪ ಮಾರ್ಪಡಿಸಿ ಬೆಕ್ಕಿಗೆ ಬಿಸಿಹಾಲು ಕುಡಿಸಿ ಬೆಕ್ಕು ಮುಖ ಸುಟ್ಟಿಕೊಂಡಾಗ ಆ ಬೆಕ್ಕು ಹಾಲನ್ನೂ ಕುಡಿಯದ ಹಾಗೆ “ಡಿಕಂಡಿಶನ್’ ಮಾಡಿದ್ದೂ ಈ ಪಾವ್ಲೊವಿನ ಪ್ರಯೋಗದಷ್ಟೇ ಕುತೂಹಲಕಾರಿ.
ಈ ಹಿಂಸೆ ಒಂದು ಮನಸ್ಸಿನ ಈ ರೀತಿಯ ಕಂಡೀಶನ್ಡ್ ರಿಫ್ಲೆಕ್ಸ್ ಆದರೆ ಈ ಹಿಂಸೆಯನ್ನು ತೆನಾಲಿ ರಾಮನ ಬೆಕ್ಕಿಗಾದಂತೆ ‘ಡಿಕಂಡಿಷನ್’ ಮಾಡಲು ಸಾಧ್ಯವೇ? ಅಂದರೆ, ಹಿಂಸೆ ಮಾಡುವವನಿಗೆ ಹಿಂಸಿಸುವ ಕ್ರಿಯೆ ಸಂತೋಷವನ್ನು ಕೊಡುವಂತಿದ್ದರೆ (ಪಾವ್ಲೊವ್ನ ಪ್ರಯೋಗದಲ್ಲಿ ಮಾಂಸಕ್ಕೆ ಮತ್ತು ಮಾಂಸ ತಿನ್ನುವ ಮುಂಚಿನ ಗಂಟಾನಾದಕ್ಕೆ ನಾಯಿ ಜೊಲ್ಲು ಸುರಿಸಿದಂತೆ) ಈ ಸಂತೋಷವನ್ನು ಆತನಿಂದ ಕಿತ್ತುಕೊಂಡರೆ, ಆಗ ಆತ ಈ ಹಿಂಸೆಯನ್ನು ಪೂರ್ಣ ಬಿಟ್ಟುಬಿಡುತ್ತಾನೆಯೇ? ( ನಾಯಿ ಮಾಂಸ ತಿನ್ನುವುದನ್ನು ಬಿಟ್ಟಂತೆ ಅಲ್ಲ, ತೆನಾಲಿ ರಾಮನ ಬೆಕ್ಕುಹಾಲು ಕುಡಿಯುವುದನ್ನು ಬಿಟ್ಟಂತೆ)
* * *
ಆತನ ಹೆಸರು ಅಲೆಕ್ಸ್.
ಆತನಿಗೆ ಹಿಂಸೆಯೆಂಬುದು ಒಂದು ಆಟ, ಚಟ, ಕಲೆ. ಆತ ಹಾಲಿನಲ್ಲಿ ಹ್ಯಾಲಿಸಿನೋಜನ್ನುಗಳನ್ನು ಸೇರಿಸಿಕೊಂಡು ಕುಡಿಯುತ್ತಾನೆ, (ಇಲ್ಲಿನ ವಿಪರ್ಯಾಸವನ್ನು ಗಮನಿಸಿ. ಹಾಲು ಮುಗ್ಧತೆಯನ್ನು ಸಂಕೇತಿಸಿದರೆ, ಅದಕ್ಕೆ ಬೆರಸುವ ಮಾದಕವಸ್ತುಗಳ ಮಿಶ್ರಣ ಕಲುಶಿತ ಮುಗ್ಧತೆಯಾ?) ಲೈಬ್ರರಿಯಿಂದ ತಂಪಾಡಿಗೆ ತಾನು ಬರುತ್ತಿದ್ದ ಒಬ್ಬ ಮುದುಕನನ್ನು ಸ್ನೇಹಿತರ ಜತೆ ಸೇರಿ ಸಾಯಬಡಿಯುತ್ತಾನೆ. ಅಪ್ರಾಪ್ತ ವಯಸ್ಸಿನ ಹುಡುಗಿಯರ ಜತೆ ಸುಖಿಸುತ್ತಾನೆ, ಅಂಗಡಿಗೆ ಹೋಗಿ ಕದಿಯುತ್ತಾನೆ, ಮುದಿದಂಪತಿಗಳೆಂದು ಲವಲೇಶ ಕರುಣೆಯಿಲ್ಲದೆ ಸಾಯಬಡಿಯುತ್ತಾನೆ.
ಇವನಿಗೆ ತನ್ನ ಈ ಹಿಂಸೆಯ ಬಗ್ಗೆ ಸ್ವಲ್ಪವೂ ಪಾಪಪ್ರಜ್ಞೆಯಿಲ್ಲ. ಹಿಂಸಿಸುವುದನ್ನು ತನ್ನ ಧರ್ಮದಂತೆ ಆತ ನಡೆಸಿಕೊಂಡು ಬರುತ್ತಾನೆ. ಇದರಿಂದ ಯಾರು ಸತ್ತರೂ ಅವರನ್ನು ಈತನೇ ಸಾಯುವಂತೆ ಹೊಡೆದರೂ ಆತನಿಗೆ ಏನೂ ಅನ್ನಿಸುವುದೇ ಇಲ್ಲ. ಬದಲಿಗೆ ಒಂದು ವಿಲಕ್ಷಣ ಖುಷಿಯಾಗುತ್ತಿರುತ್ತದೆ.
ಇದಕ್ಕೆ ಕುಮ್ಮಕ್ಕು ಕೊಡುವುದಕ್ಕೆ ಅವನದೇ ಒಂದು ಗ್ಯಾಂಗಿದೆ. ವಿಚಿತ್ರವಾದ ಸ್ಲ್ಯಾಂಗುಗಳಲ್ಲಿ ಮಾತಾಡಿಕೊಂಡು, ಚಿತ್ರವಿಚಿತ್ರವಾದ ಬಟ್ಟೆಗಳನ್ನು ಹಾಕಿಕೊಂಡು, ತಮ್ಮ ಮನಸ್ಸಿಗೆ ನೇರವಾಗಿ ಅನಿಸುವುದನ್ನು ಮಾತ್ರ ಮಾಡುತ್ತಾ ರಾಕ್ಷಸರಂತೆ ತಾವು ಬದುಕುತ್ತಿದ್ದಾರೆ.
ವಿರೋಧಬಾಸವೋ, ಹುಚ್ಚೋ, ಅಥವಾ ಕಥಾನುಕೂಲವೋ ಗೊತ್ತಿಲ್ಲ, ಇಂಥವನಿಗೆ ಶಾಸ್ತ್ರೀಯ ಸಂಗೀತ ಅದರಲ್ಲಿಯೂ ಬೀಥೋವೆನ್ನಿನ ‘ಸೆವೆಂಥ್ ಹೆವೆನ್’ ಎಂದರೆ ಪ್ರಾಣ. ಯಾವಾಗಲೂ ಬೀಥೋವೆನ್ನಿನ ಸಂಗೀತವನ್ನು ಕೇಳುತ್ತಿರುತ್ತಾನೆ,
ಇಂಥ ಅಲೆಕ್ಸ್ ಒಮ್ಮೆ ಯಾವುದೋ ಒಂದು ಅಪರಾಧದಲ್ಲಿ ಸಿಕ್ಕಿಬೀಳುತ್ತಾನೆ, ಅವನನ್ನು ಬಂಧಿಸಿ ಅವನಿಗೆ ಹದಿನಾಲ್ಕು ವರ್ಷ ಶಿಕ್ಷೆ ಕೊಡಲಾಗುತ್ತದೆ. ಜೈಲಿನಲ್ಲಿ ಈ ರೀತಿಯ ಅಪರಾಧಿಗಳನ್ನು ಸುಧಾರಿಸಲೆಂದು ಒಂದು ‘ಲುಡೊವಿಕೊ ವಿಧಾನ’ ವೆಂಬ ಹೊಸದೊಂದು ಹಿಂಸೆಯಿಂದ ಡಿಕಂಡಿಷನ್ ಮಾಡುವ ವಿಧಾನವನ್ನು ಕಂಡುಹಿಡಿಯುವ ಪ್ರಯೋಗಕ್ಕೆ ಈತನನ್ನು ಗಿನಿಪಿಗ್ ಆಗಿ ಮಾಡಲಾಗುತ್ತದೆ. ಇವನಿಗೆ ಬಲವಂತವಾಗಿ ಹಿಂಸಾ ದೃಶ್ಯಗಳು ತುಂಬಿರುವ ಸಿನೆಮಾಗಳನ್ನು. ಚಿತ್ರಗಳನ್ನು ತೋರಿಸಲಾಗುತ್ತದೆ. ಆದರೆ, ನಮ್ಮ ತೆನಾಲಿರಾಮ ತನ್ನ ಬೆಕ್ಕಿಗೆ ಮಾಡಿದಂತೆ ಈತನಿಗೆ ಆ ಸಮಯಕ್ಕೆ ಸರಿಯಾಗಿ ಕಸಿವಿಸಿಯಾಗುವಂತೆ, ಹೊಟ್ಟೆಯಲ್ಲಿ ತೀವ್ರವಾಗಿ ಸಂಕಟವಾಗುವಂತೆ, ತೀವ್ರವಾಗಿ ತಲೆನೋಯುವಂತೆ-ಒಟ್ಟು ಆತ ತೆರೆಯ ಮೇಲೆ ನೋಡುತ್ತಿರುವ ಹಿಂಸೆಯನ್ನು ತಾನೇ ಅನುಭವಿಸುವ ಒಂದು ವಿಕೋಪವನ್ನು ಸೃಷ್ಟಿಸುವ ಔಷಧಗಳನ್ನು ಕೊದಲಾಗುತ್ತದೆ.
ಅಲೆಕ್ಸ್ ತನ್ನ ಈ ಸುಸ್ತು, ಸಂಕಟ, ನೋವುಗಳನ್ನು ತಾನು ನೋಡುತ್ತಿರುವ ಹಿಂಸೆಯ ಜತೆ ಸಮೀಕರಿಸಿಕೊಳ್ಳುತ್ತಾನೆ. ಹಾಗಾಗಿ, ಯಾವುದೇ ಹಿಂಸಾತ್ಮಕ ಕ್ರಿಯೆಯನ್ನು ಮಾಡುವುದಿರಲಿ, ನೋಡುವುದಿರಲಿ, ಯೋಚಿಸುವುದು ಕೂಡ ಆತನಿಗೆ ಅಸಾಧ್ಯವಾಗುತ್ತದೆ. ಹೀಗೆ ಯೋಚಿಸಿದ ತಕ್ಷಣ ಆತನಿಗೆ ತೀವ್ರವಾದ ಸಂಕಟವಾಗುತ್ತದೆ, ತಲೆನೋಯುತ್ತದೆ. ಸಿಕ್ಕಾಪಟ್ಟೆ ಒದ್ದಾಡಲಿಕ್ಕೆ ತೊಡಗುತ್ತಾನೆ.
ಆದರೆ, ಇಂಥಾ ಪರಿಣಾಮ ಪ್ರಯೋಗಕ್ಕೊಂದು ಸಣ್ಣ ಸೈಡ್ ಎಫೆಕ್ಟ್ ಇದೆ, ಹಿಂಸೆಯಷ್ಟೇ ಸುಖಿಸುವ, ಖುಷಿಪಡುವ ಬೀಥೊವೆನ್ನಿನ ಸೆವೆಂಥ್ ಹೆವನ್ ಅನ್ನೂ ಈತ ಅನುಭವಿಸುವುದಕ್ಕಗುವುದಿಲ್ಲ. ಯಾವಾಗ ಈತ ಬೀಥೊವೆನ್ ಕೇಳುತ್ತಾನೋ ಆಗಲೂ ಈತನಿಗೆ ಸುಸ್ತು, ಸಂಕಟ, ತಲೆನೋವುಗಳಾಗಿ ತೀವ್ರ ಹಿಂಸೆಯಾಗುತ್ತದೆ. ಆದರೆ, ಸರಕಾರ ಮತ್ತು ಈ ಪ್ರಯೋಗವನ್ನು ಸಜ್ಜುಗೊಳಿಸಿರುವವರು ಇಂಥ ಸಣ್ಣ ಸೈಡ್ ಎಫೆಕ್ಟಿನ ಹೊರತಾಗಿ ತಮ್ಮ ಪ್ರಯೋಗದ ಯಶಸ್ಸೆಂದೇ ನಿರ್ಧರಿಸಿ ಅಲೆಕ್ಸ್ ನನ್ನು ಜೈಲಿನಿಂದ ಬಿಡುಗಡೆ ಮಾಡುತ್ತಾರೆ.
ಹೊರಗೆ ಬಂದ ಈತನಿಗೆ ಗೊತ್ತಾಗುತ್ತದೆ, ತನಗೆ ಈ ಹಿಂಸೆಯೆನ್ನುವ ಪದ ಎಶ್ಟು ಅಸಹ್ಯವನ್ನು ಹುಟ್ಟಿಸುತ್ತದೆಂದರೆ ತನ್ನ ಆತ್ಮರಕ್ಷಣೆಗೂ ಆತ ಯಾರನ್ನೂ ಹಿಂಸಿಸುವ ಹಾಗಿಲ್ಲ. ಹಾಗೆ ಮಾಡಹೊರಟರೆ ಆತನಿಗೆ ವಿಪರೀತಚಾಗಿ ಸುಸ್ತು, ಸಂಕಟಗಳಾಗಿ ಒದ್ದಾಡುತ್ತಾನೆ. ಇದನ್ನರಿತ ಆತನ ಎದುರಾಳಿಗಳು ಅವನನ್ನು ಸಾಯಬಡಿಯುತ್ತಾರೆ.
ಅಷ್ಟೇ ಅಲ್ಲ, ಈತನ ಒಂದೇ ಸುಖವಾದ ಬೀಥೊವೆನ್ನನ್ನೂ ಈತ ಕೇಳಲಾಗದೇ ಹೋಗುತ್ತಾನೆ.
* * *
ಕಥೆ ಹೀಗೇ ಮುಂದುವರೆಯುತ್ತದೆ.
೧೯೬೨ರಲ್ಲಿ ಆಂಥೊನಿ ಬರ್ಗಸ್ ಬರೆದು ೧೯೭೧ರಲ್ಲಿ ಸ್ಟಾನ್ಲಿ ಕುಬ್ರಿಕ್ ನಿರ್ದೇಶಿಸಿದ ‘ಎ ಕ್ಲಾಕ್ವರ್ಕ್ ಆರೆಂಜ್’ ಎನ್ನುವ ಕಾದಂಬರಿ/ಸಿನೆಮಾದ ಸೊಗಡಿದು.
ಕತೆಯಲ್ಲಿ ಲೇಖಕ ಮೂಲಭೂತ ಇನ್ಸ್ಟಿಂಕ್ಟ್ಗಳಾದ ಒಳ್ಳೆಯದು, ಕೆಟ್ಟದರ ವಿಮರ್ಶೆಯನ್ನು, ವ್ಯಾಖ್ಯೆಯನ್ನು ಬೇರೆ ಬೇರೆ ಸ್ತರಗಳಲಿ ಮಾಡಲು ಪ್ರಯತ್ನಿಸುತ್ತಾನೆ. ಮೊದಲನೆಯದಾಗಿ ಒಳ್ಳೆಯದು ಎಂದರೆ ಏನು? ಸಾಮಾಜಿಕ ಮತ್ತು ನೈತಿಕ ನೆಲೆಗಳಲ್ಲಿ ಹಿಂಸೆ, ಬಲಾತ್ಕಾರ, ಕೊಲೆ ಇಂಥ ಕ್ರಿಯೆಗಳನ್ನು ಮಾಡಬಾರದು ಎಂದು ಹೇಳಿದೆ. ಆದರೆ, ಇಲ್ಲಿ ಆಯ್ಕೆಯ ಸ್ವಾತಂತ್ರ್ಯ ಎಷ್ಟು ಮುಖ್ಯ? ಅಂದರೆ, ಒಬ್ಬ ಮನುಷ್ಯ ತನಗೆ ತಾನು ಮಾಡುತ್ತಿರುವುದು ತಪ್ಪು ಎಂದು ಗೊತ್ತಿದ್ದು, ಅದರ ಪರಿಣಾಮವನ್ನು ಅರಿತಿದ್ದೂ ಆ ತಪ್ಪುಮಾಡಿದಲ್ಲಿ ಅದಕ್ಕೆ ಶಿಕ್ಷೆ ಕೊಡುವುದನ್ನು ಬಿಟ್ಟು ನಾವು ಇನ್ನೇನು ಮಾಡಬಹುದು?
ಹೀಗೆ ಡಿಕಂಡಿಶನಿಂಗ್ ಮೂಲಕವೋ ಅಥವಾ ಇನ್ನು ಹೇಗೋ ಕೆಟ್ಟದೆಂಬುವುದನ್ನು ಮಾಡುವುದನ್ನು ಪೂರಾ ತಡೆದುಬಿಟ್ಟರೆ, ಆಗ ಒಳ್ಳೆಯದಕ್ಕೆ ಅರ್ಥವೇ ಇರುವುದಿಲ್ಲ ಇಷ್ಟಕ್ಕೂ ಒಳ್ಳೆಯದು ಎಂದರೆ ಏನು? ಬೇರೆ ಪ್ಯಾರಾಮೀಟರ್ಗಳಿಂದ ಈಗ ನಾವು ಒಳ್ಳೆಯದು ಅಂದುಕೊಂಡಿರುವುದು ಮುಂದೆ ಕೆಟ್ಟದಾಗಬಹುದು. ಕೊಲೆಗೆ ಗಲ್ಲು ಶಿಕ್ಷೆಯಾಗುವುದೆನ್ನುವ ಭಯದಿಂದ ಕೊಲೆಗಾರರು ಕಮ್ಮಿಯಾಗುವುದಿಲ್ಲ. ಆದರೆ, ಕೊಲೆ ಮಾಡಲು ಹೋದಾಗಲೆಲ್ಲ ಕೈಎತ್ತಲಾರದೇ ಕೊಲೆಯೇ ಆಗದಿದ್ದರೆ ಆತ ಬೇರೆ ಅಪರಾಧವನ್ನು ಮಾಡಬಹುದು. ಅಥವಾ ಬೇರೆ ಕ್ಷುಲ್ಲಕ ಕ್ರಿಯೆಗಳು ಅಪರಾಧವೆನ್ನುವ ಲಗತ್ತು ಹಚ್ಚಿಸಿಕೊಡು ಈ ಅಪರಾಧಗಳಿಗೆ ಮಿತಿಮೀರಿದ ಶಿಕ್ಷೆಗಳಾಗಬಹುದು. ಸಿಗರೇಟು ಸೇದುವುದು ಅಪರಾಧವಾಗಬಹುದು, ಬಾರಿನಲ್ಲಿ ಹೋಗಿ ಕುಡಿದರೆ ಜೈಲಿಗೆ ಹಾಕಬಹುದು. ಎಲ್ಲಿಯತನಕ ನಾವು ಮನುಷ್ಯರನ್ನು ಡಿಕಂಡಿಶನ್ ಮಾಡಲು ಸಾಧ್ಯ.
ಇದನ್ನೇ ಬರ್ಗಸ್ ವಾದಿಸುತ್ತಾನೆ. ಈ ಪ್ರಪಂಚವಿರುವ ತನಕ ಒಳ್ಳೆಯದು, ಕೆಟ್ಟದು (ಯಾರು ಡಿಫೈನ್ ಮಾಡುತ್ತಾರೆ ಎಂಬುದು ಇನ್ನೂ ವಿವಾದಿತವೇ ಆದರೂ) ಇದ್ದೇ ಇರುತ್ತದೆ. ಸಮಾಜದ ಜವಾಬ್ದಾರಿ ಇಂಥದ್ದು ಒಳ್ಲೆಯದು, ಇಂಥದ್ದು ಕೆಟ್ಟದ್ದು ಎಂದು ಹೇಳುವುದು ಅಷ್ಟೇ. ಅದು ಬಿಟ್ಟು ಒಬ್ಬ ಮನುಷ್ಯನನ್ನು ಬರೇ ಒಳ್ಳೆಯದು ಮಾಡುವ ಹಾಗೆ ಮಾಡುತ್ತೇನೆ ಎಂದು ರೂಪಿಸಲಾಗದು. ಆಯ್ಕೆಯ ಸ್ವಾತಂತ್ರ್ಯವನ್ನು ನಾವು ಯಾರಾಗಲೀ ತಡೆಯಲಿಕ್ಕಾಗುವುದಿಲ್ಲ, ತಡೆಯಕೂಡದು- ಆ ಆಯ್ಕೆ ಕೆಟ್ಟದೆಂದು ನಮಗೆ ಗೊತ್ತಿದ್ದರೂ. ಹೀಗೆ ಮಾಡಿದರೆ ಏನಾಗಬಹುದು ಎನ್ನುವ ಪರಿಣಾಮವನ್ನು ನಾವು ಉತ್ಪ್ರೇಕ್ಷಿತವಾಗಿಯೂ ಪರವಾಗಿಲ್ಲ ಹೇಳಬಹುದಷ್ಟೇ.
ಕತೆಯ ಕೊನೆಯಲ್ಲಿ ಅಲೆಕ್ಸ್ ಆತ್ಮಹತ್ಯೆ ಮಾಡಿಕೊಳ್ಳಲೂ ಆಗುವುದಿಲ್ಲ. ಏಕೆಂದರೆ, ಆತ್ಮಹತ್ಯೆಯೂ ಒಂದು ರೀತಿಯ ಹಿಂಸೆಯೇ?
* * *
ನಾನು ರೆಸಿಡೆನ್ಸಿ ಮಾಡುತ್ತಿರುವಾಗ ಒಂದು ಪ್ರಯೋಗವನ್ನು ಮಾಡಿದ್ದೆವು. ಇಂಟೆನ್ಸಿವ್ ಕೇರ್ ಯುನಿಟ್ಟಿನಲ್ಲಿ ಬಂದು ಭರ್ತಿಯಾಗುವ ಕುಡುಕರಿಗೆ ಕೊಡುವ ಚಿಕಿತ್ಸೆಯ ಎಲ್ಲ ವಿವರಗಳನ್ನೂ ವಿಡಿಯೋ ಚಿತ್ರೀಕರಣ ಮಾಡಲಾಗುತಿತ್ತು. ಇವರು ಮಾಮೂಲೀ ಕುಡುಕರಲ್ಲ. ಜೀವಮಾನವಿಡೀ ಕುಡಿದು ಕುಡಿತದ ಕಾರಣದಿಂದ ತಮ್ಮ ಲಿವರ್ ಅನ್ನು, ಹಾಳುಮಾಡಿಕೊಂಡು ಮೈತುಂಬಾ ಹಳದಿಹಳದಿಯಾಗಿ ಬಂದಿರುತ್ತಿದ್ದರು. ಹೆಚ್ಚಿನವರಿಗೆ ಮೈಮೇಲೆ ಜ್ಞಾನವಿರುತ್ತಿರಲಿಲ್ಲ, ಮೈಯಲ್ಲಿನ ಆಲ್ಕೋಹಾಲಿನ ಪ್ರಮಾಣ ಕಮ್ಮಿಯಾದಂತೆ ಎಷ್ಟೋ ಜನಕ್ಕೆ ಕೈ, ಮೈ ನಡುಕ ಬರುತ್ತಿತ್ತು, ಅದುರುತ್ತಿದ್ದರು, ರಕ್ತ ಕಾರುತ್ತಿದ್ದರು, ಉಬ್ಬಿಕೊಂಡ ಕೈನಲ್ಲಿ ರಕ್ತನಾಳಗಳು ಸಿಗದೆ, ಒಂದು ಐವಿ ಹಾಕಲು ನರ್ಸುಗಳು ಇಪ್ಪತ್ತು ಕಡೆ ಚುಚ್ಚಿರುತ್ತಿದ್ದರು, ಫೋಲಿ ಕೆಥೆಟರ್, ಉಸಿರಾಡಲು, ಹೊಟ್ಟೆಯನ್ನು ಕ್ಲೀನ್ ಮಾಡಲು ಹೀಗೆ ಎಲ್ಲ ಕಡೆ ಟ್ಯೂಬುಗಳು. ಅವರ ಹೆಂಡತಿ ಮಕ್ಕಳ ಆಕ್ರಂದನ, ಡಾಕ್ಟರುಗಳ ಬೆಡ್ಸೈಡ್ ಚರ್ಚೆ- ಎಲ್ಲವೂ ಚಿತ್ರೀಕೃತವಾಗುತ್ತಿತ್ತು.
ನಂತರ ಇವರಿಗೆ ಎಚ್ಚರ ಬಂದಮೇಲೆ ಅವರ ರೀಹ್ಯಾಬಿಲಿಟೇಶನ್ನಿಗೋಸ್ಕರ ಈ ವಿಡಿಯೋವನ್ನು ಅವರಿಗೆ ತೋರಿಸಲಾಗುತ್ತಿತ್ತು. ಮೂರು ದಿನ, ನಾಲ್ಕು ದಿನಗಳ ಟೇಪನ್ನು ಆಸ್ಪತ್ರೆಯ ಆಡಿಯೋ ವಿಶುಯಲ್ ವಿಭಾಗದವರು ಸರಿಯಾಗಿ ಸಂಕಲಿಸಿದ ಮೇಲೆ ಅವರಿಗೆ ಕೊಡಲಾಗುತ್ತಿತ್ತು. ಆಲ್ಕೋಹಾಲಿಕ್ ಅವರ್ಶನ್ ಥೆರಪಿ ಎಂಬುದರ ಹೆಸರಿನಲ್ಲಿ ಇದನ್ನು ತೋರಿಸಲೆಂದು ಪ್ಲಾನ್ ಮಾದಲಾಗಿತ್ತು. ಇದರ ಉದ್ದೇಶ ಸ್ಪಷ್ಟ- ತಾನು ಕುಡಿಯುವುದರಿಂದ ಎಂಥ ಪರಿಸ್ಥಿತಿಯಲ್ಲಿ ತನ್ನನ್ನು ತಾನು ಕೆಡವಿಕೊಂಡೆ ಎನ್ನುವುದನ್ನು ಅವರುಗಳಿಗೆ ಚಿತ್ರಕವಾಗಿ ತೋರಿಸಿದಲ್ಲಿ ಕುಡಿತವನ್ನು ಸಂಪೂರ್ಣವಾಗಿ ಬಿಡಬಹುದೇನೋ ಎಂಬ ಸದಾಶಯ.
ಆದರೆ, ಒಂದೆರಡು ಬಾರಿಯ ಪ್ರಯೋಗದ ನಂತರ ಆಸ್ಪತ್ರೆಯ ರಿವ್ಯೂ ಬೋರ್ಡು ಈ ಪ್ರಯೋಗವನ್ನು ಮಾಡಬಾರದೆಂದು ತಡೆಯಿತು. ಕಾರಣ, ಇದು ತುಂಬಾ ಗ್ರಾಫಿಕ್. ಒಬ್ಬ ಮನುಷ್ಯ ಕಾಯಿಲೆಯಾಗಿ, ಮೈಮೇಲೆ ಜ್ಞಾನವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದಾಗ ಅದನ್ನು ವಿಡಿಯೋ ಚಿತ್ರೀಕರಿಸುವುದು ತಪ್ಪು. ಇಶ್ಟಕ್ಕೂ ಕುಡಿತದ ಕೆಡುಕುಗಳ ಬಗ್ಗೆ ಆತನಿಗೆ ಗೊತ್ತಿಲ್ಲದಿರುವುದು ಏನೂ ಇಲ್ಲವಲ್ಲ. ಕುಡಿತ ಆತನ ಆಯ್ಕೆ. ಅದಕ್ಕೆ ಅದರ ಪರಿಣಾಮಕ್ಕೆ ಚಿಕಿತ್ಸೆ ಕೊಡುವುದನ್ನು ಬಿಟ್ಟರೆ ಡಾಕ್ಟರಾದ ನಾವುಗಳು ಇನ್ನೇನೂ ಮಾಡಲಾರೆವು.
ಪೋಲೀಸರು ಕೂಡ ಅಷ್ಟೇ. ಕುಡಿದು ವಾಹನ ನಡೆಸಬೇಡಿ ಎಂದು ಹೇಳಬಹುದಷ್ಟೇ. ಹಾಗೆ ಮಾಡುವವರಿಗೆ ಶಿಕ್ಷಿಸಬಹುದೂ ಕೂಡ. ಆದರೆ, ಆಲ್ಕೋಹಾಲಿನ ಬಗ್ಗೆಯೇ ಈತನಿಗೆ ಅಸಹ್ಯಬರುವ ಹಾಗೆ ಮಾಡಿದರೆ.
ಅದು ಆಯ್ಕೆಯ ಸ್ವಾತಂತ್ರ್ಯವನ್ನೇ ಕಿತ್ತುಕೊಂಡ ಹಾಗೆ.
Sunday, September 6, 2009
ಮಲ್ಟಿಪ್ಲೆಕ್ಸ್ ಎಂಬ ನಂಬುಗಸ್ತ ಕಲ್ಟ್ಗಾಗಿ ಧನ್ ಟ ಣಾ..
"ದೊಡ್ದ ಪರದೆಯಲ್ಲಿ ಒಂದು ರೇಸ್ ಅಂಕಣ. ಆ ಪ್ರೇಕ್ಷಕರ ಗ್ಯಾಲರಿಯಲ್ಲಿ ಸುಂದರವಾದ ಹುಡುಗಿಯೊಬ್ಬಳ ಮೇಲೆ ನಿಧಾನವಾಗಿ ಕ್ಯಾಮೆರಾ ನಿಲ್ಲುತ್ತದೆ. ಹಿಂದಿನಿಂದ ಗಾಯವಾದ ತೋಳಿಗೊಂದು ಸ್ಲಿಂಗ್ ಹಾಕಿಕೊಂಡಿರುವ ಉದ್ದಕೂದಲಿನ ಶಾಹಿದ್ ಕಪೂರ್ ನಿಧಾನವಾಗಿ ಬಂದು "ಬ್ಲೂ ಥಂಡರ್" ಎನ್ನುತ್ತಾನೆ. ಆಕೆ, ಸುಮ್ಮನೆ ಮಾದಕವಾಗಿ ನಗುತ್ತಾಳೆ. ಆಗ ಗಾಳಿಯಲ್ಲಿ ಒಂದು ನೋಟು ಹಾರಿಕೊಂಡು ಬರುತ್ತದೆ. ಅದನ್ನು ಹಿಂಬಾಲಿಸಿಕೊಂಡು ಹೋಗಿತ್ತಾನೆ. ನಿಧಾನವಾಗಿ ಆ ದೃಶ್ಯ ಇನ್ನೊಂದು ದೃಶ್ಯದೊಂದಿಗೆ ಲೀನವಾಗುತ್ತದೆ. ಅಲ್ಲಿ ಒಂದು ಟೆಲಿಫೋನು ಬೂತಿನಂತ ಡಬ್ಬದ ಮೇಲೆ "ಚಾರ್ಲೀಸ್ ಡ್ರೀಮ್ಸ್" ಎಂದು ಬರೆದಿದೆ. ಮೇಲಿಂದ ನಿಧಾನವಾಗಿ ದುಡ್ಡು ಮಳೆಯೋಪಾದಿಯಲ್ಲಿ ಕೆಳಗೆ ಬೀಳುತ್ತಿದೆ. ಚಾರ್ಲಿಯ ಕನಸು ಏನು ಎಂಬುದು ಆತನಿಗಲ್ಲ ನಮಗೂ ಸ್ಪಷ್ಟವಾಗಿದೆ.
"ತೊದಲುವ ಶಾಹಿದ್ ಕಪೂರನಿಗೆ ಗೊತ್ತಿರುವ ರಹಸ್ಯ ಭ್ರಷ್ಟ ಪೋಲೀಸನೊಬ್ಬನಿಗೆ ಬೇಕಾಗಿದೆ. ಆದರೆ ಈ ಉಗ್ಗನಿಗೆ ಇಂಥ ಅತಂಕದ ಸನ್ನಿವೇಶಗಳಲ್ಲಿ ತೊದಲಾಟ ಇನ್ನೂ ಜಾಸ್ತಿಯಾಗುತ್ತದೆ. ಈ ಪೊಲೀಸನಿಗೆ ಇವನಿಂದ ತನಗೆ ಬೇಕಾದ ಮಾಹಿತಿಯನ್ನು ಪಡಕೊಳ್ಳಲು ಸಮಯವಿರುವುದು ಮಾರನೆಯ ದಿನ ಎಂಟರ ತನಕ ಮಾತ್ರ. "ಇವನಿಗೆ ಹೀಗೇ ಬಿಟ್ಟರೆ ಇವನ ಹೆಸರು ಹೇಳುವುದಕ್ಕೇ ಬೆಳಿಗ್ಗೆ ಎಂಟರತನಕ ತಗೋತಾನಪ್ಪಾ" ಎಂದುಕೊಂಡು ಅವನ ಹತ್ತಿರ ಬಂದು "ಏಕ್ ಗಾನಾ ಗಾವ್" ಎಂದು ಹಾಡು ಹೇಳಲಿಕ್ಕೆ ಹೇಳುತ್ತಾನೆ. ಯಾಕೆಂದರೆ, ಹಾಡು ಹೇಳಬೇಕಾದರೆ ತೊದಲುವುದಿಲ್ಲವಲ್ಲಾ. ಈತ ತನಗೆ ಗೊತ್ತಿರುವ ರಹಸ್ಯವನ್ನು "ಕಬೀ ಕುಶಿ ಕಬೀ ಗಮ್" ರಾಗದ ಮೂಲಕ ಮೂಲಕ ಹೇಳಿ ಮುಗಿಸುತ್ತಾನೆ.
ವಿಶಾಲ ಭಾರದ್ವಾಜನ ಹೊಸ ಚಿತ್ರ ಕಮೀನೆ ಚಿತ್ರದ ಕೆಲವು ದೃಶ್ಯಗಳಿವು. ಸಿನೆಮಾ ಪ್ರಪಂಚದಲ್ಲಿ ಬಹಳ ವರ್ಷಗಳಿಗೊಮ್ಮೆ ನಟರ ಆಯ್ಕೆ, ನಟನೆ. ಚಿತ್ರಕಥೆ, ಸಂಗೀತ, ಛಾಯಾಗ್ರಹಣ, ಸಂಕಲನ ಎಲ್ಲವೂ ಒಂದಕ್ಕೊಂದು ಪೂರಕವಾಗಿ ವ್ಯಾಪಾರಿ ಚೌಕಟ್ಟಿನೊಳಗೇ ಒಂದು ನೋಡಬಹುದಾದ ಚಿತ್ರ ತಯಾರಾಗುತ್ತದೆ. ಇಂಥ ಒಂದು ಚಿತ್ರ ಕಮೀನೆ.
ಶೇಕ್ಸ್ಪಿಯರನ ನಾಟಕಗಳಾದ ಮ್ಯಾಕ್ಬೆತ್ ಮತ್ತು ಒಥೆಲೊ ವನ್ನು ಸಿನೆಮಾದ ಸಮಕಾಲೀನಕ್ಕೆ ಅಳವಡಿಸಿ ಮಕ್ಬೂಲ್ ಮತ್ತು ಓಂಕಾರ ಎಂಬ ಸಿನೆಮಾಗಳನ್ನು ನಿರ್ದೇಶಿಸಿದ್ದ ವಿಶಾಲ್ ಭಾರದ್ವಾಜ್, ಮಕಡೀ ಮತ್ತು ಬ್ಲೂ ಅಂಬ್ರೆಲಾ ಎಂಬ ನವಿರು ನಿರೂಪಣೆಯ ಸಿನೆಮಾಗಳನ್ನು ನಿರ್ದೇಶಿಸಿದ್ದಾನೆ. ಈತನ ಪಕ್ಕಾ ವ್ಯಾಪಾರೀ ಸಾಹಸ ‘ಕಮೀನೆ’ ಕ್ವಿಂಟಿನ್ ಟರಂಟಿನೋ, ಗೈ ರಿಚೀಗಳ ಕಲ್ಟ್ ಸಿನೆಮಾಗಳ ಸಾಲಿಗೆ ಸೇರಬಹುದಾದ ಸಿನೆಮಾ. ಅತಿ ಬಿಗಿಯಾದ ಚಿತ್ರಕಥೆ, ನಿರೂಪಣೆಯಲ್ಲಿನ ಬಿಗಿ ಮತ್ತು ಪಾತ್ರಗಳಿಗೆ ಬೇಕಾದ ನಟರ ಆಯ್ಕೆ ಮತ್ತು ಆ ನಟರುಗಳಿಂದ ಸರಿಯಾದ ನಟನೆ ತೆಗೆಯುವುದರಲ್ಲಿ ವಿಶಾಲ್ ಭಾರದ್ವಾಜ್ ಯಶಸ್ವಿಯಾಗಿದ್ದಾನೆ. ಬಾಲಿವುಡ್ಡಿನ ಎಲ್ಲ ಬಾಯ್ ಮೀಟ್ಸ್ ಗರ್ಲ್ ಫಾರ್ಮುಲಾಗಳನ್ನು ಮುರಿದು, ಒಂದು ಬುದ್ಧಿವಂತ ಸಿನೆಮಾವನ್ನು ಕೊಡುವುದರಲ್ಲಿ ಯಶಸ್ವಿಯಾಗಿದ್ದಾನೆ. ಇದರ ಮೂಲಕ ತನ್ನದೇ ಆದ ಒಂದು ಛಾಪನ್ನು ಅನ್ನು ಆತ ಬಾಲಿವುಡ್ನಲ್ಲಿ ಮೂಡಿಸಿದ್ದಾನೆ..
ತೊಂಭತ್ತರ ದಶಕದ ಮಧ್ಯದಲ್ಲಿ ಶುರುವಾದ ಮಲ್ಟಿಪ್ಲೆಕ್ಸ್ ನೋಡುಗರ ಸಿನೆಮಾದ ಕಲ್ಟ್ ಬಾಲಿವುಡ್ಡಿಗೆ ಬೇರೆಯೇ ಒಂದು ಸೊಗಡನ್ನು ಕೊಟ್ಟಿತು. ಮನಮೋಹನ ದೇಸಾಯಿ, ಪ್ರಕಾಶ್ ಮೆಹ್ರ, ಸುಭಾಶ್ ಗೈಗಳ ಅತಿರಂಜಿತವಾದ ಮೆಲೊಡ್ರಾಮ, ಪ್ರೀತಿ, ಪ್ರೇಮ, ಕಳೆದು ಹೋದ ಅಣ್ಣ ತಮ್ಮಂದಿರ ಸ್ಲೋ ಮೋಷನ್ನ ಮಿಲನಗಳ ಭಾರದಲ್ಲಿ sಸೊರಗಿದ್ದ ಬಾಲಿವುಡ್ಗೆ ಬದಲಾವಣೆ ಬೇಕಿತ್ತು. ಆಗ ಈ ಹೀರೋಗಳನ್ನು ವೈಭವೀಕರಿಸದೆ, ದೊಡ್ಡ ದೊಡ್ದ ಸೆಟ್ ಗಳನ್ನು ಹಾಕದೆ, ಕಡಿಮೆ ಬಜೆಟ್ನಲ್ಲಿ ನಿರೂಪಣೆಯ ಜಾಣ್ಮೆಯಿಂದ ವಸ್ತುವಿಷಯಗಳ ಆಯ್ಕೆಯ ವೈವಿಧ್ಯದಿಂದ ತಾಜಾ ಸಿನೆಮಾಗಳು ತಯಾರಾಗತೊಡಗಿದವು. ರಾಹುಲ್ ಭೋಸ್, ರನ್ವೀರ್ ಶೌರಿ, ಸಂಜಯ್ ಸೂರಿ, ರಜತ್ ಕಪೂರ್ ಮುಂತಾದ ನಟರುಗಳು ಹೀರೋಗಳಾಗತೊಡಗಿದರು. ಯಾವಾಗ ನಾಯಕನಟನಿಗೆ ಇಮೇಜಿನ ಭಾರವಿಲ್ಲದೆಯೇ ಹೋಯಿತೋ, ಆಗ ವಸ್ತುವಿನಲ್ಲಿ ವೈವಿಧ್ಯ ಮತ್ತು ಹೊಸ ಪ್ರಯೋಗಗಳು ನಡೆಯತೊಡಗಿದವು. ಜತೆಗೆ ಜಾಗತೀಕರಣದ ಹೊಳೆಯಲ್ಲಿ ಹೊರಗಿನಿಂದ ಹೂಡಿದ ಬಂಡವಾಳ ಮತ್ತು ಜಾಗತಿಕ ವಿತರಣಾ ವ್ಯವಸ್ಥೆಯಿಂದ ಇಂಥ ಸಿನೆಮಾಗಳಿಗೆ ಮಾರುಕಟ್ಟೆಯಲ್ಲಿಯೂ ಬೇಡಿಕೆ ಹೆಚ್ಚಾಗಿ, ಸಿನೆಮಾಗಳ ನಿರ್ಮಾಣದ ವೈವಿಧ್ಯ ಬಹುಮುಖಿಯಾಗಿತ್ತು. ಹಾಗಾಗಿ ಪಕ್ಕಾ ವ್ಯಾಪಾರಿ ಸಿನೆಮಾಗಳು ತಾವು ಇವಕ್ಕಿಂತ ಬೇರೆ ಎಂದು ತೋರಿಸಲು ಮೂವತ್ತರಿಂದ ನಲವತ್ತು ಕೋಟಿ ರೂಪಾಯಿಗಳನ್ನು ಸುಲಭವಾಗಿ ಒಂದು ಸಿನೆಮಾಕ್ಕೆ ಬಂಡವಾಳ ಹಾಕುವ ವ್ಯವಸ್ಥೆ ಶುರುವಾಯಿತು. ಹಿಂದೀ ಸಿನೆಮಾಗಳ ಹಾಡುಗಳಷ್ತೇ ಅಲ್ಲ, ಇಡೀ ಸಿನೆಮಾಕ್ಕೆ ಸಿನೆಮಾ ದಕ್ಷಿಣ ಆಫ್ರಿಕ, ಅಮೆರಿಕಾ ಇಂಗ್ಲೆಂಡುಗಳಲ್ಲಿ ಚಿತ್ರೀಕರಣವಾಗಲು ಶುರುವಾಯಿತು.
ಈ ರೀತಿಯ ಬಹಳಷ್ಟು ಸಿನೆಮಾಗಾಳು ಮೊದಲವಾರದಲ್ಲಿಯೇ ಹಾಕಿದ್ದ ಬಂಡವಾಳವನ್ನು ವಾಪಸ್ಸು ಪಡೆದು, ಗಲ್ಲಾಪಟ್ಟಿಗೆಂiಲ್ಲಿಯೂ ದುಡ್ಡು ಮಾಡಿಕೊಳ್ಳಹತ್ತಿದವು. ಯಾರಿಗೂ ತಮ್ಮ ಚಿತ್ರವನ್ನು ನೂರುದಿನಗಳು, ಇಪ್ಪತೈದುವಾರಗಳ ಕಾಲ ಓಡಿಸುವ ಇರಾದೆಯಿರಲಿಲ್ಲ. ಮೊದಲ ಮೂರುದಿನಗಳಲ್ಲಿ ಆದಷ್ಟು ಪ್ರಿಂಟುಗಳನ್ನು ಹಾಕಿ, ಎರಡು ಮೂರುವಾರಗಳಲ್ಲಿ ದುಡ್ಡು ಮಾಡುವ ಅನೇಕರು ಇಲ್ಲಿ ಬಂಡವಾಳ ಹೂಡಹತ್ತಿದರು. ಅದರ ಪರಿಣಾಮ ಈಗ "ಕಮೀನೆ" ಯಂಥ ಸಿನೆಮಾವನ್ನು ಮಾಡಿ ಕೂಡ ದುಡ್ಡು ಮಾಡಬಹುದು ಎಂಬ ನಂಬಿಕೆಯನ್ನು ರಾನಿ ಸ್ಕ್ರೂವಾಲನಂಥ ನಿರ್ಮಾಪಕರುಗಳಿಗೆ ಕೊಟ್ಟದ್ದು..
ಬಾಲಿವುಡ್ ಕ್ವಿಂಟನ್ ಟರಂಟಿನೊನಂಥ ನಿರ್ದೇಶಕರಿಂದ ಪ್ರಭಾವಿತವಾದದ್ದು ಹೊಸದೇನಲ್ಲ. ೨೦೦೨ರಲ್ಲಿ ಬಿಡುಗಡೆಯಾದ ಸಂಜಯ್ ಗುಪ್ತಾ ನಿರ್ದೇಶನದ "ಕಾಂಟೆ" ಟರಂಟಿನೋನ "ರೆಸರ್ವಾಯ್ರ್ ಡಾಗ್ಸ್" ಚಿತ್ರದಿಂದ ಸ್ಫೂರ್ತಿಪಡೆದದ್ದು. ತನ್ನ ವಿಶಿಷ್ಟ ನಿರೂಪಣೆ ಮತ್ತು ಪಾತ್ರಚಿತ್ರಣಗಳಿಂದ ರೆಸರ್ವಾಯ್ರ್ ಡಾಗ್ಸ್ ಟರಂಟಿನೋನನ್ನು ತನ್ನ ಮೊದಲ ಸಿನೆಮಾದಲ್ಲಿಯೇ ಅತಿ ಎತ್ತರಕ್ಕೆ ಕರೆದೊಯ್ದಿತ್ತು. ಈತ ಕ್ರೈಮ್ ಚಿತ್ರಗಳನ್ನು ಮಾಡಿದರೂ ಈತನ ಹೆಸರು ನೆನಪುಳಿಯುವುದು ಈತ ಮೂರರ ಜತೆ ನಾಲ್ಕನೆಯದು ಎನ್ನಿಸುವಂಥ ಮತ್ತೊಂದು ಕ್ರೈಮ್ ಸಿನೆಮಾ ಮಾಡಿದ್ದರಿಂದಲ್ಲ. ಇವನಿಗೆ ಕ್ರೈಮ್ಗಿಂತ ಈ ಕ್ರಿಮಿನಲ್ಗಳ ಪಾತ್ರಚಿತ್ರಣ ಬಹಳ ಮುಖ್ಯ. ಆದರೆ, "ಕಾಂಟೆ" ಈ ಸಿನೆಮಾ ಕ್ಷಣಗಳನ್ನು ನಕಲುಮಾಡಲು ಹೋಗಿ ದಯನೀಯವಾಗಿ ಸೋತಿತ್ತು. ನೇರವಾದ ನಿರೂಪಣೆಯಿಲ್ಲದ, ಕತೆ ಹಿಂದುಮುಂದಾಗಿ, ಅಡ್ಡಾದಿಡ್ಡಿಯಾಗಿ ಸರಿದು ಕೊನೆಗೆ ಎಲ್ಲ ಸಡಿಲ ತುದಿಗಳೂ ಒಂದೆಡೆ ಸೇರಿಕೊಂಡು ಗಂಟುಹಾಕಿಕೊಳ್ಳುವುದು ಈತನ ಸಿನೆಮಾಗಳ ಸಾಮಾನ್ಯ ಲಕ್ಷಣ. ಕತೆ ಕಗ್ಗಂಟಾಗಲು, ಹಲವಾರು ವಿಕ್ಷಿಪ್ತ ವೈವಿಧ್ಯಮಯ ಪಾತ್ರಗಳ ಅನ್ವೇಷಣೆಯಲ್ಲಿರುವ ಈ ಚಿತ್ರಗಳಿಗೆ ಈ ಕ್ರೈಮ್ ಪ್ರಪಂಚ ಹುಲುಸಾದ ಸಾಮಗ್ರಿಗಳನ್ನು ಒದಗಿಸಿಕೊಡುತ್ತದೆ. ಬರೇ ಸಾಂಸಾರಿಕತೆ ಅಥವಾ ಪ್ರೇಮಕಥೆಯಲ್ಲಿ ಈ ನಿರೂಪಣೆಯ ಸಾಧ್ಯತೆಗಳ ವೈವಿಧ್ಯವನ್ನು ಕಂಡುಹಿಡಿಯಲು ಇನ್ನೂ ಸಾಧ್ಯವಾಗಿಲ್ಲ.
ಕಮೀನೆಯ ನಿರ್ದೇಶಕ ವಿಶಾಲ್ ಭಾರ್ದ್ವಾಜ್ ಬಾಲಿವುಡ್ ಕಂಡ ಅಪರೂಪದ ಪ್ರತಿಭೆ. ಈತ ಸಂಗೀತ ನಿರ್ದೇಶನ ಮಾಡಿಕೊಂಡು, ಹಾಡು ಹೇಳಿಕೊಂಡು, ಕೆಲವೊಂದು ಸಾಕ್ಷ್ಯಚಿತ್ರಗಳನ್ನು ಮಾಡಿಕೊಂಡು ಇದ್ದ. ಈತ "ಸತ್ಯ" "ಮಾಚೀಸ್" "ಯು ಮಿ ಔರ್ ಹಮ್" ಮತ್ತಿತರ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದನೆಂದು ಈಗ ಹೇಳಿದರೆ ಯಾರೂ ನಂಬಲಿಕ್ಕಿಲ್ಲ. ಪೋಲಿಶ್ ನಿರ್ದೇಶಕ ಕ್ರಿಸ್ಟಾಫ್ ಕಿಸ್ಲೋಸ್ಕಿಯ ನಿರ್ದೇಶನದ ಚಿತ್ರ ಟೆಲಿಡ್ರಾಮಗಳನ್ನು ನೋಡಿ ಪ್ರಭಾವಿತನಾಗಿ ಈತನೂ ಸಿನೆಮಾ ಮಾಡಬೇಕೆಂದು ನಿರ್ಣಯಿಸಿ "ಮಕಡೀ" ಎಂಬ ಒಂದು ಮಕ್ಕಳ ಚಿತ್ರವನ್ನು ನಿರ್ದೇಶಿಸಿದ್ದ. ನಂತರ, ಶೇಕ್ಸಪಿಯರನ ನಾಟಕಗಳನ್ನು ಕ್ರೈಮ್ ಪ್ರಪೆಂಚದ ಹಿನ್ನೆಲೆಯಲ್ಲಿ ಆಧುನಿಕೀಕರಿಸಿ ಮಕ್ಬೂಲ್ ಮತ್ತು ಓಂಕಾರ ಎಂಬ ಸಿನೆಮಾಗಳನ್ನು ಚಿತ್ರಿಸಿದ. ಓಂಕಾರ ಈತ ವ್ಯಾಪಾರೀ ಸಿನೆಮಾಗಳನ್ನೂ ಬಹಳ ವಿಭಿನ್ನವಾಗಿ ಮಾಡಿಕೊಟ್ಟೂ ದುಡ್ಡುಮಾಡಬಹುದು ಎನ್ನುವ ನಂಬಿಕೆಯನ್ನು ಸಿನೆಮಾ ನಿರ್ಮಾಪಕರಲ್ಲಿ ಕೊಟ್ಟಿತು. ಪರಿಣಾಮವೇ, ಇಂದಿನ ಕಮೀನೆ.
ಮೇಲಿನೋಟಕ್ಕೆ ಚದುರಿದ ಚಿತ್ರಗಳಂತೆ ಕಾಣುವ ಈ ಚಿತ್ರದ ಕಥೆ ಹೇಳಲು ಸುಲಭವಲ್ಲ. ಹಾಗೆ ನೋಡುತ್ತಾ ಹೋದರೆ, ಕತೆಯಲ್ಲಿ ಯಾವ ಹೆಚ್ಚುಗಾರಿಕೆಯೂ ಇಲ್ಲ. ಚಾರ್ಲಿ ಮತ್ತು ಗುಡ್ಡು ಅನ್ನುವ ತೊದಲುವ ಮತ್ತು ಉಗ್ಗುವ ಇಬ್ಬರು ಅವಳಿಗಳು, ಇಬ್ಬರ ಹಾದಿಯೂ ಬೇರೆ. ಒಬ್ಬ ಮುಂಬಯಿಯ ಭೂಗತ ಸಾಮ್ರಾಜ್ಯದಲ್ಲಿ ಸಣ್ಣ ಗ್ಯಾಂಗ್ಸ್ಟರ್. ಇನ್ನೊಬ್ಬ ಯಾವುದೋ ಒಂದು ಸಣ್ಣ ಎನ್ಜೀಓದಲ್ಲಿ ಕೆಲಸ ಮಾಡುತ್ತಾನೆ. ಆದರೆ, ಇಬ್ಬರ ಆಯ್ಕೆಗಳೂ ಬೇರೆಯಾಗಿರುವುದರಿಂದ ಇಬ್ಬರೂ ಪರಸ್ಪರರನ್ನು ದ್ವೇಷಿಸುತ್ತಾರೆ. ಚಾರ್ಲಿ ರೇಸಿನಲ್ಲಿ ಬಾಜಿ ಕಟ್ಟುವವ. ಯಾವುದೋ ರೇಸಿನಲ್ಲಿ ಮೋಸದಿಂದ ದುಡ್ಡು ಕಳಕೊಂಡ ಎನ್ನುವ ಕಾರಣದಿಂದ ಆ ಜ್ಯಾಕಿಯನ್ನು ಹೆದರಿಸಿ ತನ್ನ ದುಡ್ಡನ್ನು ವಾಪಸ್ಸು ಪಡೆದುಕೊಳ್ಳುವ ಪ್ರಯತ್ನದಲ್ಲಿ ಆತ ತನ್ನ ಇತರ ಗ್ಯಾಂಗ್ಸ್ಟರ್ಗಳ ಸಹಾಯವನ್ನು ಪಡೆಯುತ್ತಾನೆ. ಆದರೆ, ನಂತರವಾಗುವ ಹಲ್ಲಾಗುಲ್ಲಾಗಳ ಸರಣಿಯಲ್ಲಿ ಸುಳ್ಳು, ಮೋಸ, ವಂಚನೆಗಳ ಜಾಲದಲ್ಲಿ ತಮಗೆ ಅರಿವಾಗದ ಕಾರಣಗಳಿಂದ ಇಬ್ಬರೂ ಸಿಕ್ಕಿಬೀಳುತ್ತಾರೆ. ನಂತರ, ಮಾಮೂಲೀ ಫ಼ಾರ್ಮ್ಯುಲಾದಂತೆ ಅಣ್ಣತಮ್ಮಂದಿರಿಬ್ಬರೂ ಈ ಜಗತ್ತಿನಲ್ಲಿ ತಮಗಿರುವುದೇ ತಾವಿಬ್ಬರು ಎನುವುದನ್ನು ಅರಿತುಕೊಳ್ಳುತ್ತಾರೆ. ಅಷ್ಟೇ ಅಲ್ಲ, ಕಳಕೊಂಡಿದ್ದ ತಮ್ಮ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
ಇದು ಸ್ಥೂಲವಾಗಿ ಚಿತ್ರಕಥೆ. ಇಷ್ಟೇನಾ, ಇದು ಮಾಮೂಲೀ ಬಾಲಿವುಡ್ ಕಥೆ ಎಂದು ಮೂಗುಮುರಿದರೆ ಒಂದು ಅದ್ಭುತ ಸಿನೆಮಾ ಅನುಭವವನ್ನು ಕಳೆದುಕೊಳ್ಳುತ್ತೀರಿ, ಆದರೆ ಮೊದಲೇ ಹೇಳಿಬಿಡುತ್ತೇನೆ. ಇಂಥಹ ಸಿನೆಮಾ ನೋಡುವುದಕ್ಕೆ ಬೇರೆ ಮನಸ್ಥಿತಿಯಿರಬೇಕು. ರಕ್ತಪಾತ, ಹಿಂಸೆ, ಸ್ಫೋಟಗಳು, ತೀರ ಕಚ್ಛಾ ಎನಿಸುವ ಭಾಷೆ ಮತ್ತು ಕೆಲವೊಮ್ಮೆ ವಿಕೃತ ಎನ್ನುವ ಈ ಪಾತ್ರಗಳ ನಡವಳಿಕೆ. ಇವನ್ನೆಲ್ಲಾ ಸಹಿಸಿಕೊಳ್ಳುವ ಇವುಗಳ ಆಚೆಯ ಆ ಪಾತ್ರಗಳನ್ನು ಮತ್ತು ಸಿನೆಮಾ ಮಾಡುವುದರ ಕುಸುರಿಯ ಬಗ್ಗೆ ನಿಮಗೆ ಆಸಕ್ತಿಯಿದ್ದರೆ ನಿಮಗೆ ಈ ಚಿತ್ರ ಇಷ್ಟವಾಗಬಹುದು. ಮುಖ್ಯವಾಗಿ ವ್ಯಾಪಾರೀ ಸಿನೆಮಾಗಳ ಚೌಕಟ್ಟಿನಲ್ಲಿ ಕಮೀನೆ ಮನಸೆಳೆಯುವುದು ಇದರ ಬಿಗಿಯಾದ ಚಿತ್ರಕಥೆಯಿಂದ ಮತ್ತು ಪ್ರತಿಯೊಬ್ಬರಿಂದ ನಿರ್ದೇಶಕ ತೆಗೆದಿರುವ ನಟನೆಯಿಂದ. ಚಿತ್ರದ ಮುಖ್ಯ ಪಾತ್ರಗಳಾದ ಶಾಹೀದ ಕಪೂರ್ ಮತ್ತು ಪ್ರಿಯಾಂಕ ಚೋಪ್ರ ಇರಲಿ, ಈ ಚಿತ್ರದ ಯಾವ ಪಾತ್ರವನ್ನೂ ಸೊರಗಲು ಬಿಟ್ಟಿಲ್ಲ, ವಿಶಾಲ್ ಭಾರದ್ವಾಜ್. ಮಹಾರಾಷ್ಟ್ರ ಮರಾಠರಿಗೆ ಮಾತ್ರ ಎನ್ನುವ ರಾಜಕಾರಣಿ- ವಿಲನ್ ಅನ್ಮೋಲ್ ಗುಪ್ತೆ (ತಾರೇ ಜಮೀನ್ ಪರ್ ಖ್ಯಾತಿ), ಪಿಸ್ತೂಲಿನ ವ್ಯೂಫೈಂಡರ್ ಸರಿಯಿದೆಯೇ ಎಂದು ಜನ ಕೂತಿರುವ ರೂಮಿನಲ್ಲಿಯೇ ಪರೀಕ್ಷಿಸುವ ಬಂಗಾಲಿಬಾಬುಗಳು, ಕೊಕೈನ್ ಸ್ಮಗ್ಲರ್ ತಾಶಿ, ಪೋಲೀಸರು ಭ್ರಷ್ಟರಾಗುವುದೂ ಎಷ್ಟು ಕಷ್ಟ ಅನಿಸುವಂತೆ ಮಾಡುವ ಇನ್ಸ್ಪೆಕ್ಟರ್ , ಹೀಗೆ ಅನೇಕ ಕ್ಯಾರಿಕೇಚರಿಶ್ ಪಾತ್ರಗಳು ನಮ್ಮಮುಂದೆ ಬೆಳೆಯುತ್ತಲೇ ಹೋಗುತ್ತವೆ. ನಿರ್ದೇಶಕನ ಜಾಣ್ಮೆಯಿರುವುದು ತಾನೊಂದು ಬಿಗಿಯಾದ ಒಗಟಿನಂತಹ ಚಿತ್ರಕಥೆಯನ್ನು ಬರೆದಿಟ್ಟು ಅದರಲ್ಲಿ ಈ ಪಾತ್ರಗಳು ತಂಪಾಡಿಗೆ ತಾವು ಹರಿಯಬಿಟ್ಟಿದ್ದಾನೆ. ಎಲ್ಲ ಪಾತ್ರಗಳಿಗೂ ಪರದೆಯ ಮೇಲೆ ಸಮಾನ ಅವಕಾಶವಿದೆ. ಅನೇಕ ಬೇರೆಬೇರೆ ಸ್ತರಗಳ ಕಥೆಗಳು ತಾನಾಗಿಯೇ ಒಂದುಗೂಡುತ್ತವೆ, ಒಂದು ಕಥೆಗೂ ಇನ್ನೊಂದು ಕಥೆಗೂ ಇರುವ ಸಂಂಧವೇನು ಎನ್ನುವುದನ್ನು ಕೂಡ ಆ ಕಥೆಗಳೇ ಪಾತ್ರಗಳೇ ಕಂಡುಕೊಳ್ಳುತ್ತವೆ. ಈ ಆಡ್ಬಾಲ್ ಅನ್ನಿಸುವಂಥ ಪಾತ್ರಗಳು ಆಡುವ ಮಾತುಗಳು, ಅವರುಗಳ ಪ್ರಪಂಚ, ಸ ಕ್ಕೆ ಫ ಎಂದು ಉಚ್ಚರಿಸುವ ಚಾರ್ಲಿ ಸೊಫಿಯಗೆ ಈತ ಅನ್ನುವುದು ಫಫಿಯ) ಕಥೆ ಹೇಳುತ್ತಾ ಹೋಗುತ್ತಾನೆ. ಇಲ್ಲಿ ವ್ಯಕ್ತವಾಗುವ ಡಾರ್ಕ್ ಹ್ಯೂಮರ್, (ಕನ್ನಡದಲ್ಲಿ ಇದಕ್ಕೆ ವಕ್ರ ಹಾಸ್ಯವೆನ್ನಬಹುದೇನೋ), ಅನ್ಯೋಕ್ತಿಗಳು, ತೊದಲು, ಉಗ್ಗುಗಳನ್ನು ಹಾಸ್ಯಮಾಡುವ ಪಾಪಪ್ರಜ್ಞೆಯಿಲ್ಲದ ಮನುಷ್ಯ ಪ್ರಜ್ಞೆ ಇವೆಲ್ಲವೂ ನಿಮಗೆ ಖುಷಿ ಕೊಡುವಂತಿದ್ದರೆ ನೀವು ಈ ಸಿನೆಮಾ ನೋಡಿ.
ಇಂಥ ಸಿನೆಮಾಗಳು, ಕ್ರೈಮ್ ಕೇಪರ್ಗಳ ನಿರ್ದೇಶಕರುಗಳಿಗೆ ನೋಡುಗರ ಬಗೆ ಕ್ಲೀಶೆಯಾದ ನಂಬಿಕೆಯೊಂದಿದೆ. ಪ್ರೇಕ್ಷಕರುಗಳಿಗೆ ಪ್ರತೀ ಫ್ರೇಮನ್ನೂ ಅರ್ಥಮಾಡಿಸಬೇಕು, ಅದಕ್ಕಾಗಿ ಕೈತುತ್ತು ಹಾಕಬೇಕು, ಪ್ಲಾಟನ್ನು ಹೆಚ್ಚು ಜಗ್ಗಾಡಿದರೆ ಅಥವಾ ತೀರ ಅಮೂರ್ತ ಮಾಡಿದರೆ ಜನಕ್ಕೆ ಅರ್ಥವಾಗುವುದಿಲ್ಲ, ಎಂಬುದು. ಆದರೆ, ಈ ನಂಬಿಕೆಗಳನ್ನೆಲ್ಲ ವಿಶಾಲ್ ಭರದ್ವಾಜ ಗಾಳಿಗೊಗೆದಿದ್ದಾನೆ. ಇಲ್ಲಿ ಯಾರಿಗೂ ಅನವಶ್ಯಕವಾದ ಫ್ಲಾಶ್ಬ್ಯಾಕ್ಗಳಿಲ್ಲ. ಯಾರಿಗೂ ಚರಿತ್ರೆಯಿಲ್ಲ. ಎಲ್ಲರೂ ಇವತ್ತಿಗಾಗಿ ಅಥವಾ ನಾಳೆಗಾಗಿ ಬದುಕುತ್ತಿರುವವರು. ಇವರಿಗೆ ಇದರ ಬಗ್ಗೆ ಯಾವತ್ತೂ ಪಾಪಪ್ರಜ್ಞೆಯೂ ಇಲ್ಲ. ಹೀಗೆ ಬದುಕುವುದೇ ಅವರಿಗಿರುವ ಆಯ್ಕೆ.
ಚಾಕೊಲೇಟ್ ಪ್ರೇಮಕಥೆ, ಮೆಲೊಡ್ರ್ಯಾಮ, ಅಥವಾ ಅಣ್ನ-ತಂಗಿಯರ ಸೆಂಟಿಮೆಂಟು, ಅಥವಾ ವಿಧೇಯ ನಮ್ರ ಭಾಷೆ ಇವೆಲ್ಲವನ್ನೂ ಅಪೇಕ್ಷಿಸುವ ಕರಣ ಜೋಹರನ ಅಭಿಮಾನಿಗಳಿಗಲ್ಲ, ಈ ಸಿನೆಮಾ.
ಮಕಬೂಲನ ಸಿನೆಮಾದ ಚಿತ್ರಕತೆಯನ್ನು ವಿಶಾಲನ ಜತೆ ಬರೆದಿದ್ದ ಅಬ್ಬಾಸ್ ಟೈರ್ವಾಲ ಎಂಬಾತ ಹೇಳಿದ್ದ "ಕಬೀ ಕುಷೀ ಕಭಿ ಗಮ್" ನಂತ ಸಿನೆಮಾ ಮಾಡುವಂಥ ದುಡ್ಡಿನ ಹತ್ತನೇ ಒಂದು ಭಾಗವನ್ನು ಕೂಡ "ದಿಲ್ ಚಾಹ್ತ ಹೈ" ನಂತಹ ಚಿತ್ರಗಳು ಮಾಡಲಾಗುವುದಿಲ್ಲ, ಎಂದು. ನಿಜವಿರಬಹುದು. ಆದರೆ, ಈ "ದಿಲ್ ಚಾಹ್ತ ಹೈ" ನ ಯಶಸ್ಸು ಮುಂದಿನ ಪೀಳಿಗೆಯ ಸಿನೆಮಾಗಳಾದ "ಆಮೀರ್" "ಎ ವೆನ್ಸ್ಡೇ" "ಮುಂಬೈ ಮೇರೀ ಜಾನ್" "ರಾಕ್ ಆನ್" " ಲಕ್ ಬೈ ಚಾನ್ಸ್" ಗಳು ಈ ಮಲ್ಟಿಪ್ಲೆಕ್ಸ್ ಎಂಬ ನಂಬುಗಸ್ಥ ಕಲ್ಟ್ ಅನ್ನು ತಯ್ಯಾರುಮಾಡಿರುವುದು ಬಾಲಿವುಡ್ಡಿನ ಹೆಗ್ಗಳಿಕೆ. ಈ ಕಲ್ಟ್ ಬೆಳೆಯುತ್ತಿರುವುದು ಸಿನೆಮಾಸಕ್ತರ ಪಾಲಿಗೆ ಹಬ್ಬ. ಬುದ್ದಿವಂತ ಸಿನೆಮಾಗಳಿಗಾಗಿ ಅಮೊರೊಸ್ ಪೆರೊಸ್, ಬೆಬೆಲ್ ಗಳಿಗಾಗಲೀ ಅಥವಾ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗಾಗಲೀ ಹೋಗಬೇಕಾಗಿಲ್ಲ.
ಹೋಗಿ, ಕಮೀನೆ ನೋಡಿಬನ್ನಿ.
"ತೊದಲುವ ಶಾಹಿದ್ ಕಪೂರನಿಗೆ ಗೊತ್ತಿರುವ ರಹಸ್ಯ ಭ್ರಷ್ಟ ಪೋಲೀಸನೊಬ್ಬನಿಗೆ ಬೇಕಾಗಿದೆ. ಆದರೆ ಈ ಉಗ್ಗನಿಗೆ ಇಂಥ ಅತಂಕದ ಸನ್ನಿವೇಶಗಳಲ್ಲಿ ತೊದಲಾಟ ಇನ್ನೂ ಜಾಸ್ತಿಯಾಗುತ್ತದೆ. ಈ ಪೊಲೀಸನಿಗೆ ಇವನಿಂದ ತನಗೆ ಬೇಕಾದ ಮಾಹಿತಿಯನ್ನು ಪಡಕೊಳ್ಳಲು ಸಮಯವಿರುವುದು ಮಾರನೆಯ ದಿನ ಎಂಟರ ತನಕ ಮಾತ್ರ. "ಇವನಿಗೆ ಹೀಗೇ ಬಿಟ್ಟರೆ ಇವನ ಹೆಸರು ಹೇಳುವುದಕ್ಕೇ ಬೆಳಿಗ್ಗೆ ಎಂಟರತನಕ ತಗೋತಾನಪ್ಪಾ" ಎಂದುಕೊಂಡು ಅವನ ಹತ್ತಿರ ಬಂದು "ಏಕ್ ಗಾನಾ ಗಾವ್" ಎಂದು ಹಾಡು ಹೇಳಲಿಕ್ಕೆ ಹೇಳುತ್ತಾನೆ. ಯಾಕೆಂದರೆ, ಹಾಡು ಹೇಳಬೇಕಾದರೆ ತೊದಲುವುದಿಲ್ಲವಲ್ಲಾ. ಈತ ತನಗೆ ಗೊತ್ತಿರುವ ರಹಸ್ಯವನ್ನು "ಕಬೀ ಕುಶಿ ಕಬೀ ಗಮ್" ರಾಗದ ಮೂಲಕ ಮೂಲಕ ಹೇಳಿ ಮುಗಿಸುತ್ತಾನೆ.
ವಿಶಾಲ ಭಾರದ್ವಾಜನ ಹೊಸ ಚಿತ್ರ ಕಮೀನೆ ಚಿತ್ರದ ಕೆಲವು ದೃಶ್ಯಗಳಿವು. ಸಿನೆಮಾ ಪ್ರಪಂಚದಲ್ಲಿ ಬಹಳ ವರ್ಷಗಳಿಗೊಮ್ಮೆ ನಟರ ಆಯ್ಕೆ, ನಟನೆ. ಚಿತ್ರಕಥೆ, ಸಂಗೀತ, ಛಾಯಾಗ್ರಹಣ, ಸಂಕಲನ ಎಲ್ಲವೂ ಒಂದಕ್ಕೊಂದು ಪೂರಕವಾಗಿ ವ್ಯಾಪಾರಿ ಚೌಕಟ್ಟಿನೊಳಗೇ ಒಂದು ನೋಡಬಹುದಾದ ಚಿತ್ರ ತಯಾರಾಗುತ್ತದೆ. ಇಂಥ ಒಂದು ಚಿತ್ರ ಕಮೀನೆ.
ಶೇಕ್ಸ್ಪಿಯರನ ನಾಟಕಗಳಾದ ಮ್ಯಾಕ್ಬೆತ್ ಮತ್ತು ಒಥೆಲೊ ವನ್ನು ಸಿನೆಮಾದ ಸಮಕಾಲೀನಕ್ಕೆ ಅಳವಡಿಸಿ ಮಕ್ಬೂಲ್ ಮತ್ತು ಓಂಕಾರ ಎಂಬ ಸಿನೆಮಾಗಳನ್ನು ನಿರ್ದೇಶಿಸಿದ್ದ ವಿಶಾಲ್ ಭಾರದ್ವಾಜ್, ಮಕಡೀ ಮತ್ತು ಬ್ಲೂ ಅಂಬ್ರೆಲಾ ಎಂಬ ನವಿರು ನಿರೂಪಣೆಯ ಸಿನೆಮಾಗಳನ್ನು ನಿರ್ದೇಶಿಸಿದ್ದಾನೆ. ಈತನ ಪಕ್ಕಾ ವ್ಯಾಪಾರೀ ಸಾಹಸ ‘ಕಮೀನೆ’ ಕ್ವಿಂಟಿನ್ ಟರಂಟಿನೋ, ಗೈ ರಿಚೀಗಳ ಕಲ್ಟ್ ಸಿನೆಮಾಗಳ ಸಾಲಿಗೆ ಸೇರಬಹುದಾದ ಸಿನೆಮಾ. ಅತಿ ಬಿಗಿಯಾದ ಚಿತ್ರಕಥೆ, ನಿರೂಪಣೆಯಲ್ಲಿನ ಬಿಗಿ ಮತ್ತು ಪಾತ್ರಗಳಿಗೆ ಬೇಕಾದ ನಟರ ಆಯ್ಕೆ ಮತ್ತು ಆ ನಟರುಗಳಿಂದ ಸರಿಯಾದ ನಟನೆ ತೆಗೆಯುವುದರಲ್ಲಿ ವಿಶಾಲ್ ಭಾರದ್ವಾಜ್ ಯಶಸ್ವಿಯಾಗಿದ್ದಾನೆ. ಬಾಲಿವುಡ್ಡಿನ ಎಲ್ಲ ಬಾಯ್ ಮೀಟ್ಸ್ ಗರ್ಲ್ ಫಾರ್ಮುಲಾಗಳನ್ನು ಮುರಿದು, ಒಂದು ಬುದ್ಧಿವಂತ ಸಿನೆಮಾವನ್ನು ಕೊಡುವುದರಲ್ಲಿ ಯಶಸ್ವಿಯಾಗಿದ್ದಾನೆ. ಇದರ ಮೂಲಕ ತನ್ನದೇ ಆದ ಒಂದು ಛಾಪನ್ನು ಅನ್ನು ಆತ ಬಾಲಿವುಡ್ನಲ್ಲಿ ಮೂಡಿಸಿದ್ದಾನೆ..
ತೊಂಭತ್ತರ ದಶಕದ ಮಧ್ಯದಲ್ಲಿ ಶುರುವಾದ ಮಲ್ಟಿಪ್ಲೆಕ್ಸ್ ನೋಡುಗರ ಸಿನೆಮಾದ ಕಲ್ಟ್ ಬಾಲಿವುಡ್ಡಿಗೆ ಬೇರೆಯೇ ಒಂದು ಸೊಗಡನ್ನು ಕೊಟ್ಟಿತು. ಮನಮೋಹನ ದೇಸಾಯಿ, ಪ್ರಕಾಶ್ ಮೆಹ್ರ, ಸುಭಾಶ್ ಗೈಗಳ ಅತಿರಂಜಿತವಾದ ಮೆಲೊಡ್ರಾಮ, ಪ್ರೀತಿ, ಪ್ರೇಮ, ಕಳೆದು ಹೋದ ಅಣ್ಣ ತಮ್ಮಂದಿರ ಸ್ಲೋ ಮೋಷನ್ನ ಮಿಲನಗಳ ಭಾರದಲ್ಲಿ sಸೊರಗಿದ್ದ ಬಾಲಿವುಡ್ಗೆ ಬದಲಾವಣೆ ಬೇಕಿತ್ತು. ಆಗ ಈ ಹೀರೋಗಳನ್ನು ವೈಭವೀಕರಿಸದೆ, ದೊಡ್ಡ ದೊಡ್ದ ಸೆಟ್ ಗಳನ್ನು ಹಾಕದೆ, ಕಡಿಮೆ ಬಜೆಟ್ನಲ್ಲಿ ನಿರೂಪಣೆಯ ಜಾಣ್ಮೆಯಿಂದ ವಸ್ತುವಿಷಯಗಳ ಆಯ್ಕೆಯ ವೈವಿಧ್ಯದಿಂದ ತಾಜಾ ಸಿನೆಮಾಗಳು ತಯಾರಾಗತೊಡಗಿದವು. ರಾಹುಲ್ ಭೋಸ್, ರನ್ವೀರ್ ಶೌರಿ, ಸಂಜಯ್ ಸೂರಿ, ರಜತ್ ಕಪೂರ್ ಮುಂತಾದ ನಟರುಗಳು ಹೀರೋಗಳಾಗತೊಡಗಿದರು. ಯಾವಾಗ ನಾಯಕನಟನಿಗೆ ಇಮೇಜಿನ ಭಾರವಿಲ್ಲದೆಯೇ ಹೋಯಿತೋ, ಆಗ ವಸ್ತುವಿನಲ್ಲಿ ವೈವಿಧ್ಯ ಮತ್ತು ಹೊಸ ಪ್ರಯೋಗಗಳು ನಡೆಯತೊಡಗಿದವು. ಜತೆಗೆ ಜಾಗತೀಕರಣದ ಹೊಳೆಯಲ್ಲಿ ಹೊರಗಿನಿಂದ ಹೂಡಿದ ಬಂಡವಾಳ ಮತ್ತು ಜಾಗತಿಕ ವಿತರಣಾ ವ್ಯವಸ್ಥೆಯಿಂದ ಇಂಥ ಸಿನೆಮಾಗಳಿಗೆ ಮಾರುಕಟ್ಟೆಯಲ್ಲಿಯೂ ಬೇಡಿಕೆ ಹೆಚ್ಚಾಗಿ, ಸಿನೆಮಾಗಳ ನಿರ್ಮಾಣದ ವೈವಿಧ್ಯ ಬಹುಮುಖಿಯಾಗಿತ್ತು. ಹಾಗಾಗಿ ಪಕ್ಕಾ ವ್ಯಾಪಾರಿ ಸಿನೆಮಾಗಳು ತಾವು ಇವಕ್ಕಿಂತ ಬೇರೆ ಎಂದು ತೋರಿಸಲು ಮೂವತ್ತರಿಂದ ನಲವತ್ತು ಕೋಟಿ ರೂಪಾಯಿಗಳನ್ನು ಸುಲಭವಾಗಿ ಒಂದು ಸಿನೆಮಾಕ್ಕೆ ಬಂಡವಾಳ ಹಾಕುವ ವ್ಯವಸ್ಥೆ ಶುರುವಾಯಿತು. ಹಿಂದೀ ಸಿನೆಮಾಗಳ ಹಾಡುಗಳಷ್ತೇ ಅಲ್ಲ, ಇಡೀ ಸಿನೆಮಾಕ್ಕೆ ಸಿನೆಮಾ ದಕ್ಷಿಣ ಆಫ್ರಿಕ, ಅಮೆರಿಕಾ ಇಂಗ್ಲೆಂಡುಗಳಲ್ಲಿ ಚಿತ್ರೀಕರಣವಾಗಲು ಶುರುವಾಯಿತು.
ಈ ರೀತಿಯ ಬಹಳಷ್ಟು ಸಿನೆಮಾಗಾಳು ಮೊದಲವಾರದಲ್ಲಿಯೇ ಹಾಕಿದ್ದ ಬಂಡವಾಳವನ್ನು ವಾಪಸ್ಸು ಪಡೆದು, ಗಲ್ಲಾಪಟ್ಟಿಗೆಂiಲ್ಲಿಯೂ ದುಡ್ಡು ಮಾಡಿಕೊಳ್ಳಹತ್ತಿದವು. ಯಾರಿಗೂ ತಮ್ಮ ಚಿತ್ರವನ್ನು ನೂರುದಿನಗಳು, ಇಪ್ಪತೈದುವಾರಗಳ ಕಾಲ ಓಡಿಸುವ ಇರಾದೆಯಿರಲಿಲ್ಲ. ಮೊದಲ ಮೂರುದಿನಗಳಲ್ಲಿ ಆದಷ್ಟು ಪ್ರಿಂಟುಗಳನ್ನು ಹಾಕಿ, ಎರಡು ಮೂರುವಾರಗಳಲ್ಲಿ ದುಡ್ಡು ಮಾಡುವ ಅನೇಕರು ಇಲ್ಲಿ ಬಂಡವಾಳ ಹೂಡಹತ್ತಿದರು. ಅದರ ಪರಿಣಾಮ ಈಗ "ಕಮೀನೆ" ಯಂಥ ಸಿನೆಮಾವನ್ನು ಮಾಡಿ ಕೂಡ ದುಡ್ಡು ಮಾಡಬಹುದು ಎಂಬ ನಂಬಿಕೆಯನ್ನು ರಾನಿ ಸ್ಕ್ರೂವಾಲನಂಥ ನಿರ್ಮಾಪಕರುಗಳಿಗೆ ಕೊಟ್ಟದ್ದು..
ಬಾಲಿವುಡ್ ಕ್ವಿಂಟನ್ ಟರಂಟಿನೊನಂಥ ನಿರ್ದೇಶಕರಿಂದ ಪ್ರಭಾವಿತವಾದದ್ದು ಹೊಸದೇನಲ್ಲ. ೨೦೦೨ರಲ್ಲಿ ಬಿಡುಗಡೆಯಾದ ಸಂಜಯ್ ಗುಪ್ತಾ ನಿರ್ದೇಶನದ "ಕಾಂಟೆ" ಟರಂಟಿನೋನ "ರೆಸರ್ವಾಯ್ರ್ ಡಾಗ್ಸ್" ಚಿತ್ರದಿಂದ ಸ್ಫೂರ್ತಿಪಡೆದದ್ದು. ತನ್ನ ವಿಶಿಷ್ಟ ನಿರೂಪಣೆ ಮತ್ತು ಪಾತ್ರಚಿತ್ರಣಗಳಿಂದ ರೆಸರ್ವಾಯ್ರ್ ಡಾಗ್ಸ್ ಟರಂಟಿನೋನನ್ನು ತನ್ನ ಮೊದಲ ಸಿನೆಮಾದಲ್ಲಿಯೇ ಅತಿ ಎತ್ತರಕ್ಕೆ ಕರೆದೊಯ್ದಿತ್ತು. ಈತ ಕ್ರೈಮ್ ಚಿತ್ರಗಳನ್ನು ಮಾಡಿದರೂ ಈತನ ಹೆಸರು ನೆನಪುಳಿಯುವುದು ಈತ ಮೂರರ ಜತೆ ನಾಲ್ಕನೆಯದು ಎನ್ನಿಸುವಂಥ ಮತ್ತೊಂದು ಕ್ರೈಮ್ ಸಿನೆಮಾ ಮಾಡಿದ್ದರಿಂದಲ್ಲ. ಇವನಿಗೆ ಕ್ರೈಮ್ಗಿಂತ ಈ ಕ್ರಿಮಿನಲ್ಗಳ ಪಾತ್ರಚಿತ್ರಣ ಬಹಳ ಮುಖ್ಯ. ಆದರೆ, "ಕಾಂಟೆ" ಈ ಸಿನೆಮಾ ಕ್ಷಣಗಳನ್ನು ನಕಲುಮಾಡಲು ಹೋಗಿ ದಯನೀಯವಾಗಿ ಸೋತಿತ್ತು. ನೇರವಾದ ನಿರೂಪಣೆಯಿಲ್ಲದ, ಕತೆ ಹಿಂದುಮುಂದಾಗಿ, ಅಡ್ಡಾದಿಡ್ಡಿಯಾಗಿ ಸರಿದು ಕೊನೆಗೆ ಎಲ್ಲ ಸಡಿಲ ತುದಿಗಳೂ ಒಂದೆಡೆ ಸೇರಿಕೊಂಡು ಗಂಟುಹಾಕಿಕೊಳ್ಳುವುದು ಈತನ ಸಿನೆಮಾಗಳ ಸಾಮಾನ್ಯ ಲಕ್ಷಣ. ಕತೆ ಕಗ್ಗಂಟಾಗಲು, ಹಲವಾರು ವಿಕ್ಷಿಪ್ತ ವೈವಿಧ್ಯಮಯ ಪಾತ್ರಗಳ ಅನ್ವೇಷಣೆಯಲ್ಲಿರುವ ಈ ಚಿತ್ರಗಳಿಗೆ ಈ ಕ್ರೈಮ್ ಪ್ರಪಂಚ ಹುಲುಸಾದ ಸಾಮಗ್ರಿಗಳನ್ನು ಒದಗಿಸಿಕೊಡುತ್ತದೆ. ಬರೇ ಸಾಂಸಾರಿಕತೆ ಅಥವಾ ಪ್ರೇಮಕಥೆಯಲ್ಲಿ ಈ ನಿರೂಪಣೆಯ ಸಾಧ್ಯತೆಗಳ ವೈವಿಧ್ಯವನ್ನು ಕಂಡುಹಿಡಿಯಲು ಇನ್ನೂ ಸಾಧ್ಯವಾಗಿಲ್ಲ.
ಕಮೀನೆಯ ನಿರ್ದೇಶಕ ವಿಶಾಲ್ ಭಾರ್ದ್ವಾಜ್ ಬಾಲಿವುಡ್ ಕಂಡ ಅಪರೂಪದ ಪ್ರತಿಭೆ. ಈತ ಸಂಗೀತ ನಿರ್ದೇಶನ ಮಾಡಿಕೊಂಡು, ಹಾಡು ಹೇಳಿಕೊಂಡು, ಕೆಲವೊಂದು ಸಾಕ್ಷ್ಯಚಿತ್ರಗಳನ್ನು ಮಾಡಿಕೊಂಡು ಇದ್ದ. ಈತ "ಸತ್ಯ" "ಮಾಚೀಸ್" "ಯು ಮಿ ಔರ್ ಹಮ್" ಮತ್ತಿತರ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದನೆಂದು ಈಗ ಹೇಳಿದರೆ ಯಾರೂ ನಂಬಲಿಕ್ಕಿಲ್ಲ. ಪೋಲಿಶ್ ನಿರ್ದೇಶಕ ಕ್ರಿಸ್ಟಾಫ್ ಕಿಸ್ಲೋಸ್ಕಿಯ ನಿರ್ದೇಶನದ ಚಿತ್ರ ಟೆಲಿಡ್ರಾಮಗಳನ್ನು ನೋಡಿ ಪ್ರಭಾವಿತನಾಗಿ ಈತನೂ ಸಿನೆಮಾ ಮಾಡಬೇಕೆಂದು ನಿರ್ಣಯಿಸಿ "ಮಕಡೀ" ಎಂಬ ಒಂದು ಮಕ್ಕಳ ಚಿತ್ರವನ್ನು ನಿರ್ದೇಶಿಸಿದ್ದ. ನಂತರ, ಶೇಕ್ಸಪಿಯರನ ನಾಟಕಗಳನ್ನು ಕ್ರೈಮ್ ಪ್ರಪೆಂಚದ ಹಿನ್ನೆಲೆಯಲ್ಲಿ ಆಧುನಿಕೀಕರಿಸಿ ಮಕ್ಬೂಲ್ ಮತ್ತು ಓಂಕಾರ ಎಂಬ ಸಿನೆಮಾಗಳನ್ನು ಚಿತ್ರಿಸಿದ. ಓಂಕಾರ ಈತ ವ್ಯಾಪಾರೀ ಸಿನೆಮಾಗಳನ್ನೂ ಬಹಳ ವಿಭಿನ್ನವಾಗಿ ಮಾಡಿಕೊಟ್ಟೂ ದುಡ್ಡುಮಾಡಬಹುದು ಎನ್ನುವ ನಂಬಿಕೆಯನ್ನು ಸಿನೆಮಾ ನಿರ್ಮಾಪಕರಲ್ಲಿ ಕೊಟ್ಟಿತು. ಪರಿಣಾಮವೇ, ಇಂದಿನ ಕಮೀನೆ.
ಮೇಲಿನೋಟಕ್ಕೆ ಚದುರಿದ ಚಿತ್ರಗಳಂತೆ ಕಾಣುವ ಈ ಚಿತ್ರದ ಕಥೆ ಹೇಳಲು ಸುಲಭವಲ್ಲ. ಹಾಗೆ ನೋಡುತ್ತಾ ಹೋದರೆ, ಕತೆಯಲ್ಲಿ ಯಾವ ಹೆಚ್ಚುಗಾರಿಕೆಯೂ ಇಲ್ಲ. ಚಾರ್ಲಿ ಮತ್ತು ಗುಡ್ಡು ಅನ್ನುವ ತೊದಲುವ ಮತ್ತು ಉಗ್ಗುವ ಇಬ್ಬರು ಅವಳಿಗಳು, ಇಬ್ಬರ ಹಾದಿಯೂ ಬೇರೆ. ಒಬ್ಬ ಮುಂಬಯಿಯ ಭೂಗತ ಸಾಮ್ರಾಜ್ಯದಲ್ಲಿ ಸಣ್ಣ ಗ್ಯಾಂಗ್ಸ್ಟರ್. ಇನ್ನೊಬ್ಬ ಯಾವುದೋ ಒಂದು ಸಣ್ಣ ಎನ್ಜೀಓದಲ್ಲಿ ಕೆಲಸ ಮಾಡುತ್ತಾನೆ. ಆದರೆ, ಇಬ್ಬರ ಆಯ್ಕೆಗಳೂ ಬೇರೆಯಾಗಿರುವುದರಿಂದ ಇಬ್ಬರೂ ಪರಸ್ಪರರನ್ನು ದ್ವೇಷಿಸುತ್ತಾರೆ. ಚಾರ್ಲಿ ರೇಸಿನಲ್ಲಿ ಬಾಜಿ ಕಟ್ಟುವವ. ಯಾವುದೋ ರೇಸಿನಲ್ಲಿ ಮೋಸದಿಂದ ದುಡ್ಡು ಕಳಕೊಂಡ ಎನ್ನುವ ಕಾರಣದಿಂದ ಆ ಜ್ಯಾಕಿಯನ್ನು ಹೆದರಿಸಿ ತನ್ನ ದುಡ್ಡನ್ನು ವಾಪಸ್ಸು ಪಡೆದುಕೊಳ್ಳುವ ಪ್ರಯತ್ನದಲ್ಲಿ ಆತ ತನ್ನ ಇತರ ಗ್ಯಾಂಗ್ಸ್ಟರ್ಗಳ ಸಹಾಯವನ್ನು ಪಡೆಯುತ್ತಾನೆ. ಆದರೆ, ನಂತರವಾಗುವ ಹಲ್ಲಾಗುಲ್ಲಾಗಳ ಸರಣಿಯಲ್ಲಿ ಸುಳ್ಳು, ಮೋಸ, ವಂಚನೆಗಳ ಜಾಲದಲ್ಲಿ ತಮಗೆ ಅರಿವಾಗದ ಕಾರಣಗಳಿಂದ ಇಬ್ಬರೂ ಸಿಕ್ಕಿಬೀಳುತ್ತಾರೆ. ನಂತರ, ಮಾಮೂಲೀ ಫ಼ಾರ್ಮ್ಯುಲಾದಂತೆ ಅಣ್ಣತಮ್ಮಂದಿರಿಬ್ಬರೂ ಈ ಜಗತ್ತಿನಲ್ಲಿ ತಮಗಿರುವುದೇ ತಾವಿಬ್ಬರು ಎನುವುದನ್ನು ಅರಿತುಕೊಳ್ಳುತ್ತಾರೆ. ಅಷ್ಟೇ ಅಲ್ಲ, ಕಳಕೊಂಡಿದ್ದ ತಮ್ಮ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.
ಇದು ಸ್ಥೂಲವಾಗಿ ಚಿತ್ರಕಥೆ. ಇಷ್ಟೇನಾ, ಇದು ಮಾಮೂಲೀ ಬಾಲಿವುಡ್ ಕಥೆ ಎಂದು ಮೂಗುಮುರಿದರೆ ಒಂದು ಅದ್ಭುತ ಸಿನೆಮಾ ಅನುಭವವನ್ನು ಕಳೆದುಕೊಳ್ಳುತ್ತೀರಿ, ಆದರೆ ಮೊದಲೇ ಹೇಳಿಬಿಡುತ್ತೇನೆ. ಇಂಥಹ ಸಿನೆಮಾ ನೋಡುವುದಕ್ಕೆ ಬೇರೆ ಮನಸ್ಥಿತಿಯಿರಬೇಕು. ರಕ್ತಪಾತ, ಹಿಂಸೆ, ಸ್ಫೋಟಗಳು, ತೀರ ಕಚ್ಛಾ ಎನಿಸುವ ಭಾಷೆ ಮತ್ತು ಕೆಲವೊಮ್ಮೆ ವಿಕೃತ ಎನ್ನುವ ಈ ಪಾತ್ರಗಳ ನಡವಳಿಕೆ. ಇವನ್ನೆಲ್ಲಾ ಸಹಿಸಿಕೊಳ್ಳುವ ಇವುಗಳ ಆಚೆಯ ಆ ಪಾತ್ರಗಳನ್ನು ಮತ್ತು ಸಿನೆಮಾ ಮಾಡುವುದರ ಕುಸುರಿಯ ಬಗ್ಗೆ ನಿಮಗೆ ಆಸಕ್ತಿಯಿದ್ದರೆ ನಿಮಗೆ ಈ ಚಿತ್ರ ಇಷ್ಟವಾಗಬಹುದು. ಮುಖ್ಯವಾಗಿ ವ್ಯಾಪಾರೀ ಸಿನೆಮಾಗಳ ಚೌಕಟ್ಟಿನಲ್ಲಿ ಕಮೀನೆ ಮನಸೆಳೆಯುವುದು ಇದರ ಬಿಗಿಯಾದ ಚಿತ್ರಕಥೆಯಿಂದ ಮತ್ತು ಪ್ರತಿಯೊಬ್ಬರಿಂದ ನಿರ್ದೇಶಕ ತೆಗೆದಿರುವ ನಟನೆಯಿಂದ. ಚಿತ್ರದ ಮುಖ್ಯ ಪಾತ್ರಗಳಾದ ಶಾಹೀದ ಕಪೂರ್ ಮತ್ತು ಪ್ರಿಯಾಂಕ ಚೋಪ್ರ ಇರಲಿ, ಈ ಚಿತ್ರದ ಯಾವ ಪಾತ್ರವನ್ನೂ ಸೊರಗಲು ಬಿಟ್ಟಿಲ್ಲ, ವಿಶಾಲ್ ಭಾರದ್ವಾಜ್. ಮಹಾರಾಷ್ಟ್ರ ಮರಾಠರಿಗೆ ಮಾತ್ರ ಎನ್ನುವ ರಾಜಕಾರಣಿ- ವಿಲನ್ ಅನ್ಮೋಲ್ ಗುಪ್ತೆ (ತಾರೇ ಜಮೀನ್ ಪರ್ ಖ್ಯಾತಿ), ಪಿಸ್ತೂಲಿನ ವ್ಯೂಫೈಂಡರ್ ಸರಿಯಿದೆಯೇ ಎಂದು ಜನ ಕೂತಿರುವ ರೂಮಿನಲ್ಲಿಯೇ ಪರೀಕ್ಷಿಸುವ ಬಂಗಾಲಿಬಾಬುಗಳು, ಕೊಕೈನ್ ಸ್ಮಗ್ಲರ್ ತಾಶಿ, ಪೋಲೀಸರು ಭ್ರಷ್ಟರಾಗುವುದೂ ಎಷ್ಟು ಕಷ್ಟ ಅನಿಸುವಂತೆ ಮಾಡುವ ಇನ್ಸ್ಪೆಕ್ಟರ್ , ಹೀಗೆ ಅನೇಕ ಕ್ಯಾರಿಕೇಚರಿಶ್ ಪಾತ್ರಗಳು ನಮ್ಮಮುಂದೆ ಬೆಳೆಯುತ್ತಲೇ ಹೋಗುತ್ತವೆ. ನಿರ್ದೇಶಕನ ಜಾಣ್ಮೆಯಿರುವುದು ತಾನೊಂದು ಬಿಗಿಯಾದ ಒಗಟಿನಂತಹ ಚಿತ್ರಕಥೆಯನ್ನು ಬರೆದಿಟ್ಟು ಅದರಲ್ಲಿ ಈ ಪಾತ್ರಗಳು ತಂಪಾಡಿಗೆ ತಾವು ಹರಿಯಬಿಟ್ಟಿದ್ದಾನೆ. ಎಲ್ಲ ಪಾತ್ರಗಳಿಗೂ ಪರದೆಯ ಮೇಲೆ ಸಮಾನ ಅವಕಾಶವಿದೆ. ಅನೇಕ ಬೇರೆಬೇರೆ ಸ್ತರಗಳ ಕಥೆಗಳು ತಾನಾಗಿಯೇ ಒಂದುಗೂಡುತ್ತವೆ, ಒಂದು ಕಥೆಗೂ ಇನ್ನೊಂದು ಕಥೆಗೂ ಇರುವ ಸಂಂಧವೇನು ಎನ್ನುವುದನ್ನು ಕೂಡ ಆ ಕಥೆಗಳೇ ಪಾತ್ರಗಳೇ ಕಂಡುಕೊಳ್ಳುತ್ತವೆ. ಈ ಆಡ್ಬಾಲ್ ಅನ್ನಿಸುವಂಥ ಪಾತ್ರಗಳು ಆಡುವ ಮಾತುಗಳು, ಅವರುಗಳ ಪ್ರಪಂಚ, ಸ ಕ್ಕೆ ಫ ಎಂದು ಉಚ್ಚರಿಸುವ ಚಾರ್ಲಿ ಸೊಫಿಯಗೆ ಈತ ಅನ್ನುವುದು ಫಫಿಯ) ಕಥೆ ಹೇಳುತ್ತಾ ಹೋಗುತ್ತಾನೆ. ಇಲ್ಲಿ ವ್ಯಕ್ತವಾಗುವ ಡಾರ್ಕ್ ಹ್ಯೂಮರ್, (ಕನ್ನಡದಲ್ಲಿ ಇದಕ್ಕೆ ವಕ್ರ ಹಾಸ್ಯವೆನ್ನಬಹುದೇನೋ), ಅನ್ಯೋಕ್ತಿಗಳು, ತೊದಲು, ಉಗ್ಗುಗಳನ್ನು ಹಾಸ್ಯಮಾಡುವ ಪಾಪಪ್ರಜ್ಞೆಯಿಲ್ಲದ ಮನುಷ್ಯ ಪ್ರಜ್ಞೆ ಇವೆಲ್ಲವೂ ನಿಮಗೆ ಖುಷಿ ಕೊಡುವಂತಿದ್ದರೆ ನೀವು ಈ ಸಿನೆಮಾ ನೋಡಿ.
ಇಂಥ ಸಿನೆಮಾಗಳು, ಕ್ರೈಮ್ ಕೇಪರ್ಗಳ ನಿರ್ದೇಶಕರುಗಳಿಗೆ ನೋಡುಗರ ಬಗೆ ಕ್ಲೀಶೆಯಾದ ನಂಬಿಕೆಯೊಂದಿದೆ. ಪ್ರೇಕ್ಷಕರುಗಳಿಗೆ ಪ್ರತೀ ಫ್ರೇಮನ್ನೂ ಅರ್ಥಮಾಡಿಸಬೇಕು, ಅದಕ್ಕಾಗಿ ಕೈತುತ್ತು ಹಾಕಬೇಕು, ಪ್ಲಾಟನ್ನು ಹೆಚ್ಚು ಜಗ್ಗಾಡಿದರೆ ಅಥವಾ ತೀರ ಅಮೂರ್ತ ಮಾಡಿದರೆ ಜನಕ್ಕೆ ಅರ್ಥವಾಗುವುದಿಲ್ಲ, ಎಂಬುದು. ಆದರೆ, ಈ ನಂಬಿಕೆಗಳನ್ನೆಲ್ಲ ವಿಶಾಲ್ ಭರದ್ವಾಜ ಗಾಳಿಗೊಗೆದಿದ್ದಾನೆ. ಇಲ್ಲಿ ಯಾರಿಗೂ ಅನವಶ್ಯಕವಾದ ಫ್ಲಾಶ್ಬ್ಯಾಕ್ಗಳಿಲ್ಲ. ಯಾರಿಗೂ ಚರಿತ್ರೆಯಿಲ್ಲ. ಎಲ್ಲರೂ ಇವತ್ತಿಗಾಗಿ ಅಥವಾ ನಾಳೆಗಾಗಿ ಬದುಕುತ್ತಿರುವವರು. ಇವರಿಗೆ ಇದರ ಬಗ್ಗೆ ಯಾವತ್ತೂ ಪಾಪಪ್ರಜ್ಞೆಯೂ ಇಲ್ಲ. ಹೀಗೆ ಬದುಕುವುದೇ ಅವರಿಗಿರುವ ಆಯ್ಕೆ.
ಚಾಕೊಲೇಟ್ ಪ್ರೇಮಕಥೆ, ಮೆಲೊಡ್ರ್ಯಾಮ, ಅಥವಾ ಅಣ್ನ-ತಂಗಿಯರ ಸೆಂಟಿಮೆಂಟು, ಅಥವಾ ವಿಧೇಯ ನಮ್ರ ಭಾಷೆ ಇವೆಲ್ಲವನ್ನೂ ಅಪೇಕ್ಷಿಸುವ ಕರಣ ಜೋಹರನ ಅಭಿಮಾನಿಗಳಿಗಲ್ಲ, ಈ ಸಿನೆಮಾ.
ಮಕಬೂಲನ ಸಿನೆಮಾದ ಚಿತ್ರಕತೆಯನ್ನು ವಿಶಾಲನ ಜತೆ ಬರೆದಿದ್ದ ಅಬ್ಬಾಸ್ ಟೈರ್ವಾಲ ಎಂಬಾತ ಹೇಳಿದ್ದ "ಕಬೀ ಕುಷೀ ಕಭಿ ಗಮ್" ನಂತ ಸಿನೆಮಾ ಮಾಡುವಂಥ ದುಡ್ಡಿನ ಹತ್ತನೇ ಒಂದು ಭಾಗವನ್ನು ಕೂಡ "ದಿಲ್ ಚಾಹ್ತ ಹೈ" ನಂತಹ ಚಿತ್ರಗಳು ಮಾಡಲಾಗುವುದಿಲ್ಲ, ಎಂದು. ನಿಜವಿರಬಹುದು. ಆದರೆ, ಈ "ದಿಲ್ ಚಾಹ್ತ ಹೈ" ನ ಯಶಸ್ಸು ಮುಂದಿನ ಪೀಳಿಗೆಯ ಸಿನೆಮಾಗಳಾದ "ಆಮೀರ್" "ಎ ವೆನ್ಸ್ಡೇ" "ಮುಂಬೈ ಮೇರೀ ಜಾನ್" "ರಾಕ್ ಆನ್" " ಲಕ್ ಬೈ ಚಾನ್ಸ್" ಗಳು ಈ ಮಲ್ಟಿಪ್ಲೆಕ್ಸ್ ಎಂಬ ನಂಬುಗಸ್ಥ ಕಲ್ಟ್ ಅನ್ನು ತಯ್ಯಾರುಮಾಡಿರುವುದು ಬಾಲಿವುಡ್ಡಿನ ಹೆಗ್ಗಳಿಕೆ. ಈ ಕಲ್ಟ್ ಬೆಳೆಯುತ್ತಿರುವುದು ಸಿನೆಮಾಸಕ್ತರ ಪಾಲಿಗೆ ಹಬ್ಬ. ಬುದ್ದಿವಂತ ಸಿನೆಮಾಗಳಿಗಾಗಿ ಅಮೊರೊಸ್ ಪೆರೊಸ್, ಬೆಬೆಲ್ ಗಳಿಗಾಗಲೀ ಅಥವಾ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗಾಗಲೀ ಹೋಗಬೇಕಾಗಿಲ್ಲ.
ಹೋಗಿ, ಕಮೀನೆ ನೋಡಿಬನ್ನಿ.
Friday, August 7, 2009
ಪಂಡಿತ ಪಾಮರರ ನಡುವಿನ ತೂಗು ಸೇತುವೆ
ನಮ್ಮ ಸೃಜನಶೀಲ ಸಂವೇದನೆಗಳನ್ನು ಹುಟ್ಟಿಸುವುದು ಯಾವುದು? ಬೆಳೆಸುವುದು ಯಾವುದು. ಈ ಸಂವೇದನೆಗಳ ಹುಟ್ಟಿಗೂ ಬೆಳವಣಿಗೆಗೂ ಒಂದು ಸಾವಯವ ಸಂಬಂಧವಿದೆಯಾ? ಈ ಹುಟ್ಟು ಮತ್ತು ಬೆಳವಣಿಗೆ ಒಂದು ಪ್ರಯತ್ನಪೂರ್ವಕ ಕ್ರಿಯೆಯಾ? ಪ್ರಯತ್ನಪೂರ್ವಕವಾಗಿ ಬೆಳೆಸಿಕೊಳ್ಳುವುದು "ಸೃಜನ" ಹೇಗೆ ಆಗುತ್ತದೆ.
ಹುಟ್ಟಾ ಯಾರೂ ಸಾಹಿತಿಯಾಗುವುದಿಲ್ಲ. ಆದರೆ, ಈ ಬರೆಯುವ ಗೀಳು ಹೇಗೋ ಶುರುವಾಗುತ್ತದೆ.
"ಪೂರ್ತಿಯೊಣಗದ ಚಡ್ಡಿ ಹಸಿಹಸಿ
ಸಿಕ್ಕಿಸಿಕೊಂಡು ಬೂರಸು ಕೊಡೆಯೆತ್ತಿ
ಜುಳುಜುಳು ಕೆಸರು ತಂಪುಪಾದ॒
ಹೆಗಲಿಗಂಟಿದ ಪಾಟಿಚೀಲ... ಹೊತ್ತು
ಶಾಲೆ ಹೊರಟ ಕೇರಿಹಿಂಡು ಹಿಂಡು
ದಾರಿಯಿಕ್ಕೆಲದಲ್ಲೂ ಗಟಾರ ಕೊಚ್ಚುತ್ತಿರುವ
ಥಂಡಾ ಥಂಡಾ ಚಾ-
ನಿನ್ನೇತನಕ ಹಾರಾಡುತ್ತಿದ್ದ ಟೂರಿಂಗ್
ಟಾಕೀಸಿನ ತಂಬು ಒಮ್ಮೆಗೇ ಸ್ತಬ್ಧ"
ಈ ತರ. ಮುಗ್ಢತೆ, ಬೆರಗು, ನಮ್ಮ ಪ್ರಪಂಚದ ಸಣ್ಣಸಣ್ಣ ಆದರೆ ಗಟ್ಟಿವಿವರಗಳು ಮತ್ತು ನಮ್ಮನ್ನು ಕಾದ, ಪೊರೆದ ಭಾವಗಳ ನೆನವರಿಕೆಯಿಂದ ಹುಟ್ಟಬಹುದು, ಮೊದಮೊದಲ ಕವಿತೆ. ಇಲ್ಲಿ ಬುದ್ಧಿವಂತಿಕೆಯಿಲ್ಲ, ನೋಡಿದ್ದನ್ನು ಪ್ರಾಮಾಣಿಕವಾಗಿ ಸುಮ್ಮನೇ ಹಂಚಿಕೊಳ್ಳಬೇಕೆನ್ನಿಸಿದೆ. ಸಂಭ್ರಮದ ವಿವರಗಳನ್ನು ಹೇಳಬೇಕೆನಿಸಿದೆ.
ಆದರೆ, ಇದು ಹೇಗೆ ಶುರುವಾಯಿತು ಎನ್ನುವುದು ನಮಗೆ ಯಾಕೆ ಮುಖ್ಯವಾಬೇಕು?
* * *
ಸಾಹಿತಿಗಳೆಂದರೆ ಬೇರೆ ಯಾವುದೋ ಲೋಕದವರು ಅಥವಾ ಬೇರೆ ಯಾರಿಗೂ ಗೊತ್ತಿರದದ್ದು ಇವರಿಗೆ ಗೊತ್ತಿರುವುದರಿಂದಲೇ ಅವರು ಏನನ್ನೋ ಸೃಷ್ಟಿಸಬಲ್ಲರು ಎಂಬ ಭಾವನೆ ನಮ್ಮಲ್ಲಿರುವುದನ್ನು ನಾವು ನೋಡುತ್ತೇವೆ. ಹಾಗಾಗಿಯೇ ಒಬ್ಬ ಕವಿಯನ್ನು ಜಾಗತೀಕರಣದ ಹಪಾಪಿಗಳ ಬಗ್ಗೆ ಒಂದು ಲೇಖನ ಬರೆದುಕೊಡಿ ಎಂತಲೋ ಅಥವಾ ಒಬ್ಬ ಕತೆಗಾರನನ್ನು ಅಮೆರಿಕಾದ ಎಕಾನಮಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂತಲೋ ಕೇಳುವ ಪರಿಪಾಠ ನಮ್ಮಲ್ಲಿದೆ. ಇವರು ಸಾಹಿತಿಗಳಲ್ಲವೇ? ಇಷ್ಟು ಚೆನ್ನಾಗಿ ಕತೆ ಬರೆಯುತ್ತಾರೆ ಇವರಿಗೆ ಎಲ್ಲ ವಿಷಯವೂ ಗೊತ್ತಿರಲೇಬೇಕು, ಅಲ್ಲವೇ? ಅದು ಹಾಗಿರಲಿ ಹೀಗೆ ಕೇಳಿದ ತಕ್ಷಣ ಕವಿ ಅಥವಾ ಬರಹಗಾರ ಎನ್ನಿಸಿಕೊಂಡವನು ಕೂಡ ಹೇಗೋ ಒಂದಿಷ್ಟು ವಿಷಯ ಸಂಗ್ರಹಿಸಿಕೊಂಡು ಬರೆದುಬಿಡಬಹುದು ಎಂದುಕೊಂಡು ಬರೆಯುವ ರೂಢಿಯೂ ನಮ್ಮಲ್ಲಿದೆ.
ಇಲ್ಲಿ ಸೃಜನಶೀಲ ಸಾಹಿತ್ಯಕ್ಕೂ ಚಿಂತನ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ಬರೆಯುವವರು ಅರ್ಥಮಾಡಿಕೊಳ್ಳಬೇಕು. ಸೃಜನಶೀಲ ಬರವಣಿಗೆಗೆ ಬೇಕಾದ ನಮ್ಮ ಸಂವೇದನೆಗಳನ್ನು ಗಟ್ಟಿಯಾಗಿ ಬೆಳೆಸುವುದು ನಮ್ಮ ಬಾಲ್ಯ. ಬಾಲ್ಯದಲ್ಲಿ ನಾವು ಅಣ್ಣಾವ್ರ ಸಿನೆಮಾ ನೋಡಿರುತ್ತೇವೆಯೋ, ಲಿಂಡಾ ಗುಡ್ಮನ್, ಟಾಮ್ ಸಾಯರ್ ಓದಿರುತ್ತೇವೆಯೋ, ಭೈರಪ್ಪನವರ ಕಾದಂಬರಿಗಳನು ಓದಿರುತ್ತೇವೋ ಅಥವಾ ಗಂಗಾಧರ ಚಿತ್ತಲರನ್ನು ಓದಿರುತ್ತೇವೆಯೋ ಅನ್ನುವುದು ಅವರವರಿಗೆ ಬಿಟ್ಟಿದ್ದು. ಆದರೆ ನಮ್ಮ ಸೃಜನಕ್ರಿಯೆಯನ್ನು ರೂಪಿಸುವುದು ಮುಖ್ಯವಾಗಿ ಬಾಲ್ಯದ ಈ ಓದು ಮತ್ತು ನಾವು ಬೆಳೆದ ಪರಿಸರ. ನಂತರದ ನಮ್ಮ ಓದು,ಅನುಭವಗಳು ಇದನ್ನು ಪೋಷಿಸಬಹುದು ಅಥವಾ ಪೂರಾ ಒಡೆದು ಚೂರುಚೂರು ಮಾಡಬಹುದು ( ಈ ಛಿದ್ರಕ ಕ್ರಿಯೆಯೇ ಸೃಜನವಾಗಬಹುದು). ಆದರೆ ಈ ಸೃಜನಕ್ರಿಯೆಯ ಮೂಲ ಧಾತು ಮತ್ತು ನೆಲೆಗಟ್ಟು ಮಾತ್ರ ಬಾಲ್ಯವೇ.
ಬೆಳೆಯುತ್ತಾ ಬೆಳೆಯುತ್ತಾ ಇದ್ದಕ್ಕಿದ್ದಹಾಗೆ ನಾವು ನಮ್ಮ ಓದಿನ ಬಗ್ಗೆ, ನಮ್ಮ ಸಂವೇದನೆಗಳ ಬಗ್ಗೆಯೇ ಕ್ರಿಟಿಕಲ್ ಆಗುತ್ತೇವೆ. ನಮ್ಮ ಓದು, ಗ್ರಹಿಕೆ ಸರಿಯಿದೆಯೇ ಎಂದು ನೋಡಿಕೊಳ್ಳಲು ಡಿ ಆರ್ ನಾಗರಾಜ್ರನ್ನು ಓದುತ್ತೇವೆ, ಜಿಡ್ಡು ಕೃಷ್ಣಮೂರ್ತಿಯವರನ್ನು ಓದುತ್ತೇವೆ, ಆಶೀಸ್ ನಂದಿ, ಅಮಾರ್ತ್ಯ ಸೇನ್ ಇನ್ನೂ ಹೀಗೇ ಇನ್ನೊಂದಿಷ್ಟು ಜನ ಬುದ್ಧಿವಂತರನ್ನು ಓದಿ ನಮ್ಮ ಸಂವೇದನೆಗಳು ಚೂಪಾಗಿದೆ ಎಂದುಕೊಳ್ಳುತ್ತೇವೆ. ಟ್ರಿಕಲ್ ಡೌನ್ ಎಕನಾಮಿಕ್ಸ್, ಪೋಸ್ಟ್ ಮಾಡ್ರನಿಸಮ್, ಜಾಗತೀಕರಣ, ಗ್ಲೋಬಲ್ ವಾರ್ಮಿಂಗ್, ಡಿಕನ್ಸ್ಟ್ರಕ್ಷನ್-ಹೀಗೆ ಜಗತ್ತಿನ ಎಲ್ಲ ಉಸಾಬರಿಗಳ ಬಗ್ಗೆ ಮಾತಾಡಲು ತೊಡಗುತ್ತೇವೆ. ಇಲ್ಲವೇ ಬರೆಯಲೂ ತೊಡಗುತ್ತೇವೆ.
ಸೃಜನಶೀಲ ಬರಹ ಮತ್ತು ಸೃಜನೇತರ ಬರಹಕ್ಕೆ ಇರುವ ವ್ಯತ್ಯಾಸವನ್ನು ಒಬ್ಬ ಅರ್ಥ ಮಾಡಿಕೊಳ್ಳುವುದು ಹೇಗೆ? ಈ ಸಮಸ್ಯೆ ಬರುವುದು ಕತೆ ಕಾದಂಬರಿ ಕವನ ಬರೆದುಕೊಂಡಿದ್ದವ ಇದ್ದಕ್ಕಿದ್ದ ಹಾಗೆ ಈ "ನಾನ್ ಫಿಕ್ಷನ್" ಅನ್ನುವ ಪ್ರಕಾರಕ್ಕೆ ಕೈಯಾಡಿಸಿದಾಗ. ಪ್ರಬಂಧ ಬರೆಯುವಾಗ ಆತನ ಕಥನಕ್ರಿಯೆ ಜಾಗ್ರತವಾಗಿಬಿಡುತ್ತದೆ. ಕಥೆ ಬರೆಯುವಾಗ ವೈಚಾರಿಕತೆ ತಲೆ ಹಾಕುತ್ತದೆ. ಕಥೆ, ಕಾದಂಬರಿಗಳಲ್ಲಿ ವೈಚಾರಿಕತೆ ಇರಬಾರದೆಂದಲ್ಲ. ಅದು ಕಥೆಯ ಭಾಗವಾಗಿ ಬಂದರೆ ಓದುವುದಕ್ಕೆ ಕಿರಿಕಿರಿಯಾಗುವುದಿಲ್ಲ. ಆದರೆ, ಕತೆಯ ಮುಖ್ಯವಾಹಿನಿಯನ್ನು ಬಿಟ್ಟು ಈ ವೈಚಾರಿಕತೆ ತನ್ನಂತಾನೇ ನಿಂತುಬಿಟ್ಟರೆ ರಸ್ತೆಯ ಮಧ್ಯೆ ಒಂದು ದೊಡ್ಡ ಕಲ್ಲು ಅಡ್ಡ ಬಂದಂತೆ ಭಾಸವಾಗುತ್ತದೆ. ಕಥನ ಕುತೂಹಲಿಗಳು ಇದನ್ನು ಬಳಸಿಕೊಂಡು ಮುಂದೆ ಹೋಗುತ್ತಾರೆ. ಈ ಕಲ್ಲಿನ ಶಿಲ್ಪ ಅಂದವಿದೆಯೆಂದು ಅದನ್ನು ಅನುಭವಿಸುವವರು ಅದನ್ನೇ ನೋಡುತ್ತಾ ಮೈಮರೆಯುತ್ತಾ ನಿಂತರೂ ಅದು ಕತೆಯ ಓಟಕ್ಕೆ ಅಥವಾ ಆ ಕಲ್ಲಿನ ಸೌಂದರ್ಯಕ್ಕೆ ಒಟ್ಟು ತಡೆಯನ್ನೇ ಉಂಟುಮಾಡುತ್ತದೆ.
ಇದು ಯಾಕೆ ಮುಖ್ಯವಾಗಬೇಕು? ಸೃಜನಶೀಲ ಬರವಣಿಗೆ ಭಾವಪ್ರಪಂಚಕ್ಕೆ ಮಾತ್ರ ಸೇರಿರಬೇಕು. ಸೃಜನೇತರ ಬರವಣಿಗೆ ಬುದ್ಧಿಮತ್ತೆಗೆ, ಮತ್ತು ಅಧ್ಯಯನ ಮಾಡಿ ಬರೆದದ್ದಾಗಬೇಕು ಎಂದು ಪಂಡಿತರು ವಿವೇಚಿಸುತ್ತಾರೆ. ಅಂದರೆ, "ಸಂಸ್ಕಾರ" ‘ಭಾರತೀಪುರ" ಭಾವಪ್ರಪಂಚದ ಬರವಣಿಗೆಗಳು (ಅವುಗಳ ವೈಚಾರಿಕತೆಯ ನಡುವೆಯೂ). ರುಜುವಾತು, ಸನ್ನಿವೇಶ, ಪೂರ್ವಾಪರ- ಅಧ್ಯಯನಶೀಲ ಬರವಣಿಗೆಗಳು.
ಈ ಭಾವಪ್ರಪಂಚದಲ್ಲಿ ನಮ್ಮ ದೈನಿಕ ಖಯಾಲಿಗಳು ಎಷ್ಟರ ಮಟ್ಟಿಗೆ ತಮ್ಮ ಪ್ರಭಾವವನ್ನು ಬೀರಿರುತ್ತವೆ? ಚಿಕ್ಕಂದಿನಲ್ಲಿ ನಾವು ನೋಡಿದ ಅಣ್ಣಾವ್ರ ಸಿನೆಮಾ, ಓದಿದ ಜನಪ್ರಿಯ ಕಾದಂಬರಿಗಳು, ಚಂದಮಾಮ, ಬಾಲಮಿತ್ರ, ಡುಂಡಿರಾಜರ ಚುಟುಕಗಳು ಇವೆಲ್ಲ ನಮ್ಮ ಭಾವಪ್ರಪಂಚದಲ್ಲಿಲ್ಲವೇ? ಆದರೆ ಅವು ನಮ್ಮ ಸೃಜನಕ್ರಿಯೆಯಲ್ಲಿ ಬರೇ ಕನ್ನಡ ಭಾಷೆಯ, ಸಂಸ್ಕೃತಿಯ ಪರಿಚಯವನ್ನು ಮಾಡುವುದಕ್ಕಷ್ಟೇ ಸೀಮಿತವಾಗಿವೆ ಎಂದು ಹೇಳಬಹುದೇ? ಈಗಲೂ ನೋಡಿ ನಕ್ಕು ಸುಮ್ಮನಾಗುವ ಬಾಲಿವುಡ್ಡಿನ ಫ್ಲಿಲಿಕ್ಗಳು ಅಥವಾ ತಲೆಯಾಡಿಸುವ ಧುನ್ಗಳು ನಾವು ಬರೆಯುವುದರ ಮೇಲೆ ಪರಿಣಾಮ ಮಾಡುತ್ತದೆಯಾ? ಅಥವಾ ಇಲ್ಲಿ "ಹುಡುಕಾಟ" "ಶೋಧ" ಇಲ್ಲ ಎಂಬ ನೆಪದಿಂದ ನಮ್ಮ ಸಾಹಿತ್ಯಿಕ ಮನಸ್ಸು ಪ್ರಯತ್ನಪೂರ್ವಕವಾಗಿ ಇವುಗಳ ಪ್ರಭಾವವನ್ನು ತಡೆಯುತ್ತಿದೆಯೇ?
ನಾನು ಕಾಲೇಜಿನಲ್ಲಿದ್ದಾಗ ಅನಂತಮೂರ್ತಿಯವರ, ಲಂಕೇಶರ ಬರಹಗಳನ್ನು ಓದುವವರ ಅಥವಾ ಎ.ಕೆ. ರಾಮನುಜನ್, ಅಡಿಗರ, ಬೇಂದ್ರೆಯವರ ಕವಿತೆಗಳನ್ನು ಓದಿಕೊಳ್ಳುತ್ತಾ ಕೂತವರದ್ದು ಒಂದು ಬೇರೆಯೇ ಗುಂಪು ಇತ್ತು. ಇವರು ಅಲ್ಪಸಂಖ್ಯಾತರಷ್ಟೇ ಅಲ್ಲ. ವಾರಕ್ಕೆರಡು ರಾಜ್ಕುಮಾರ್, ಅಮಿತಾಬ್ ಬಚ್ಚನ್, ಚಿರಂಜೀವಿ ಇತ್ಯಾದಿ ಸಿನೆಮಾ ನೋಡುವ ಮತ್ತು ಯಂಡಮೂರಿ, ಸಿಡ್ನಿ ಶೆಲ್ಡನ್, ಆರ್ಥರ್ ಹೈಲಿ ಓದುವವರ ಮುಖ್ಯವಾಹಿನಿ ಇವರುಗಳನ್ನು ಯಾವುದೋ ಗ್ರಹದ ಪ್ರಾಣಿಗಳಂತೆ ನೋಡುತ್ತಿತ್ತು. ಇವರನ್ನು ಬಿಟ್ಟರೆ ಕನ್ನಡ ಸಾಹಿತ್ಯ ಇಷ್ಟ ಎಂದು ಹೇಳುವ ಪಡ್ಡೆಗಳ ಸಾಹಿತ್ಯಿಕ ಓದು ಮುಕ್ಕಾಲುವಾಸಿ ವಿಶೇಷಾಂಕಗಳ ಕಥೆಗಳಿಗೆ ಮಾತ್ರ ಸೀಮಿತವಾಗಿತ್ತು. ನಾನು ಈ ಸಮಯದಲ್ಲಿಯೇ "ಶಿಕಾರಿ"ಯನ್ನು ಓದಿದ್ದೆ. ಅದು ನನಗೆ ತುಂಬಾ ಇಷ್ಟವಾಗಿದೆ ಎಂದು ನಾನು ಪ್ರಾಮಾಣಿಕೆವಾಗಿ ಹೇಳಿಕೊಳ್ಳಲೂ ಆಗ ನನಗೆ ಪ್ರಿಯವಾಗಿದ್ದ ಜನಪ್ರಿಯ ಚಿತ್ರಗಳು, ಯಂಡಮೂರಿ ಸಾಹಿತ್ಯಗಳ ಗೋಡೆ ನನ್ನನ್ನು ತಡೆಯುತ್ತಿತ್ತು. ಆದರೆ ಶಿಕಾರಿ ಓದಿದಮೇಲೆ ಈ ಅಂಬರೀಶ, ರಾಜ್ಕುಮಾರನ ಸಿನೆಮಾಗಳನ್ನು ನೋಡುವುದರಲ್ಲಿ ಅರ್ಥವಿಲ್ಲ ಎನಿಸಿ ಮತ್ತೆ ಚಿತ್ತಾಲರ ಎಲ್ಲಾ ಕೃತಿಗಳನ್ನೂ ಓದಿಕೊಂಡು ಕೂತಿದ್ದೆ. ತಮಾಷೆಯೆಂದರೆ ಆಗ ಕಾಲೇಜಿನಲ್ಲಿದ್ದ ಈ ಸಾಹಿತ್ಯಿಕ ಗುಂಪು ತಮ್ಮ ಸುತ್ತ ಏನೋ ಒಂದು ಪ್ರಭೆಯನ್ನು ಇಟ್ಟಿಕೊಂಡು ಓಡಾಡಿದವರಂತೆ ಓಡಾಡುತ್ತಿದ್ದರು. ಯಾವಾಗಲೂ ಕಾಸರವಳ್ಳಿಯವರನ್ನು ಮಾತ್ರ ಚರ್ಚಿಸುವ ಇವರುಗಳೊಂದಿಗೆ ನಾನು ಅಮಿತಾಬ್ ಬಚ್ಚನ್ ಅಥವಾ ರಾಜ್ಕುಮಾರರ ಸಿನೆಮಾಗಳನ್ನು ನೋಡುತ್ತೇನೆ ಎಂದು ಹೇಳುವುದೂ ಒಂದು ನಾಚಿಕೆಪಡುವ ಸಂಗತಿಯಾಗಿತ್ತು.
ಜನಪ್ರಿಯ ಮತ್ತು ಗಂಭೀರ ಎಂಬುದರ ಈ ಬೇರೆ ಲೋಕಗಳನ್ನು ಸಮಾನವಾಗಿ ಮೆಚ್ಚಿಕೊಂಡು ಅನುಭವಿಸುವುದು ಬಹಳ ಕಷ್ಟವಾಗಿತ್ತು. ಅಂದರೆ ಕನ್ನಡದ ಬಗ್ಗೆ ಆಸಕ್ತಿಯನ್ನುಂಟುಮಾಡಿದಂತೆ ಮಾಡಿದ ಈ ಅಣ್ಣಾವ್ರ ಚಿತ್ರಗಳನ್ನು ನಮ್ಮನ್ನು "ಬೌದ್ಧಿಕ"ವಾಗಿ ಬೆಳೆಸುತ್ತಿರುವ "ಶಿಕಾರಿ"ಯಂತ ಪ್ರಪಂಚಕ್ಕಾಗಿ ಬಿಟ್ಟುಕೊಡಬೇಕಾಗಿತ್ತು. ನವ್ಯದ ಕಾವ್ಯ, ಕಾದಂಬರಿಗಳನ್ನು ಓದಿದವರಿಗೆ ಈ ಜನಪ್ರಿಯ ಮಾದರಿಗಳು ತಿರಸ್ಕರಿಸುವುದಕ್ಕೆ ಅಥವಾ ವ್ಯಂಗ್ಯಕ್ಕೆ ಒಂದು ರೂಪಕವಾಗಿದ್ದವೇ ಹೊರತು ಇವುಗಳಿಂದ ನಾವು ಪಡಕೊಂಡಿದ್ದೆಷ್ಟು ಎಂದು ಯೋಚಿಸುವ ಸಾವಧಾನವೂ ಇರಲಿಲ್ಲ ಎಂಬುದು ಅರ್ಥವಾಗುತ್ತದೆ. ಸಾಹಿತ್ಯವೆಂದರೆ ಒಂದು ಶ್ರೀಮಧ್ಗಾಂಭೀರ್ಯವಿರಬೇಕು ಮತ್ತು ಹಾಗೆ ಬರೆಯದಿದ್ದರೆ ಅಥವಾ ಹಾಗೆ ಬರೆದದ್ದನ್ನು ಓದದಿದ್ದರೆ ಸಾಹಿತ್ಯವನ್ನು ಓದುವುದು ನಿಷ್ಪ್ರಯೋಜನಕಾರಿ ಎಂಬ ತಿಳುವಳಿಕೆಯಿತ್ತು.
ಆದರೆ ಒಂದು ಮಾತ್ರ ನಿಜ. ಸಿಗರೇಟು ಸೇದಬೇಕೋ ಇಲ್ಲವೋ ಅನ್ನುವುದರಿಂದ ನಮ್ಮ ಕಲ್ಪಿತ ಸಂಸಾರ ಹೇಗಿರಬೇಕು, ಇನ್ನಿತರ ಈಗ ತೀರ ಐಡಿಯಲ್ ಅನ್ನುವಂತ "ಮೌಲ್ಯ"ಗಳನ್ನು ನಮಗೆ ಕಲಿಸಿದ್ದು ಅಣ್ಣಾವ್ರ ಸಿನೆಮಾಗಳೇ ಹೊರತು ನಂತರ ನಾವೋದಿದ ಕಾದಂಬರಿಗಳಲ್ಲ. ಆದರೆ, ಇದನ್ನು ಒಪ್ಪಿಕೊಳ್ಳುವುದು ಆಗ "ಕೂಲ್" ಆಗಿರಲಿಲ್ಲ.
ಈ ನಮ್ಮ ಗ್ರಹಿಕೆಯನ್ನು ಸ್ವಲ್ಪ ಮಟ್ಟಿಗಾದರೂ ನಿವಾರಿಸಿದ್ದು "ಲಂಕೇಶ್ ಪತ್ರಿಕೆ." ಪತ್ರಿಕೆಯಲ್ಲಿ ಹೆಮಿಂಗ್ವೇಯ ಗದ್ಯದ ಪಕ್ಕದಲ್ಲಿಯೇ ತುಂಟಾಟವಿರುತ್ತಿತ್ತು. ಬೋದಿಲೇರ, ನೀಲುಗಳು ಜತೆಜತೆಗೇ ಓದಿಸಿಕೊಳ್ಳುತ್ತಿದ್ದವು. ಸಿನೆಮಾ ಲೇಖನಗಳನ್ನೂ ಪಂಡಿತರೂ ಪಾಮರರೂ ಓದಿಕೊಳ್ಳುವಂತೆ ಬರೆಸಲಾಗುತ್ತಿತ್ತು. ತಮ್ಮ ರಾಜಕೀಯ ಮತ್ತು ಸಾಹಿತ್ಯಿಕ ನಿಲುವುಗಳನ್ನು ಬಿಂಬಿಸಲು ಒಂದು ವೇದಿಕೆಯನ್ನಾಗಿ ಪತ್ರಿಕೆಯನ್ನು ಲಂಕೇಶರು ಬಹಳ ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಆದರೆ ಇಲ್ಲಿಯೂ ಜಾಣ-ಜಾಣೆಯರಿಗೆ ಮತ್ತು ಕೋಣ-ಕೋಣೆಯರಿಗೆ ಬೇರೆಬೇರೆ ತಿನಿಸುಗಳನ್ನು ಉಣಿಸಲಾಗುತ್ತಿತ್ತು. ಗುಂ ಬಂ ಎಂದು ಬರೆದ ಲಂಕೇಶರು ವೈಲ್ಡ್ ಸ್ಟ್ರಾಬೆರಿಯ ಬಗ್ಗೆಯೂ ಬರೆದು ತಮಗೆ ಬೇಕಾದ ಬೇರೆ ಬೇರೆ ನಿಟ್ಟಿನ ಓದುಗರನ್ನು ಸೃಷ್ಟಿಸಿಕೊಂಡರು. ಈ ಓದುಗರೇ ಮುಂದೊಂದು ದಿನ ಗ್ರಾಜ್ಯುಯೇಟ್ ಆಗಿ ಟೀಕೆ-ಟಿಪ್ಪಣಿಯ ಎಲ್ಲ ಭಾಗಗಳನ್ನು, ಹುಳಿಮಾವಿನ ಮರವನ್ನೂ ಓದುವಷ್ಟು ಜಾಣರಾದರು. ಇಲ್ಲಿ ಗಮನಿಸುವ ವಿಷಯವೆಂದರೆ ಲಂಕೇಶರು ತಮ್ಮ ಭಾಷೆಯ ಮೋಡಿಯಿಂದ ತಮಗೆ ಅರಿವಿದ್ದ ವಿಷಯವನ್ನು ತಿಳಿಸುತ್ತಾ ಓದುಗರ ಅರಿವನ್ನು ವಿಸ್ತರಿಸುವ ಕೆಲಸವನ್ನು ಮಾಡಿದರು. ಹಾಗಾಗಿ ತಮ್ಮ ಬರಹಗಳನ್ನು ಜನಪ್ರಿಯಗೊಳಿಸಿದರು. ಎಂದೂ ಅವರು ಕ್ಲೀಷೆಯನ್ನು ಒಪ್ಪಲಿಲ್ಲ.
ಜನಪ್ರಿಯ ಸಂಸ್ಕೃತಿಯನ್ನು ಅದರ ಎಲ್ಲ ಕ್ಲೀಶೆಗಳ ನಡುವೆ ಅದೇ ಡೆಮೊಕ್ರೆಟಿಕ್ ಎಂದು ಒಪ್ಪಿಕೊಂಡು ಅವುಗಳನ್ನೇ ರೂಪಕಗಳಾಗಿಸಿ ಅದರಿಂದಲೇ ತಮ್ಮ ಕಥನಪ್ರಪಂಚವನ್ನು ಶೋಧಿಸಿಕೊಂಡಿದ್ದು ಜಯಂತ. ಬಸ್ಸು, ಕಾರು, ಚ್ಯೂಯಿಂಗ್ ಗಮ್ಮು, ಬಟನ್ ಮೊಲ, ಚಾಳ್, ಇಂಕು, ಲಗ್ನಪತ್ರಿಕೆ, ಮಕ್ಕಳ ಪುಸ್ತಕಗಳ ಬೈಂಡು, ಬತ್ತಾಸು, ಜಡೆ, ನವಿಲುಗರಿ ಅಮಿತಾಬ್ ಬಚ್ಚನ್, ಮಿಥುನ್, ಶಾರೂಕ್ ಖಾನ್, ಅಮೀರ್ ಖಾನ್ಗಳ ಕಥೆ ಬರೆದೂ ಗೆಲ್ಲಬಹುದು ಎಂದು ಪೂರ್ಣಪ್ರಮಾಣದಲ್ಲಿ ತೋರಿಸಿದವರು ಜಯಂತ್. ಗೊತ್ತಿದ್ದೋ ಗೊತ್ತಿಲ್ಲದೆಯೋ ಭಾರವಾದ ರೂಪಕಗಳನ್ನು ಅವರು ಎಂದಿಗೂ ಉಪಯೋಗಿಸಲಿಲ್ಲ. ಅಷ್ಟೇ ಅಲ್ಲ, ಕ್ಷುದ್ರಜೀವಿಗಳ ಮೂಲಕವೇ ಈ ಜಗತ್ತನ್ನು ಹುಡುಕಹೊರಟ ಅವರಿಗೆ ಬೇಕಾದ್ದು ಸಿಕ್ಕಿದ್ದು ರಸ್ತೆಬದಿಯಲ್ಲಿ, ಗೋಕರ್ಣದಲ್ಲಿ ಕೋಟಿತೀರ್ಥದಲ್ಲಿ, ಮುಂಬಯಿಯ ಟೀವಿ ಶೋಗಳಲ್ಲಿ, ಸರ್ಕಸ್ಸುಗಳಲ್ಲಿ, ಬಸ್ಸಿನಲ್ಲಿ, ರೈಲ್ವೇ ಸ್ಟೇಷನ್ನಲ್ಲಿ. ಜಯಂತರನ್ನು ಓದಿ ಪ್ರಭಾವಿತರಾದವರು ಮತ್ತು ಅವರಂತೇ ಬರೆಯಬೇಕೆಂದು ಪ್ರಯತ್ನಮಾಡಿದವರು ಕೂಡ ಇದೇ ಮಾದರಿಯನ್ನು ವಿಸ್ತರಿಸಿ ಸಣ್ಣಸಣ್ಣ ಸತ್ಯಗಳ ಖುಷಿಯಿಂದ ಮತ್ತು ಅದನ್ನು ಹುಡುಕುವ ಸಂಭ್ರಮವನ್ನೇ ಕತೆಮಾಡಿದ್ರು. ಬೌದ್ಧಿಕತೆಯ ವಿರೋಧಿಗಳಿವರು ಎಂದೆನಿಸಿದರೂ ಪ್ರಾಮಾಣಿಕತೆ ಇಲ್ಲಿ ಎದ್ದು ಕಾಣುತ್ತಿತ್ತು.
ಆದರೆ ಸಮಸ್ಯೆಯೆಂದರೆ ಈ ತರದ ಲಿರಿಕಲ್ ಪ್ರಜ್ಞೆ ತನ್ನೆಲ್ಲ ರೂಪಕ ಶಕ್ತಿಯನ್ನು ಕಲ್ಪಿತ ಪ್ರಪಂಚಕ್ಕೆ ಹೊಂದಿಸಿಕೊಂಡುಬಿಟ್ಟಿರುವುದರಿಂದ ಮತ್ತು ಧಾರೆಯೆರೆದುಬಿಟ್ಟಿರುವುದರಿಂದ ಈ ತಥಾಕಥಿತ ನಾನ್ ಫಿಕ್ಷನ್ಗಳಿಗೆ ಈ ಮಾದರಿಯ ಬರವಣಿಗೆಗಳು ಹೊಂದಿಕೊಳ್ಳುತ್ತಾವಾ ಎನ್ನುವುದು ಒಂದು ತುಂಟ ಯೋಚನೆ. ಎಲ್ಲವೂ ಮೀಮಾಂಸೆಯಾಗಬೇಕೆಂದಿಲ್ಲ. ಜಯಂತರು ಎಂದಿಗೂ ತಮ್ಮ "ಬೊಗಸೆಯಲ್ಲಿ ಮಳೆ" ಯನ್ನು ನಾನ್ ಫಿಕ್ಷನ್ ಎಂದು ಹೇಳಿಕೊಂಡಿಲ್ಲ. ಮ್ಯೂಸಿಂಗ್ಸ್ ಎಂದಿದ್ದಾರೆ, ನುಡಿಚಿತ್ರಗಳು ಎಂದಿದ್ದಾರೆ. ಆದರೂ ಅದನ್ನು ಆ ಕೆಟಗರಿಗೆ ಸೇರಿಸುವುದರಿಂದ ನಮ್ಮ ಆ ಪುಸ್ತಕದ ಎಷ್ಟೋ ಲೇಖನಗಳು ( ಉದಾಹರಣೆಗೆ ಮಾತಿರದ ನಲುಮೆ, ರಾತ್ರಿಯ ಹೆದ್ದಾರಿಗೊಂದು ಅಲ್ಪವಿರಾಮ, ಬಸ್ ನಂಬರ್ ೩೦೨ ಒಂದು ಅಭಯರಾಗ) ಕಥೆಯಾಗುವುದನ್ನು ಮೊಟಕುಮಾಡಿಕೊಂಡು ಕಾಲಮ್ ಆಗಿಬಿಟ್ಟವಾ ಎಂದು ದುರಾಸೆಯ ಕಥನಕುತೂಹಗಳಿಗೆ ಕೊಂಚ ನಿರಾಸೆಯಾಗುತ್ತದೆ.
ಆದರೆ ಜಯಂತರು ನಮ್ಮನ್ನು ಬೆಳೆಸಿದ ಈ ಜನಪ್ರಿಯ ಸಂಸ್ಕೃತಿಯನ್ನು ಎಂದೂ ನಿರಾಕರಿಸುವುದಿಲ್ಲ. ಬದಲಿಗೆ ಅವರಿಗೆ ಇದನ್ನು ಇನ್ನೂ ಬೆಳೆಸಲಾಸೆ. ಇದಕ್ಕೆ ಸಾಕ್ಷಿಯೆನ್ನುವಂತೆ ಅವರ ಸಿನೆಮಾ ಸಾಹಿತ್ಯ ಮೂಡಿ ಬರುತ್ತಿದೆ. "ಕರೆದಂತಾದರೂ ಹೋಗಬೇಡಿ ಆ ಕಡೆ, ವಿಥ್ ಇದೀರಿ, ನೋಡ್ಕಳಿ ಫ್ಯಾಮಿಲಿ" ಎಂದು ಬರೆಯುವ ಬೆರಳುಗಳೇ "ಪುಟಗಳ ನಡುವಿನ ನವಿಲೇ" ಕೂಡ ಬರೆಯುತ್ತವೆ. ಆದರೆ ಒಂದು ಕವನ ಸಂಕಲನ ಸೇರಿದರೆ ಇನ್ನೊಂದು ಚಿತ್ರಗೀತೆಯಾಗುತ್ತದೆ. ನನಗೆ ತಿಳಿದ ಮಟ್ಟಿಗೆ ತಮ್ಮ ಯಾವುದೇ ಕವನವನ್ನೂ ಅವರು ಚಿತ್ರಕ್ಕೆ ಅಳವಡಿಸಿಕೊಳ್ಳಲು ಬಿಟ್ಟಿಲ್ಲ. ಚಿತ್ರಕ್ಕಾಗಿಯೇ ಬೇರೆ ಬರೆಯುತ್ತಾರೆ. ತಮ್ಮ ಖಯಾಲಿ, ಕಾಳಜಿಗಳನ್ನು ಯಾರಿಗೆ ಎಷ್ಟು ಮುಟ್ಟಿಸಬೇಕು ಅನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಮತ್ತಿನ್ನೊಂದೆಂದರೆ ಅವರ ಈ ಧೈರ್ಯ ಅವರ ನಂತರದ ಬರಹಗಾರರಿಗೆ "ಅನಿಸುತಿದೆ ಯಾಕೋ ಇಂದು" ಅನ್ನು ಹಾಡಿಕೊಂಡೇ "ತೊಟ್ಟಿಲಂಗಡಿಯಲ್ಲಿ ಬಂಬು ಕೂಡ ಅಗ್ಗ" ಕೂಡ ಓದಿಕೊಳ್ಳಬಹುದು ಎನ್ನುವ ಧೈರ್ಯವನ್ನು ಕೊಟ್ಟಿದೆ.
ಹುಟ್ಟಾ ಯಾರೂ ಸಾಹಿತಿಯಾಗುವುದಿಲ್ಲ. ಆದರೆ, ಈ ಬರೆಯುವ ಗೀಳು ಹೇಗೋ ಶುರುವಾಗುತ್ತದೆ.
"ಪೂರ್ತಿಯೊಣಗದ ಚಡ್ಡಿ ಹಸಿಹಸಿ
ಸಿಕ್ಕಿಸಿಕೊಂಡು ಬೂರಸು ಕೊಡೆಯೆತ್ತಿ
ಜುಳುಜುಳು ಕೆಸರು ತಂಪುಪಾದ॒
ಹೆಗಲಿಗಂಟಿದ ಪಾಟಿಚೀಲ... ಹೊತ್ತು
ಶಾಲೆ ಹೊರಟ ಕೇರಿಹಿಂಡು ಹಿಂಡು
ದಾರಿಯಿಕ್ಕೆಲದಲ್ಲೂ ಗಟಾರ ಕೊಚ್ಚುತ್ತಿರುವ
ಥಂಡಾ ಥಂಡಾ ಚಾ-
ನಿನ್ನೇತನಕ ಹಾರಾಡುತ್ತಿದ್ದ ಟೂರಿಂಗ್
ಟಾಕೀಸಿನ ತಂಬು ಒಮ್ಮೆಗೇ ಸ್ತಬ್ಧ"
ಈ ತರ. ಮುಗ್ಢತೆ, ಬೆರಗು, ನಮ್ಮ ಪ್ರಪಂಚದ ಸಣ್ಣಸಣ್ಣ ಆದರೆ ಗಟ್ಟಿವಿವರಗಳು ಮತ್ತು ನಮ್ಮನ್ನು ಕಾದ, ಪೊರೆದ ಭಾವಗಳ ನೆನವರಿಕೆಯಿಂದ ಹುಟ್ಟಬಹುದು, ಮೊದಮೊದಲ ಕವಿತೆ. ಇಲ್ಲಿ ಬುದ್ಧಿವಂತಿಕೆಯಿಲ್ಲ, ನೋಡಿದ್ದನ್ನು ಪ್ರಾಮಾಣಿಕವಾಗಿ ಸುಮ್ಮನೇ ಹಂಚಿಕೊಳ್ಳಬೇಕೆನ್ನಿಸಿದೆ. ಸಂಭ್ರಮದ ವಿವರಗಳನ್ನು ಹೇಳಬೇಕೆನಿಸಿದೆ.
ಆದರೆ, ಇದು ಹೇಗೆ ಶುರುವಾಯಿತು ಎನ್ನುವುದು ನಮಗೆ ಯಾಕೆ ಮುಖ್ಯವಾಬೇಕು?
* * *
ಸಾಹಿತಿಗಳೆಂದರೆ ಬೇರೆ ಯಾವುದೋ ಲೋಕದವರು ಅಥವಾ ಬೇರೆ ಯಾರಿಗೂ ಗೊತ್ತಿರದದ್ದು ಇವರಿಗೆ ಗೊತ್ತಿರುವುದರಿಂದಲೇ ಅವರು ಏನನ್ನೋ ಸೃಷ್ಟಿಸಬಲ್ಲರು ಎಂಬ ಭಾವನೆ ನಮ್ಮಲ್ಲಿರುವುದನ್ನು ನಾವು ನೋಡುತ್ತೇವೆ. ಹಾಗಾಗಿಯೇ ಒಬ್ಬ ಕವಿಯನ್ನು ಜಾಗತೀಕರಣದ ಹಪಾಪಿಗಳ ಬಗ್ಗೆ ಒಂದು ಲೇಖನ ಬರೆದುಕೊಡಿ ಎಂತಲೋ ಅಥವಾ ಒಬ್ಬ ಕತೆಗಾರನನ್ನು ಅಮೆರಿಕಾದ ಎಕಾನಮಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂತಲೋ ಕೇಳುವ ಪರಿಪಾಠ ನಮ್ಮಲ್ಲಿದೆ. ಇವರು ಸಾಹಿತಿಗಳಲ್ಲವೇ? ಇಷ್ಟು ಚೆನ್ನಾಗಿ ಕತೆ ಬರೆಯುತ್ತಾರೆ ಇವರಿಗೆ ಎಲ್ಲ ವಿಷಯವೂ ಗೊತ್ತಿರಲೇಬೇಕು, ಅಲ್ಲವೇ? ಅದು ಹಾಗಿರಲಿ ಹೀಗೆ ಕೇಳಿದ ತಕ್ಷಣ ಕವಿ ಅಥವಾ ಬರಹಗಾರ ಎನ್ನಿಸಿಕೊಂಡವನು ಕೂಡ ಹೇಗೋ ಒಂದಿಷ್ಟು ವಿಷಯ ಸಂಗ್ರಹಿಸಿಕೊಂಡು ಬರೆದುಬಿಡಬಹುದು ಎಂದುಕೊಂಡು ಬರೆಯುವ ರೂಢಿಯೂ ನಮ್ಮಲ್ಲಿದೆ.
ಇಲ್ಲಿ ಸೃಜನಶೀಲ ಸಾಹಿತ್ಯಕ್ಕೂ ಚಿಂತನ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ಬರೆಯುವವರು ಅರ್ಥಮಾಡಿಕೊಳ್ಳಬೇಕು. ಸೃಜನಶೀಲ ಬರವಣಿಗೆಗೆ ಬೇಕಾದ ನಮ್ಮ ಸಂವೇದನೆಗಳನ್ನು ಗಟ್ಟಿಯಾಗಿ ಬೆಳೆಸುವುದು ನಮ್ಮ ಬಾಲ್ಯ. ಬಾಲ್ಯದಲ್ಲಿ ನಾವು ಅಣ್ಣಾವ್ರ ಸಿನೆಮಾ ನೋಡಿರುತ್ತೇವೆಯೋ, ಲಿಂಡಾ ಗುಡ್ಮನ್, ಟಾಮ್ ಸಾಯರ್ ಓದಿರುತ್ತೇವೆಯೋ, ಭೈರಪ್ಪನವರ ಕಾದಂಬರಿಗಳನು ಓದಿರುತ್ತೇವೋ ಅಥವಾ ಗಂಗಾಧರ ಚಿತ್ತಲರನ್ನು ಓದಿರುತ್ತೇವೆಯೋ ಅನ್ನುವುದು ಅವರವರಿಗೆ ಬಿಟ್ಟಿದ್ದು. ಆದರೆ ನಮ್ಮ ಸೃಜನಕ್ರಿಯೆಯನ್ನು ರೂಪಿಸುವುದು ಮುಖ್ಯವಾಗಿ ಬಾಲ್ಯದ ಈ ಓದು ಮತ್ತು ನಾವು ಬೆಳೆದ ಪರಿಸರ. ನಂತರದ ನಮ್ಮ ಓದು,ಅನುಭವಗಳು ಇದನ್ನು ಪೋಷಿಸಬಹುದು ಅಥವಾ ಪೂರಾ ಒಡೆದು ಚೂರುಚೂರು ಮಾಡಬಹುದು ( ಈ ಛಿದ್ರಕ ಕ್ರಿಯೆಯೇ ಸೃಜನವಾಗಬಹುದು). ಆದರೆ ಈ ಸೃಜನಕ್ರಿಯೆಯ ಮೂಲ ಧಾತು ಮತ್ತು ನೆಲೆಗಟ್ಟು ಮಾತ್ರ ಬಾಲ್ಯವೇ.
ಬೆಳೆಯುತ್ತಾ ಬೆಳೆಯುತ್ತಾ ಇದ್ದಕ್ಕಿದ್ದಹಾಗೆ ನಾವು ನಮ್ಮ ಓದಿನ ಬಗ್ಗೆ, ನಮ್ಮ ಸಂವೇದನೆಗಳ ಬಗ್ಗೆಯೇ ಕ್ರಿಟಿಕಲ್ ಆಗುತ್ತೇವೆ. ನಮ್ಮ ಓದು, ಗ್ರಹಿಕೆ ಸರಿಯಿದೆಯೇ ಎಂದು ನೋಡಿಕೊಳ್ಳಲು ಡಿ ಆರ್ ನಾಗರಾಜ್ರನ್ನು ಓದುತ್ತೇವೆ, ಜಿಡ್ಡು ಕೃಷ್ಣಮೂರ್ತಿಯವರನ್ನು ಓದುತ್ತೇವೆ, ಆಶೀಸ್ ನಂದಿ, ಅಮಾರ್ತ್ಯ ಸೇನ್ ಇನ್ನೂ ಹೀಗೇ ಇನ್ನೊಂದಿಷ್ಟು ಜನ ಬುದ್ಧಿವಂತರನ್ನು ಓದಿ ನಮ್ಮ ಸಂವೇದನೆಗಳು ಚೂಪಾಗಿದೆ ಎಂದುಕೊಳ್ಳುತ್ತೇವೆ. ಟ್ರಿಕಲ್ ಡೌನ್ ಎಕನಾಮಿಕ್ಸ್, ಪೋಸ್ಟ್ ಮಾಡ್ರನಿಸಮ್, ಜಾಗತೀಕರಣ, ಗ್ಲೋಬಲ್ ವಾರ್ಮಿಂಗ್, ಡಿಕನ್ಸ್ಟ್ರಕ್ಷನ್-ಹೀಗೆ ಜಗತ್ತಿನ ಎಲ್ಲ ಉಸಾಬರಿಗಳ ಬಗ್ಗೆ ಮಾತಾಡಲು ತೊಡಗುತ್ತೇವೆ. ಇಲ್ಲವೇ ಬರೆಯಲೂ ತೊಡಗುತ್ತೇವೆ.
ಸೃಜನಶೀಲ ಬರಹ ಮತ್ತು ಸೃಜನೇತರ ಬರಹಕ್ಕೆ ಇರುವ ವ್ಯತ್ಯಾಸವನ್ನು ಒಬ್ಬ ಅರ್ಥ ಮಾಡಿಕೊಳ್ಳುವುದು ಹೇಗೆ? ಈ ಸಮಸ್ಯೆ ಬರುವುದು ಕತೆ ಕಾದಂಬರಿ ಕವನ ಬರೆದುಕೊಂಡಿದ್ದವ ಇದ್ದಕ್ಕಿದ್ದ ಹಾಗೆ ಈ "ನಾನ್ ಫಿಕ್ಷನ್" ಅನ್ನುವ ಪ್ರಕಾರಕ್ಕೆ ಕೈಯಾಡಿಸಿದಾಗ. ಪ್ರಬಂಧ ಬರೆಯುವಾಗ ಆತನ ಕಥನಕ್ರಿಯೆ ಜಾಗ್ರತವಾಗಿಬಿಡುತ್ತದೆ. ಕಥೆ ಬರೆಯುವಾಗ ವೈಚಾರಿಕತೆ ತಲೆ ಹಾಕುತ್ತದೆ. ಕಥೆ, ಕಾದಂಬರಿಗಳಲ್ಲಿ ವೈಚಾರಿಕತೆ ಇರಬಾರದೆಂದಲ್ಲ. ಅದು ಕಥೆಯ ಭಾಗವಾಗಿ ಬಂದರೆ ಓದುವುದಕ್ಕೆ ಕಿರಿಕಿರಿಯಾಗುವುದಿಲ್ಲ. ಆದರೆ, ಕತೆಯ ಮುಖ್ಯವಾಹಿನಿಯನ್ನು ಬಿಟ್ಟು ಈ ವೈಚಾರಿಕತೆ ತನ್ನಂತಾನೇ ನಿಂತುಬಿಟ್ಟರೆ ರಸ್ತೆಯ ಮಧ್ಯೆ ಒಂದು ದೊಡ್ಡ ಕಲ್ಲು ಅಡ್ಡ ಬಂದಂತೆ ಭಾಸವಾಗುತ್ತದೆ. ಕಥನ ಕುತೂಹಲಿಗಳು ಇದನ್ನು ಬಳಸಿಕೊಂಡು ಮುಂದೆ ಹೋಗುತ್ತಾರೆ. ಈ ಕಲ್ಲಿನ ಶಿಲ್ಪ ಅಂದವಿದೆಯೆಂದು ಅದನ್ನು ಅನುಭವಿಸುವವರು ಅದನ್ನೇ ನೋಡುತ್ತಾ ಮೈಮರೆಯುತ್ತಾ ನಿಂತರೂ ಅದು ಕತೆಯ ಓಟಕ್ಕೆ ಅಥವಾ ಆ ಕಲ್ಲಿನ ಸೌಂದರ್ಯಕ್ಕೆ ಒಟ್ಟು ತಡೆಯನ್ನೇ ಉಂಟುಮಾಡುತ್ತದೆ.
ಇದು ಯಾಕೆ ಮುಖ್ಯವಾಗಬೇಕು? ಸೃಜನಶೀಲ ಬರವಣಿಗೆ ಭಾವಪ್ರಪಂಚಕ್ಕೆ ಮಾತ್ರ ಸೇರಿರಬೇಕು. ಸೃಜನೇತರ ಬರವಣಿಗೆ ಬುದ್ಧಿಮತ್ತೆಗೆ, ಮತ್ತು ಅಧ್ಯಯನ ಮಾಡಿ ಬರೆದದ್ದಾಗಬೇಕು ಎಂದು ಪಂಡಿತರು ವಿವೇಚಿಸುತ್ತಾರೆ. ಅಂದರೆ, "ಸಂಸ್ಕಾರ" ‘ಭಾರತೀಪುರ" ಭಾವಪ್ರಪಂಚದ ಬರವಣಿಗೆಗಳು (ಅವುಗಳ ವೈಚಾರಿಕತೆಯ ನಡುವೆಯೂ). ರುಜುವಾತು, ಸನ್ನಿವೇಶ, ಪೂರ್ವಾಪರ- ಅಧ್ಯಯನಶೀಲ ಬರವಣಿಗೆಗಳು.
ಈ ಭಾವಪ್ರಪಂಚದಲ್ಲಿ ನಮ್ಮ ದೈನಿಕ ಖಯಾಲಿಗಳು ಎಷ್ಟರ ಮಟ್ಟಿಗೆ ತಮ್ಮ ಪ್ರಭಾವವನ್ನು ಬೀರಿರುತ್ತವೆ? ಚಿಕ್ಕಂದಿನಲ್ಲಿ ನಾವು ನೋಡಿದ ಅಣ್ಣಾವ್ರ ಸಿನೆಮಾ, ಓದಿದ ಜನಪ್ರಿಯ ಕಾದಂಬರಿಗಳು, ಚಂದಮಾಮ, ಬಾಲಮಿತ್ರ, ಡುಂಡಿರಾಜರ ಚುಟುಕಗಳು ಇವೆಲ್ಲ ನಮ್ಮ ಭಾವಪ್ರಪಂಚದಲ್ಲಿಲ್ಲವೇ? ಆದರೆ ಅವು ನಮ್ಮ ಸೃಜನಕ್ರಿಯೆಯಲ್ಲಿ ಬರೇ ಕನ್ನಡ ಭಾಷೆಯ, ಸಂಸ್ಕೃತಿಯ ಪರಿಚಯವನ್ನು ಮಾಡುವುದಕ್ಕಷ್ಟೇ ಸೀಮಿತವಾಗಿವೆ ಎಂದು ಹೇಳಬಹುದೇ? ಈಗಲೂ ನೋಡಿ ನಕ್ಕು ಸುಮ್ಮನಾಗುವ ಬಾಲಿವುಡ್ಡಿನ ಫ್ಲಿಲಿಕ್ಗಳು ಅಥವಾ ತಲೆಯಾಡಿಸುವ ಧುನ್ಗಳು ನಾವು ಬರೆಯುವುದರ ಮೇಲೆ ಪರಿಣಾಮ ಮಾಡುತ್ತದೆಯಾ? ಅಥವಾ ಇಲ್ಲಿ "ಹುಡುಕಾಟ" "ಶೋಧ" ಇಲ್ಲ ಎಂಬ ನೆಪದಿಂದ ನಮ್ಮ ಸಾಹಿತ್ಯಿಕ ಮನಸ್ಸು ಪ್ರಯತ್ನಪೂರ್ವಕವಾಗಿ ಇವುಗಳ ಪ್ರಭಾವವನ್ನು ತಡೆಯುತ್ತಿದೆಯೇ?
ನಾನು ಕಾಲೇಜಿನಲ್ಲಿದ್ದಾಗ ಅನಂತಮೂರ್ತಿಯವರ, ಲಂಕೇಶರ ಬರಹಗಳನ್ನು ಓದುವವರ ಅಥವಾ ಎ.ಕೆ. ರಾಮನುಜನ್, ಅಡಿಗರ, ಬೇಂದ್ರೆಯವರ ಕವಿತೆಗಳನ್ನು ಓದಿಕೊಳ್ಳುತ್ತಾ ಕೂತವರದ್ದು ಒಂದು ಬೇರೆಯೇ ಗುಂಪು ಇತ್ತು. ಇವರು ಅಲ್ಪಸಂಖ್ಯಾತರಷ್ಟೇ ಅಲ್ಲ. ವಾರಕ್ಕೆರಡು ರಾಜ್ಕುಮಾರ್, ಅಮಿತಾಬ್ ಬಚ್ಚನ್, ಚಿರಂಜೀವಿ ಇತ್ಯಾದಿ ಸಿನೆಮಾ ನೋಡುವ ಮತ್ತು ಯಂಡಮೂರಿ, ಸಿಡ್ನಿ ಶೆಲ್ಡನ್, ಆರ್ಥರ್ ಹೈಲಿ ಓದುವವರ ಮುಖ್ಯವಾಹಿನಿ ಇವರುಗಳನ್ನು ಯಾವುದೋ ಗ್ರಹದ ಪ್ರಾಣಿಗಳಂತೆ ನೋಡುತ್ತಿತ್ತು. ಇವರನ್ನು ಬಿಟ್ಟರೆ ಕನ್ನಡ ಸಾಹಿತ್ಯ ಇಷ್ಟ ಎಂದು ಹೇಳುವ ಪಡ್ಡೆಗಳ ಸಾಹಿತ್ಯಿಕ ಓದು ಮುಕ್ಕಾಲುವಾಸಿ ವಿಶೇಷಾಂಕಗಳ ಕಥೆಗಳಿಗೆ ಮಾತ್ರ ಸೀಮಿತವಾಗಿತ್ತು. ನಾನು ಈ ಸಮಯದಲ್ಲಿಯೇ "ಶಿಕಾರಿ"ಯನ್ನು ಓದಿದ್ದೆ. ಅದು ನನಗೆ ತುಂಬಾ ಇಷ್ಟವಾಗಿದೆ ಎಂದು ನಾನು ಪ್ರಾಮಾಣಿಕೆವಾಗಿ ಹೇಳಿಕೊಳ್ಳಲೂ ಆಗ ನನಗೆ ಪ್ರಿಯವಾಗಿದ್ದ ಜನಪ್ರಿಯ ಚಿತ್ರಗಳು, ಯಂಡಮೂರಿ ಸಾಹಿತ್ಯಗಳ ಗೋಡೆ ನನ್ನನ್ನು ತಡೆಯುತ್ತಿತ್ತು. ಆದರೆ ಶಿಕಾರಿ ಓದಿದಮೇಲೆ ಈ ಅಂಬರೀಶ, ರಾಜ್ಕುಮಾರನ ಸಿನೆಮಾಗಳನ್ನು ನೋಡುವುದರಲ್ಲಿ ಅರ್ಥವಿಲ್ಲ ಎನಿಸಿ ಮತ್ತೆ ಚಿತ್ತಾಲರ ಎಲ್ಲಾ ಕೃತಿಗಳನ್ನೂ ಓದಿಕೊಂಡು ಕೂತಿದ್ದೆ. ತಮಾಷೆಯೆಂದರೆ ಆಗ ಕಾಲೇಜಿನಲ್ಲಿದ್ದ ಈ ಸಾಹಿತ್ಯಿಕ ಗುಂಪು ತಮ್ಮ ಸುತ್ತ ಏನೋ ಒಂದು ಪ್ರಭೆಯನ್ನು ಇಟ್ಟಿಕೊಂಡು ಓಡಾಡಿದವರಂತೆ ಓಡಾಡುತ್ತಿದ್ದರು. ಯಾವಾಗಲೂ ಕಾಸರವಳ್ಳಿಯವರನ್ನು ಮಾತ್ರ ಚರ್ಚಿಸುವ ಇವರುಗಳೊಂದಿಗೆ ನಾನು ಅಮಿತಾಬ್ ಬಚ್ಚನ್ ಅಥವಾ ರಾಜ್ಕುಮಾರರ ಸಿನೆಮಾಗಳನ್ನು ನೋಡುತ್ತೇನೆ ಎಂದು ಹೇಳುವುದೂ ಒಂದು ನಾಚಿಕೆಪಡುವ ಸಂಗತಿಯಾಗಿತ್ತು.
ಜನಪ್ರಿಯ ಮತ್ತು ಗಂಭೀರ ಎಂಬುದರ ಈ ಬೇರೆ ಲೋಕಗಳನ್ನು ಸಮಾನವಾಗಿ ಮೆಚ್ಚಿಕೊಂಡು ಅನುಭವಿಸುವುದು ಬಹಳ ಕಷ್ಟವಾಗಿತ್ತು. ಅಂದರೆ ಕನ್ನಡದ ಬಗ್ಗೆ ಆಸಕ್ತಿಯನ್ನುಂಟುಮಾಡಿದಂತೆ ಮಾಡಿದ ಈ ಅಣ್ಣಾವ್ರ ಚಿತ್ರಗಳನ್ನು ನಮ್ಮನ್ನು "ಬೌದ್ಧಿಕ"ವಾಗಿ ಬೆಳೆಸುತ್ತಿರುವ "ಶಿಕಾರಿ"ಯಂತ ಪ್ರಪಂಚಕ್ಕಾಗಿ ಬಿಟ್ಟುಕೊಡಬೇಕಾಗಿತ್ತು. ನವ್ಯದ ಕಾವ್ಯ, ಕಾದಂಬರಿಗಳನ್ನು ಓದಿದವರಿಗೆ ಈ ಜನಪ್ರಿಯ ಮಾದರಿಗಳು ತಿರಸ್ಕರಿಸುವುದಕ್ಕೆ ಅಥವಾ ವ್ಯಂಗ್ಯಕ್ಕೆ ಒಂದು ರೂಪಕವಾಗಿದ್ದವೇ ಹೊರತು ಇವುಗಳಿಂದ ನಾವು ಪಡಕೊಂಡಿದ್ದೆಷ್ಟು ಎಂದು ಯೋಚಿಸುವ ಸಾವಧಾನವೂ ಇರಲಿಲ್ಲ ಎಂಬುದು ಅರ್ಥವಾಗುತ್ತದೆ. ಸಾಹಿತ್ಯವೆಂದರೆ ಒಂದು ಶ್ರೀಮಧ್ಗಾಂಭೀರ್ಯವಿರಬೇಕು ಮತ್ತು ಹಾಗೆ ಬರೆಯದಿದ್ದರೆ ಅಥವಾ ಹಾಗೆ ಬರೆದದ್ದನ್ನು ಓದದಿದ್ದರೆ ಸಾಹಿತ್ಯವನ್ನು ಓದುವುದು ನಿಷ್ಪ್ರಯೋಜನಕಾರಿ ಎಂಬ ತಿಳುವಳಿಕೆಯಿತ್ತು.
ಆದರೆ ಒಂದು ಮಾತ್ರ ನಿಜ. ಸಿಗರೇಟು ಸೇದಬೇಕೋ ಇಲ್ಲವೋ ಅನ್ನುವುದರಿಂದ ನಮ್ಮ ಕಲ್ಪಿತ ಸಂಸಾರ ಹೇಗಿರಬೇಕು, ಇನ್ನಿತರ ಈಗ ತೀರ ಐಡಿಯಲ್ ಅನ್ನುವಂತ "ಮೌಲ್ಯ"ಗಳನ್ನು ನಮಗೆ ಕಲಿಸಿದ್ದು ಅಣ್ಣಾವ್ರ ಸಿನೆಮಾಗಳೇ ಹೊರತು ನಂತರ ನಾವೋದಿದ ಕಾದಂಬರಿಗಳಲ್ಲ. ಆದರೆ, ಇದನ್ನು ಒಪ್ಪಿಕೊಳ್ಳುವುದು ಆಗ "ಕೂಲ್" ಆಗಿರಲಿಲ್ಲ.
ಈ ನಮ್ಮ ಗ್ರಹಿಕೆಯನ್ನು ಸ್ವಲ್ಪ ಮಟ್ಟಿಗಾದರೂ ನಿವಾರಿಸಿದ್ದು "ಲಂಕೇಶ್ ಪತ್ರಿಕೆ." ಪತ್ರಿಕೆಯಲ್ಲಿ ಹೆಮಿಂಗ್ವೇಯ ಗದ್ಯದ ಪಕ್ಕದಲ್ಲಿಯೇ ತುಂಟಾಟವಿರುತ್ತಿತ್ತು. ಬೋದಿಲೇರ, ನೀಲುಗಳು ಜತೆಜತೆಗೇ ಓದಿಸಿಕೊಳ್ಳುತ್ತಿದ್ದವು. ಸಿನೆಮಾ ಲೇಖನಗಳನ್ನೂ ಪಂಡಿತರೂ ಪಾಮರರೂ ಓದಿಕೊಳ್ಳುವಂತೆ ಬರೆಸಲಾಗುತ್ತಿತ್ತು. ತಮ್ಮ ರಾಜಕೀಯ ಮತ್ತು ಸಾಹಿತ್ಯಿಕ ನಿಲುವುಗಳನ್ನು ಬಿಂಬಿಸಲು ಒಂದು ವೇದಿಕೆಯನ್ನಾಗಿ ಪತ್ರಿಕೆಯನ್ನು ಲಂಕೇಶರು ಬಹಳ ಚೆನ್ನಾಗಿ ಉಪಯೋಗಿಸಿಕೊಂಡರು. ಆದರೆ, ಆದರೆ ಇಲ್ಲಿಯೂ ಜಾಣ-ಜಾಣೆಯರಿಗೆ ಮತ್ತು ಕೋಣ-ಕೋಣೆಯರಿಗೆ ಬೇರೆಬೇರೆ ತಿನಿಸುಗಳನ್ನು ಉಣಿಸಲಾಗುತ್ತಿತ್ತು. ಗುಂ ಬಂ ಎಂದು ಬರೆದ ಲಂಕೇಶರು ವೈಲ್ಡ್ ಸ್ಟ್ರಾಬೆರಿಯ ಬಗ್ಗೆಯೂ ಬರೆದು ತಮಗೆ ಬೇಕಾದ ಬೇರೆ ಬೇರೆ ನಿಟ್ಟಿನ ಓದುಗರನ್ನು ಸೃಷ್ಟಿಸಿಕೊಂಡರು. ಈ ಓದುಗರೇ ಮುಂದೊಂದು ದಿನ ಗ್ರಾಜ್ಯುಯೇಟ್ ಆಗಿ ಟೀಕೆ-ಟಿಪ್ಪಣಿಯ ಎಲ್ಲ ಭಾಗಗಳನ್ನು, ಹುಳಿಮಾವಿನ ಮರವನ್ನೂ ಓದುವಷ್ಟು ಜಾಣರಾದರು. ಇಲ್ಲಿ ಗಮನಿಸುವ ವಿಷಯವೆಂದರೆ ಲಂಕೇಶರು ತಮ್ಮ ಭಾಷೆಯ ಮೋಡಿಯಿಂದ ತಮಗೆ ಅರಿವಿದ್ದ ವಿಷಯವನ್ನು ತಿಳಿಸುತ್ತಾ ಓದುಗರ ಅರಿವನ್ನು ವಿಸ್ತರಿಸುವ ಕೆಲಸವನ್ನು ಮಾಡಿದರು. ಹಾಗಾಗಿ ತಮ್ಮ ಬರಹಗಳನ್ನು ಜನಪ್ರಿಯಗೊಳಿಸಿದರು. ಎಂದೂ ಅವರು ಕ್ಲೀಷೆಯನ್ನು ಒಪ್ಪಲಿಲ್ಲ.
ಜನಪ್ರಿಯ ಸಂಸ್ಕೃತಿಯನ್ನು ಅದರ ಎಲ್ಲ ಕ್ಲೀಶೆಗಳ ನಡುವೆ ಅದೇ ಡೆಮೊಕ್ರೆಟಿಕ್ ಎಂದು ಒಪ್ಪಿಕೊಂಡು ಅವುಗಳನ್ನೇ ರೂಪಕಗಳಾಗಿಸಿ ಅದರಿಂದಲೇ ತಮ್ಮ ಕಥನಪ್ರಪಂಚವನ್ನು ಶೋಧಿಸಿಕೊಂಡಿದ್ದು ಜಯಂತ. ಬಸ್ಸು, ಕಾರು, ಚ್ಯೂಯಿಂಗ್ ಗಮ್ಮು, ಬಟನ್ ಮೊಲ, ಚಾಳ್, ಇಂಕು, ಲಗ್ನಪತ್ರಿಕೆ, ಮಕ್ಕಳ ಪುಸ್ತಕಗಳ ಬೈಂಡು, ಬತ್ತಾಸು, ಜಡೆ, ನವಿಲುಗರಿ ಅಮಿತಾಬ್ ಬಚ್ಚನ್, ಮಿಥುನ್, ಶಾರೂಕ್ ಖಾನ್, ಅಮೀರ್ ಖಾನ್ಗಳ ಕಥೆ ಬರೆದೂ ಗೆಲ್ಲಬಹುದು ಎಂದು ಪೂರ್ಣಪ್ರಮಾಣದಲ್ಲಿ ತೋರಿಸಿದವರು ಜಯಂತ್. ಗೊತ್ತಿದ್ದೋ ಗೊತ್ತಿಲ್ಲದೆಯೋ ಭಾರವಾದ ರೂಪಕಗಳನ್ನು ಅವರು ಎಂದಿಗೂ ಉಪಯೋಗಿಸಲಿಲ್ಲ. ಅಷ್ಟೇ ಅಲ್ಲ, ಕ್ಷುದ್ರಜೀವಿಗಳ ಮೂಲಕವೇ ಈ ಜಗತ್ತನ್ನು ಹುಡುಕಹೊರಟ ಅವರಿಗೆ ಬೇಕಾದ್ದು ಸಿಕ್ಕಿದ್ದು ರಸ್ತೆಬದಿಯಲ್ಲಿ, ಗೋಕರ್ಣದಲ್ಲಿ ಕೋಟಿತೀರ್ಥದಲ್ಲಿ, ಮುಂಬಯಿಯ ಟೀವಿ ಶೋಗಳಲ್ಲಿ, ಸರ್ಕಸ್ಸುಗಳಲ್ಲಿ, ಬಸ್ಸಿನಲ್ಲಿ, ರೈಲ್ವೇ ಸ್ಟೇಷನ್ನಲ್ಲಿ. ಜಯಂತರನ್ನು ಓದಿ ಪ್ರಭಾವಿತರಾದವರು ಮತ್ತು ಅವರಂತೇ ಬರೆಯಬೇಕೆಂದು ಪ್ರಯತ್ನಮಾಡಿದವರು ಕೂಡ ಇದೇ ಮಾದರಿಯನ್ನು ವಿಸ್ತರಿಸಿ ಸಣ್ಣಸಣ್ಣ ಸತ್ಯಗಳ ಖುಷಿಯಿಂದ ಮತ್ತು ಅದನ್ನು ಹುಡುಕುವ ಸಂಭ್ರಮವನ್ನೇ ಕತೆಮಾಡಿದ್ರು. ಬೌದ್ಧಿಕತೆಯ ವಿರೋಧಿಗಳಿವರು ಎಂದೆನಿಸಿದರೂ ಪ್ರಾಮಾಣಿಕತೆ ಇಲ್ಲಿ ಎದ್ದು ಕಾಣುತ್ತಿತ್ತು.
ಆದರೆ ಸಮಸ್ಯೆಯೆಂದರೆ ಈ ತರದ ಲಿರಿಕಲ್ ಪ್ರಜ್ಞೆ ತನ್ನೆಲ್ಲ ರೂಪಕ ಶಕ್ತಿಯನ್ನು ಕಲ್ಪಿತ ಪ್ರಪಂಚಕ್ಕೆ ಹೊಂದಿಸಿಕೊಂಡುಬಿಟ್ಟಿರುವುದರಿಂದ ಮತ್ತು ಧಾರೆಯೆರೆದುಬಿಟ್ಟಿರುವುದರಿಂದ ಈ ತಥಾಕಥಿತ ನಾನ್ ಫಿಕ್ಷನ್ಗಳಿಗೆ ಈ ಮಾದರಿಯ ಬರವಣಿಗೆಗಳು ಹೊಂದಿಕೊಳ್ಳುತ್ತಾವಾ ಎನ್ನುವುದು ಒಂದು ತುಂಟ ಯೋಚನೆ. ಎಲ್ಲವೂ ಮೀಮಾಂಸೆಯಾಗಬೇಕೆಂದಿಲ್ಲ. ಜಯಂತರು ಎಂದಿಗೂ ತಮ್ಮ "ಬೊಗಸೆಯಲ್ಲಿ ಮಳೆ" ಯನ್ನು ನಾನ್ ಫಿಕ್ಷನ್ ಎಂದು ಹೇಳಿಕೊಂಡಿಲ್ಲ. ಮ್ಯೂಸಿಂಗ್ಸ್ ಎಂದಿದ್ದಾರೆ, ನುಡಿಚಿತ್ರಗಳು ಎಂದಿದ್ದಾರೆ. ಆದರೂ ಅದನ್ನು ಆ ಕೆಟಗರಿಗೆ ಸೇರಿಸುವುದರಿಂದ ನಮ್ಮ ಆ ಪುಸ್ತಕದ ಎಷ್ಟೋ ಲೇಖನಗಳು ( ಉದಾಹರಣೆಗೆ ಮಾತಿರದ ನಲುಮೆ, ರಾತ್ರಿಯ ಹೆದ್ದಾರಿಗೊಂದು ಅಲ್ಪವಿರಾಮ, ಬಸ್ ನಂಬರ್ ೩೦೨ ಒಂದು ಅಭಯರಾಗ) ಕಥೆಯಾಗುವುದನ್ನು ಮೊಟಕುಮಾಡಿಕೊಂಡು ಕಾಲಮ್ ಆಗಿಬಿಟ್ಟವಾ ಎಂದು ದುರಾಸೆಯ ಕಥನಕುತೂಹಗಳಿಗೆ ಕೊಂಚ ನಿರಾಸೆಯಾಗುತ್ತದೆ.
ಆದರೆ ಜಯಂತರು ನಮ್ಮನ್ನು ಬೆಳೆಸಿದ ಈ ಜನಪ್ರಿಯ ಸಂಸ್ಕೃತಿಯನ್ನು ಎಂದೂ ನಿರಾಕರಿಸುವುದಿಲ್ಲ. ಬದಲಿಗೆ ಅವರಿಗೆ ಇದನ್ನು ಇನ್ನೂ ಬೆಳೆಸಲಾಸೆ. ಇದಕ್ಕೆ ಸಾಕ್ಷಿಯೆನ್ನುವಂತೆ ಅವರ ಸಿನೆಮಾ ಸಾಹಿತ್ಯ ಮೂಡಿ ಬರುತ್ತಿದೆ. "ಕರೆದಂತಾದರೂ ಹೋಗಬೇಡಿ ಆ ಕಡೆ, ವಿಥ್ ಇದೀರಿ, ನೋಡ್ಕಳಿ ಫ್ಯಾಮಿಲಿ" ಎಂದು ಬರೆಯುವ ಬೆರಳುಗಳೇ "ಪುಟಗಳ ನಡುವಿನ ನವಿಲೇ" ಕೂಡ ಬರೆಯುತ್ತವೆ. ಆದರೆ ಒಂದು ಕವನ ಸಂಕಲನ ಸೇರಿದರೆ ಇನ್ನೊಂದು ಚಿತ್ರಗೀತೆಯಾಗುತ್ತದೆ. ನನಗೆ ತಿಳಿದ ಮಟ್ಟಿಗೆ ತಮ್ಮ ಯಾವುದೇ ಕವನವನ್ನೂ ಅವರು ಚಿತ್ರಕ್ಕೆ ಅಳವಡಿಸಿಕೊಳ್ಳಲು ಬಿಟ್ಟಿಲ್ಲ. ಚಿತ್ರಕ್ಕಾಗಿಯೇ ಬೇರೆ ಬರೆಯುತ್ತಾರೆ. ತಮ್ಮ ಖಯಾಲಿ, ಕಾಳಜಿಗಳನ್ನು ಯಾರಿಗೆ ಎಷ್ಟು ಮುಟ್ಟಿಸಬೇಕು ಅನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಮತ್ತಿನ್ನೊಂದೆಂದರೆ ಅವರ ಈ ಧೈರ್ಯ ಅವರ ನಂತರದ ಬರಹಗಾರರಿಗೆ "ಅನಿಸುತಿದೆ ಯಾಕೋ ಇಂದು" ಅನ್ನು ಹಾಡಿಕೊಂಡೇ "ತೊಟ್ಟಿಲಂಗಡಿಯಲ್ಲಿ ಬಂಬು ಕೂಡ ಅಗ್ಗ" ಕೂಡ ಓದಿಕೊಳ್ಳಬಹುದು ಎನ್ನುವ ಧೈರ್ಯವನ್ನು ಕೊಟ್ಟಿದೆ.
Saturday, July 25, 2009
ನಾನು, ನೀನು ಮತ್ತು ಅವನು
ಒಂದು ಕತೆ ಬರೆಯುವಾಗ ಅಥವಾ ಓದುವಾಗ, ಕತೆ ಹೇಳುತ್ತಿರುವ ನಿರೂಪಕ ಯಾರು ಎಂಬುದು ನಮಗೆ ಮುಖ್ಯವಾಗುತ್ತದಾ? ಮುಖ್ಯವಾಗಬೇಕಾ? ನಾನು ಹೇಳುತ್ತಿರುವುದು ಕತೆಗಾರನಲ್ಲ, ಬರೆಯುವ ವ್ಯಕ್ತಿಯ ಹೆಸರೂ ಅಲ್ಲ. ಕತೆಯನ್ನು ಉತ್ತಮ ಅಥವಾ ಪ್ರಥಮ ಪುರುಷದಲ್ಲಿ ಬರೆಯುವುದು, ಬರೆದುದನ್ನು ಅರ್ಥಮಾಡಿಕೊಳ್ಳುವುದು ಎಷ್ಟು ಮುಖ್ಯ?
ಬಹಳ ಕತೆ, ಕಾದಂಬರಿಗಳು ಪ್ರಥಮ ಅಥವಾ ಉತ್ತಮ ಪುರುಷದಲ್ಲಿ ಬರೆಯಲ್ಪಟ್ಟಿರುತ್ತವೆ, ನಿರೂಪಿಸಲ್ಪಟ್ಟಿರುತ್ತವೆ. ಪ್ರಥಮ ಪುರುಷದಲ್ಲಿ ಬರೆದ ಕತೆಗಳು ಮುಖ್ಯವಾಗಿ ಲೇಖಕನಿಗೆ ಮುಖ್ಯನಿರೂಪಕನಾಗಿ ಎಲ್ಲ ಪಾತ್ರಗಳನ್ನೂ "ಅವನು" "ಅವಳು" ಎಂದು ನಿರಪೇಕ್ಷವಾಗಿ ನೋಡುವ, ಬರೆಯುವ ಸಾಧ್ಯತೆಗಳನ್ನು, ಸ್ವಾತಂತ್ರ್ಯವನ್ನು ಕೊಟ್ಟಿರುತ್ತದೆ. ಇದು ಸಾಧ್ಯತೆಯೂ ಹೌದು, ಜವಾಬ್ದಾರಿಯೂ ಹೌದು, ಮಿತಿಯೂ ಹೌದು. ಯಾವುದೇ ಒಬ್ಬ ಲೇಖಕನೂ ತನ್ನ ಸುತ್ತಲಿನ ಪ್ರಪಂಚವನ್ನು ತನ್ನದೇ ಆದ ದೃಷ್ಟಿಯಿಂದ ನೋಡುತ್ತಿರುವುದರಿಂದ ಯಾವುದೇ ಪಾತ್ರವನ್ನು ಆತ ಚಿತ್ರಿಸುತ್ತಿದ್ದಾಗ ಅವನ ಪೂರ್ವಗ್ರಹಗಳ, ನಂಬಿಕೆಗಳ ಛಾಪು ಆಯಾ ಪಾತ್ರಗಳ ಮೇಲೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಬಿದ್ದೇ ಇರುತ್ತವೆ. ನಂಬಿಕೆಗಳನ್ನು ಪೂರಾ ತೊರೆದು ಪಾತ್ರಗಳನ್ನು ತಾವಾಗಿಯೇ ಆಯಾ ಪಾತ್ರಗಳ ಶಕ್ತಿಗೆ ಅನುಸಾರವಾಗಿ ಬೆಳೆಸುವುದು ಒಂದು ದೊಡ್ಡ ಸವಾಲು. ಪ್ರಪಂಚದ ಅತಿದೊಡ್ಡ ಕಾದಂಬರಿಕಾರರ ಜಾಣ್ಮೆ ತಾವು ಪಾತ್ರಗಳ ಹೊರಗಿದ್ದುಗೊಂಡು ತಾವು ಕಂಡದ್ದನ್ನು ಪಾತ್ರಗಳ ಮೂಲಕ ಅತ್ಯಂತ ಸಮರ್ಥವಾಗಿ ನಿರೂಪಿಸುವುದರಲ್ಲಿ ವ್ಯಕ್ತವಾಗಿದೆ. ಹೀಗೆ ಹೊರಗೆ ನಿಂತು ಕಾಣುವುದೂ ಒಂದೇ ಆಯಾಮದಲ್ಲಿದ್ದಾದುದರಿಂದ ಪೂರಾ ನಿರಪೇಕ್ಶವಾಗಿ ಈ ಪಾತ್ರಗಳನ್ನು ನೋಡುವುದು, ಚಿತ್ರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಯಾವಾಗ ನಿರೂಪಕ ತಾನೇ ಸೃಷ್ಟಿಕರ್ತ ಎಂದುಕೊಂಡು ಈ ಪಾತ್ರಗಳನ್ನು ಶೂನ್ಯದಿಂದ ಸೃಷ್ಟಿಸುವ ಕೆಲಸದಲ್ಲಿ ತೊಡಗುತ್ತಾನೋ ಆಗ ನಿರಪೇಕ್ಷತೆ ಹೊರಟುಹೋಗುತ್ತದೆ. ಯಾವಾಗ ಈ ಸೃಷ್ಟಿ ಲೇಖಕನ ಅನುಭವದ ವಿಸ್ತ್ರುತ ಪ್ರಕ್ರಿಯೆಯಾಗುತ್ತದೆಯೋ, ಆಗ ಆತನಿಗೆ ಈ ಪಾತ್ರಗಳ ಸೃಷ್ಟಿ, ಸ್ಥಿತಿ, ಲಯದ ಮೇಲೆ ಎಷ್ಟು ಹಕ್ಕಿರುತ್ತದೋ ಅಷ್ಟೇ ಈ ಪಾತ್ರಗಳ ಸ್ವತಂತ್ರ ಅಸ್ತಿತ್ವದ ಬಗ್ಗೆ ಕಾಳಜಿಯೂ ಇರುತ್ತದೆ.
ಓದುಗರಾದ ನಮ್ಮ ಅದೃಷ್ಟವೆಂದರೆ ಪ್ರಪಂಚದ ಮುಖ್ಯ ಕಾದಂಬರಿಗಳೆಲ್ಲ ಈ ರೀತಿ ಪ್ರಥಮ ಪುರುಷದಲ್ಲಿಯೇ ನಿರೂಪಿತವಾಗಿರುವುದು.
ಅದೇ ಉತ್ತಮ ಪುರುಷ ನಿರೂಪಣೆಯಲ್ಲಿ ಲೇಖಕನೇ ಒಂದು ಪಾತ್ರವಾಗಿಬಿಟ್ಟಿರುವುದರಿಂದ ಈ "ನಾನು" ಇಲ್ಲಿ ಅನೇಕ ಸ್ತರದಲ್ಲಿ ಕೆಲಸ ಮಾಡುತ್ತದೆ. ತೇಜಸ್ವಿಯವರ "ಕರ್ವಾಲೋ" ಶಾಂತಿನಾಥ ದೇಸಾಯರ ಸಂಬಂಧ" ಇಂತ ಕಾದಂಬರಿಗಳಲ್ಲಿ ಈ ನಿರೂಪಣೆ ಅಥೆಂಟಿಸಿಟಿಯ ಜತೆ ಒಂದು ಆಪ್ತತೆಯನ್ನೂ ಕೊಡುತ್ತದೆ. ಕುಂವೀಯವರ ಕತೆಗಳಲ್ಲಂತೂ ನಿರೂಪಕ ಸೃಷ್ಟಿಕರ್ತನೇ ಆಗಿಬಿಟ್ಟಿರುತ್ತಾನೆ. ಈ ಆಪ್ತತೆ ಯಾಕೆಂದರೆ, ಇಲ್ಲಿ ಕತೆಯ ನಿರೂಪಕನಿಗೂ ಮತ್ತೆ ಬರಹಗಾರನಿಗೂ ನಡುವೆ ಒಂದು ಗ್ಯಾಪ್ ಇದೆ ಎಂದು ನಾವು ಭಾವಿಸುವುದಿಲ್ಲ. ಹಾರುವ ಓತಿಯಾಗಲೀ, ಮಂದಣ್ಣನಾಗಲೀ ಅಥವಾ ಕರ್ವಾಲೋರವರಾಗಲೀ ಎಲ್ಲರೂ ತೇಜಸ್ವಿಯವರ ಜತೆಗೇ ಸಂವಹಿಸುತ್ತಿದ್ದಾರೆ ಎಂಬ ಭಾವನೆಯಲ್ಲಿಯೇ ನಾವು ಕತೆ ಓದುತ್ತೇವೆ. ಕೊನೆಗೆ ಕತೆ ಮುಗಿದಾಗಲೂ, ಈ ಹಾರುವ ಓತಿಯ ಒಂದು ಮಿಂಚಿನ ದರ್ಶನವಾಗಿ ಮಂದಣ್ಣನ ಕೈಯನ್ನು ಸಣ್ಣಗೆ ಸ್ಪರ್ಶಿಸಿ ನಂತರ ಈ ಸೃಷ್ಟಿಯ ಅನಂತತೆಯಲ್ಲಿ ಮಾಯವಾದ ಈ ವಿಸ್ಮಯವನ್ನು ನಿರೂಪಿಸುವ ನಿರೂಪಕ ಬೇರಲ್ಲ, ತೇಜಸ್ವಿಯವರು ಬೇರೆ ಅಲ್ಲ ಎಂದು ನಮಗನಿಸುತ್ತದೆ. ಕತೆಯ ಗಟ್ಟಿತನ ಹಾಗೂ ಉತ್ತಮ ಪುರುಷದ ನಿರೂಪಣೆ ಒಂದಕ್ಕೊಂದು ಪೂರಕವಾಗಿ ಮಾಡುವ ಅನುಕೂಲ ಇದು. ಇದೇ ಅನುಭವ ಕತೆಯಲ್ಲಿ ಇಂಥವನಿಗೊಬ್ಬನಿಗಾಯಿತು ಎಂದು ತೇಜಸ್ವಿಯವರು ಬರೆದಿದ್ದರೆ ಇದರ ದಿವ್ಯ ಅನುಭವ ಪ್ರಾಯಶಃ ಆಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಇದನ್ನೇ ಕಾರಂತರ "ಅಳಿದ ಮೇಲೆ" ಹಾಗೂ "ಬೆಟ್ಟದ ಜೀವ"ದ ನಿರೂಪಕನಿಗೂ ಹೇಳಬಹುದು. (ಕಾರಂತರ ಈ ಕಾದಂಬರಿಗಳಲ್ಲಿ ನಿರೂಪಕನ ಹೆಸರೂ ಶಿವರಾಮ ಎಂದೇ ನಿರೂಪಿತವಾಗಿದ್ದು ಅದಕ್ಕೆ ಒಂದು ರೀತಿ ಆತ್ಮಕಾಥಾನಕ ರೂಪವನ್ನೂ ಕೊಟ್ಟಿಬಿಡುತ್ತದೆ). ಇದೇ ಮಾತನ್ನು ನಾವು ಬಹಳಷ್ಟು ಬರಹಗಾರರ ವಿಷಯದಲ್ಲಿಯೂ ಹೇಳಬಹುದು.
ಸಲ್ಮಾನ್ ರಶ್ದೀಯ "ಮಿಡ್ನೈಟ್ಸ್ ಚಿಲ್ಡ್ರನ್" ನ ಇಡೀ ಕಾದಂಬರಿ ಉತ್ತಮ ಪುರುಷದಲ್ಲಿಯೇ ನಿರೂಪಿತವಾಗಿದೆ. ಇಲ್ಲಿ ಸಲೀಮ್ ಸೈನಾಯಿ ಅನ್ನುವ ನಿರೂಪಕ ತನ್ನ ಕತೆಯಿರಲಿ, ತನ್ನ ಅಜ್ಜಿ, ಅಜ್ಜರಿಂದ ಹಿಡಿದು ಎಲ್ಲರ ಕತೆಯನ್ನೂ ಉತ್ತಮ ಪುರುಷದಲ್ಲಿಯೇ ಮಾಡುತ್ತಾನೆ. ಆದರೆ, ಇಲ್ಲಿ ಪಾತ್ರಗಳು ತಮ್ಮ ಕತೆಯನ್ನು ಹೇಳುವುದಿಲ್ಲ. ಬದಲಿಗೆ ನಿರೂಪಕ ಎಲ್ಲವನ್ನೂ "ನನ್ನಜ್ಜಿ, ನನ್ನಜ್ಜ, ಅಕ್ಕ, ಅಮ್ಮ" ಎಲ್ಲರ ಕತೆಯನ್ನೂ ಹೇಳುತ್ತಾ ಹೋಗುತ್ತಾನೆ. ಇಲ್ಲಿ ಆಯಾ ಪಾತ್ರಗಳ ಜತೆ ಅವನ ಸಂಬಂಧ "ನನ್ನಜ್ಜ" ಎಂದು ಹೇಳುವ ಬದಲು ಆತನ ನಿಜವಾದ ಹೆಸರಾದ "ಆಡಮ್ ಸೈನಾಯ್" ಎಂದು ಹೇಳಿದ್ದರೆ ಕಥೆಗೆ ಬೇರೆ ಆಯಾಮಗಳು ಒದಗಿಬರುತ್ತಿತ್ತು ಎಂದು ಹೇಳಲಾಗುವುದಿಲ್ಲ. ಇದೇ ಸಮಸ್ಯೆ ತೇಜಸ್ವಿಯವರ ಮಾಯಾಲೋಕದಲ್ಲಿಯೂ ಇದೆ. ಅಲ್ಲಿಯೂ ನಿರೂಪಕನ ಅನುಪಸ್ಥಿತಿಯಲ್ಲಿ ಆಗುವ ಘಟನೆಗಳನ್ನೂ ನಿರೂಪಕ ಹೇಳುವುದರಿಂದ ಉತ್ತಮ ಪುರುಷ ನಿರೂಪಣೆಯ ಪ್ರತಿ ಸಾಧ್ಯತೆಯನ್ನು ಕಾದಂಬರಿಕಾರ ಇಲ್ಲಿ ಉಪಯೋಗಿಸಿಕೊಂಡಿದ್ದಾನೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ, ಇಲ್ಲಿ ನಿರೂಪಕನ ಹೊರತಾಗಿಯೂ ಆಯಾ ಪಾತ್ರಗಳು ಸ್ವತಂತ್ರವಾಗಿ ಜೀವಿಸಿದ್ದಾವೆ. ರಶ್ದೀಯಂತೂ ತಾನು ಹೇಗೆ ಹುಟ್ಟಿದೆ ಎಂಬುದಿರಲಿ, ತನ್ನಪ್ಪ ಅಮ್ಮನ ಪ್ರೇಮಪ್ರಕರಣಗಳು, ತಾನು ಅಮ್ಮನ ಗರ್ಭದಲ್ಲಿ ಭ್ರೂಣವಾಗಿದ್ದು, ಹುಟ್ಟಿದ್ದು ಎಲ್ಲವನ್ನೂ ಹೇಳುತ್ತಾ ಹೋಗುತ್ತಾನೆ. ಇದು ಅತಿವಾಸ್ತವತೆಯನ್ನು ಕೊಡುತ್ತದೆ ಹೊರತು ನಿಜವಾದ ಉತ್ತಮ ಪುರುಷದ ನಿರೂಪಣೆಯ ಅನುಕೂಲವನ್ನು ಕೊಡುವುದಿಲ್ಲ.
ನಿಜವಾಗಿ ಉತ್ತಮ ಪುರುಷದ ಸವಾಲಿರುವುದೆಂದರೆ ತಮ್ಮ ವೈಯುಕ್ತಿಕ ಅನುಭವದಾಚೆಯ ಪಾತ್ರಗಳ ಕಥೆಯನ್ನು ನಿರೂಪಿಸುವುದಾಗ ಅದನ್ನು "ನನ್ನ ಕತೆ"ಯೆನ್ನುವ ಹಾಗೆ ಹೇಳುವುದು. ಇದಕ್ಕೆ ಉತ್ತಮ ಉದಾಹರಣೆ, ಲಂಕೇಶರ "ಅಕ್ಕ" ಹಾಗೂ ಇತ್ತೀಚೆಗೆ ಬಂದ ಅರವಿಂದ ಅಡಿಗನ "ವೈಟ್ ಟೈಗರ್" ಕೊಳೆಗೇರಿಯ ಕ್ಯಾತ ಅಥವಾ ಕೃಷ್ಣ ಎಂಬ ಹುಡುಗ ತನ್ನ ಕಥೆಯನ್ನು "ಅಕ್ಕ" ಕಾದಂಬರಿಯಲ್ಲಿ ಹೇಳುತ್ತಾ ಹೋಗುತ್ತಾನೆ. ಹಾಗೆಯೇ, ಬಲರಾಮ್ ಹಲವಾಯಿ ಎಂಬ ಬಿಹಾರದ ಕೀಳುಜಾತಿಯ ವ್ಯಕ್ತಿಯೊಬ್ಬ ತನ್ನ ಕಥೆಯನ್ನು ಹೇಳುವುದನ್ನು ಇಂಗ್ಲಿಶಿನಲ್ಲಿ ಬರೆಯುತ್ತಾ ಹೋಗುತ್ತಾನೆ, ಅರವಿಂದ ಅಡಿಗ. ಎರಡೂ ಕಥನದಲ್ಲಿ ಮುಖ್ಯವೆನಿಸುವುದು ಏನೆಂದರೆ, ಬರಹಗಾರ ತಾನು ಕಂಡ ಲೋಕವನ್ನು ತನ್ನದೇ ಲೋಕವೆಂಬಂತೆ ಹೇಳುತ್ತಿದ್ದಾನೆ. ಇಲ್ಲಿ ಮುಖ್ಯವಾಗಿ ಕಂಡುಬರುವುದು ನಿರೂಪಕನಿಗೆ ಮತ್ತು ಬರಹಗಾರನಿಗೆ ನಡುವೆ ಇರುವ ಗ್ಯಾಪ್. ಈ ಗ್ಯಾಪ್ ಅನ್ನು ಕಾಪಾಡಿಕೊಳ್ಳದಿದ್ದರೆ ಬರಹಗಾರನ ಕಾಳಜಿಗಳು ನಿರೂಪಕನ ಕಾಳಜಿಗಳೂ ಆಗಿಬಿಡುತ್ತವೆ. ಇದರಿಂದ ತಪ್ಪಿಸಿಕೊಳ್ಳುವುದು ಬಹಳ ಕಷ್ಟ.
"ಅಕ್ಕ" ಕಾದಂಬರಿಯ ನಿರೂಪಕ ಕೊಳೆಗೇರಿಯ ಹುಡುಗ. ಆತ ಹಿಂದೆಂದೋ ಆಗಿರುವ ತನ್ನ ಕತೆಯನ್ನು, ಕೇವಲ ನೆನಪಿನಿಂದ ಮಾತ್ರ ಹೇಳುತ್ತಿದ್ದಾನೆ, ಅಲ್ಲ ಬರೆಯುತ್ತಿದ್ದಾನೆ. ಯಾಕೆ ಬರೆಯುತ್ತಿದ್ದಾನೆ ಹೇಗೆ ಬರೆಯುತ್ತಿದ್ದೇನೆ ಅನ್ನುವುದಕ್ಕೆ ಸಮಜಾಯಿಷಿಗಳನ್ನು ಕತೆಯ ಆರಂಭದಲ್ಲಿಯೇ ಕೊಡುತ್ತಾನೆ, ಆತ- "ನಂದು ಕೆಟ್ಟ ತಲೆ ಸಾರ್. ಅದರ ತುಂಬಾ ಒಂದಕ್ಕೊಂದು ತಗುಲಿಕೊಂಡು ಕಿತ್ತಾಡೋ ಐಟಂಗಳೇ. ನಾನು ನಾಲ್ಕು ಸಾಲು ಬರೆದರೆ ಒಂದು ಬೈಗುಳ ಬರುತ್ತೆ. ಅದಕ್ಕೇ ನಾನು ಬರೆದುಬಿಟ್ರೆ ಕನ್ನಡಮ್ಮನಿಗೆ ನೋವಾದೀತು ಅಂತ ಸುಮ್ಮನೇ ಇದ್ದೆ. ಆದ್ರೆ ಜೀವ ತಡೀಲಿಲ್ಲ ಸಾರ್. .ನನ್ನ ಮಾತೂ ಹಂಗೇಯ. ಯೋಚಿಸಿ ನೋಡಿದ್ರೆ ಅದು ಮಾತೇ ಅಲ್ಲ. ನರಸಿಂಹ ಮೇಸ್ತ್ರಿ, ಖಡವಾ ಇಂತವ್ರನೆಲ್ಲಾ ಬಯ್ದರೆ ಅದು ಬಯ್ಗಳ. ನಮ್ಮ ಪದ್ದಿ, ಮಾದೇವಿ, ಸಂಪೂರ್ಣಮ್ಮನ್ನ ಬೈದರೆ ಅದು ಬೈಗುಳ ಅಲ್ಲ. ಇದು ದಯವಿಟ್ಟು ತಮ್ಮ ಗಮನದಿಲ್ಲರಲಿ. ನಾನು ಬೈದದ್ದು ಬೈದಂಗಲ್ಲ ಅನ್ನಿಸಿದರೆ ಕತೆಯ ಮಜಾ ಕೆಡುತ್ತಲ್ವಾ ಸಾರ್. ... ನಾನು ತುಂಬಾ ಅವಸರದೋನು. ಒಂದು ಹೇಳೋಕೆ ಹೋಗಿ ಎರಡು ಹೇಳೋದೂ ಈ ಅವಸರದಲ್ಲೇ. ಅದು ಅಪಾಯವಿಲ್ಲ. ಎರಡು ಹೇಳಬೇಕಾದಾಗ ಒಂದೇ ಹೇಳಿ ಕಂಬಿ ಕಿತ್ತೋದು ನನ್ನ ಚಾಳಿ. ಆವಾಗ ನೀವು ಕಲ್ಪಿಸಿಕೊಳ್ಳಬೇಕಾಗುತ್ತೆ. ಸಾಹಿತ್ಯ ಅಂದ್ರೆ ಅದೇ ಅಂತ ಮೈಸೂರುಕಡೆ ಸಾಹಿತಿಗಳು ಈಚೆಗೆ ಹೇಳ್ತಿದ್ದಾರಂತೆ. ಒಮ್ದು ಸೀನ್ ಕೊಟ್ರೆ ಎರಡು ಸೀನ್ ನಿಮ್ಮ ತಲೇಲಿ ಬಂದ್ರೆ ನಂಗೂ ಒಳ್ಲೇದು, ನಿಮಗೂ ಮಜಾ."
ಓದುಗನಿಗೆ ಇಂಥಾ ಒಂದು ಕಾದಂಬರಿಯಿಂದ ಏನನ್ನು ನಿರೀಕ್ಷಿಸಬಹುದು ಅನ್ನುವುದನ್ನು ತಮ್ಮ ಪೀಠಿಕೆಯಂತಿರುವ ಮೊದಲ ಅಧ್ಯಾಯದಲ್ಲಿಯೇ ಹೇಳುತ್ತಾರೆ, ಲಂಕೇಶ್. ಇದರಲ್ಲಿ ಕ್ಯಾತ ತಾನು ಕೊಳೆಗೇರಿಯಲ್ಲಿದ್ದಾಗಿನ ಬದುಕನ್ನು ಕೇವಲ ನೆನಪಿನಿಂದ ಮಾತ್ರ ಹೇಳುತ್ತಿರುವಾಗ ಘಟನೆಗಳ ತುಣುಕಷ್ಟೇ ನಮ್ಮ ಮುಂದೆ ಇಡಬಹುದು. ಅದನ್ನು ಜೋಡಿಸಿಕೊಂಡು, ಖಾಲಿ ಇದ್ದಲ್ಲಿ ತುಂಬಿಸಿಕೊಂಡು ಮಧ್ಯೆ ಊಹಿಸಿಕೊಂಡು ನಮಗೆ ಬೇಕಂತೆ ಕಥೆ ಕಟ್ಟಿಕೊಳ್ಳುವ ಜವಾಬ್ದಾರಿ ಓದುಗರದ್ದು ಕೂಡ. ಇಲ್ಲಿ ಲಂಕೇಶರು ತಮ್ಮ ಅರಿವಿಗೆ ಬಂದ ಕೊಳೆಗೇರಿಯ ಬದುಕನ್ನು ಮಾತ್ರ ಅನಾವರಣ ಮಾಡಲಿಕ್ಕೆ ಈ ಉತ್ತಮ ಪುರುಷ ನಿರೂಪಣೆ ಮಾತ್ರವಲ್ಲ, ನೆನಪಿನಾಳದಿಂದ ಕತೆಯನ್ನು ಹೆಕ್ಕಿಕೊಳುವ ತಂತ್ರವನ್ನೂ ಬಹಳ ಜಾಣತನದಿಂದ ಉಪಯೋಗಿಸಿಕೊಂಡಿದ್ದಾರೆ. ಲಂಕೇಶರ ಅರಿವಿಗೆ ಬರದ ಕೊಳೆಗೇರಿಯ ಇನ್ನೊಂದು ರೂಪ ಕ್ಯಾತನಿಗೂ ಬಂದಿಲ್ಲ, ಅಥವಾ ಅದನ್ನು ಆತ ಹೇಳಲು ಮರೆತಿದ್ದಾನೆ.
ಹಾಗೆ ನೋಡಿದರೆ, ಲಂಕೇಶರ "ಮುಸ್ಸಂಜೆಯೆ ಕಥಾ ಪ್ರಸಂಗ" ಲಂಕೇಶರಿಗೆ ತೀರ ಪರಿಚಯವಿರುವ ಲೋಕ. ಅವರು ಹುಟ್ಟಿ ಬೆಳೆದ ಕೊನಗವಳ್ಳಿಯನ್ನೇ ಹೋಲುವ ಕಂಬಳ್ಳಿಯಂಥ ಊರಿನ ಬಗ್ಗೆ ಬರೆಯಬೇಕಾದರೆ ಉತ್ತಮ ಪುರುಷದ ನಿರೂಪಣೆಯನ್ನು ಮಾಡಿದ್ದರೆ ನಿರೂಪಣೆಗೆ ಒಂದು ಆಪ್ತತೆ ಸಿಕ್ಕುತ್ತಿತ್ತೇನೋ. ಆದರೆ ಲಂಕೇಶರಿಗೆ ಈ ಬಗೆಯ ನಿರೂಪಣೆಯ ಬಗ್ಗೆ ಸಂಶಯವಿದೆ. ತಮ್ಮ ಪರಿಚಿತ ಲೋಕವನ್ನು ಉತ್ತಮ ಪುರುಷದಲ್ಲಿ ಹೇಳಿದಾಗ ಈ ನಿರೂಪಕ ಮತ್ತು ನಾಯಕನ ನಡುವಿನ ಬಿರುಕನ್ನು ನಿಭಾಯಿಸುವುದು ತೀರ ದುಸ್ಸಾಧ್ಯವೆಂದು ಅವರಿಗೆ ಅರಿವಿದೆ. ಆದ್ದರಿಂದಲೇ ಇಲ್ಲಿ "ಕ್ಯಾತ" ನ ಲೋಕದಲ್ಲಿ ಪರಕಾಯ ಪ್ರವೇಶ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲಲ್ಲಿ ಕ್ಯಾತನ ಬದಲಾಗಿ ಲಂಕೇಶ್ ಬರಹಗಾರನಾಗಿ ಇಣುಕಿದರೂ ಬಹುಮಟ್ಟಿಗೆ ಈ ರೀತಿಯ ನಿರೂಪಣೆ ಲಂಕೇಶರ ಸಹಾಯಕ್ಕೆ ಬರುತ್ತದೆ.
ಹಾಗೆಂದು ಇಡೀ ಕಾದಂಬರಿ ಬರೇ ಉತ್ತಮ ಪುರುಷದಲ್ಲಿ ನಿರೂಪಿತವಾಗಿಲ್ಲ. ಕ್ಯಾತ ತನ್ನ ಕಥೆಯನ್ನು ಹೇಳುತ್ತಿರುವಾಗ ಅಲ್ಲಲ್ಲಿ ಅವನನ್ನು ನಾನು ಎಂದು ಹೇಳಿಕೊಳ್ಳದೇ ಕ್ಯಾತ ಎಂದೇ ಕರಕೊಳ್ಳುತ್ತಾನೆ. ಈ ಕೆಳಗಿನ ಸಾಲುಗಳನ್ನು ನೋಡಿದರೆ ಇದು ಇನ್ನೂ ಸ್ಪಷ್ಟವಾಗಬಹುದು.
"ಬಲು ಜೋರಾಗಿದ್ದಾಳಲ್ಲ ಪದ್ದಿ ಅಂತ ಮನಸ್ಸಿನಲ್ಲೇ ಮೆಚ್ತಾ ಕಾರಿನ ಮೂಲೇಲಿ ಕೂತ ಕ್ಯಾತ."
"ಯೋಚ್ನೆ ಮಾಡ್ತಾ ಮಾಡ್ತಾ ಕ್ಯಾತನಿಗೆ ಒಂತರಾ ಆಯಿತು"
ಕತೆಯನ್ನು ನಮಗೆ ಹೇಳುತ್ತಿರುವ ಕ್ಯಾತ ಮತ್ತು ಕತೆಯಲ್ಲಿರುವ ಕ್ಯಾತನಿಗೂ ನಡುವೆ ಒಂದು ಗ್ಯಾಪ್ ಇದೆ ಅನ್ನುವುದನ್ನು ನಮಗೆ ಸೂಚಿತವಾಗಿಸುತ್ತಾರೆ. ಈ ಪ್ರಥಮ-ಉತ್ತಮ ಪುರುಷದ ನಡುವಿನ ಜಿಗಿತ ಎಷ್ಟು ಸಲೀಸಾಗಿ ನಡೆಯುತ್ತದೆಯೆಂದರೆ ಅದು ಕಥೆಯ ಓಟಕ್ಕೆ ಎಲ್ಲೂ ಭಂಗವನ್ನು ತರುವುದೇ ಇಲ್ಲ. ಮತ್ತೆ "ನನ್ನಂತವನ ಕತೆ ಕೇಳೋಕೆ ನೀವೇನು ನನ್ನಂಗೆ ಕ್ಯಾತನಾ ಸರ್" ಎಂದು ಮತ್ತೆ ಮತ್ತೆ ಕೇಳುವ ನಿರೂಪಕ ಕ್ಯಾತ ಬಹಳ ಬಾರಿ ತನ್ನ ಮತ್ತು ತನ್ನ ವಾಚಕವರ್ಗಕ್ಕಿರುವ ಬಿರುಕನ್ನು ಹೇಳುತ್ತಲೇ ಇರುತ್ತಾನೆ.
ಉತ್ತಮ ಪುರುಷದ ನಿರೂಪಣೆಯ ಮುಖ್ಯ ಸಮಸ್ಯೆ ಅಥವಾ ತಪ್ಪುಗ್ರಹಿಕೆಯೆಂದರೆ- ಬರಹಗಾರ ಮತ್ತು ಓದುಗ ಇಬ್ಬರೂ ಕತೆಯ ನಿರೂಪಕನನ್ನೇ ಕತೆಯ ಬರಹಗಾರ ಎಂದು ತಿಳಿಯುವುದು. ಇದು ಬಹಳಷ್ಟು ಮಟ್ಟಿಗೆ ಸತ್ಯವಾದರೂ, ನಾವ್ಯ್ ಅರಿಯಬೇಕಾದ ಸತ್ಯವೆಂದರೆ ಕಥೆಯ ನಿರೂಪಕನೇ ಬೇರೆ, ಬರಹಗಾರನೇ ಬೇರೆ. ಇವರಿಗಿರುವ ಮುಖ್ಯ ವ್ಯತ್ಯಾಸವೆಂದರೆನಿರೂಪಕನಿಗೆ ಕತೆ ಅಥವಾ ಕಾದಂಬರಿಯ ಹೊರಗೆ ಎಂತ ಅಸ್ತಿತ್ವವೂ ಇಲ್ಲ, ಆದರೆ, ಬರಹಗಾರನಿಗೆ ಈ ಕತೆಯ ಹೊರಗೂ ರಕ್ತ, ಮಾಂಸ ತುಂಬಿದ ಅಸ್ತಿತ್ವವಿದೆ. ಈ ಗ್ಯಾಪ್ ಅನ್ನು ನಿಭಾಯಿಸುವುದು ಬಹಳ ಕಷ್ಟಕರವಾದ ವಿಷಯ,
ಈ ವ್ಯತ್ಯಾಸವನ್ನು ಬಹಳ ಪಳಗಿದ ಬರಹಗಾರರೂ ರೂಢಿಸಿಕೊಳ್ಳುವುದು ಕಷ್ಟ. ಹಾಗಾಗಿಯೇ ಕತೆ ಹಾಗೂ ಪ್ರಬಂಧಗಳು ಕೆಲವೊಮ್ಮೆ ಒಂದೇ ಮಾದರಿಯಲ್ಲಿ ಕಾಣುತ್ತವೆ.
ಕತೆಗಳನ್ನು ಉತ್ತಮ ಪುರುಷದಲ್ಲಿ ಬರೆಯುವುದು ಎಷ್ಟು ಕಷ್ಟವೋ, ಪ್ರಬಂಧಗಳನ್ನು ಉತ್ತಮ ಪುರುಷದ ಹಂಗಿಲ್ಲದೇ ಬರೆಯುವುದೂ ಅಷ್ಟೇ ಕಷ್ಟ. ಆಗಲೇ ಅವಕ್ಕೆ ನುಡಿಚಿತ್ರಗಳ, ಹೆಚ್ಚು ಹೆಚ್ಚು ಪ್ರತಿಮೆಗಳನ್ನು ಉಪಯೋಗಿಸಿ ಲಿರಿಕಲ್ ಆಗುವ, ಅಥವಾ ಮ್ಯೂಸಿಂಗ್ಗಳ ರೂಪ ಕೊಟ್ಟಾಗ ಸಾಧ್ಯ ಅನಿಸುತ್ತದೆ. ಇದರ ಉತ್ತಮ ಉದಾಹರಣೆ ಜಯಂತರ "ಬೊಗಸೆಯಲ್ಲಿ ಮಳೆ"
ಬಹಳ ಕತೆ, ಕಾದಂಬರಿಗಳು ಪ್ರಥಮ ಅಥವಾ ಉತ್ತಮ ಪುರುಷದಲ್ಲಿ ಬರೆಯಲ್ಪಟ್ಟಿರುತ್ತವೆ, ನಿರೂಪಿಸಲ್ಪಟ್ಟಿರುತ್ತವೆ. ಪ್ರಥಮ ಪುರುಷದಲ್ಲಿ ಬರೆದ ಕತೆಗಳು ಮುಖ್ಯವಾಗಿ ಲೇಖಕನಿಗೆ ಮುಖ್ಯನಿರೂಪಕನಾಗಿ ಎಲ್ಲ ಪಾತ್ರಗಳನ್ನೂ "ಅವನು" "ಅವಳು" ಎಂದು ನಿರಪೇಕ್ಷವಾಗಿ ನೋಡುವ, ಬರೆಯುವ ಸಾಧ್ಯತೆಗಳನ್ನು, ಸ್ವಾತಂತ್ರ್ಯವನ್ನು ಕೊಟ್ಟಿರುತ್ತದೆ. ಇದು ಸಾಧ್ಯತೆಯೂ ಹೌದು, ಜವಾಬ್ದಾರಿಯೂ ಹೌದು, ಮಿತಿಯೂ ಹೌದು. ಯಾವುದೇ ಒಬ್ಬ ಲೇಖಕನೂ ತನ್ನ ಸುತ್ತಲಿನ ಪ್ರಪಂಚವನ್ನು ತನ್ನದೇ ಆದ ದೃಷ್ಟಿಯಿಂದ ನೋಡುತ್ತಿರುವುದರಿಂದ ಯಾವುದೇ ಪಾತ್ರವನ್ನು ಆತ ಚಿತ್ರಿಸುತ್ತಿದ್ದಾಗ ಅವನ ಪೂರ್ವಗ್ರಹಗಳ, ನಂಬಿಕೆಗಳ ಛಾಪು ಆಯಾ ಪಾತ್ರಗಳ ಮೇಲೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಬಿದ್ದೇ ಇರುತ್ತವೆ. ನಂಬಿಕೆಗಳನ್ನು ಪೂರಾ ತೊರೆದು ಪಾತ್ರಗಳನ್ನು ತಾವಾಗಿಯೇ ಆಯಾ ಪಾತ್ರಗಳ ಶಕ್ತಿಗೆ ಅನುಸಾರವಾಗಿ ಬೆಳೆಸುವುದು ಒಂದು ದೊಡ್ಡ ಸವಾಲು. ಪ್ರಪಂಚದ ಅತಿದೊಡ್ಡ ಕಾದಂಬರಿಕಾರರ ಜಾಣ್ಮೆ ತಾವು ಪಾತ್ರಗಳ ಹೊರಗಿದ್ದುಗೊಂಡು ತಾವು ಕಂಡದ್ದನ್ನು ಪಾತ್ರಗಳ ಮೂಲಕ ಅತ್ಯಂತ ಸಮರ್ಥವಾಗಿ ನಿರೂಪಿಸುವುದರಲ್ಲಿ ವ್ಯಕ್ತವಾಗಿದೆ. ಹೀಗೆ ಹೊರಗೆ ನಿಂತು ಕಾಣುವುದೂ ಒಂದೇ ಆಯಾಮದಲ್ಲಿದ್ದಾದುದರಿಂದ ಪೂರಾ ನಿರಪೇಕ್ಶವಾಗಿ ಈ ಪಾತ್ರಗಳನ್ನು ನೋಡುವುದು, ಚಿತ್ರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಯಾವಾಗ ನಿರೂಪಕ ತಾನೇ ಸೃಷ್ಟಿಕರ್ತ ಎಂದುಕೊಂಡು ಈ ಪಾತ್ರಗಳನ್ನು ಶೂನ್ಯದಿಂದ ಸೃಷ್ಟಿಸುವ ಕೆಲಸದಲ್ಲಿ ತೊಡಗುತ್ತಾನೋ ಆಗ ನಿರಪೇಕ್ಷತೆ ಹೊರಟುಹೋಗುತ್ತದೆ. ಯಾವಾಗ ಈ ಸೃಷ್ಟಿ ಲೇಖಕನ ಅನುಭವದ ವಿಸ್ತ್ರುತ ಪ್ರಕ್ರಿಯೆಯಾಗುತ್ತದೆಯೋ, ಆಗ ಆತನಿಗೆ ಈ ಪಾತ್ರಗಳ ಸೃಷ್ಟಿ, ಸ್ಥಿತಿ, ಲಯದ ಮೇಲೆ ಎಷ್ಟು ಹಕ್ಕಿರುತ್ತದೋ ಅಷ್ಟೇ ಈ ಪಾತ್ರಗಳ ಸ್ವತಂತ್ರ ಅಸ್ತಿತ್ವದ ಬಗ್ಗೆ ಕಾಳಜಿಯೂ ಇರುತ್ತದೆ.
ಓದುಗರಾದ ನಮ್ಮ ಅದೃಷ್ಟವೆಂದರೆ ಪ್ರಪಂಚದ ಮುಖ್ಯ ಕಾದಂಬರಿಗಳೆಲ್ಲ ಈ ರೀತಿ ಪ್ರಥಮ ಪುರುಷದಲ್ಲಿಯೇ ನಿರೂಪಿತವಾಗಿರುವುದು.
ಅದೇ ಉತ್ತಮ ಪುರುಷ ನಿರೂಪಣೆಯಲ್ಲಿ ಲೇಖಕನೇ ಒಂದು ಪಾತ್ರವಾಗಿಬಿಟ್ಟಿರುವುದರಿಂದ ಈ "ನಾನು" ಇಲ್ಲಿ ಅನೇಕ ಸ್ತರದಲ್ಲಿ ಕೆಲಸ ಮಾಡುತ್ತದೆ. ತೇಜಸ್ವಿಯವರ "ಕರ್ವಾಲೋ" ಶಾಂತಿನಾಥ ದೇಸಾಯರ ಸಂಬಂಧ" ಇಂತ ಕಾದಂಬರಿಗಳಲ್ಲಿ ಈ ನಿರೂಪಣೆ ಅಥೆಂಟಿಸಿಟಿಯ ಜತೆ ಒಂದು ಆಪ್ತತೆಯನ್ನೂ ಕೊಡುತ್ತದೆ. ಕುಂವೀಯವರ ಕತೆಗಳಲ್ಲಂತೂ ನಿರೂಪಕ ಸೃಷ್ಟಿಕರ್ತನೇ ಆಗಿಬಿಟ್ಟಿರುತ್ತಾನೆ. ಈ ಆಪ್ತತೆ ಯಾಕೆಂದರೆ, ಇಲ್ಲಿ ಕತೆಯ ನಿರೂಪಕನಿಗೂ ಮತ್ತೆ ಬರಹಗಾರನಿಗೂ ನಡುವೆ ಒಂದು ಗ್ಯಾಪ್ ಇದೆ ಎಂದು ನಾವು ಭಾವಿಸುವುದಿಲ್ಲ. ಹಾರುವ ಓತಿಯಾಗಲೀ, ಮಂದಣ್ಣನಾಗಲೀ ಅಥವಾ ಕರ್ವಾಲೋರವರಾಗಲೀ ಎಲ್ಲರೂ ತೇಜಸ್ವಿಯವರ ಜತೆಗೇ ಸಂವಹಿಸುತ್ತಿದ್ದಾರೆ ಎಂಬ ಭಾವನೆಯಲ್ಲಿಯೇ ನಾವು ಕತೆ ಓದುತ್ತೇವೆ. ಕೊನೆಗೆ ಕತೆ ಮುಗಿದಾಗಲೂ, ಈ ಹಾರುವ ಓತಿಯ ಒಂದು ಮಿಂಚಿನ ದರ್ಶನವಾಗಿ ಮಂದಣ್ಣನ ಕೈಯನ್ನು ಸಣ್ಣಗೆ ಸ್ಪರ್ಶಿಸಿ ನಂತರ ಈ ಸೃಷ್ಟಿಯ ಅನಂತತೆಯಲ್ಲಿ ಮಾಯವಾದ ಈ ವಿಸ್ಮಯವನ್ನು ನಿರೂಪಿಸುವ ನಿರೂಪಕ ಬೇರಲ್ಲ, ತೇಜಸ್ವಿಯವರು ಬೇರೆ ಅಲ್ಲ ಎಂದು ನಮಗನಿಸುತ್ತದೆ. ಕತೆಯ ಗಟ್ಟಿತನ ಹಾಗೂ ಉತ್ತಮ ಪುರುಷದ ನಿರೂಪಣೆ ಒಂದಕ್ಕೊಂದು ಪೂರಕವಾಗಿ ಮಾಡುವ ಅನುಕೂಲ ಇದು. ಇದೇ ಅನುಭವ ಕತೆಯಲ್ಲಿ ಇಂಥವನಿಗೊಬ್ಬನಿಗಾಯಿತು ಎಂದು ತೇಜಸ್ವಿಯವರು ಬರೆದಿದ್ದರೆ ಇದರ ದಿವ್ಯ ಅನುಭವ ಪ್ರಾಯಶಃ ಆಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಇದನ್ನೇ ಕಾರಂತರ "ಅಳಿದ ಮೇಲೆ" ಹಾಗೂ "ಬೆಟ್ಟದ ಜೀವ"ದ ನಿರೂಪಕನಿಗೂ ಹೇಳಬಹುದು. (ಕಾರಂತರ ಈ ಕಾದಂಬರಿಗಳಲ್ಲಿ ನಿರೂಪಕನ ಹೆಸರೂ ಶಿವರಾಮ ಎಂದೇ ನಿರೂಪಿತವಾಗಿದ್ದು ಅದಕ್ಕೆ ಒಂದು ರೀತಿ ಆತ್ಮಕಾಥಾನಕ ರೂಪವನ್ನೂ ಕೊಟ್ಟಿಬಿಡುತ್ತದೆ). ಇದೇ ಮಾತನ್ನು ನಾವು ಬಹಳಷ್ಟು ಬರಹಗಾರರ ವಿಷಯದಲ್ಲಿಯೂ ಹೇಳಬಹುದು.
ಸಲ್ಮಾನ್ ರಶ್ದೀಯ "ಮಿಡ್ನೈಟ್ಸ್ ಚಿಲ್ಡ್ರನ್" ನ ಇಡೀ ಕಾದಂಬರಿ ಉತ್ತಮ ಪುರುಷದಲ್ಲಿಯೇ ನಿರೂಪಿತವಾಗಿದೆ. ಇಲ್ಲಿ ಸಲೀಮ್ ಸೈನಾಯಿ ಅನ್ನುವ ನಿರೂಪಕ ತನ್ನ ಕತೆಯಿರಲಿ, ತನ್ನ ಅಜ್ಜಿ, ಅಜ್ಜರಿಂದ ಹಿಡಿದು ಎಲ್ಲರ ಕತೆಯನ್ನೂ ಉತ್ತಮ ಪುರುಷದಲ್ಲಿಯೇ ಮಾಡುತ್ತಾನೆ. ಆದರೆ, ಇಲ್ಲಿ ಪಾತ್ರಗಳು ತಮ್ಮ ಕತೆಯನ್ನು ಹೇಳುವುದಿಲ್ಲ. ಬದಲಿಗೆ ನಿರೂಪಕ ಎಲ್ಲವನ್ನೂ "ನನ್ನಜ್ಜಿ, ನನ್ನಜ್ಜ, ಅಕ್ಕ, ಅಮ್ಮ" ಎಲ್ಲರ ಕತೆಯನ್ನೂ ಹೇಳುತ್ತಾ ಹೋಗುತ್ತಾನೆ. ಇಲ್ಲಿ ಆಯಾ ಪಾತ್ರಗಳ ಜತೆ ಅವನ ಸಂಬಂಧ "ನನ್ನಜ್ಜ" ಎಂದು ಹೇಳುವ ಬದಲು ಆತನ ನಿಜವಾದ ಹೆಸರಾದ "ಆಡಮ್ ಸೈನಾಯ್" ಎಂದು ಹೇಳಿದ್ದರೆ ಕಥೆಗೆ ಬೇರೆ ಆಯಾಮಗಳು ಒದಗಿಬರುತ್ತಿತ್ತು ಎಂದು ಹೇಳಲಾಗುವುದಿಲ್ಲ. ಇದೇ ಸಮಸ್ಯೆ ತೇಜಸ್ವಿಯವರ ಮಾಯಾಲೋಕದಲ್ಲಿಯೂ ಇದೆ. ಅಲ್ಲಿಯೂ ನಿರೂಪಕನ ಅನುಪಸ್ಥಿತಿಯಲ್ಲಿ ಆಗುವ ಘಟನೆಗಳನ್ನೂ ನಿರೂಪಕ ಹೇಳುವುದರಿಂದ ಉತ್ತಮ ಪುರುಷ ನಿರೂಪಣೆಯ ಪ್ರತಿ ಸಾಧ್ಯತೆಯನ್ನು ಕಾದಂಬರಿಕಾರ ಇಲ್ಲಿ ಉಪಯೋಗಿಸಿಕೊಂಡಿದ್ದಾನೆ ಎಂದು ಹೇಳಲಾಗುವುದಿಲ್ಲ. ಯಾಕೆಂದರೆ, ಇಲ್ಲಿ ನಿರೂಪಕನ ಹೊರತಾಗಿಯೂ ಆಯಾ ಪಾತ್ರಗಳು ಸ್ವತಂತ್ರವಾಗಿ ಜೀವಿಸಿದ್ದಾವೆ. ರಶ್ದೀಯಂತೂ ತಾನು ಹೇಗೆ ಹುಟ್ಟಿದೆ ಎಂಬುದಿರಲಿ, ತನ್ನಪ್ಪ ಅಮ್ಮನ ಪ್ರೇಮಪ್ರಕರಣಗಳು, ತಾನು ಅಮ್ಮನ ಗರ್ಭದಲ್ಲಿ ಭ್ರೂಣವಾಗಿದ್ದು, ಹುಟ್ಟಿದ್ದು ಎಲ್ಲವನ್ನೂ ಹೇಳುತ್ತಾ ಹೋಗುತ್ತಾನೆ. ಇದು ಅತಿವಾಸ್ತವತೆಯನ್ನು ಕೊಡುತ್ತದೆ ಹೊರತು ನಿಜವಾದ ಉತ್ತಮ ಪುರುಷದ ನಿರೂಪಣೆಯ ಅನುಕೂಲವನ್ನು ಕೊಡುವುದಿಲ್ಲ.
ನಿಜವಾಗಿ ಉತ್ತಮ ಪುರುಷದ ಸವಾಲಿರುವುದೆಂದರೆ ತಮ್ಮ ವೈಯುಕ್ತಿಕ ಅನುಭವದಾಚೆಯ ಪಾತ್ರಗಳ ಕಥೆಯನ್ನು ನಿರೂಪಿಸುವುದಾಗ ಅದನ್ನು "ನನ್ನ ಕತೆ"ಯೆನ್ನುವ ಹಾಗೆ ಹೇಳುವುದು. ಇದಕ್ಕೆ ಉತ್ತಮ ಉದಾಹರಣೆ, ಲಂಕೇಶರ "ಅಕ್ಕ" ಹಾಗೂ ಇತ್ತೀಚೆಗೆ ಬಂದ ಅರವಿಂದ ಅಡಿಗನ "ವೈಟ್ ಟೈಗರ್" ಕೊಳೆಗೇರಿಯ ಕ್ಯಾತ ಅಥವಾ ಕೃಷ್ಣ ಎಂಬ ಹುಡುಗ ತನ್ನ ಕಥೆಯನ್ನು "ಅಕ್ಕ" ಕಾದಂಬರಿಯಲ್ಲಿ ಹೇಳುತ್ತಾ ಹೋಗುತ್ತಾನೆ. ಹಾಗೆಯೇ, ಬಲರಾಮ್ ಹಲವಾಯಿ ಎಂಬ ಬಿಹಾರದ ಕೀಳುಜಾತಿಯ ವ್ಯಕ್ತಿಯೊಬ್ಬ ತನ್ನ ಕಥೆಯನ್ನು ಹೇಳುವುದನ್ನು ಇಂಗ್ಲಿಶಿನಲ್ಲಿ ಬರೆಯುತ್ತಾ ಹೋಗುತ್ತಾನೆ, ಅರವಿಂದ ಅಡಿಗ. ಎರಡೂ ಕಥನದಲ್ಲಿ ಮುಖ್ಯವೆನಿಸುವುದು ಏನೆಂದರೆ, ಬರಹಗಾರ ತಾನು ಕಂಡ ಲೋಕವನ್ನು ತನ್ನದೇ ಲೋಕವೆಂಬಂತೆ ಹೇಳುತ್ತಿದ್ದಾನೆ. ಇಲ್ಲಿ ಮುಖ್ಯವಾಗಿ ಕಂಡುಬರುವುದು ನಿರೂಪಕನಿಗೆ ಮತ್ತು ಬರಹಗಾರನಿಗೆ ನಡುವೆ ಇರುವ ಗ್ಯಾಪ್. ಈ ಗ್ಯಾಪ್ ಅನ್ನು ಕಾಪಾಡಿಕೊಳ್ಳದಿದ್ದರೆ ಬರಹಗಾರನ ಕಾಳಜಿಗಳು ನಿರೂಪಕನ ಕಾಳಜಿಗಳೂ ಆಗಿಬಿಡುತ್ತವೆ. ಇದರಿಂದ ತಪ್ಪಿಸಿಕೊಳ್ಳುವುದು ಬಹಳ ಕಷ್ಟ.
"ಅಕ್ಕ" ಕಾದಂಬರಿಯ ನಿರೂಪಕ ಕೊಳೆಗೇರಿಯ ಹುಡುಗ. ಆತ ಹಿಂದೆಂದೋ ಆಗಿರುವ ತನ್ನ ಕತೆಯನ್ನು, ಕೇವಲ ನೆನಪಿನಿಂದ ಮಾತ್ರ ಹೇಳುತ್ತಿದ್ದಾನೆ, ಅಲ್ಲ ಬರೆಯುತ್ತಿದ್ದಾನೆ. ಯಾಕೆ ಬರೆಯುತ್ತಿದ್ದಾನೆ ಹೇಗೆ ಬರೆಯುತ್ತಿದ್ದೇನೆ ಅನ್ನುವುದಕ್ಕೆ ಸಮಜಾಯಿಷಿಗಳನ್ನು ಕತೆಯ ಆರಂಭದಲ್ಲಿಯೇ ಕೊಡುತ್ತಾನೆ, ಆತ- "ನಂದು ಕೆಟ್ಟ ತಲೆ ಸಾರ್. ಅದರ ತುಂಬಾ ಒಂದಕ್ಕೊಂದು ತಗುಲಿಕೊಂಡು ಕಿತ್ತಾಡೋ ಐಟಂಗಳೇ. ನಾನು ನಾಲ್ಕು ಸಾಲು ಬರೆದರೆ ಒಂದು ಬೈಗುಳ ಬರುತ್ತೆ. ಅದಕ್ಕೇ ನಾನು ಬರೆದುಬಿಟ್ರೆ ಕನ್ನಡಮ್ಮನಿಗೆ ನೋವಾದೀತು ಅಂತ ಸುಮ್ಮನೇ ಇದ್ದೆ. ಆದ್ರೆ ಜೀವ ತಡೀಲಿಲ್ಲ ಸಾರ್. .ನನ್ನ ಮಾತೂ ಹಂಗೇಯ. ಯೋಚಿಸಿ ನೋಡಿದ್ರೆ ಅದು ಮಾತೇ ಅಲ್ಲ. ನರಸಿಂಹ ಮೇಸ್ತ್ರಿ, ಖಡವಾ ಇಂತವ್ರನೆಲ್ಲಾ ಬಯ್ದರೆ ಅದು ಬಯ್ಗಳ. ನಮ್ಮ ಪದ್ದಿ, ಮಾದೇವಿ, ಸಂಪೂರ್ಣಮ್ಮನ್ನ ಬೈದರೆ ಅದು ಬೈಗುಳ ಅಲ್ಲ. ಇದು ದಯವಿಟ್ಟು ತಮ್ಮ ಗಮನದಿಲ್ಲರಲಿ. ನಾನು ಬೈದದ್ದು ಬೈದಂಗಲ್ಲ ಅನ್ನಿಸಿದರೆ ಕತೆಯ ಮಜಾ ಕೆಡುತ್ತಲ್ವಾ ಸಾರ್. ... ನಾನು ತುಂಬಾ ಅವಸರದೋನು. ಒಂದು ಹೇಳೋಕೆ ಹೋಗಿ ಎರಡು ಹೇಳೋದೂ ಈ ಅವಸರದಲ್ಲೇ. ಅದು ಅಪಾಯವಿಲ್ಲ. ಎರಡು ಹೇಳಬೇಕಾದಾಗ ಒಂದೇ ಹೇಳಿ ಕಂಬಿ ಕಿತ್ತೋದು ನನ್ನ ಚಾಳಿ. ಆವಾಗ ನೀವು ಕಲ್ಪಿಸಿಕೊಳ್ಳಬೇಕಾಗುತ್ತೆ. ಸಾಹಿತ್ಯ ಅಂದ್ರೆ ಅದೇ ಅಂತ ಮೈಸೂರುಕಡೆ ಸಾಹಿತಿಗಳು ಈಚೆಗೆ ಹೇಳ್ತಿದ್ದಾರಂತೆ. ಒಮ್ದು ಸೀನ್ ಕೊಟ್ರೆ ಎರಡು ಸೀನ್ ನಿಮ್ಮ ತಲೇಲಿ ಬಂದ್ರೆ ನಂಗೂ ಒಳ್ಲೇದು, ನಿಮಗೂ ಮಜಾ."
ಓದುಗನಿಗೆ ಇಂಥಾ ಒಂದು ಕಾದಂಬರಿಯಿಂದ ಏನನ್ನು ನಿರೀಕ್ಷಿಸಬಹುದು ಅನ್ನುವುದನ್ನು ತಮ್ಮ ಪೀಠಿಕೆಯಂತಿರುವ ಮೊದಲ ಅಧ್ಯಾಯದಲ್ಲಿಯೇ ಹೇಳುತ್ತಾರೆ, ಲಂಕೇಶ್. ಇದರಲ್ಲಿ ಕ್ಯಾತ ತಾನು ಕೊಳೆಗೇರಿಯಲ್ಲಿದ್ದಾಗಿನ ಬದುಕನ್ನು ಕೇವಲ ನೆನಪಿನಿಂದ ಮಾತ್ರ ಹೇಳುತ್ತಿರುವಾಗ ಘಟನೆಗಳ ತುಣುಕಷ್ಟೇ ನಮ್ಮ ಮುಂದೆ ಇಡಬಹುದು. ಅದನ್ನು ಜೋಡಿಸಿಕೊಂಡು, ಖಾಲಿ ಇದ್ದಲ್ಲಿ ತುಂಬಿಸಿಕೊಂಡು ಮಧ್ಯೆ ಊಹಿಸಿಕೊಂಡು ನಮಗೆ ಬೇಕಂತೆ ಕಥೆ ಕಟ್ಟಿಕೊಳ್ಳುವ ಜವಾಬ್ದಾರಿ ಓದುಗರದ್ದು ಕೂಡ. ಇಲ್ಲಿ ಲಂಕೇಶರು ತಮ್ಮ ಅರಿವಿಗೆ ಬಂದ ಕೊಳೆಗೇರಿಯ ಬದುಕನ್ನು ಮಾತ್ರ ಅನಾವರಣ ಮಾಡಲಿಕ್ಕೆ ಈ ಉತ್ತಮ ಪುರುಷ ನಿರೂಪಣೆ ಮಾತ್ರವಲ್ಲ, ನೆನಪಿನಾಳದಿಂದ ಕತೆಯನ್ನು ಹೆಕ್ಕಿಕೊಳುವ ತಂತ್ರವನ್ನೂ ಬಹಳ ಜಾಣತನದಿಂದ ಉಪಯೋಗಿಸಿಕೊಂಡಿದ್ದಾರೆ. ಲಂಕೇಶರ ಅರಿವಿಗೆ ಬರದ ಕೊಳೆಗೇರಿಯ ಇನ್ನೊಂದು ರೂಪ ಕ್ಯಾತನಿಗೂ ಬಂದಿಲ್ಲ, ಅಥವಾ ಅದನ್ನು ಆತ ಹೇಳಲು ಮರೆತಿದ್ದಾನೆ.
ಹಾಗೆ ನೋಡಿದರೆ, ಲಂಕೇಶರ "ಮುಸ್ಸಂಜೆಯೆ ಕಥಾ ಪ್ರಸಂಗ" ಲಂಕೇಶರಿಗೆ ತೀರ ಪರಿಚಯವಿರುವ ಲೋಕ. ಅವರು ಹುಟ್ಟಿ ಬೆಳೆದ ಕೊನಗವಳ್ಳಿಯನ್ನೇ ಹೋಲುವ ಕಂಬಳ್ಳಿಯಂಥ ಊರಿನ ಬಗ್ಗೆ ಬರೆಯಬೇಕಾದರೆ ಉತ್ತಮ ಪುರುಷದ ನಿರೂಪಣೆಯನ್ನು ಮಾಡಿದ್ದರೆ ನಿರೂಪಣೆಗೆ ಒಂದು ಆಪ್ತತೆ ಸಿಕ್ಕುತ್ತಿತ್ತೇನೋ. ಆದರೆ ಲಂಕೇಶರಿಗೆ ಈ ಬಗೆಯ ನಿರೂಪಣೆಯ ಬಗ್ಗೆ ಸಂಶಯವಿದೆ. ತಮ್ಮ ಪರಿಚಿತ ಲೋಕವನ್ನು ಉತ್ತಮ ಪುರುಷದಲ್ಲಿ ಹೇಳಿದಾಗ ಈ ನಿರೂಪಕ ಮತ್ತು ನಾಯಕನ ನಡುವಿನ ಬಿರುಕನ್ನು ನಿಭಾಯಿಸುವುದು ತೀರ ದುಸ್ಸಾಧ್ಯವೆಂದು ಅವರಿಗೆ ಅರಿವಿದೆ. ಆದ್ದರಿಂದಲೇ ಇಲ್ಲಿ "ಕ್ಯಾತ" ನ ಲೋಕದಲ್ಲಿ ಪರಕಾಯ ಪ್ರವೇಶ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲಲ್ಲಿ ಕ್ಯಾತನ ಬದಲಾಗಿ ಲಂಕೇಶ್ ಬರಹಗಾರನಾಗಿ ಇಣುಕಿದರೂ ಬಹುಮಟ್ಟಿಗೆ ಈ ರೀತಿಯ ನಿರೂಪಣೆ ಲಂಕೇಶರ ಸಹಾಯಕ್ಕೆ ಬರುತ್ತದೆ.
ಹಾಗೆಂದು ಇಡೀ ಕಾದಂಬರಿ ಬರೇ ಉತ್ತಮ ಪುರುಷದಲ್ಲಿ ನಿರೂಪಿತವಾಗಿಲ್ಲ. ಕ್ಯಾತ ತನ್ನ ಕಥೆಯನ್ನು ಹೇಳುತ್ತಿರುವಾಗ ಅಲ್ಲಲ್ಲಿ ಅವನನ್ನು ನಾನು ಎಂದು ಹೇಳಿಕೊಳ್ಳದೇ ಕ್ಯಾತ ಎಂದೇ ಕರಕೊಳ್ಳುತ್ತಾನೆ. ಈ ಕೆಳಗಿನ ಸಾಲುಗಳನ್ನು ನೋಡಿದರೆ ಇದು ಇನ್ನೂ ಸ್ಪಷ್ಟವಾಗಬಹುದು.
"ಬಲು ಜೋರಾಗಿದ್ದಾಳಲ್ಲ ಪದ್ದಿ ಅಂತ ಮನಸ್ಸಿನಲ್ಲೇ ಮೆಚ್ತಾ ಕಾರಿನ ಮೂಲೇಲಿ ಕೂತ ಕ್ಯಾತ."
"ಯೋಚ್ನೆ ಮಾಡ್ತಾ ಮಾಡ್ತಾ ಕ್ಯಾತನಿಗೆ ಒಂತರಾ ಆಯಿತು"
ಕತೆಯನ್ನು ನಮಗೆ ಹೇಳುತ್ತಿರುವ ಕ್ಯಾತ ಮತ್ತು ಕತೆಯಲ್ಲಿರುವ ಕ್ಯಾತನಿಗೂ ನಡುವೆ ಒಂದು ಗ್ಯಾಪ್ ಇದೆ ಅನ್ನುವುದನ್ನು ನಮಗೆ ಸೂಚಿತವಾಗಿಸುತ್ತಾರೆ. ಈ ಪ್ರಥಮ-ಉತ್ತಮ ಪುರುಷದ ನಡುವಿನ ಜಿಗಿತ ಎಷ್ಟು ಸಲೀಸಾಗಿ ನಡೆಯುತ್ತದೆಯೆಂದರೆ ಅದು ಕಥೆಯ ಓಟಕ್ಕೆ ಎಲ್ಲೂ ಭಂಗವನ್ನು ತರುವುದೇ ಇಲ್ಲ. ಮತ್ತೆ "ನನ್ನಂತವನ ಕತೆ ಕೇಳೋಕೆ ನೀವೇನು ನನ್ನಂಗೆ ಕ್ಯಾತನಾ ಸರ್" ಎಂದು ಮತ್ತೆ ಮತ್ತೆ ಕೇಳುವ ನಿರೂಪಕ ಕ್ಯಾತ ಬಹಳ ಬಾರಿ ತನ್ನ ಮತ್ತು ತನ್ನ ವಾಚಕವರ್ಗಕ್ಕಿರುವ ಬಿರುಕನ್ನು ಹೇಳುತ್ತಲೇ ಇರುತ್ತಾನೆ.
ಉತ್ತಮ ಪುರುಷದ ನಿರೂಪಣೆಯ ಮುಖ್ಯ ಸಮಸ್ಯೆ ಅಥವಾ ತಪ್ಪುಗ್ರಹಿಕೆಯೆಂದರೆ- ಬರಹಗಾರ ಮತ್ತು ಓದುಗ ಇಬ್ಬರೂ ಕತೆಯ ನಿರೂಪಕನನ್ನೇ ಕತೆಯ ಬರಹಗಾರ ಎಂದು ತಿಳಿಯುವುದು. ಇದು ಬಹಳಷ್ಟು ಮಟ್ಟಿಗೆ ಸತ್ಯವಾದರೂ, ನಾವ್ಯ್ ಅರಿಯಬೇಕಾದ ಸತ್ಯವೆಂದರೆ ಕಥೆಯ ನಿರೂಪಕನೇ ಬೇರೆ, ಬರಹಗಾರನೇ ಬೇರೆ. ಇವರಿಗಿರುವ ಮುಖ್ಯ ವ್ಯತ್ಯಾಸವೆಂದರೆನಿರೂಪಕನಿಗೆ ಕತೆ ಅಥವಾ ಕಾದಂಬರಿಯ ಹೊರಗೆ ಎಂತ ಅಸ್ತಿತ್ವವೂ ಇಲ್ಲ, ಆದರೆ, ಬರಹಗಾರನಿಗೆ ಈ ಕತೆಯ ಹೊರಗೂ ರಕ್ತ, ಮಾಂಸ ತುಂಬಿದ ಅಸ್ತಿತ್ವವಿದೆ. ಈ ಗ್ಯಾಪ್ ಅನ್ನು ನಿಭಾಯಿಸುವುದು ಬಹಳ ಕಷ್ಟಕರವಾದ ವಿಷಯ,
ಈ ವ್ಯತ್ಯಾಸವನ್ನು ಬಹಳ ಪಳಗಿದ ಬರಹಗಾರರೂ ರೂಢಿಸಿಕೊಳ್ಳುವುದು ಕಷ್ಟ. ಹಾಗಾಗಿಯೇ ಕತೆ ಹಾಗೂ ಪ್ರಬಂಧಗಳು ಕೆಲವೊಮ್ಮೆ ಒಂದೇ ಮಾದರಿಯಲ್ಲಿ ಕಾಣುತ್ತವೆ.
ಕತೆಗಳನ್ನು ಉತ್ತಮ ಪುರುಷದಲ್ಲಿ ಬರೆಯುವುದು ಎಷ್ಟು ಕಷ್ಟವೋ, ಪ್ರಬಂಧಗಳನ್ನು ಉತ್ತಮ ಪುರುಷದ ಹಂಗಿಲ್ಲದೇ ಬರೆಯುವುದೂ ಅಷ್ಟೇ ಕಷ್ಟ. ಆಗಲೇ ಅವಕ್ಕೆ ನುಡಿಚಿತ್ರಗಳ, ಹೆಚ್ಚು ಹೆಚ್ಚು ಪ್ರತಿಮೆಗಳನ್ನು ಉಪಯೋಗಿಸಿ ಲಿರಿಕಲ್ ಆಗುವ, ಅಥವಾ ಮ್ಯೂಸಿಂಗ್ಗಳ ರೂಪ ಕೊಟ್ಟಾಗ ಸಾಧ್ಯ ಅನಿಸುತ್ತದೆ. ಇದರ ಉತ್ತಮ ಉದಾಹರಣೆ ಜಯಂತರ "ಬೊಗಸೆಯಲ್ಲಿ ಮಳೆ"
Subscribe to:
Posts (Atom)